Homeಮುಖಪುಟಪಾಕಿಸ್ತಾನ | ಮಾಜಿ ಪ್ರಧಾನಿ ಇಮ್ರಾನ್‌ ಖಾನ್‌ಗೆ 14 ವರ್ಷ, ಪತ್ನಿಗೆ 7 ವರ್ಷ ಜೈಲು

ಪಾಕಿಸ್ತಾನ | ಮಾಜಿ ಪ್ರಧಾನಿ ಇಮ್ರಾನ್‌ ಖಾನ್‌ಗೆ 14 ವರ್ಷ, ಪತ್ನಿಗೆ 7 ವರ್ಷ ಜೈಲು

- Advertisement -
- Advertisement -

ಅಲ್-ಖಾದಿರ್ ಟ್ರಸ್ಟ್‌ಗೆ ಸಂಬಂಧಿಸಿದ 190 ಮಿಲಿಯನ್ ಪೌಂಡ್‌ ಭ್ರಷ್ಟಾಚಾರ ಪ್ರಕರಣದಲ್ಲಿ ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಮತ್ತು ಅವರ ಪತ್ನಿ ಬುಶ್ರಾ ಬೀಬಿ ಅವರನ್ನು ತಪ್ಪಿತಸ್ಥರು ಎಂದು ಪಾಕಿಸ್ತಾನದ ನ್ಯಾಯಾಲಯ ಶುಕ್ರವಾರ (ಜ.17) ಘೋಷಿಸಿದ್ದು, ಅವರಿಗೆ ಕ್ರಮವಾಗಿ 14 ಮತ್ತು 7 ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ.

ಜೈಲು ಶಿಕ್ಷೆಯ ಜೊತೆಗೆ, ಇಮ್ರಾನ್ ಖಾನ್‌ ಅವರಿಗೆ 10 ಲಕ್ಷ ರೂಪಾಯಿ ಮತ್ತು ಬುಶ್ರಾ ಬೀಬಿ ಅವರಿಗೆ 5 ಲಕ್ಷ ರೂಪಾಯಿ ದಂಡ ವಿಧಿಸಲಾಗಿದೆ. ದಂಡ ಪಾವತಿಸಲು ವಿಫಲವಾದರೆ ಖಾನ್‌ಗೆ ಆರು ತಿಂಗಳು ಮತ್ತು ಬೀಬಿಗೆ ಮೂರು ತಿಂಗಳು ಹೆಚ್ಚುವರಿ ಜೈಲು ಶಿಕ್ಷೆ ವಿಧಿಸಲಾಗುತ್ತದೆ ಎಂದು ನ್ಯಾಯಾಲಯ ಆದೇಶದಲ್ಲಿ ತಿಳಿಸಿದೆ.

ಇಮ್ರಾನ್ ಖಾನ್ ದಂಪತಿ ಸ್ಥಾಪಿಸಿದ ಅಲ್-ಖಾದಿರ್ ವಿಶ್ವವಿದ್ಯಾಲಯದ ಭೂಮಿಯನ್ನು ಮುಟ್ಟುಗೋಲು ಹಾಕಿಕೊಳ್ಳುವಂತೆ ನ್ಯಾಯಾಲಯ ಆದೇಶಿಸಿದೆ.

ಇಮ್ರಾನ್ ಖಾನ್ ಈಗಾಗಲೇ ಜೈಲಿನಲ್ಲಿದ್ದು, ಬುಶ್ರಾ ಬೀಬಿಯನ್ನು ನ್ಯಾಯಾಲಯದಿಂದ ಬಂಧಿಸಲಾಗಿದೆ ಎಂದು ವರದಿಗಳು ಹೇಳಿವೆ.

ಕಳೆದ ಜನವರಿ 13ನೇ ತಾರೀಕು ಸೇರಿದಂತೆ ಮೂರು ಬಾರಿ ವಿವಿಧ ಕಾರಣಗಳಿಂದ ಮುಂದೂಡಲ್ಪಟ್ಟಿದ್ದ ತೀರ್ಪನ್ನು ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ ನ್ಯಾಯಾಧೀಶ ನಾಸಿರ್ ಜಾವೇದ್ ರಾಣಾ ಅವರು ಇಂದು (ಜ.17) ಪ್ರಕಟಿಸಿದ್ದಾರೆ.

