Homeಮುಖಪುಟಪಾಕಿಸ್ತಾನ | ಮಾಜಿ ಪ್ರಧಾನಿ ಇಮ್ರಾನ್‌ ಖಾನ್‌ಗೆ 14 ವರ್ಷ, ಪತ್ನಿಗೆ 7 ವರ್ಷ ಜೈಲು

ಪಾಕಿಸ್ತಾನ | ಮಾಜಿ ಪ್ರಧಾನಿ ಇಮ್ರಾನ್‌ ಖಾನ್‌ಗೆ 14 ವರ್ಷ, ಪತ್ನಿಗೆ 7 ವರ್ಷ ಜೈಲು

- Advertisement -
- Advertisement -

ಅಲ್-ಖಾದಿರ್ ಟ್ರಸ್ಟ್‌ಗೆ ಸಂಬಂಧಿಸಿದ 190 ಮಿಲಿಯನ್ ಪೌಂಡ್‌ ಭ್ರಷ್ಟಾಚಾರ ಪ್ರಕರಣದಲ್ಲಿ ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಮತ್ತು ಅವರ ಪತ್ನಿ ಬುಶ್ರಾ ಬೀಬಿ ಅವರನ್ನು ತಪ್ಪಿತಸ್ಥರು ಎಂದು ಪಾಕಿಸ್ತಾನದ ನ್ಯಾಯಾಲಯ ಶುಕ್ರವಾರ (ಜ.17) ಘೋಷಿಸಿದ್ದು, ಅವರಿಗೆ ಕ್ರಮವಾಗಿ 14 ಮತ್ತು 7 ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ.

ಜೈಲು ಶಿಕ್ಷೆಯ ಜೊತೆಗೆ, ಇಮ್ರಾನ್ ಖಾನ್‌ ಅವರಿಗೆ 10 ಲಕ್ಷ ರೂಪಾಯಿ ಮತ್ತು ಬುಶ್ರಾ ಬೀಬಿ ಅವರಿಗೆ 5 ಲಕ್ಷ ರೂಪಾಯಿ ದಂಡ ವಿಧಿಸಲಾಗಿದೆ. ದಂಡ ಪಾವತಿಸಲು ವಿಫಲವಾದರೆ ಖಾನ್‌ಗೆ ಆರು ತಿಂಗಳು ಮತ್ತು ಬೀಬಿಗೆ ಮೂರು ತಿಂಗಳು ಹೆಚ್ಚುವರಿ ಜೈಲು ಶಿಕ್ಷೆ ವಿಧಿಸಲಾಗುತ್ತದೆ ಎಂದು ನ್ಯಾಯಾಲಯ ಆದೇಶದಲ್ಲಿ ತಿಳಿಸಿದೆ.

ಇಮ್ರಾನ್ ಖಾನ್ ದಂಪತಿ ಸ್ಥಾಪಿಸಿದ ಅಲ್-ಖಾದಿರ್ ವಿಶ್ವವಿದ್ಯಾಲಯದ ಭೂಮಿಯನ್ನು ಮುಟ್ಟುಗೋಲು ಹಾಕಿಕೊಳ್ಳುವಂತೆ ನ್ಯಾಯಾಲಯ ಆದೇಶಿಸಿದೆ.

ಇಮ್ರಾನ್ ಖಾನ್ ಈಗಾಗಲೇ ಜೈಲಿನಲ್ಲಿದ್ದು, ಬುಶ್ರಾ ಬೀಬಿಯನ್ನು ನ್ಯಾಯಾಲಯದಿಂದ ಬಂಧಿಸಲಾಗಿದೆ ಎಂದು ವರದಿಗಳು ಹೇಳಿವೆ.

ಕಳೆದ ಜನವರಿ 13ನೇ ತಾರೀಕು ಸೇರಿದಂತೆ ಮೂರು ಬಾರಿ ವಿವಿಧ ಕಾರಣಗಳಿಂದ ಮುಂದೂಡಲ್ಪಟ್ಟಿದ್ದ ತೀರ್ಪನ್ನು ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ ನ್ಯಾಯಾಧೀಶ ನಾಸಿರ್ ಜಾವೇದ್ ರಾಣಾ ಅವರು ಇಂದು (ಜ.17) ಪ್ರಕಟಿಸಿದ್ದಾರೆ.

