Homeಮುಖಪುಟಪಾಕಿಸ್ತಾನ | ಮಾಜಿ ಪ್ರಧಾನಿ ಇಮ್ರಾನ್‌ ಖಾನ್‌ಗೆ 14 ವರ್ಷ, ಪತ್ನಿಗೆ 7 ವರ್ಷ ಜೈಲು

ಪಾಕಿಸ್ತಾನ | ಮಾಜಿ ಪ್ರಧಾನಿ ಇಮ್ರಾನ್‌ ಖಾನ್‌ಗೆ 14 ವರ್ಷ, ಪತ್ನಿಗೆ 7 ವರ್ಷ ಜೈಲು

- Advertisement -
- Advertisement -

ಅಲ್-ಖಾದಿರ್ ಟ್ರಸ್ಟ್‌ಗೆ ಸಂಬಂಧಿಸಿದ 190 ಮಿಲಿಯನ್ ಪೌಂಡ್‌ ಭ್ರಷ್ಟಾಚಾರ ಪ್ರಕರಣದಲ್ಲಿ ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಮತ್ತು ಅವರ ಪತ್ನಿ ಬುಶ್ರಾ ಬೀಬಿ ಅವರನ್ನು ತಪ್ಪಿತಸ್ಥರು ಎಂದು ಪಾಕಿಸ್ತಾನದ ನ್ಯಾಯಾಲಯ ಶುಕ್ರವಾರ (ಜ.17) ಘೋಷಿಸಿದ್ದು, ಅವರಿಗೆ ಕ್ರಮವಾಗಿ 14 ಮತ್ತು 7 ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ.

ಜೈಲು ಶಿಕ್ಷೆಯ ಜೊತೆಗೆ, ಇಮ್ರಾನ್ ಖಾನ್‌ ಅವರಿಗೆ 10 ಲಕ್ಷ ರೂಪಾಯಿ ಮತ್ತು ಬುಶ್ರಾ ಬೀಬಿ ಅವರಿಗೆ 5 ಲಕ್ಷ ರೂಪಾಯಿ ದಂಡ ವಿಧಿಸಲಾಗಿದೆ. ದಂಡ ಪಾವತಿಸಲು ವಿಫಲವಾದರೆ ಖಾನ್‌ಗೆ ಆರು ತಿಂಗಳು ಮತ್ತು ಬೀಬಿಗೆ ಮೂರು ತಿಂಗಳು ಹೆಚ್ಚುವರಿ ಜೈಲು ಶಿಕ್ಷೆ ವಿಧಿಸಲಾಗುತ್ತದೆ ಎಂದು ನ್ಯಾಯಾಲಯ ಆದೇಶದಲ್ಲಿ ತಿಳಿಸಿದೆ.

ಇಮ್ರಾನ್ ಖಾನ್ ದಂಪತಿ ಸ್ಥಾಪಿಸಿದ ಅಲ್-ಖಾದಿರ್ ವಿಶ್ವವಿದ್ಯಾಲಯದ ಭೂಮಿಯನ್ನು ಮುಟ್ಟುಗೋಲು ಹಾಕಿಕೊಳ್ಳುವಂತೆ ನ್ಯಾಯಾಲಯ ಆದೇಶಿಸಿದೆ.

ಇಮ್ರಾನ್ ಖಾನ್ ಈಗಾಗಲೇ ಜೈಲಿನಲ್ಲಿದ್ದು, ಬುಶ್ರಾ ಬೀಬಿಯನ್ನು ನ್ಯಾಯಾಲಯದಿಂದ ಬಂಧಿಸಲಾಗಿದೆ ಎಂದು ವರದಿಗಳು ಹೇಳಿವೆ.

ಕಳೆದ ಜನವರಿ 13ನೇ ತಾರೀಕು ಸೇರಿದಂತೆ ಮೂರು ಬಾರಿ ವಿವಿಧ ಕಾರಣಗಳಿಂದ ಮುಂದೂಡಲ್ಪಟ್ಟಿದ್ದ ತೀರ್ಪನ್ನು ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ ನ್ಯಾಯಾಧೀಶ ನಾಸಿರ್ ಜಾವೇದ್ ರಾಣಾ ಅವರು ಇಂದು (ಜ.17) ಪ್ರಕಟಿಸಿದ್ದಾರೆ.