ಅಡಿಲಾ ಜೈಲಿನಲ್ಲಿ ಸ್ಥಾಪಿಸಲಾದ ತಾತ್ಕಾಲಿಕ ನ್ಯಾಯಾಲಯದಲ್ಲಿ ನ್ಯಾಯಾಧೀಶರು ತೀರ್ಪು ಪ್ರಕಟಿಸಿದ್ದಾರೆ.

“ಇಂದಿನ ತೀರ್ಪು ನ್ಯಾಯಾಂಗದ ಖ್ಯಾತಿಗೆ ಕಳಂಕ ತಂದಿದೆ. ಈ ಪ್ರಕರಣದಲ್ಲಿ ನನಗೆ ಲಾಭವೂ ಆಗಿಲ್ಲ, ಸರ್ಕಾರಕ್ಕೆ ನಷ್ಟವೂ ಆಗಿಲ್ಲ. ನನಗೆ ಯಾವುದೇ ಪರಿಹಾರ ಬೇಡ ಮತ್ತು ಎಲ್ಲಾ ಪ್ರಕರಣಗಳನ್ನು ಎದುರಿಸುತ್ತೇನೆ. ಸರ್ವಾಧಿಕಾರಿಯೊಬ್ಬರು ಇದನ್ನೆಲ್ಲ ಮಾಡುತ್ತಿದ್ದಾರೆ” ಎಂದು ಇಮ್ರಾನ್ ಖಾನ್ ಹೇಳಿರುವುದಾಗಿ ಅವರ ಪಕ್ಷ ತಿಳಿಸಿದೆ.

ನ್ಯಾಷನಲ್ ಅಕೌಂಟೆಬಿಲಿಟಿ ಬ್ಯೂರೊ(ಎನ್‌ಎಬಿ) 2023ರ ಡಿಸೆಂಬರ್‌ನಲ್ಲಿ ಇಮ್ರಾನ್ ಖಾನ್ (72), ಬುಶ್ರಾ ಬೀಬಿ (50) ಮತ್ತು ಇತರ ಆರು ಜನರ ವಿರುದ್ಧ ಪ್ರಕರಣ ದಾಖಲಿಸಿತ್ತು. ದೇಶದ ಖಜಾನೆಗೆ ಇಮ್ರಾನ್ ಖಾನ್ ದಂಪತಿ 190 ಮಿಲಿಯನ್ ಪೌಂಡ್‌ಗಳಷ್ಟು (ಪಾಕಿಸ್ತಾನ ರೂಪಾಯಿಯಲ್ಲಿ 50 ಶತಕೋಟಿ) ನಷ್ಟ ಉಂಟುಮಾಡಿದ್ದಾರೆ ಎಂದು ಆರೋಪಿಸಲಾಗಿತ್ತು.

ಒಬ್ಬ ಉದ್ಯಮಿ ಸೇರಿ ಪ್ರಕರಣದ ಇತರೆ ಆರೋಪಿಗಳು ದೇಶದಿಂದ ಹೊರಗಿರುವ ಕಾರಣ ಖಾನ್ ಮತ್ತು ಬೀಬಿ ವಿರುದ್ಧ ಮಾತ್ರ ಕಾನೂನು ಕ್ರಮ ಕೈಗೊಳ್ಳಲಾಗಿದೆ.

ವ್ಯವಹಾರವೊಂದರ ಇತ್ಯರ್ಥದ ಬಳಿಕ ರಿಯಲ್‌ ಎಸ್ಟೇಟ್ ಉದ್ಯಮಿಯೊಬ್ಬರಿಂದ 50 ಶತಕೋಟಿ ರೂಪಾಯಿಯನ್ನು ಬ್ರಿಟನ್‌ನ ರಾಷ್ಟ್ರೀಯ ಅಪರಾಧ ಸಂಸ್ಥೆಯು ಪಾಕಿಸ್ತಾನಕ್ಕೆ ಹಿಂದಿರುಗಿಸಿತ್ತು. ಆ ಹಣವನ್ನು ಇಮ್ರಾನ್ ಖಾನ್ ದಂಪತಿ, ಮತ್ತಿತರರು ದುರ್ಬಳಕೆ ಮಾಡಿಕೊಂಡಿದ್ದಾರೆ ಎಂಬುವುದು ಆರೋಪ.