ಅಡಿಲಾ ಜೈಲಿನಲ್ಲಿ ಸ್ಥಾಪಿಸಲಾದ ತಾತ್ಕಾಲಿಕ ನ್ಯಾಯಾಲಯದಲ್ಲಿ ನ್ಯಾಯಾಧೀಶರು ತೀರ್ಪು ಪ್ರಕಟಿಸಿದ್ದಾರೆ.

“ಇಂದಿನ ತೀರ್ಪು ನ್ಯಾಯಾಂಗದ ಖ್ಯಾತಿಗೆ ಕಳಂಕ ತಂದಿದೆ. ಈ ಪ್ರಕರಣದಲ್ಲಿ ನನಗೆ ಲಾಭವೂ ಆಗಿಲ್ಲ, ಸರ್ಕಾರಕ್ಕೆ ನಷ್ಟವೂ ಆಗಿಲ್ಲ. ನನಗೆ ಯಾವುದೇ ಪರಿಹಾರ ಬೇಡ ಮತ್ತು ಎಲ್ಲಾ ಪ್ರಕರಣಗಳನ್ನು ಎದುರಿಸುತ್ತೇನೆ. ಸರ್ವಾಧಿಕಾರಿಯೊಬ್ಬರು ಇದನ್ನೆಲ್ಲ ಮಾಡುತ್ತಿದ್ದಾರೆ” ಎಂದು ಇಮ್ರಾನ್ ಖಾನ್ ಹೇಳಿರುವುದಾಗಿ ಅವರ ಪಕ್ಷ ತಿಳಿಸಿದೆ.

ನ್ಯಾಷನಲ್ ಅಕೌಂಟೆಬಿಲಿಟಿ ಬ್ಯೂರೊ(ಎನ್‌ಎಬಿ) 2023ರ ಡಿಸೆಂಬರ್‌ನಲ್ಲಿ ಇಮ್ರಾನ್ ಖಾನ್ (72), ಬುಶ್ರಾ ಬೀಬಿ (50) ಮತ್ತು ಇತರ ಆರು ಜನರ ವಿರುದ್ಧ ಪ್ರಕರಣ ದಾಖಲಿಸಿತ್ತು. ದೇಶದ ಖಜಾನೆಗೆ ಇಮ್ರಾನ್ ಖಾನ್ ದಂಪತಿ 190 ಮಿಲಿಯನ್ ಪೌಂಡ್‌ಗಳಷ್ಟು (ಪಾಕಿಸ್ತಾನ ರೂಪಾಯಿಯಲ್ಲಿ 50 ಶತಕೋಟಿ) ನಷ್ಟ ಉಂಟುಮಾಡಿದ್ದಾರೆ ಎಂದು ಆರೋಪಿಸಲಾಗಿತ್ತು.

ಒಬ್ಬ ಉದ್ಯಮಿ ಸೇರಿ ಪ್ರಕರಣದ ಇತರೆ ಆರೋಪಿಗಳು ದೇಶದಿಂದ ಹೊರಗಿರುವ ಕಾರಣ ಖಾನ್ ಮತ್ತು ಬೀಬಿ ವಿರುದ್ಧ ಮಾತ್ರ ಕಾನೂನು ಕ್ರಮ ಕೈಗೊಳ್ಳಲಾಗಿದೆ.

ವ್ಯವಹಾರವೊಂದರ ಇತ್ಯರ್ಥದ ಬಳಿಕ ರಿಯಲ್‌ ಎಸ್ಟೇಟ್ ಉದ್ಯಮಿಯೊಬ್ಬರಿಂದ 50 ಶತಕೋಟಿ ರೂಪಾಯಿಯನ್ನು ಬ್ರಿಟನ್‌ನ ರಾಷ್ಟ್ರೀಯ ಅಪರಾಧ ಸಂಸ್ಥೆಯು ಪಾಕಿಸ್ತಾನಕ್ಕೆ ಹಿಂದಿರುಗಿಸಿತ್ತು. ಆ ಹಣವನ್ನು ಇಮ್ರಾನ್ ಖಾನ್ ದಂಪತಿ, ಮತ್ತಿತರರು ದುರ್ಬಳಕೆ ಮಾಡಿಕೊಂಡಿದ್ದಾರೆ ಎಂಬುವುದು ಆರೋಪ.

