Homeಮುಖಪುಟಪಾಕಿಸ್ತಾನ | ಮಾಜಿ ಪ್ರಧಾನಿ ಇಮ್ರಾನ್‌ ಖಾನ್‌ಗೆ 14 ವರ್ಷ, ಪತ್ನಿಗೆ 7 ವರ್ಷ ಜೈಲು

ಪಾಕಿಸ್ತಾನ | ಮಾಜಿ ಪ್ರಧಾನಿ ಇಮ್ರಾನ್‌ ಖಾನ್‌ಗೆ 14 ವರ್ಷ, ಪತ್ನಿಗೆ 7 ವರ್ಷ ಜೈಲು

- Advertisement -
- Advertisement -

ಅಲ್-ಖಾದಿರ್ ಟ್ರಸ್ಟ್‌ಗೆ ಸಂಬಂಧಿಸಿದ 190 ಮಿಲಿಯನ್ ಪೌಂಡ್‌ ಭ್ರಷ್ಟಾಚಾರ ಪ್ರಕರಣದಲ್ಲಿ ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಮತ್ತು ಅವರ ಪತ್ನಿ ಬುಶ್ರಾ ಬೀಬಿ ಅವರನ್ನು ತಪ್ಪಿತಸ್ಥರು ಎಂದು ಪಾಕಿಸ್ತಾನದ ನ್ಯಾಯಾಲಯ ಶುಕ್ರವಾರ (ಜ.17) ಘೋಷಿಸಿದ್ದು, ಅವರಿಗೆ ಕ್ರಮವಾಗಿ 14 ಮತ್ತು 7 ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ.

ಜೈಲು ಶಿಕ್ಷೆಯ ಜೊತೆಗೆ, ಇಮ್ರಾನ್ ಖಾನ್‌ ಅವರಿಗೆ 10 ಲಕ್ಷ ರೂಪಾಯಿ ಮತ್ತು ಬುಶ್ರಾ ಬೀಬಿ ಅವರಿಗೆ 5 ಲಕ್ಷ ರೂಪಾಯಿ ದಂಡ ವಿಧಿಸಲಾಗಿದೆ. ದಂಡ ಪಾವತಿಸಲು ವಿಫಲವಾದರೆ ಖಾನ್‌ಗೆ ಆರು ತಿಂಗಳು ಮತ್ತು ಬೀಬಿಗೆ ಮೂರು ತಿಂಗಳು ಹೆಚ್ಚುವರಿ ಜೈಲು ಶಿಕ್ಷೆ ವಿಧಿಸಲಾಗುತ್ತದೆ ಎಂದು ನ್ಯಾಯಾಲಯ ಆದೇಶದಲ್ಲಿ ತಿಳಿಸಿದೆ.

ಇಮ್ರಾನ್ ಖಾನ್ ದಂಪತಿ ಸ್ಥಾಪಿಸಿದ ಅಲ್-ಖಾದಿರ್ ವಿಶ್ವವಿದ್ಯಾಲಯದ ಭೂಮಿಯನ್ನು ಮುಟ್ಟುಗೋಲು ಹಾಕಿಕೊಳ್ಳುವಂತೆ ನ್ಯಾಯಾಲಯ ಆದೇಶಿಸಿದೆ.

ಇಮ್ರಾನ್ ಖಾನ್ ಈಗಾಗಲೇ ಜೈಲಿನಲ್ಲಿದ್ದು, ಬುಶ್ರಾ ಬೀಬಿಯನ್ನು ನ್ಯಾಯಾಲಯದಿಂದ ಬಂಧಿಸಲಾಗಿದೆ ಎಂದು ವರದಿಗಳು ಹೇಳಿವೆ.

ಕಳೆದ ಜನವರಿ 13ನೇ ತಾರೀಕು ಸೇರಿದಂತೆ ಮೂರು ಬಾರಿ ವಿವಿಧ ಕಾರಣಗಳಿಂದ ಮುಂದೂಡಲ್ಪಟ್ಟಿದ್ದ ತೀರ್ಪನ್ನು ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ ನ್ಯಾಯಾಧೀಶ ನಾಸಿರ್ ಜಾವೇದ್ ರಾಣಾ ಅವರು ಇಂದು (ಜ.17) ಪ್ರಕಟಿಸಿದ್ದಾರೆ.