ರಾಷ್ಟ್ರೀಯ ಖಜಾನೆಗೆ ಸೇರಬೇಕಿದ್ದ ಈ ಹಣವನ್ನು ಬೀಬಿ ಮತ್ತು ಖಾನ್‌ಗೆ ವಿಶ್ವವಿದ್ಯಾಲಯವನ್ನು ಸ್ಥಾಪಿಸಲು ಸಹಾಯ ಮಾಡಿದ ಉದ್ಯಮಿಯ ವೈಯಕ್ತಿಕ ಲಾಭಕ್ಕಾಗಿ ತಿರುಗಿಸಿದ್ದರು ಎಂದು ದೂರಲಾಗಿದೆ.

ಅಲ್-ಖಾದಿರ್ ಟ್ರಸ್ಟ್‌ನ ಟ್ರಸ್ಟಿಯಾಗಿರುವ ಬುಶ್ರಾ ಬೀಬಿ, ಈ ಇತ್ಯರ್ಥದಿಂದ ಲಾಭ ಪಡೆದ ಆರೋಪವನ್ನು ಎದುರಿಸುತ್ತಿದ್ದಾರೆ. ಇದರಲ್ಲಿ ಝೇಲಂನಲ್ಲಿರುವ ಅಲ್-ಖಾದಿರ್ ವಿಶ್ವವಿದ್ಯಾಲಯಕ್ಕಾಗಿ 458 ಕನಾಲ್ ((57 ಎಕರೆ) ಭೂಮಿಯನ್ನು ಸ್ವಾಧೀನಪಡಿಸಿಕೊಂಡಿರುವುದು ಸೇರಿದೆ.

ಇಮ್ರಾನ್ ಖಾನ್ ಮತ್ತು ಅವರ ಪಕ್ಷದ ಇತರ ಹಲವಾರು ನಾಯಕರ ಜೈಲು ಶಿಕ್ಷೆಯಿಂದಾಗಿ ದೇಶದಲ್ಲಿ ಉಂಟಾಗಿರುವ ರಾಜಕೀಯ ಅಸ್ಥಿರತೆಯನ್ನು ಪರಿಹರಿಸಲು ಸರ್ಕಾರ ಮತ್ತು ಖಾನ್ ಅವರ ಪಾಕಿಸ್ತಾನ್ ತೆಹ್ರೀಕ್-ಇ-ಇನ್ಸಾಫ್ (ಪಿಟಿಐ) ಪಕ್ಷದ ನಡುವೆ ನಡೆಯುತ್ತಿರುವ ಮಾತುಕತೆಯ ಮಧ್ಯೆ ನ್ಯಾಯಾಲಯದ ತೀರ್ಪು ಹೊರ ಬಿದ್ದಿದೆ.

ಇಲ್ಲಿಯವರೆಗೆ ಮೂರು ಸುತ್ತಿನ ಮಾತುಕತೆಗಳು ನಡೆದಿದ್ದು, ಪಿಟಿಐ ತನ್ನ ಬೇಡಿಕೆಗಳ ಪಟ್ಟಿಯನ್ನು ಸರ್ಕಾರಕ್ಕೆ ಲಿಖಿತವಾಗಿ ಮಂಡಿಸಿದೆ.

2022ರಲ್ಲಿ ಪ್ರಧಾನಿ ಹುದ್ದೆಯಿಂದ ಪದಚ್ಯುತಗೊಂಡ ನಂತರ ಖಾನ್ ಅವರು ಹಲವಾರು ಪ್ರಕರಣಗಳನ್ನು ಎದುರಿಸುತ್ತಿದ್ದಾರೆ. ಅವರು ಆಗಸ್ಟ್ 2023 ರಿಂದ ಜೈಲಿನಲ್ಲಿದ್ದಾರೆ.