ರಾಷ್ಟ್ರೀಯ ಖಜಾನೆಗೆ ಸೇರಬೇಕಿದ್ದ ಈ ಹಣವನ್ನು ಬೀಬಿ ಮತ್ತು ಖಾನ್‌ಗೆ ವಿಶ್ವವಿದ್ಯಾಲಯವನ್ನು ಸ್ಥಾಪಿಸಲು ಸಹಾಯ ಮಾಡಿದ ಉದ್ಯಮಿಯ ವೈಯಕ್ತಿಕ ಲಾಭಕ್ಕಾಗಿ ತಿರುಗಿಸಿದ್ದರು ಎಂದು ದೂರಲಾಗಿದೆ.

ಅಲ್-ಖಾದಿರ್ ಟ್ರಸ್ಟ್‌ನ ಟ್ರಸ್ಟಿಯಾಗಿರುವ ಬುಶ್ರಾ ಬೀಬಿ, ಈ ಇತ್ಯರ್ಥದಿಂದ ಲಾಭ ಪಡೆದ ಆರೋಪವನ್ನು ಎದುರಿಸುತ್ತಿದ್ದಾರೆ. ಇದರಲ್ಲಿ ಝೇಲಂನಲ್ಲಿರುವ ಅಲ್-ಖಾದಿರ್ ವಿಶ್ವವಿದ್ಯಾಲಯಕ್ಕಾಗಿ 458 ಕನಾಲ್ ((57 ಎಕರೆ) ಭೂಮಿಯನ್ನು ಸ್ವಾಧೀನಪಡಿಸಿಕೊಂಡಿರುವುದು ಸೇರಿದೆ.

ಇಮ್ರಾನ್ ಖಾನ್ ಮತ್ತು ಅವರ ಪಕ್ಷದ ಇತರ ಹಲವಾರು ನಾಯಕರ ಜೈಲು ಶಿಕ್ಷೆಯಿಂದಾಗಿ ದೇಶದಲ್ಲಿ ಉಂಟಾಗಿರುವ ರಾಜಕೀಯ ಅಸ್ಥಿರತೆಯನ್ನು ಪರಿಹರಿಸಲು ಸರ್ಕಾರ ಮತ್ತು ಖಾನ್ ಅವರ ಪಾಕಿಸ್ತಾನ್ ತೆಹ್ರೀಕ್-ಇ-ಇನ್ಸಾಫ್ (ಪಿಟಿಐ) ಪಕ್ಷದ ನಡುವೆ ನಡೆಯುತ್ತಿರುವ ಮಾತುಕತೆಯ ಮಧ್ಯೆ ನ್ಯಾಯಾಲಯದ ತೀರ್ಪು ಹೊರ ಬಿದ್ದಿದೆ.

ಇಲ್ಲಿಯವರೆಗೆ ಮೂರು ಸುತ್ತಿನ ಮಾತುಕತೆಗಳು ನಡೆದಿದ್ದು, ಪಿಟಿಐ ತನ್ನ ಬೇಡಿಕೆಗಳ ಪಟ್ಟಿಯನ್ನು ಸರ್ಕಾರಕ್ಕೆ ಲಿಖಿತವಾಗಿ ಮಂಡಿಸಿದೆ.

2022ರಲ್ಲಿ ಪ್ರಧಾನಿ ಹುದ್ದೆಯಿಂದ ಪದಚ್ಯುತಗೊಂಡ ನಂತರ ಖಾನ್ ಅವರು ಹಲವಾರು ಪ್ರಕರಣಗಳನ್ನು ಎದುರಿಸುತ್ತಿದ್ದಾರೆ. ಅವರು ಆಗಸ್ಟ್ 2023 ರಿಂದ ಜೈಲಿನಲ್ಲಿದ್ದಾರೆ.

