Homeಅಂತರಾಷ್ಟ್ರೀಯಕುಲಭೂಷಣ್ ಜಾಧವ್ ಪರ ವಕೀಲರನ್ನು ನೇಮಿಸಲು ಭಾರತಕ್ಕೆ ಮತ್ತೊಂದು ಅವಕಾಶ ನೀಡಿ: ಪಾಕ್ ನ್ಯಾಯಾಲಯ

ಕುಲಭೂಷಣ್ ಜಾಧವ್ ಪರ ವಕೀಲರನ್ನು ನೇಮಿಸಲು ಭಾರತಕ್ಕೆ ಮತ್ತೊಂದು ಅವಕಾಶ ನೀಡಿ: ಪಾಕ್ ನ್ಯಾಯಾಲಯ

- Advertisement -
- Advertisement -

ಬೇಹುಗಾರಿಕೆ ಮತ್ತು ಭಯೋತ್ಪಾದಕ ಚಟುವಟಿಕೆಗಳ ಆರೋಪದ ಮೇಲೆ ಪಾಕಿಸ್ತಾನದಲ್ಲಿ ಮರಣದಂಡನೆಗೆ ಗುರಿಯಾಗಿರುವ ಭಾರತೀಯ ನೌಕಾಪಡೆಯ ಮಾಜಿ ಅಧಿಕಾರಿ ಕುಲಭೂಷಣ್ ಜಾಧವ್ ಅವರ ಪರ ವಕೀಲರನ್ನು ನೇಮಿಸಿಕೊಳ್ಳಲು ಭಾರತಕ್ಕೆ ಮತ್ತೊಂದು ಅವಕಾಶವನ್ನು ನೀಡಬೇಕು ಎಂದು ಇಸ್ಲಾಮಾಬಾದ್ ಹೈಕೋರ್ಟ್ ಹೇಳಿದೆ.

ಪಾಕಿಸ್ತಾನದ ಅಟಾರ್ನಿ ಜನರಲ್ ಖಾಲಿದ್ ಜಾವೇದ್ ಖಾನ್ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡುತ್ತಾ, ಪಾಕಿಸ್ತಾನದಲ್ಲಿ ವಾದ ಮಾಡಲು ಪರವಾನಗಿ ಪಡೆದ ವಕೀಲರನ್ನು ನೇಮಕ ಮಾಡಲು ಭಾರತೀಯ ಅಧಿಕಾರಿಗಳಿಗೆ ಅವಕಾಶ ನೀಡುವಂತೆ ನ್ಯಾಯಾಲಯ ಪಾಕಿಸ್ತಾನ ಸರ್ಕಾರವನ್ನು ಕೇಳಿದೆ ಎಂದಿದ್ದಾರೆ.

“ಈಗ ಈ ವಿಷಯವು ಹೈಕೋರ್ಟ್‌ನಲ್ಲಿದೆ, ಭಾರತಕ್ಕೆ ಮತ್ತೊಂದು ಅವಕಾಶವನ್ನು ಏಕೆ ನೀಡಬಾರದು” ಎಂದು ದ್ವಿಸದಸ್ಯ ಪೀಠದ ಮುಖ್ಯಸ್ಥರಾದ ಮುಖ್ಯ ನ್ಯಾಯಮೂರ್ತಿ ಅಥರ್ ಮಿನಲ್ಲಾ ಹೇಳಿದರು ಎಂದು ಜಿಯೋ ನ್ಯೂಸ್ ವರದಿ ಮಾಡಿದೆ.

ಪಾಕಿಸ್ತಾನದ ವಕೀಲರಿಗೆ ಭಾರತೀಯ ವಕೀಲರ ತಂಡ ಸಹಾಯ ಮಾಡಬಹುದೇ ಎಂದು ಕೇಳಿದಾಗ, ಅಂತಹ ಯಾವುದೇ ಆಯ್ಕೆಯನ್ನು ಇಲ್ಲಿಯವರೆಗೆ ನೀಡಿಲ್ಲ ಎಂದು ಖಾಲಿದ್ ಜಾವೇದ್ ಖಾನ್ ಹೇಳಿದರು. ವಿಚಾರಣೆಯನ್ನು ಸೆಪ್ಟೆಂಬರ್ 3ಕ್ಕೆ ಮುಂದೂಡಲಾಗಿದೆ.