ಇದನ್ನೂ ಓದಿ : ನಟ ಸೈಫ್ ಅಲಿ ಖಾನ್‌ಗೆ ಚಾಕು ಇರಿತ: ಶಂಕಿತನ ಬಂಧಿಸಿದ ಮುಂಬೈ ಪೊಲೀಸರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್ ನೂತನ ಸರ್ವೋಚ್ಚ ನಾಯಕ ಮೊಜ್ತಾಬಾ ಖಮೇನಿ ‘ಪ್ರಜ್ಞಾಹೀನ’, ಕೋಮ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ: ವರದಿ

ಇರಾನ್‌ನ ಸರ್ವೋಚ್ಚ ನಾಯಕ ಮೊಜ್ತಾಬಾ ಖಮೇನಿ ಅವರು ಕೋಮ್‌ನಲ್ಲಿ ವೈದ್ಯಕೀಯ ಚಿಕಿತ್ಸೆ ಪಡೆಯುತ್ತಿದ್ದಾರೆ ಮತ್ತು ಪ್ರಜ್ಞಾಹೀನರಾಗಿದ್ದಾರೆ ಎಂದು ನಂಬಲಾಗಿದೆ ಎಂದು ಗುಪ್ತಚರ ಆಧಾರಿತ ರಾಜತಾಂತ್ರಿಕ ಜ್ಞಾಪಕ ಪತ್ರವನ್ನು ಉಲ್ಲೇಖಿಸಿ ದಿ ಟೈಮ್ಸ್ ವರದಿ...

ಪ. ಬಂಗಾಳ : ಎಸ್‌ಐಆರ್‌ನಲ್ಲಿ ಮತದಾರರ ಪಟ್ಟಿಯಿಂದ ಕೈ ಬಿಟ್ಟಿದ್ದ ಮತ್ತೊಬ್ಬ ಕಾಂಗ್ರೆಸ್ ಅಭ್ಯರ್ಥಿಯ ಹೆಸರು ಮರು ಸೇರ್ಪಡೆ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ ವೇಳೆ (ಎಸ್‌ಐಆರ್‌) ತೆಗೆದು ಹಾಕಿದ್ದ ಮತ್ತೊಬ್ಬ ಕಾಂಗ್ರೆಸ್ ಅಭ್ಯರ್ಥಿಯ ಹೆಸರನ್ನು ಮತದಾರರ ಪಟ್ಟಿಗೆ ಮರು ಸೇರ್ಪಡೆಗೊಳಿಸುವಂತೆ ಮೇಲ್ಮನವಿ ನ್ಯಾಯಮಂಡಳಿ ಸೋಮವಾರ (ಏ.6) ಆದೇಶಿಸಿರುವುದಾಗಿ ವರದಿಯಾಗಿದೆ. ರತುವಾ...

ಹೈದರಾಬಾದ್| ಐಪಿಎಲ್ ಪಂದ್ಯದಿಂದ ಭಾರೀ ಸಂಚಾರ ದಟ್ಟಣೆ; ಆಂಬ್ಯುಲೆನ್ಸ್‌ನಲ್ಲಿದ್ದ ಮಹಿಳೆ ಸಾವು

ಏಪ್ರಿಲ್ 5 ರ ಭಾನುವಾರ ಉಪ್ಪಳದಲ್ಲಿ ಉಂಟಾದ ಭಾರೀ ಸಂಚಾರ ದಟ್ಟಣೆಯಿಂದಾಗಿ ಒಂದು ಗಂಟೆಗೂ ಹೆಚ್ಚು ಕಾಲ ಆಂಬ್ಯುಲೆನ್ಸ್‌ನಲ್ಲಿ ಸಿಲುಕಿಕೊಂಡಿದ್ದ ಬಿಷ್ಣಾ ಎಂಬ 30 ವರ್ಷದ ಮಹಿಳೆ ಸಾವನ್ನಪ್ಪಿದ ದುರಂತ ಘಟನೆ ನಡೆದಿದೆ. ಉಪ್ಪಳದ...