ಇದನ್ನೂ ಓದಿ : ನಟ ಸೈಫ್ ಅಲಿ ಖಾನ್‌ಗೆ ಚಾಕು ಇರಿತ: ಶಂಕಿತನ ಬಂಧಿಸಿದ ಮುಂಬೈ ಪೊಲೀಸರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗಾಜಾ| ಮನೆ ಅವಶೇಷದಲ್ಲಿ ತನ್ನ ಕುಟುಂಬದ ಸದಸ್ಯರ ಮೂಳೆ ಹುಡುಕಿದ ವ್ಯಕ್ತಿ

ಗಾಜಾ ನಗರದಲ್ಲಿದ್ದ ತನ್ನ ಮನೆಯ ಅವಶೇಷಗಳ ರಾಶಿಯ ನಡುವೆ ಕುಳಿತಿರುವ ಮಹಮೂದ್ ಹಮ್ಮದ್, ದೊಡ್ಡ ಜರಡಿಯಲ್ಲಿ ಮಣ್ಣನ್ನು ತೆಗೆದು ಅಲ್ಲಾಡಿಸಿ, ಅದನ್ನು ಹೊರಗೆ ಎಸೆಯುವ ಮೊದಲು ಎಚ್ಚರಿಕೆಯಿಂದ ನೋಡುವ ವಿಡಯೊ ನೋಡಿದವರ ಮನಕಲಕುತ್ತದೆ....

ವಿಪಕ್ಷಗಳಿಂದ ಅವಿಶ್ವಾಸ ನೋಟಿಸ್: ಕಲಾಪಕ್ಕೆ ಗೈರಾದ ಲೋಕಸಭೆ ಸ್ಪೀಕರ್ ಓಂ ಬಿರ್ಲಾ

'ಪಕ್ಷಪಾತ'ದ ಆರೋಪ ಹೊರಿಸಿ ವಿಪಕ್ಷಗಳು 'ಅವಿಶ್ವಾಸ ನೋಟಿಸ್' ನೀಡಿರುವ ಹಿನ್ನೆಲೆ, ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಕಲಾಪದಿಂದ ದೂರ ಉಳಿದಿದ್ದಾರೆ. ಬುಧವಾರ (ಫೆ.11) ಸ್ಪೀಕರ್ ಪೀಠದಲ್ಲಿ ಹಿರಿಯ ಬಿಜೆಪಿ ಸಂಸದರಾದ ಪಿ.ಸಿ ಮೋಹನ್...

ಕೆನಡಾ ಬ್ರಿಟಿಷ್ ಕೊಲಂಬಿಯಾ ಪ್ರಾಂತ್ಯದ ಶಾಲೆಯಲ್ಲಿ ಗುಂಡಿನ ದಾಳಿ: ಬಂದೂಕುಧಾರಿ ಸೇರಿ ಕನಿಷ್ಠ 10 ಸಾವು, 27 ಮಂದಿಗೆ ಗಾಯ

ಬ್ರಿಟಿಷ್ ಕೊಲಂಬಿಯಾದ ಪೀಸ್ ಪ್ರದೇಶದಲ್ಲಿರುವ ಶಾಲೆಯಲ್ಲಿ ಮಂಗಳವಾರ ಮಧ್ಯಾಹ್ನ ಗುಂಡಿನ ದಾಳಿ ನಡೆದಿದ್ದು, ಕನಿಷ್ಠ ಒಂಬತ್ತು ಮಂದಿ ಸಾವನ್ನಪ್ಪಿದ್ದು, 27 ಮಂದಿಗೆ ಗಂಭೀರ ಗಾಯಗಳಾಗಿರುವುದಾಗಿ ವರದಿಯಾಗಿದೆ. ಶಂಕಿತ ಎಂದು ನಂಬಲಾದವರ ಮನೆಯಲ್ಲಿ ಇನ್ನೂ...