ಅಡಿಲಾ ಜೈಲಿನಲ್ಲಿ ಸ್ಥಾಪಿಸಲಾದ ತಾತ್ಕಾಲಿಕ ನ್ಯಾಯಾಲಯದಲ್ಲಿ ನ್ಯಾಯಾಧೀಶರು ತೀರ್ಪು ಪ್ರಕಟಿಸಿದ್ದಾರೆ.

“ಇಂದಿನ ತೀರ್ಪು ನ್ಯಾಯಾಂಗದ ಖ್ಯಾತಿಗೆ ಕಳಂಕ ತಂದಿದೆ. ಈ ಪ್ರಕರಣದಲ್ಲಿ ನನಗೆ ಲಾಭವೂ ಆಗಿಲ್ಲ, ಸರ್ಕಾರಕ್ಕೆ ನಷ್ಟವೂ ಆಗಿಲ್ಲ. ನನಗೆ ಯಾವುದೇ ಪರಿಹಾರ ಬೇಡ ಮತ್ತು ಎಲ್ಲಾ ಪ್ರಕರಣಗಳನ್ನು ಎದುರಿಸುತ್ತೇನೆ. ಸರ್ವಾಧಿಕಾರಿಯೊಬ್ಬರು ಇದನ್ನೆಲ್ಲ ಮಾಡುತ್ತಿದ್ದಾರೆ” ಎಂದು ಇಮ್ರಾನ್ ಖಾನ್ ಹೇಳಿರುವುದಾಗಿ ಅವರ ಪಕ್ಷ ತಿಳಿಸಿದೆ.

ನ್ಯಾಷನಲ್ ಅಕೌಂಟೆಬಿಲಿಟಿ ಬ್ಯೂರೊ(ಎನ್‌ಎಬಿ) 2023ರ ಡಿಸೆಂಬರ್‌ನಲ್ಲಿ ಇಮ್ರಾನ್ ಖಾನ್ (72), ಬುಶ್ರಾ ಬೀಬಿ (50) ಮತ್ತು ಇತರ ಆರು ಜನರ ವಿರುದ್ಧ ಪ್ರಕರಣ ದಾಖಲಿಸಿತ್ತು. ದೇಶದ ಖಜಾನೆಗೆ ಇಮ್ರಾನ್ ಖಾನ್ ದಂಪತಿ 190 ಮಿಲಿಯನ್ ಪೌಂಡ್‌ಗಳಷ್ಟು (ಪಾಕಿಸ್ತಾನ ರೂಪಾಯಿಯಲ್ಲಿ 50 ಶತಕೋಟಿ) ನಷ್ಟ ಉಂಟುಮಾಡಿದ್ದಾರೆ ಎಂದು ಆರೋಪಿಸಲಾಗಿತ್ತು.

ಒಬ್ಬ ಉದ್ಯಮಿ ಸೇರಿ ಪ್ರಕರಣದ ಇತರೆ ಆರೋಪಿಗಳು ದೇಶದಿಂದ ಹೊರಗಿರುವ ಕಾರಣ ಖಾನ್ ಮತ್ತು ಬೀಬಿ ವಿರುದ್ಧ ಮಾತ್ರ ಕಾನೂನು ಕ್ರಮ ಕೈಗೊಳ್ಳಲಾಗಿದೆ.

ವ್ಯವಹಾರವೊಂದರ ಇತ್ಯರ್ಥದ ಬಳಿಕ ರಿಯಲ್‌ ಎಸ್ಟೇಟ್ ಉದ್ಯಮಿಯೊಬ್ಬರಿಂದ 50 ಶತಕೋಟಿ ರೂಪಾಯಿಯನ್ನು ಬ್ರಿಟನ್‌ನ ರಾಷ್ಟ್ರೀಯ ಅಪರಾಧ ಸಂಸ್ಥೆಯು ಪಾಕಿಸ್ತಾನಕ್ಕೆ ಹಿಂದಿರುಗಿಸಿತ್ತು. ಆ ಹಣವನ್ನು ಇಮ್ರಾನ್ ಖಾನ್ ದಂಪತಿ, ಮತ್ತಿತರರು ದುರ್ಬಳಕೆ ಮಾಡಿಕೊಂಡಿದ್ದಾರೆ ಎಂಬುವುದು ಆರೋಪ.