“ಪಾಕಿಸ್ತಾನ ಸರ್ಕಾರವು ಜಾಧವ್ ಅವರ ಹಕ್ಕುಗಳ ಬಗ್ಗೆ ಮತ್ತೊಮ್ಮೆ ತಿಳಿಸುತ್ತದೆ … ಶಾಸನಬದ್ಧ ಪರಿಹಾರವನ್ನು ಪಡೆಯುವ ಹಕ್ಕಿನ ಬಗ್ಗೆ ಅವರಿಗೆ ನಿರ್ದಿಷ್ಟವಾಗಿ ತಿಳಿಸಲಾಗುವುದು … ಮತ್ತು ಅವರ ಪರವಾಗಿ ಕಾನೂನು ಪ್ರಾತಿನಿಧ್ಯವನ್ನು ವ್ಯವಸ್ಥೆ ಮಾಡಲು ಭಾರತ ಸರ್ಕಾರಕ್ಕೆ ಅಧಿಕಾರ ನೀಡಬೇಕು” ಎಂದು ನ್ಯಾಯಾಲಯವು ತನ್ನ ಲಿಖಿತ ರೂಪದ ಆದೇಶದಲ್ಲಿ ತಿಳಿಸಿದೆ.

“ಪಾಕಿಸ್ತಾನ ಸರ್ಕಾರವು ಈ ಆದೇಶವನ್ನು ಭಾರತ ಸರ್ಕಾರಕ್ಕೆ ತಿಳಿಸುತ್ತದೆ, ಎರಡನೆಯದು ಜಾಧವ್ ಪರವಾಗಿ ಸೂಕ್ತ ವ್ಯವಸ್ಥೆಗಳನ್ನು ಮಾಡಲು ಸ್ವಾತಂತ್ರ್ಯವನ್ನು ಹೊಂದಿರುತ್ತದೆ” ಎಂದು ಅದು ಹೇಳಿದೆ.

ಪರಿಣಾಮಕಾರಿ ನ್ಯಾಯಾಂಗ ಪರಿಹಾರದ ಎಲ್ಲಾ ಮಾರ್ಗಗಳನ್ನು ಪಾಕಿಸ್ತಾನವು ನಿರ್ಬಂಧಿಸಿದೆ ಎಂದು ಕಳೆದವಾದ ಭಾರತ ಹೇಳಿತ್ತು. ಜುಲೈ 16 ರಂದು ನಡೆದ ಕಾನ್ಸುಲರ್ ಪ್ರವೇಶ ಸಭೆಯಲ್ಲಿ ಜಾಧವ್ ಅವರು ಸಹಿ ಮಾಡಿದ “ಪವರ್ ಆಫ್ ಅಟಾರ್ನಿ” ಕಾನೂನು ದಾಖಲೆ ಪಡೆಯಲು ಭಾರತೀಯ ರಾಜತಾಂತ್ರಿಕರಿಗೆ ಅವಕಾಶವಿರಲಿಲ್ಲ ಎಂದು ಭಾರತ ದೂರಿತ್ತು.

ಜಾಧವ್‌ಗೆ “ಕಾನೂನು ಪ್ರತಿನಿಧಿಯನ್ನು” ನೇಮಕ ಮಾಡುವ ವಿಚಾರಕ್ಕೆ ಪಾಕಿಸ್ತಾನ ಸರ್ಕಾರ ಜುಲೈ 22 ರಂದು ಮರುಪರಿಶೀಲನಾ ಅರ್ಜಿ ಸಲ್ಲಿಸಿತು. ಮನವಿಯನ್ನು ಆಲಿಸಲು ನ್ಯಾಯಾಲಯವು ದ್ವಿಸದಸ್ಯ ಪೀಠವನ್ನು ರಚಿಸಿತ್ತು.

ಈ ವಿಷಯವನ್ನು ಆಲಿಸಲು ದೊಡ್ಡ ನ್ಯಾಯಪೀಠವನ್ನು ರಚಿಸುವುದು ಸೂಕ್ತ ಎಂದು ಸೋಮವಾರ ನ್ಯಾಯಾಲಯ ಹೇಳಿದೆ. ಇದು ಮಾಜಿ ಅಟಾರ್ನಿ ಜನರಲ್ ಸೇರಿದಂತೆ ಪಾಕಿಸ್ತಾನದ ಮೂರು ಪ್ರಮುಖ ವಕೀಲರನ್ನು ಅಮಿಕಸ್ ಕ್ಯೂರಿಯಂತೆ ನೇಮಿಸಿದೆ.


ಓದಿ: ಮರುಪರಿಶೀಲನಾ ಅರ್ಜಿ ಸಲ್ಲಿಸಲು ನಿರಾಕರಿಸಿದ ಕುಲಭೂಷಣ್ ಜಾಧವ್: ಪಾಕ್


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...