Homeಅಂತರಾಷ್ಟ್ರೀಯಕುಲಭೂಷಣ್ ಜಾಧವ್ ಪರ ವಕೀಲರನ್ನು ನೇಮಿಸಲು ಭಾರತಕ್ಕೆ ಮತ್ತೊಂದು ಅವಕಾಶ ನೀಡಿ: ಪಾಕ್ ನ್ಯಾಯಾಲಯ

ಕುಲಭೂಷಣ್ ಜಾಧವ್ ಪರ ವಕೀಲರನ್ನು ನೇಮಿಸಲು ಭಾರತಕ್ಕೆ ಮತ್ತೊಂದು ಅವಕಾಶ ನೀಡಿ: ಪಾಕ್ ನ್ಯಾಯಾಲಯ

- Advertisement -
- Advertisement -

ಬೇಹುಗಾರಿಕೆ ಮತ್ತು ಭಯೋತ್ಪಾದಕ ಚಟುವಟಿಕೆಗಳ ಆರೋಪದ ಮೇಲೆ ಪಾಕಿಸ್ತಾನದಲ್ಲಿ ಮರಣದಂಡನೆಗೆ ಗುರಿಯಾಗಿರುವ ಭಾರತೀಯ ನೌಕಾಪಡೆಯ ಮಾಜಿ ಅಧಿಕಾರಿ ಕುಲಭೂಷಣ್ ಜಾಧವ್ ಅವರ ಪರ ವಕೀಲರನ್ನು ನೇಮಿಸಿಕೊಳ್ಳಲು ಭಾರತಕ್ಕೆ ಮತ್ತೊಂದು ಅವಕಾಶವನ್ನು ನೀಡಬೇಕು ಎಂದು ಇಸ್ಲಾಮಾಬಾದ್ ಹೈಕೋರ್ಟ್ ಹೇಳಿದೆ.

ಪಾಕಿಸ್ತಾನದ ಅಟಾರ್ನಿ ಜನರಲ್ ಖಾಲಿದ್ ಜಾವೇದ್ ಖಾನ್ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡುತ್ತಾ, ಪಾಕಿಸ್ತಾನದಲ್ಲಿ ವಾದ ಮಾಡಲು ಪರವಾನಗಿ ಪಡೆದ ವಕೀಲರನ್ನು ನೇಮಕ ಮಾಡಲು ಭಾರತೀಯ ಅಧಿಕಾರಿಗಳಿಗೆ ಅವಕಾಶ ನೀಡುವಂತೆ ನ್ಯಾಯಾಲಯ ಪಾಕಿಸ್ತಾನ ಸರ್ಕಾರವನ್ನು ಕೇಳಿದೆ ಎಂದಿದ್ದಾರೆ.

“ಈಗ ಈ ವಿಷಯವು ಹೈಕೋರ್ಟ್‌ನಲ್ಲಿದೆ, ಭಾರತಕ್ಕೆ ಮತ್ತೊಂದು ಅವಕಾಶವನ್ನು ಏಕೆ ನೀಡಬಾರದು” ಎಂದು ದ್ವಿಸದಸ್ಯ ಪೀಠದ ಮುಖ್ಯಸ್ಥರಾದ ಮುಖ್ಯ ನ್ಯಾಯಮೂರ್ತಿ ಅಥರ್ ಮಿನಲ್ಲಾ ಹೇಳಿದರು ಎಂದು ಜಿಯೋ ನ್ಯೂಸ್ ವರದಿ ಮಾಡಿದೆ.

ಪಾಕಿಸ್ತಾನದ ವಕೀಲರಿಗೆ ಭಾರತೀಯ ವಕೀಲರ ತಂಡ ಸಹಾಯ ಮಾಡಬಹುದೇ ಎಂದು ಕೇಳಿದಾಗ, ಅಂತಹ ಯಾವುದೇ ಆಯ್ಕೆಯನ್ನು ಇಲ್ಲಿಯವರೆಗೆ ನೀಡಿಲ್ಲ ಎಂದು ಖಾಲಿದ್ ಜಾವೇದ್ ಖಾನ್ ಹೇಳಿದರು. ವಿಚಾರಣೆಯನ್ನು ಸೆಪ್ಟೆಂಬರ್ 3ಕ್ಕೆ ಮುಂದೂಡಲಾಗಿದೆ.

