Homeಅಂತರಾಷ್ಟ್ರೀಯಕುಲಭೂಷಣ್ ಜಾಧವ್ ಪರ ವಕೀಲರನ್ನು ನೇಮಿಸಲು ಭಾರತಕ್ಕೆ ಮತ್ತೊಂದು ಅವಕಾಶ ನೀಡಿ: ಪಾಕ್ ನ್ಯಾಯಾಲಯ

ಕುಲಭೂಷಣ್ ಜಾಧವ್ ಪರ ವಕೀಲರನ್ನು ನೇಮಿಸಲು ಭಾರತಕ್ಕೆ ಮತ್ತೊಂದು ಅವಕಾಶ ನೀಡಿ: ಪಾಕ್ ನ್ಯಾಯಾಲಯ

- Advertisement -
- Advertisement -

ಬೇಹುಗಾರಿಕೆ ಮತ್ತು ಭಯೋತ್ಪಾದಕ ಚಟುವಟಿಕೆಗಳ ಆರೋಪದ ಮೇಲೆ ಪಾಕಿಸ್ತಾನದಲ್ಲಿ ಮರಣದಂಡನೆಗೆ ಗುರಿಯಾಗಿರುವ ಭಾರತೀಯ ನೌಕಾಪಡೆಯ ಮಾಜಿ ಅಧಿಕಾರಿ ಕುಲಭೂಷಣ್ ಜಾಧವ್ ಅವರ ಪರ ವಕೀಲರನ್ನು ನೇಮಿಸಿಕೊಳ್ಳಲು ಭಾರತಕ್ಕೆ ಮತ್ತೊಂದು ಅವಕಾಶವನ್ನು ನೀಡಬೇಕು ಎಂದು ಇಸ್ಲಾಮಾಬಾದ್ ಹೈಕೋರ್ಟ್ ಹೇಳಿದೆ.

ಪಾಕಿಸ್ತಾನದ ಅಟಾರ್ನಿ ಜನರಲ್ ಖಾಲಿದ್ ಜಾವೇದ್ ಖಾನ್ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡುತ್ತಾ, ಪಾಕಿಸ್ತಾನದಲ್ಲಿ ವಾದ ಮಾಡಲು ಪರವಾನಗಿ ಪಡೆದ ವಕೀಲರನ್ನು ನೇಮಕ ಮಾಡಲು ಭಾರತೀಯ ಅಧಿಕಾರಿಗಳಿಗೆ ಅವಕಾಶ ನೀಡುವಂತೆ ನ್ಯಾಯಾಲಯ ಪಾಕಿಸ್ತಾನ ಸರ್ಕಾರವನ್ನು ಕೇಳಿದೆ ಎಂದಿದ್ದಾರೆ.

“ಈಗ ಈ ವಿಷಯವು ಹೈಕೋರ್ಟ್‌ನಲ್ಲಿದೆ, ಭಾರತಕ್ಕೆ ಮತ್ತೊಂದು ಅವಕಾಶವನ್ನು ಏಕೆ ನೀಡಬಾರದು” ಎಂದು ದ್ವಿಸದಸ್ಯ ಪೀಠದ ಮುಖ್ಯಸ್ಥರಾದ ಮುಖ್ಯ ನ್ಯಾಯಮೂರ್ತಿ ಅಥರ್ ಮಿನಲ್ಲಾ ಹೇಳಿದರು ಎಂದು ಜಿಯೋ ನ್ಯೂಸ್ ವರದಿ ಮಾಡಿದೆ.

ಪಾಕಿಸ್ತಾನದ ವಕೀಲರಿಗೆ ಭಾರತೀಯ ವಕೀಲರ ತಂಡ ಸಹಾಯ ಮಾಡಬಹುದೇ ಎಂದು ಕೇಳಿದಾಗ, ಅಂತಹ ಯಾವುದೇ ಆಯ್ಕೆಯನ್ನು ಇಲ್ಲಿಯವರೆಗೆ ನೀಡಿಲ್ಲ ಎಂದು ಖಾಲಿದ್ ಜಾವೇದ್ ಖಾನ್ ಹೇಳಿದರು. ವಿಚಾರಣೆಯನ್ನು ಸೆಪ್ಟೆಂಬರ್ 3ಕ್ಕೆ ಮುಂದೂಡಲಾಗಿದೆ.

