Homeಅಂತರಾಷ್ಟ್ರೀಯಕುಲಭೂಷಣ್ ಜಾಧವ್ ಪರ ವಕೀಲರನ್ನು ನೇಮಿಸಲು ಭಾರತಕ್ಕೆ ಮತ್ತೊಂದು ಅವಕಾಶ ನೀಡಿ: ಪಾಕ್ ನ್ಯಾಯಾಲಯ

ಕುಲಭೂಷಣ್ ಜಾಧವ್ ಪರ ವಕೀಲರನ್ನು ನೇಮಿಸಲು ಭಾರತಕ್ಕೆ ಮತ್ತೊಂದು ಅವಕಾಶ ನೀಡಿ: ಪಾಕ್ ನ್ಯಾಯಾಲಯ

- Advertisement -
- Advertisement -

ಬೇಹುಗಾರಿಕೆ ಮತ್ತು ಭಯೋತ್ಪಾದಕ ಚಟುವಟಿಕೆಗಳ ಆರೋಪದ ಮೇಲೆ ಪಾಕಿಸ್ತಾನದಲ್ಲಿ ಮರಣದಂಡನೆಗೆ ಗುರಿಯಾಗಿರುವ ಭಾರತೀಯ ನೌಕಾಪಡೆಯ ಮಾಜಿ ಅಧಿಕಾರಿ ಕುಲಭೂಷಣ್ ಜಾಧವ್ ಅವರ ಪರ ವಕೀಲರನ್ನು ನೇಮಿಸಿಕೊಳ್ಳಲು ಭಾರತಕ್ಕೆ ಮತ್ತೊಂದು ಅವಕಾಶವನ್ನು ನೀಡಬೇಕು ಎಂದು ಇಸ್ಲಾಮಾಬಾದ್ ಹೈಕೋರ್ಟ್ ಹೇಳಿದೆ.

ಪಾಕಿಸ್ತಾನದ ಅಟಾರ್ನಿ ಜನರಲ್ ಖಾಲಿದ್ ಜಾವೇದ್ ಖಾನ್ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡುತ್ತಾ, ಪಾಕಿಸ್ತಾನದಲ್ಲಿ ವಾದ ಮಾಡಲು ಪರವಾನಗಿ ಪಡೆದ ವಕೀಲರನ್ನು ನೇಮಕ ಮಾಡಲು ಭಾರತೀಯ ಅಧಿಕಾರಿಗಳಿಗೆ ಅವಕಾಶ ನೀಡುವಂತೆ ನ್ಯಾಯಾಲಯ ಪಾಕಿಸ್ತಾನ ಸರ್ಕಾರವನ್ನು ಕೇಳಿದೆ ಎಂದಿದ್ದಾರೆ.

“ಈಗ ಈ ವಿಷಯವು ಹೈಕೋರ್ಟ್‌ನಲ್ಲಿದೆ, ಭಾರತಕ್ಕೆ ಮತ್ತೊಂದು ಅವಕಾಶವನ್ನು ಏಕೆ ನೀಡಬಾರದು” ಎಂದು ದ್ವಿಸದಸ್ಯ ಪೀಠದ ಮುಖ್ಯಸ್ಥರಾದ ಮುಖ್ಯ ನ್ಯಾಯಮೂರ್ತಿ ಅಥರ್ ಮಿನಲ್ಲಾ ಹೇಳಿದರು ಎಂದು ಜಿಯೋ ನ್ಯೂಸ್ ವರದಿ ಮಾಡಿದೆ.

ಪಾಕಿಸ್ತಾನದ ವಕೀಲರಿಗೆ ಭಾರತೀಯ ವಕೀಲರ ತಂಡ ಸಹಾಯ ಮಾಡಬಹುದೇ ಎಂದು ಕೇಳಿದಾಗ, ಅಂತಹ ಯಾವುದೇ ಆಯ್ಕೆಯನ್ನು ಇಲ್ಲಿಯವರೆಗೆ ನೀಡಿಲ್ಲ ಎಂದು ಖಾಲಿದ್ ಜಾವೇದ್ ಖಾನ್ ಹೇಳಿದರು. ವಿಚಾರಣೆಯನ್ನು ಸೆಪ್ಟೆಂಬರ್ 3ಕ್ಕೆ ಮುಂದೂಡಲಾಗಿದೆ.

