Homeಅಂತರಾಷ್ಟ್ರೀಯಕುಲಭೂಷಣ್ ಜಾಧವ್ ಪರ ವಕೀಲರನ್ನು ನೇಮಿಸಲು ಭಾರತಕ್ಕೆ ಮತ್ತೊಂದು ಅವಕಾಶ ನೀಡಿ: ಪಾಕ್ ನ್ಯಾಯಾಲಯ

ಕುಲಭೂಷಣ್ ಜಾಧವ್ ಪರ ವಕೀಲರನ್ನು ನೇಮಿಸಲು ಭಾರತಕ್ಕೆ ಮತ್ತೊಂದು ಅವಕಾಶ ನೀಡಿ: ಪಾಕ್ ನ್ಯಾಯಾಲಯ

- Advertisement -
- Advertisement -

ಬೇಹುಗಾರಿಕೆ ಮತ್ತು ಭಯೋತ್ಪಾದಕ ಚಟುವಟಿಕೆಗಳ ಆರೋಪದ ಮೇಲೆ ಪಾಕಿಸ್ತಾನದಲ್ಲಿ ಮರಣದಂಡನೆಗೆ ಗುರಿಯಾಗಿರುವ ಭಾರತೀಯ ನೌಕಾಪಡೆಯ ಮಾಜಿ ಅಧಿಕಾರಿ ಕುಲಭೂಷಣ್ ಜಾಧವ್ ಅವರ ಪರ ವಕೀಲರನ್ನು ನೇಮಿಸಿಕೊಳ್ಳಲು ಭಾರತಕ್ಕೆ ಮತ್ತೊಂದು ಅವಕಾಶವನ್ನು ನೀಡಬೇಕು ಎಂದು ಇಸ್ಲಾಮಾಬಾದ್ ಹೈಕೋರ್ಟ್ ಹೇಳಿದೆ.

ಪಾಕಿಸ್ತಾನದ ಅಟಾರ್ನಿ ಜನರಲ್ ಖಾಲಿದ್ ಜಾವೇದ್ ಖಾನ್ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡುತ್ತಾ, ಪಾಕಿಸ್ತಾನದಲ್ಲಿ ವಾದ ಮಾಡಲು ಪರವಾನಗಿ ಪಡೆದ ವಕೀಲರನ್ನು ನೇಮಕ ಮಾಡಲು ಭಾರತೀಯ ಅಧಿಕಾರಿಗಳಿಗೆ ಅವಕಾಶ ನೀಡುವಂತೆ ನ್ಯಾಯಾಲಯ ಪಾಕಿಸ್ತಾನ ಸರ್ಕಾರವನ್ನು ಕೇಳಿದೆ ಎಂದಿದ್ದಾರೆ.

“ಈಗ ಈ ವಿಷಯವು ಹೈಕೋರ್ಟ್‌ನಲ್ಲಿದೆ, ಭಾರತಕ್ಕೆ ಮತ್ತೊಂದು ಅವಕಾಶವನ್ನು ಏಕೆ ನೀಡಬಾರದು” ಎಂದು ದ್ವಿಸದಸ್ಯ ಪೀಠದ ಮುಖ್ಯಸ್ಥರಾದ ಮುಖ್ಯ ನ್ಯಾಯಮೂರ್ತಿ ಅಥರ್ ಮಿನಲ್ಲಾ ಹೇಳಿದರು ಎಂದು ಜಿಯೋ ನ್ಯೂಸ್ ವರದಿ ಮಾಡಿದೆ.

ಪಾಕಿಸ್ತಾನದ ವಕೀಲರಿಗೆ ಭಾರತೀಯ ವಕೀಲರ ತಂಡ ಸಹಾಯ ಮಾಡಬಹುದೇ ಎಂದು ಕೇಳಿದಾಗ, ಅಂತಹ ಯಾವುದೇ ಆಯ್ಕೆಯನ್ನು ಇಲ್ಲಿಯವರೆಗೆ ನೀಡಿಲ್ಲ ಎಂದು ಖಾಲಿದ್ ಜಾವೇದ್ ಖಾನ್ ಹೇಳಿದರು. ವಿಚಾರಣೆಯನ್ನು ಸೆಪ್ಟೆಂಬರ್ 3ಕ್ಕೆ ಮುಂದೂಡಲಾಗಿದೆ.