ಪಶ್ಚಿಮ ಬಂಗಾಳ: ನಂದಿಗ್ರಾಮದಲ್ಲಿ ಎಸ್‌ಐಆರ್ ಪೂರಕ ಪಟ್ಟಿಯಿಂದ 95% ಮುಸ್ಲಿಂ ಮತದಾರರ ಹೆಸರು ತೆಗೆದುಹಾಕಲಾಗಿದೆ: ವರದಿ 

ಸುವೇಂದು ಅಧಿಕಾರಿ ಪ್ರತಿನಿಧಿಸುವ ಪೂರ್ವ ಮಿಡ್ನಾಪುರ ವಿಧಾನಸಭಾ ಕ್ಷೇತ್ರವಾದ ನಂದಿಗ್ರಾಮದಲ್ಲಿ ಒಂದು ಅಧ್ಯಯನವು ಆತಂಕಕಾರಿ ಅಸಮಾನತೆಯನ್ನು ಎತ್ತಿ ತೋರಿಸಿದೆ, ಅಲ್ಲಿ ಮತದಾರರಲ್ಲಿ ಕಡಿಮೆ ಪಾಲು ಇದ್ದರೂ ಎಸ್‌ಐಆರ್ ಪೂರಕ ಪಟ್ಟಿಯಿಂದ ಅಳಿಸಲಾದ ಮತದಾರರಲ್ಲಿ...

ಟೋಲ್ ಪ್ಲಾಜಾಗಳಲ್ಲಿನ ಅಶುಚಿತ್ವ ಶೌಚಾಲಯಗಳ ಬಗ್ಗೆ ವರದಿ ಮಾಡಿದರೆ ಬಹುಮಾನ: ಕೇಂದ್ರ ಸರ್ಕಾರ

ರಾಷ್ಟ್ರೀಯ ಹೆದ್ದಾರಿಗಳಲ್ಲಿನ ನೈರ್ಮಲ್ಯದ ಬಗ್ಗೆ ದೀರ್ಘಕಾಲದ ಕಳವಳಗಳನ್ನು ಪರಿಹರಿಸುವ ಪ್ರಯತ್ನದಲ್ಲಿ, ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ (MoRTH) ಟೋಲ್ ಪ್ಲಾಜಾಗಳಲ್ಲಿ ಅಶುಚಿಯಾದ ಶೌಚಾಲಯ ಸೌಲಭ್ಯಗಳ ಬಗ್ಗೆ ವರದಿ ಮಾಡಲು ಪ್ರಯಾಣಿಕರನ್ನು ಪ್ರೋತ್ಸಾಹಿಸುವ...

ಮಣಿಪುರ: ಬಾಂಬ್ ದಾಳಿಗೆ ಇಬ್ಬರು ಮಕ್ಕಳು ಬಲಿ; ಕುಕಿ ದಂಗೆಕೋರರಿಂದ ದಾಳಿ ಆರೋಪ; ಇದು ಅನಾಗರಿಕ ಕೃತ್ಯ ಎಂದ ಸಿಎಂ 

ಗುವಾಹಟಿ: ಮಣಿಪುರದ ಮೈತೇಯಿ ಪ್ರಾಬಲ್ಯದ ಬಿಷ್ಣುಪುರ ಜಿಲ್ಲೆಯಲ್ಲಿ ಮಂಗಳವಾರ ಮನೆಯೊಂದರ ಮೇಲೆ ಬಾಂಬ್ ದಾಳಿ ನಡೆದಿದ್ದು, ಘಟನೆಯಲ್ಲಿ ಐದು ತಿಂಗಳ ಗಂಡು ಮಗು ಸೇರಿದಂತೆ ಇಬ್ಬರು ಅಪ್ರಾಪ್ತ ವಯಸ್ಕರು ಸಾವನ್ನಪ್ಪಿರುವ ಘಟನೆ ನಡೆದಿದೆ.  ಮೊಯಿರಾಂಗ್...

ಮುಖ್ಯ ಚುನಾವಣಾ ಆಯುಕ್ತರ ಪದಚ್ಯುತಿಗೆ ವಿಪಕ್ಷಗಳಿಂದ ನೋಟಿಸ್‌ : ಕಾರಣ ನೀಡದೆ ತಿರಸ್ಕರಿಸಿದ ಸಂಸತ್ತಿನ ಉಭಯ ಸದನಗಳ ಮುಖ್ಯಸ್ಥರು-ವರದಿ

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸಲು ವಿಪಕ್ಷ ಸಂಸದರು ಸಲ್ಲಿಸಿದ್ದ ನಿಲುವಳಿ ನೋಟಿಸ್ ಅನ್ನು ರಾಜ್ಯಸಭಾ ಅಧ್ಯಕ್ಷ ಸಿ.ಪಿ. ರಾಧಾಕೃಷ್ಣನ್ ಮತ್ತು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ತಿರಸ್ಕರಿಸಿದ್ದಾರೆ. ಉಭಯ...