“ಪಾಕಿಸ್ತಾನ ಸರ್ಕಾರವು ಜಾಧವ್ ಅವರ ಹಕ್ಕುಗಳ ಬಗ್ಗೆ ಮತ್ತೊಮ್ಮೆ ತಿಳಿಸುತ್ತದೆ … ಶಾಸನಬದ್ಧ ಪರಿಹಾರವನ್ನು ಪಡೆಯುವ ಹಕ್ಕಿನ ಬಗ್ಗೆ ಅವರಿಗೆ ನಿರ್ದಿಷ್ಟವಾಗಿ ತಿಳಿಸಲಾಗುವುದು … ಮತ್ತು ಅವರ ಪರವಾಗಿ ಕಾನೂನು ಪ್ರಾತಿನಿಧ್ಯವನ್ನು ವ್ಯವಸ್ಥೆ ಮಾಡಲು ಭಾರತ ಸರ್ಕಾರಕ್ಕೆ ಅಧಿಕಾರ ನೀಡಬೇಕು” ಎಂದು ನ್ಯಾಯಾಲಯವು ತನ್ನ ಲಿಖಿತ ರೂಪದ ಆದೇಶದಲ್ಲಿ ತಿಳಿಸಿದೆ.

“ಪಾಕಿಸ್ತಾನ ಸರ್ಕಾರವು ಈ ಆದೇಶವನ್ನು ಭಾರತ ಸರ್ಕಾರಕ್ಕೆ ತಿಳಿಸುತ್ತದೆ, ಎರಡನೆಯದು ಜಾಧವ್ ಪರವಾಗಿ ಸೂಕ್ತ ವ್ಯವಸ್ಥೆಗಳನ್ನು ಮಾಡಲು ಸ್ವಾತಂತ್ರ್ಯವನ್ನು ಹೊಂದಿರುತ್ತದೆ” ಎಂದು ಅದು ಹೇಳಿದೆ.

ಪರಿಣಾಮಕಾರಿ ನ್ಯಾಯಾಂಗ ಪರಿಹಾರದ ಎಲ್ಲಾ ಮಾರ್ಗಗಳನ್ನು ಪಾಕಿಸ್ತಾನವು ನಿರ್ಬಂಧಿಸಿದೆ ಎಂದು ಕಳೆದವಾದ ಭಾರತ ಹೇಳಿತ್ತು. ಜುಲೈ 16 ರಂದು ನಡೆದ ಕಾನ್ಸುಲರ್ ಪ್ರವೇಶ ಸಭೆಯಲ್ಲಿ ಜಾಧವ್ ಅವರು ಸಹಿ ಮಾಡಿದ “ಪವರ್ ಆಫ್ ಅಟಾರ್ನಿ” ಕಾನೂನು ದಾಖಲೆ ಪಡೆಯಲು ಭಾರತೀಯ ರಾಜತಾಂತ್ರಿಕರಿಗೆ ಅವಕಾಶವಿರಲಿಲ್ಲ ಎಂದು ಭಾರತ ದೂರಿತ್ತು.

ಜಾಧವ್‌ಗೆ “ಕಾನೂನು ಪ್ರತಿನಿಧಿಯನ್ನು” ನೇಮಕ ಮಾಡುವ ವಿಚಾರಕ್ಕೆ ಪಾಕಿಸ್ತಾನ ಸರ್ಕಾರ ಜುಲೈ 22 ರಂದು ಮರುಪರಿಶೀಲನಾ ಅರ್ಜಿ ಸಲ್ಲಿಸಿತು. ಮನವಿಯನ್ನು ಆಲಿಸಲು ನ್ಯಾಯಾಲಯವು ದ್ವಿಸದಸ್ಯ ಪೀಠವನ್ನು ರಚಿಸಿತ್ತು.

ಈ ವಿಷಯವನ್ನು ಆಲಿಸಲು ದೊಡ್ಡ ನ್ಯಾಯಪೀಠವನ್ನು ರಚಿಸುವುದು ಸೂಕ್ತ ಎಂದು ಸೋಮವಾರ ನ್ಯಾಯಾಲಯ ಹೇಳಿದೆ. ಇದು ಮಾಜಿ ಅಟಾರ್ನಿ ಜನರಲ್ ಸೇರಿದಂತೆ ಪಾಕಿಸ್ತಾನದ ಮೂರು ಪ್ರಮುಖ ವಕೀಲರನ್ನು ಅಮಿಕಸ್ ಕ್ಯೂರಿಯಂತೆ ನೇಮಿಸಿದೆ.


ಓದಿ: ಮರುಪರಿಶೀಲನಾ ಅರ್ಜಿ ಸಲ್ಲಿಸಲು ನಿರಾಕರಿಸಿದ ಕುಲಭೂಷಣ್ ಜಾಧವ್: ಪಾಕ್


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...