Homeಅಂತರಾಷ್ಟ್ರೀಯಕುಲಭೂಷಣ್ ಜಾಧವ್ ಪರ ವಕೀಲರನ್ನು ನೇಮಿಸಲು ಭಾರತಕ್ಕೆ ಮತ್ತೊಂದು ಅವಕಾಶ ನೀಡಿ: ಪಾಕ್ ನ್ಯಾಯಾಲಯ

ಕುಲಭೂಷಣ್ ಜಾಧವ್ ಪರ ವಕೀಲರನ್ನು ನೇಮಿಸಲು ಭಾರತಕ್ಕೆ ಮತ್ತೊಂದು ಅವಕಾಶ ನೀಡಿ: ಪಾಕ್ ನ್ಯಾಯಾಲಯ

- Advertisement -
- Advertisement -

ಬೇಹುಗಾರಿಕೆ ಮತ್ತು ಭಯೋತ್ಪಾದಕ ಚಟುವಟಿಕೆಗಳ ಆರೋಪದ ಮೇಲೆ ಪಾಕಿಸ್ತಾನದಲ್ಲಿ ಮರಣದಂಡನೆಗೆ ಗುರಿಯಾಗಿರುವ ಭಾರತೀಯ ನೌಕಾಪಡೆಯ ಮಾಜಿ ಅಧಿಕಾರಿ ಕುಲಭೂಷಣ್ ಜಾಧವ್ ಅವರ ಪರ ವಕೀಲರನ್ನು ನೇಮಿಸಿಕೊಳ್ಳಲು ಭಾರತಕ್ಕೆ ಮತ್ತೊಂದು ಅವಕಾಶವನ್ನು ನೀಡಬೇಕು ಎಂದು ಇಸ್ಲಾಮಾಬಾದ್ ಹೈಕೋರ್ಟ್ ಹೇಳಿದೆ.

ಪಾಕಿಸ್ತಾನದ ಅಟಾರ್ನಿ ಜನರಲ್ ಖಾಲಿದ್ ಜಾವೇದ್ ಖಾನ್ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡುತ್ತಾ, ಪಾಕಿಸ್ತಾನದಲ್ಲಿ ವಾದ ಮಾಡಲು ಪರವಾನಗಿ ಪಡೆದ ವಕೀಲರನ್ನು ನೇಮಕ ಮಾಡಲು ಭಾರತೀಯ ಅಧಿಕಾರಿಗಳಿಗೆ ಅವಕಾಶ ನೀಡುವಂತೆ ನ್ಯಾಯಾಲಯ ಪಾಕಿಸ್ತಾನ ಸರ್ಕಾರವನ್ನು ಕೇಳಿದೆ ಎಂದಿದ್ದಾರೆ.

“ಈಗ ಈ ವಿಷಯವು ಹೈಕೋರ್ಟ್‌ನಲ್ಲಿದೆ, ಭಾರತಕ್ಕೆ ಮತ್ತೊಂದು ಅವಕಾಶವನ್ನು ಏಕೆ ನೀಡಬಾರದು” ಎಂದು ದ್ವಿಸದಸ್ಯ ಪೀಠದ ಮುಖ್ಯಸ್ಥರಾದ ಮುಖ್ಯ ನ್ಯಾಯಮೂರ್ತಿ ಅಥರ್ ಮಿನಲ್ಲಾ ಹೇಳಿದರು ಎಂದು ಜಿಯೋ ನ್ಯೂಸ್ ವರದಿ ಮಾಡಿದೆ.

ಪಾಕಿಸ್ತಾನದ ವಕೀಲರಿಗೆ ಭಾರತೀಯ ವಕೀಲರ ತಂಡ ಸಹಾಯ ಮಾಡಬಹುದೇ ಎಂದು ಕೇಳಿದಾಗ, ಅಂತಹ ಯಾವುದೇ ಆಯ್ಕೆಯನ್ನು ಇಲ್ಲಿಯವರೆಗೆ ನೀಡಿಲ್ಲ ಎಂದು ಖಾಲಿದ್ ಜಾವೇದ್ ಖಾನ್ ಹೇಳಿದರು. ವಿಚಾರಣೆಯನ್ನು ಸೆಪ್ಟೆಂಬರ್ 3ಕ್ಕೆ ಮುಂದೂಡಲಾಗಿದೆ.