“ಪಾಕಿಸ್ತಾನ ಸರ್ಕಾರವು ಜಾಧವ್ ಅವರ ಹಕ್ಕುಗಳ ಬಗ್ಗೆ ಮತ್ತೊಮ್ಮೆ ತಿಳಿಸುತ್ತದೆ … ಶಾಸನಬದ್ಧ ಪರಿಹಾರವನ್ನು ಪಡೆಯುವ ಹಕ್ಕಿನ ಬಗ್ಗೆ ಅವರಿಗೆ ನಿರ್ದಿಷ್ಟವಾಗಿ ತಿಳಿಸಲಾಗುವುದು … ಮತ್ತು ಅವರ ಪರವಾಗಿ ಕಾನೂನು ಪ್ರಾತಿನಿಧ್ಯವನ್ನು ವ್ಯವಸ್ಥೆ ಮಾಡಲು ಭಾರತ ಸರ್ಕಾರಕ್ಕೆ ಅಧಿಕಾರ ನೀಡಬೇಕು” ಎಂದು ನ್ಯಾಯಾಲಯವು ತನ್ನ ಲಿಖಿತ ರೂಪದ ಆದೇಶದಲ್ಲಿ ತಿಳಿಸಿದೆ.

“ಪಾಕಿಸ್ತಾನ ಸರ್ಕಾರವು ಈ ಆದೇಶವನ್ನು ಭಾರತ ಸರ್ಕಾರಕ್ಕೆ ತಿಳಿಸುತ್ತದೆ, ಎರಡನೆಯದು ಜಾಧವ್ ಪರವಾಗಿ ಸೂಕ್ತ ವ್ಯವಸ್ಥೆಗಳನ್ನು ಮಾಡಲು ಸ್ವಾತಂತ್ರ್ಯವನ್ನು ಹೊಂದಿರುತ್ತದೆ” ಎಂದು ಅದು ಹೇಳಿದೆ.

ಪರಿಣಾಮಕಾರಿ ನ್ಯಾಯಾಂಗ ಪರಿಹಾರದ ಎಲ್ಲಾ ಮಾರ್ಗಗಳನ್ನು ಪಾಕಿಸ್ತಾನವು ನಿರ್ಬಂಧಿಸಿದೆ ಎಂದು ಕಳೆದವಾದ ಭಾರತ ಹೇಳಿತ್ತು. ಜುಲೈ 16 ರಂದು ನಡೆದ ಕಾನ್ಸುಲರ್ ಪ್ರವೇಶ ಸಭೆಯಲ್ಲಿ ಜಾಧವ್ ಅವರು ಸಹಿ ಮಾಡಿದ “ಪವರ್ ಆಫ್ ಅಟಾರ್ನಿ” ಕಾನೂನು ದಾಖಲೆ ಪಡೆಯಲು ಭಾರತೀಯ ರಾಜತಾಂತ್ರಿಕರಿಗೆ ಅವಕಾಶವಿರಲಿಲ್ಲ ಎಂದು ಭಾರತ ದೂರಿತ್ತು.

ಜಾಧವ್‌ಗೆ “ಕಾನೂನು ಪ್ರತಿನಿಧಿಯನ್ನು” ನೇಮಕ ಮಾಡುವ ವಿಚಾರಕ್ಕೆ ಪಾಕಿಸ್ತಾನ ಸರ್ಕಾರ ಜುಲೈ 22 ರಂದು ಮರುಪರಿಶೀಲನಾ ಅರ್ಜಿ ಸಲ್ಲಿಸಿತು. ಮನವಿಯನ್ನು ಆಲಿಸಲು ನ್ಯಾಯಾಲಯವು ದ್ವಿಸದಸ್ಯ ಪೀಠವನ್ನು ರಚಿಸಿತ್ತು.

ಈ ವಿಷಯವನ್ನು ಆಲಿಸಲು ದೊಡ್ಡ ನ್ಯಾಯಪೀಠವನ್ನು ರಚಿಸುವುದು ಸೂಕ್ತ ಎಂದು ಸೋಮವಾರ ನ್ಯಾಯಾಲಯ ಹೇಳಿದೆ. ಇದು ಮಾಜಿ ಅಟಾರ್ನಿ ಜನರಲ್ ಸೇರಿದಂತೆ ಪಾಕಿಸ್ತಾನದ ಮೂರು ಪ್ರಮುಖ ವಕೀಲರನ್ನು ಅಮಿಕಸ್ ಕ್ಯೂರಿಯಂತೆ ನೇಮಿಸಿದೆ.


ಓದಿ: ಮರುಪರಿಶೀಲನಾ ಅರ್ಜಿ ಸಲ್ಲಿಸಲು ನಿರಾಕರಿಸಿದ ಕುಲಭೂಷಣ್ ಜಾಧವ್: ಪಾಕ್


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...