ರಾಷ್ಟ್ರೀಯ ಖಜಾನೆಗೆ ಸೇರಬೇಕಿದ್ದ ಈ ಹಣವನ್ನು ಬೀಬಿ ಮತ್ತು ಖಾನ್‌ಗೆ ವಿಶ್ವವಿದ್ಯಾಲಯವನ್ನು ಸ್ಥಾಪಿಸಲು ಸಹಾಯ ಮಾಡಿದ ಉದ್ಯಮಿಯ ವೈಯಕ್ತಿಕ ಲಾಭಕ್ಕಾಗಿ ತಿರುಗಿಸಿದ್ದರು ಎಂದು ದೂರಲಾಗಿದೆ.

ಅಲ್-ಖಾದಿರ್ ಟ್ರಸ್ಟ್‌ನ ಟ್ರಸ್ಟಿಯಾಗಿರುವ ಬುಶ್ರಾ ಬೀಬಿ, ಈ ಇತ್ಯರ್ಥದಿಂದ ಲಾಭ ಪಡೆದ ಆರೋಪವನ್ನು ಎದುರಿಸುತ್ತಿದ್ದಾರೆ. ಇದರಲ್ಲಿ ಝೇಲಂನಲ್ಲಿರುವ ಅಲ್-ಖಾದಿರ್ ವಿಶ್ವವಿದ್ಯಾಲಯಕ್ಕಾಗಿ 458 ಕನಾಲ್ ((57 ಎಕರೆ) ಭೂಮಿಯನ್ನು ಸ್ವಾಧೀನಪಡಿಸಿಕೊಂಡಿರುವುದು ಸೇರಿದೆ.

ಇಮ್ರಾನ್ ಖಾನ್ ಮತ್ತು ಅವರ ಪಕ್ಷದ ಇತರ ಹಲವಾರು ನಾಯಕರ ಜೈಲು ಶಿಕ್ಷೆಯಿಂದಾಗಿ ದೇಶದಲ್ಲಿ ಉಂಟಾಗಿರುವ ರಾಜಕೀಯ ಅಸ್ಥಿರತೆಯನ್ನು ಪರಿಹರಿಸಲು ಸರ್ಕಾರ ಮತ್ತು ಖಾನ್ ಅವರ ಪಾಕಿಸ್ತಾನ್ ತೆಹ್ರೀಕ್-ಇ-ಇನ್ಸಾಫ್ (ಪಿಟಿಐ) ಪಕ್ಷದ ನಡುವೆ ನಡೆಯುತ್ತಿರುವ ಮಾತುಕತೆಯ ಮಧ್ಯೆ ನ್ಯಾಯಾಲಯದ ತೀರ್ಪು ಹೊರ ಬಿದ್ದಿದೆ.

ಇಲ್ಲಿಯವರೆಗೆ ಮೂರು ಸುತ್ತಿನ ಮಾತುಕತೆಗಳು ನಡೆದಿದ್ದು, ಪಿಟಿಐ ತನ್ನ ಬೇಡಿಕೆಗಳ ಪಟ್ಟಿಯನ್ನು ಸರ್ಕಾರಕ್ಕೆ ಲಿಖಿತವಾಗಿ ಮಂಡಿಸಿದೆ.

2022ರಲ್ಲಿ ಪ್ರಧಾನಿ ಹುದ್ದೆಯಿಂದ ಪದಚ್ಯುತಗೊಂಡ ನಂತರ ಖಾನ್ ಅವರು ಹಲವಾರು ಪ್ರಕರಣಗಳನ್ನು ಎದುರಿಸುತ್ತಿದ್ದಾರೆ. ಅವರು ಆಗಸ್ಟ್ 2023 ರಿಂದ ಜೈಲಿನಲ್ಲಿದ್ದಾರೆ.

ಇದನ್ನೂ ಓದಿ : ನಟ ಸೈಫ್ ಅಲಿ ಖಾನ್‌ಗೆ ಚಾಕು ಇರಿತ: ಶಂಕಿತನ ಬಂಧಿಸಿದ ಮುಂಬೈ ಪೊಲೀಸರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...