ಉತ್ತರ ಪ್ರದೇಶ| ಭೂಮಿ ವಿವಾದದಲ್ಲಿ ದಲಿತ ಮಹಿಳೆಯರ ಮೇಲೆ ಹಲ್ಲೆ- ಜಾತಿ ನಿಂದನೆ

ಉತ್ತರ ಪ್ರದೇಶದ ಮಾಂಡಾ ಪೊಲೀಸ್ ಠಾಣೆ ವ್ಯಾಪ್ತಿಯ ಹಂಡಿಯಾ ಗ್ರಾಮದಲ್ಲಿ ದೀರ್ಘಕಾಲದಿಂದ ನಡೆಯುತ್ತಿದ್ದ ಭೂ ವಿವಾದ ಭಾನುವಾರ ಹಿಂಸಾಚಾರಕ್ಕೆ ತಿರುಗಿದೆ. ಪ್ರಬಲ ಜಾತಿ ಜನರು ದಲಿತ ಕುಟುಂಬದ ಮೇಲೆ ಹಲ್ಲೆ ನಡೆಸಿದ್ದು, ಪೊಲೀಸರು...

ಒಡಿಶಾ| ಸಹಾಯಕಿಯಾಗಿ ದಲಿತ ಮಹಿಳೆ ನೇಮಕ; ಮೂರು ತಿಂಗಳ ಕಾಲ ಮುಚ್ಚಿದ ಅಂಗನವಾಡಿ

ಭಾರತೀಯ ಸಮಾಜದಲ್ಲಿ ಆಳವಾಗಿ ಈಗಲೂ ಬೇರೂರಿರುವ ಜಾತಿ ಪೂರ್ವಾಗ್ರಹದ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಒಡಿಶಾ ರಾಜ್ಯದ ಕೇಂದ್ರಪಾರ ಜಿಲ್ಲೆಯ ರಾಜನಗರ ಬ್ಲಾಕ್‌ನ ಹಳ್ಳಿಯ ನಿವಾಸಿಗಳು ಸುಮಾರು ಮೂರು ತಿಂಗಳ ಹಿಂದೆ, ದಲಿತ...

ಆತ್ಮಕಥೆ ಜಟಾಪಟಿ: ನಕಲಿ ಪುಸ್ತಕ ಬಳಸಿ ರಾಷ್ಟ್ರೀಯ ಭದ್ರತೆಯ ಬಗ್ಗೆ ಅನುಮಾನ ವ್ಯಕ್ತಪಡಿಸಿದ ರಾಹುಲ್ ಕ್ಷಮೆಯಾಚಿಸಬೇಕು: ಬಿಜೆಪಿ ಒತ್ತಾಯ

ನವದೆಹಲಿ: ಮಾಜಿ ಸೇನಾ ಮುಖ್ಯಸ್ಥ ಜನರಲ್ ಎಂಎಂ ನರವಾಣೆ ತಮ್ಮ ಆತ್ಮಚರಿತ್ರೆ "ಫೋರ್ ಸ್ಟಾರ್ಸ್ ಆಫ್ ಡೆಸ್ಟಿನಿ" ಪ್ರಕಾಶಕರು ಬಿಡುಗಡೆ ಮಾಡಿದ ಹೇಳಿಕೆಯನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಕ್ಕೆ ರಾಹುಲ್ ಗಾಂಧಿ ಅವರ ಮುಖ...

ಆತ್ಮಕಥೆ ಜಟಾಪಟಿ : ಅಂದು ಪುಸ್ತಕ ಪ್ರಿ- ಆರ್ಡರ್ ಮಾಡಿ ಎಂದಿದ್ದ ನರವಾಣೆ, ಇಂದು ಪ್ರಕಟವೇ ಆಗಿಲ್ಲ ಎನ್ನುತ್ತಿದ್ದಾರೆ

ಕಳೆದ ಹತ್ತು ದಿನಗಳಿಂದ ದೇಶದಾದ್ಯಂತ ಚರ್ಚೆಯಲ್ಲಿರುವ ತನ್ನ 'ಫೋರ್ ಸ್ಟಾರ್ಸ್ ಆಫ್ ಡೆಸ್ಟಿನಿ' ಆತ್ಮಕಥೆಯ ಕುರಿತು ಮಾಜಿ ಭೂ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಾಣೆ ಮೌನ ಮುರಿದಿದ್ದಾರೆ. "ಪುಸ್ತಕದ ಮುದ್ರಿತ ಅಥವಾ...