“ಪಾಕಿಸ್ತಾನ ಸರ್ಕಾರವು ಜಾಧವ್ ಅವರ ಹಕ್ಕುಗಳ ಬಗ್ಗೆ ಮತ್ತೊಮ್ಮೆ ತಿಳಿಸುತ್ತದೆ … ಶಾಸನಬದ್ಧ ಪರಿಹಾರವನ್ನು ಪಡೆಯುವ ಹಕ್ಕಿನ ಬಗ್ಗೆ ಅವರಿಗೆ ನಿರ್ದಿಷ್ಟವಾಗಿ ತಿಳಿಸಲಾಗುವುದು … ಮತ್ತು ಅವರ ಪರವಾಗಿ ಕಾನೂನು ಪ್ರಾತಿನಿಧ್ಯವನ್ನು ವ್ಯವಸ್ಥೆ ಮಾಡಲು ಭಾರತ ಸರ್ಕಾರಕ್ಕೆ ಅಧಿಕಾರ ನೀಡಬೇಕು” ಎಂದು ನ್ಯಾಯಾಲಯವು ತನ್ನ ಲಿಖಿತ ರೂಪದ ಆದೇಶದಲ್ಲಿ ತಿಳಿಸಿದೆ.

“ಪಾಕಿಸ್ತಾನ ಸರ್ಕಾರವು ಈ ಆದೇಶವನ್ನು ಭಾರತ ಸರ್ಕಾರಕ್ಕೆ ತಿಳಿಸುತ್ತದೆ, ಎರಡನೆಯದು ಜಾಧವ್ ಪರವಾಗಿ ಸೂಕ್ತ ವ್ಯವಸ್ಥೆಗಳನ್ನು ಮಾಡಲು ಸ್ವಾತಂತ್ರ್ಯವನ್ನು ಹೊಂದಿರುತ್ತದೆ” ಎಂದು ಅದು ಹೇಳಿದೆ.

ಪರಿಣಾಮಕಾರಿ ನ್ಯಾಯಾಂಗ ಪರಿಹಾರದ ಎಲ್ಲಾ ಮಾರ್ಗಗಳನ್ನು ಪಾಕಿಸ್ತಾನವು ನಿರ್ಬಂಧಿಸಿದೆ ಎಂದು ಕಳೆದವಾದ ಭಾರತ ಹೇಳಿತ್ತು. ಜುಲೈ 16 ರಂದು ನಡೆದ ಕಾನ್ಸುಲರ್ ಪ್ರವೇಶ ಸಭೆಯಲ್ಲಿ ಜಾಧವ್ ಅವರು ಸಹಿ ಮಾಡಿದ “ಪವರ್ ಆಫ್ ಅಟಾರ್ನಿ” ಕಾನೂನು ದಾಖಲೆ ಪಡೆಯಲು ಭಾರತೀಯ ರಾಜತಾಂತ್ರಿಕರಿಗೆ ಅವಕಾಶವಿರಲಿಲ್ಲ ಎಂದು ಭಾರತ ದೂರಿತ್ತು.

ಜಾಧವ್‌ಗೆ “ಕಾನೂನು ಪ್ರತಿನಿಧಿಯನ್ನು” ನೇಮಕ ಮಾಡುವ ವಿಚಾರಕ್ಕೆ ಪಾಕಿಸ್ತಾನ ಸರ್ಕಾರ ಜುಲೈ 22 ರಂದು ಮರುಪರಿಶೀಲನಾ ಅರ್ಜಿ ಸಲ್ಲಿಸಿತು. ಮನವಿಯನ್ನು ಆಲಿಸಲು ನ್ಯಾಯಾಲಯವು ದ್ವಿಸದಸ್ಯ ಪೀಠವನ್ನು ರಚಿಸಿತ್ತು.

ಈ ವಿಷಯವನ್ನು ಆಲಿಸಲು ದೊಡ್ಡ ನ್ಯಾಯಪೀಠವನ್ನು ರಚಿಸುವುದು ಸೂಕ್ತ ಎಂದು ಸೋಮವಾರ ನ್ಯಾಯಾಲಯ ಹೇಳಿದೆ. ಇದು ಮಾಜಿ ಅಟಾರ್ನಿ ಜನರಲ್ ಸೇರಿದಂತೆ ಪಾಕಿಸ್ತಾನದ ಮೂರು ಪ್ರಮುಖ ವಕೀಲರನ್ನು ಅಮಿಕಸ್ ಕ್ಯೂರಿಯಂತೆ ನೇಮಿಸಿದೆ.


ಓದಿ: ಮರುಪರಿಶೀಲನಾ ಅರ್ಜಿ ಸಲ್ಲಿಸಲು ನಿರಾಕರಿಸಿದ ಕುಲಭೂಷಣ್ ಜಾಧವ್: ಪಾಕ್


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...