“ಪಾಕಿಸ್ತಾನ ಸರ್ಕಾರವು ಜಾಧವ್ ಅವರ ಹಕ್ಕುಗಳ ಬಗ್ಗೆ ಮತ್ತೊಮ್ಮೆ ತಿಳಿಸುತ್ತದೆ … ಶಾಸನಬದ್ಧ ಪರಿಹಾರವನ್ನು ಪಡೆಯುವ ಹಕ್ಕಿನ ಬಗ್ಗೆ ಅವರಿಗೆ ನಿರ್ದಿಷ್ಟವಾಗಿ ತಿಳಿಸಲಾಗುವುದು … ಮತ್ತು ಅವರ ಪರವಾಗಿ ಕಾನೂನು ಪ್ರಾತಿನಿಧ್ಯವನ್ನು ವ್ಯವಸ್ಥೆ ಮಾಡಲು ಭಾರತ ಸರ್ಕಾರಕ್ಕೆ ಅಧಿಕಾರ ನೀಡಬೇಕು” ಎಂದು ನ್ಯಾಯಾಲಯವು ತನ್ನ ಲಿಖಿತ ರೂಪದ ಆದೇಶದಲ್ಲಿ ತಿಳಿಸಿದೆ.

“ಪಾಕಿಸ್ತಾನ ಸರ್ಕಾರವು ಈ ಆದೇಶವನ್ನು ಭಾರತ ಸರ್ಕಾರಕ್ಕೆ ತಿಳಿಸುತ್ತದೆ, ಎರಡನೆಯದು ಜಾಧವ್ ಪರವಾಗಿ ಸೂಕ್ತ ವ್ಯವಸ್ಥೆಗಳನ್ನು ಮಾಡಲು ಸ್ವಾತಂತ್ರ್ಯವನ್ನು ಹೊಂದಿರುತ್ತದೆ” ಎಂದು ಅದು ಹೇಳಿದೆ.

ಪರಿಣಾಮಕಾರಿ ನ್ಯಾಯಾಂಗ ಪರಿಹಾರದ ಎಲ್ಲಾ ಮಾರ್ಗಗಳನ್ನು ಪಾಕಿಸ್ತಾನವು ನಿರ್ಬಂಧಿಸಿದೆ ಎಂದು ಕಳೆದವಾದ ಭಾರತ ಹೇಳಿತ್ತು. ಜುಲೈ 16 ರಂದು ನಡೆದ ಕಾನ್ಸುಲರ್ ಪ್ರವೇಶ ಸಭೆಯಲ್ಲಿ ಜಾಧವ್ ಅವರು ಸಹಿ ಮಾಡಿದ “ಪವರ್ ಆಫ್ ಅಟಾರ್ನಿ” ಕಾನೂನು ದಾಖಲೆ ಪಡೆಯಲು ಭಾರತೀಯ ರಾಜತಾಂತ್ರಿಕರಿಗೆ ಅವಕಾಶವಿರಲಿಲ್ಲ ಎಂದು ಭಾರತ ದೂರಿತ್ತು.

ಜಾಧವ್‌ಗೆ “ಕಾನೂನು ಪ್ರತಿನಿಧಿಯನ್ನು” ನೇಮಕ ಮಾಡುವ ವಿಚಾರಕ್ಕೆ ಪಾಕಿಸ್ತಾನ ಸರ್ಕಾರ ಜುಲೈ 22 ರಂದು ಮರುಪರಿಶೀಲನಾ ಅರ್ಜಿ ಸಲ್ಲಿಸಿತು. ಮನವಿಯನ್ನು ಆಲಿಸಲು ನ್ಯಾಯಾಲಯವು ದ್ವಿಸದಸ್ಯ ಪೀಠವನ್ನು ರಚಿಸಿತ್ತು.

ಈ ವಿಷಯವನ್ನು ಆಲಿಸಲು ದೊಡ್ಡ ನ್ಯಾಯಪೀಠವನ್ನು ರಚಿಸುವುದು ಸೂಕ್ತ ಎಂದು ಸೋಮವಾರ ನ್ಯಾಯಾಲಯ ಹೇಳಿದೆ. ಇದು ಮಾಜಿ ಅಟಾರ್ನಿ ಜನರಲ್ ಸೇರಿದಂತೆ ಪಾಕಿಸ್ತಾನದ ಮೂರು ಪ್ರಮುಖ ವಕೀಲರನ್ನು ಅಮಿಕಸ್ ಕ್ಯೂರಿಯಂತೆ ನೇಮಿಸಿದೆ.


ಓದಿ: ಮರುಪರಿಶೀಲನಾ ಅರ್ಜಿ ಸಲ್ಲಿಸಲು ನಿರಾಕರಿಸಿದ ಕುಲಭೂಷಣ್ ಜಾಧವ್: ಪಾಕ್


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...