ಗೌರವ್ ಗೊಗೊಯ್ ಸಹಿತ ಮೂವರು ಕಾಂಗ್ರೆಸ್ ನಾಯಕರ ವಿರುದ್ಧ 500 ಕೋಟಿ ರೂ. ಮಾನನಷ್ಟ ಮೊಕದ್ದಮೆ ಹೂಡಿದ ಅಸ್ಸಾಂ ಸಿಎಂ

ಕಾಂಗ್ರೆಸ್ ನಾಯಕರಾದ ಜಿತೇಂದ್ರ ಸಿಂಗ್, ಭೂಪೇಶ್ ಬಘೇಲ್ ಮತ್ತು ಗೌರವ್ ಗೊಗೊಯ್ ವಿರುದ್ದ 500 ಕೋಟಿ ರೂಪಾಯಿ ಮಾನನಷ್ಟ ಮೊಕದ್ದಮೆ ಹೂಡಿದ್ದೇನೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ತಿಳಿಸಿದ್ದಾರೆ. "ಪತ್ರಿಕಾಗೋಷ್ಠಿಯ ಮೂಲಕ...

ಕೇರಳದಲ್ಲಿ ಸರ್ಕಾರ ಬದಲಾವಣೆಗೆ ಕವಿ ಸಚ್ಚಿದಾನಂದನ್ ಕರೆಗೆ ಎಡಪಕ್ಷಗಳ ತೀವ್ರ ವಿರೋಧ; ಇದು ಸಾರ್ವಜನಿಕ ಭಾವನೆ ಎಂದ ವಿಪಕ್ಷಗಳು

ಕೇರಳದಲ್ಲಿ ನಿರಂತರ ಆಡಳಿತ ಅಪೇಕ್ಷಣೀಯವಲ್ಲ ಮತ್ತು ಅಧಿಕಾರವು ರಾಜಕೀಯ ರಂಗಗಳ ನಡುವೆ ಪರ್ಯಾಯವಾಗಿರಬೇಕು ಎಂದು ಹಿರಿಯ ಕವಿ ಮತ್ತು ಕೇರಳ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಕೆ. ಸಚ್ಚಿದಾನಂದನ್ ಹೇಳಿದ್ದಾರೆ. ಈ ಹೇಳಿಕೆ ಆಡಳಿತಾರೂಢ...

ಹಿಂದುತ್ವ ಗುಂಪಿನಿಂದ ಮುಸ್ಲಿಂ ವ್ಯಕ್ತಿ ರಕ್ಷಣೆ; ದೀಪಕ್ ಕೊಂದವರಿಗೆ 2 ಲಕ್ಷ ರೂಪಾಯಿ ಬಹುಮಾನ ಘೋಷಿಸಿದ್ದ ವ್ಯಕ್ತಿ ಬಂಧನ

ಹಿಂದುತ್ವ ಗುಂಪಿನಿಂದ ಮುಸ್ಲಿಂ ವ್ಯಕ್ತಿ ರಕ್ಷಿಸಿದ್ದ ಜಿಮ್ ಮಾಲೀಕ ದೀಪಕ್ ಕುಮಾರ್ (ಮೊಹಮ್ಮದ್ ದೀಪಕ್) ಅವರನ್ನು ಕೊಂದವರಿಗೆ 2 ಲಕ್ಷ ರೂಪಾಯಿ ಬಹುಮಾನ ಘೋಷಿಸಿದ್ದ ವ್ಯಕ್ತಿಯನ್ನು ಉತ್ತರಾಖಂಡ ಪೊಲೀಸರು ಸೋಮವಾರ (ಫೆ.9) ಬಂಧಿಸಿದ್ದಾರೆ. ಬಿಹಾರದ...