ಎನ್‌ಸಿಪಿ ನಾಯಕನ ಕೊಲೆ ಪ್ರಕರಣ : ಛತ್ತೀಸ್‌ಗಢ ಮಾಜಿ ಸಿಎಂ ಅಜಿತ್ ಜೋಗಿ ಮಗ ಅಮಿತ್ ಜೋಗಿಗೆ ಜೀವಾವಧಿ ಶಿಕ್ಷೆ

2003ರ ಕೊಲೆ ಪ್ರಕರಣದಲ್ಲಿ ಛತ್ತೀಸ್‌ಗಢ ಹೈಕೋರ್ಟ್ ಮಾಜಿ ಮುಖ್ಯಮಂತ್ರಿ ಅಜಿತ್ ಜೋಗಿ ಅವರ ಪುತ್ರ ಅಮಿತ್ ಜೋಗಿಗೆ ಜೀವಾವಧಿ ಶಿಕ್ಷೆ ವಿಧಿಸಿದೆ ಎಂದು ದಿ ಹಿಂದೂ ಸೋಮವಾರ (ಏ.6) ವರದಿ ಮಾಡಿದೆ. ರಾಷ್ಟ್ರೀಯವಾದಿ ಕಾಂಗ್ರೆಸ್...

ಪ. ಬಂಗಾಳ | ಮತದಾರರ ಪಟ್ಟಿಯಿಂದ ಕೈಬಿಟ್ಟಿದ್ದಕ್ಕೆ ಸೂಕ್ತ ಕಾರಣ ನೀಡದ ಚುನಾವಣಾ ಆಯೋಗ : ಕಾಂಗ್ರೆಸ್ ಅಭ್ಯರ್ಥಿ ಹೆಸರು ಮರು ಸೇರ್ಪಡೆ

ಪಶ್ಚಿಮ ಬಂಗಾಳದ ಮತದಾರರ ಪಟ್ಟಿಯಿಂದ ಹೆಸರು ಕೈಬಿಡಲ್ಪಟ್ಟವರ ಅರ್ಜಿಗಳ ವಿಚಾರಣೆಗಾಗಿ ಕೋಲ್ಕತ್ತಾದಲ್ಲಿ ಸ್ಥಾಪಿಸಲಾದ ಮೇಲ್ಮನವಿ ನ್ಯಾಯಮಂಡಳಿಯು, ಮುಂಬರುವ ವಿಧಾನಸಭಾ ಚುನಾವಣೆಯ ಫರಕ್ಕಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮೊತಾಬ್ ಶೇಖ್ ಅವರ ಹೆಸರನ್ನು ಭಾನುವಾರ...

ತೂತುಕುಡಿ ಸಾತನ್‌ಕುಳಂ ತಂದೆ-ಮಗನ ಕಸ್ಟಡಿ ಸಾವು ಪ್ರಕರಣ : ಅಪರಾಧಿಗಳಾದ ಎಲ್ಲಾ 9 ಪೊಲೀಸರಿಗೆ ಮರಣದಂಡನೆ ವಿಧಿಸಿದ ನ್ಯಾಯಾಲಯ

ತಮಿಳುನಾಡಿನ ತೂತುಕುಡಿ ಜಿಲ್ಲೆಯ ಸಾತನ್‌ಕುಳಂ ಪೊಲೀಸ್ ಠಾಣೆಯಲ್ಲಿ ಕೋವಿಡ್-19 ಲಾಕ್‌ಡೌನ್ ಸಮಯದಲ್ಲಿ ಸಂಭವಿಸಿದ, ವ್ಯಾಪಾರಿ ಪಿ. ಜಯರಾಜ್ (58) ಮತ್ತು ಅವರ ಮಗ ಜೆ. ಬೆನಿಕ್ಸ್ (31) ಅವರ ಕಸ್ಟಡಿ ಸಾವು ಪ್ರಕರಣದ...