“ಪಾಕಿಸ್ತಾನ ಸರ್ಕಾರವು ಜಾಧವ್ ಅವರ ಹಕ್ಕುಗಳ ಬಗ್ಗೆ ಮತ್ತೊಮ್ಮೆ ತಿಳಿಸುತ್ತದೆ … ಶಾಸನಬದ್ಧ ಪರಿಹಾರವನ್ನು ಪಡೆಯುವ ಹಕ್ಕಿನ ಬಗ್ಗೆ ಅವರಿಗೆ ನಿರ್ದಿಷ್ಟವಾಗಿ ತಿಳಿಸಲಾಗುವುದು … ಮತ್ತು ಅವರ ಪರವಾಗಿ ಕಾನೂನು ಪ್ರಾತಿನಿಧ್ಯವನ್ನು ವ್ಯವಸ್ಥೆ ಮಾಡಲು ಭಾರತ ಸರ್ಕಾರಕ್ಕೆ ಅಧಿಕಾರ ನೀಡಬೇಕು” ಎಂದು ನ್ಯಾಯಾಲಯವು ತನ್ನ ಲಿಖಿತ ರೂಪದ ಆದೇಶದಲ್ಲಿ ತಿಳಿಸಿದೆ.

“ಪಾಕಿಸ್ತಾನ ಸರ್ಕಾರವು ಈ ಆದೇಶವನ್ನು ಭಾರತ ಸರ್ಕಾರಕ್ಕೆ ತಿಳಿಸುತ್ತದೆ, ಎರಡನೆಯದು ಜಾಧವ್ ಪರವಾಗಿ ಸೂಕ್ತ ವ್ಯವಸ್ಥೆಗಳನ್ನು ಮಾಡಲು ಸ್ವಾತಂತ್ರ್ಯವನ್ನು ಹೊಂದಿರುತ್ತದೆ” ಎಂದು ಅದು ಹೇಳಿದೆ.

ಪರಿಣಾಮಕಾರಿ ನ್ಯಾಯಾಂಗ ಪರಿಹಾರದ ಎಲ್ಲಾ ಮಾರ್ಗಗಳನ್ನು ಪಾಕಿಸ್ತಾನವು ನಿರ್ಬಂಧಿಸಿದೆ ಎಂದು ಕಳೆದವಾದ ಭಾರತ ಹೇಳಿತ್ತು. ಜುಲೈ 16 ರಂದು ನಡೆದ ಕಾನ್ಸುಲರ್ ಪ್ರವೇಶ ಸಭೆಯಲ್ಲಿ ಜಾಧವ್ ಅವರು ಸಹಿ ಮಾಡಿದ “ಪವರ್ ಆಫ್ ಅಟಾರ್ನಿ” ಕಾನೂನು ದಾಖಲೆ ಪಡೆಯಲು ಭಾರತೀಯ ರಾಜತಾಂತ್ರಿಕರಿಗೆ ಅವಕಾಶವಿರಲಿಲ್ಲ ಎಂದು ಭಾರತ ದೂರಿತ್ತು.

ಜಾಧವ್‌ಗೆ “ಕಾನೂನು ಪ್ರತಿನಿಧಿಯನ್ನು” ನೇಮಕ ಮಾಡುವ ವಿಚಾರಕ್ಕೆ ಪಾಕಿಸ್ತಾನ ಸರ್ಕಾರ ಜುಲೈ 22 ರಂದು ಮರುಪರಿಶೀಲನಾ ಅರ್ಜಿ ಸಲ್ಲಿಸಿತು. ಮನವಿಯನ್ನು ಆಲಿಸಲು ನ್ಯಾಯಾಲಯವು ದ್ವಿಸದಸ್ಯ ಪೀಠವನ್ನು ರಚಿಸಿತ್ತು.

ಈ ವಿಷಯವನ್ನು ಆಲಿಸಲು ದೊಡ್ಡ ನ್ಯಾಯಪೀಠವನ್ನು ರಚಿಸುವುದು ಸೂಕ್ತ ಎಂದು ಸೋಮವಾರ ನ್ಯಾಯಾಲಯ ಹೇಳಿದೆ. ಇದು ಮಾಜಿ ಅಟಾರ್ನಿ ಜನರಲ್ ಸೇರಿದಂತೆ ಪಾಕಿಸ್ತಾನದ ಮೂರು ಪ್ರಮುಖ ವಕೀಲರನ್ನು ಅಮಿಕಸ್ ಕ್ಯೂರಿಯಂತೆ ನೇಮಿಸಿದೆ.


ಓದಿ: ಮರುಪರಿಶೀಲನಾ ಅರ್ಜಿ ಸಲ್ಲಿಸಲು ನಿರಾಕರಿಸಿದ ಕುಲಭೂಷಣ್ ಜಾಧವ್: ಪಾಕ್


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...

ಆಕಸ್ಮಿಕವಾಗಿ ಗಡಿ ದಾಟಿದ್ದ 7 ಭಾರತೀಯರನ್ನು ಹಸ್ತಾಂತರಿಸಿದ ಪಾಕಿಸ್ತಾನ

2023 ರ ಪ್ರವಾಹದ ಸಮಯದಲ್ಲಿ ಅಜಾಗರೂಕತೆಯಿಂದ ಗಡಿ ದಾಟಿದ ನಂತರ ಬಂಧಿಸಲ್ಪಟ್ಟ ಏಳು ಭಾರತೀಯ ನಾಗರಿಕರನ್ನು ಪಾಕಿಸ್ತಾನ ಶನಿವಾರ ಸ್ವದೇಶಕ್ಕೆ ವಾಪಸ್ ಕಳುಹಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಂಜಾಬ್‌ನ ಅಟ್ಟಾರಿ ಇಂಟಿಗ್ರೇಟೆಡ್ ಚೆಕ್ ಪೋಸ್ಟ್‌ನಲ್ಲಿ...

ಮೀರತ್| ಅಪಹರಣ ಪ್ರಕರಣ ಹಿಂಪಡೆಯುವಂತೆ ಪೊಲೀಸರ ಒತ್ತಡ; ‘ಗೃಹಬಂಧನ’ದಲ್ಲಿ ದಲಿತ ಕುಟುಂಬ

ಜನವರಿ ತಿಂಗಳ ಆರಂಭದಲ್ಲಿ ಉತ್ತರ ಪ್ರದೇಶದ ಮೀರತ್ ಜಿಲ್ಲೆಯ ಕಪ್ಸಾದ್ ಗ್ರಾಮದಲ್ಲಿ ತಾಯಿಯ ಕೊಲೆಯ ನಂತರ ಅಪಹರಿಸಲ್ಪಟ್ಟ ದಲಿತ ಹುಡುಗಿಯ ಕುಟುಂಬ ಸದಸ್ಯರು ತಾವು ಗೃಹಬಂಧನದಲ್ಲಿದ್ದು, ಆರೋಪಿಗಳ ವಿರುದ್ಧ ಪ್ರಕರಣವನ್ನು ಮುಂದುವರಿಸದಂತೆ ಪೊಲೀಸರು...

ಉದ್ಯಮಿ ಸಿಜೆ ರಾಯ್ ಮರಣೋತ್ತರ ಪರೀಕ್ಷೆ; ಹೃದಯ-ಶ್ವಾಸಕೋಶದಲ್ಲಿ 6.35 ಎಂಎಂ ಗುಂಡಿನ ಗಾಯ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಅವರ ಆತ್ಮಹತ್ಯೆಯ ಮರಣೋತ್ತರ ಪರೀಕ್ಷೆಯ ವರದಿಗಯನ್ನು ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಅರವಿಂದ್ ಎಂಎನ್ ವಿವರಿಸಿದ್ದಾರೆ. 6.35 ಎಂಎಂ ಗುಂಡಿನ ದಾಳಿಯು ತಕ್ಷಣದ...

ಮುಂಬೈ| ನಿರ್ದೇಶಕ ರೋಹಿತ್ ಶೆಟ್ಟಿ ಮನೆಯ ಹೊರಗೆ 4 ಸುತ್ತು ಗುಂಡು ಹಾರಿಸಿದ ಅಪರಿಚಿತರು

ಶನಿವಾರ ತಡರಾತ್ರಿ, ಬಾಲಿವುಡ್ ನಿರ್ದೇಶಕ ರೋಹಿತ್ ಶೆಟ್ಟಿ ಅವರ ಮುಂಬೈನ ಜುಹು ನಿವಾಸದ ಹೊರಗೆ ನಾಲ್ಕು ಸುತ್ತು ಗುಂಡು ಹಾರಿಸಲಾಗಿದ್ದು, ಘಟನೆಯಲ್ಲಿ ಯಾವುದೇ ಗಾಯಗಳಾಗಿಲ್ಲ ಎಂದು ವರದಿಯಾಗಿದೆ. ಚಿತ್ರ ನಿರ್ಮಾಪಕ-ನಿರ್ದೇಶಕರ ಕಟ್ಟಡದ ಬಳಿ ಅಪರಿಚಿತ...

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...