ಅಡಿಲಾ ಜೈಲಿನಲ್ಲಿ ಸ್ಥಾಪಿಸಲಾದ ತಾತ್ಕಾಲಿಕ ನ್ಯಾಯಾಲಯದಲ್ಲಿ ನ್ಯಾಯಾಧೀಶರು ತೀರ್ಪು ಪ್ರಕಟಿಸಿದ್ದಾರೆ.

“ಇಂದಿನ ತೀರ್ಪು ನ್ಯಾಯಾಂಗದ ಖ್ಯಾತಿಗೆ ಕಳಂಕ ತಂದಿದೆ. ಈ ಪ್ರಕರಣದಲ್ಲಿ ನನಗೆ ಲಾಭವೂ ಆಗಿಲ್ಲ, ಸರ್ಕಾರಕ್ಕೆ ನಷ್ಟವೂ ಆಗಿಲ್ಲ. ನನಗೆ ಯಾವುದೇ ಪರಿಹಾರ ಬೇಡ ಮತ್ತು ಎಲ್ಲಾ ಪ್ರಕರಣಗಳನ್ನು ಎದುರಿಸುತ್ತೇನೆ. ಸರ್ವಾಧಿಕಾರಿಯೊಬ್ಬರು ಇದನ್ನೆಲ್ಲ ಮಾಡುತ್ತಿದ್ದಾರೆ” ಎಂದು ಇಮ್ರಾನ್ ಖಾನ್ ಹೇಳಿರುವುದಾಗಿ ಅವರ ಪಕ್ಷ ತಿಳಿಸಿದೆ.

ನ್ಯಾಷನಲ್ ಅಕೌಂಟೆಬಿಲಿಟಿ ಬ್ಯೂರೊ(ಎನ್‌ಎಬಿ) 2023ರ ಡಿಸೆಂಬರ್‌ನಲ್ಲಿ ಇಮ್ರಾನ್ ಖಾನ್ (72), ಬುಶ್ರಾ ಬೀಬಿ (50) ಮತ್ತು ಇತರ ಆರು ಜನರ ವಿರುದ್ಧ ಪ್ರಕರಣ ದಾಖಲಿಸಿತ್ತು. ದೇಶದ ಖಜಾನೆಗೆ ಇಮ್ರಾನ್ ಖಾನ್ ದಂಪತಿ 190 ಮಿಲಿಯನ್ ಪೌಂಡ್‌ಗಳಷ್ಟು (ಪಾಕಿಸ್ತಾನ ರೂಪಾಯಿಯಲ್ಲಿ 50 ಶತಕೋಟಿ) ನಷ್ಟ ಉಂಟುಮಾಡಿದ್ದಾರೆ ಎಂದು ಆರೋಪಿಸಲಾಗಿತ್ತು.

ಒಬ್ಬ ಉದ್ಯಮಿ ಸೇರಿ ಪ್ರಕರಣದ ಇತರೆ ಆರೋಪಿಗಳು ದೇಶದಿಂದ ಹೊರಗಿರುವ ಕಾರಣ ಖಾನ್ ಮತ್ತು ಬೀಬಿ ವಿರುದ್ಧ ಮಾತ್ರ ಕಾನೂನು ಕ್ರಮ ಕೈಗೊಳ್ಳಲಾಗಿದೆ.

ವ್ಯವಹಾರವೊಂದರ ಇತ್ಯರ್ಥದ ಬಳಿಕ ರಿಯಲ್‌ ಎಸ್ಟೇಟ್ ಉದ್ಯಮಿಯೊಬ್ಬರಿಂದ 50 ಶತಕೋಟಿ ರೂಪಾಯಿಯನ್ನು ಬ್ರಿಟನ್‌ನ ರಾಷ್ಟ್ರೀಯ ಅಪರಾಧ ಸಂಸ್ಥೆಯು ಪಾಕಿಸ್ತಾನಕ್ಕೆ ಹಿಂದಿರುಗಿಸಿತ್ತು. ಆ ಹಣವನ್ನು ಇಮ್ರಾನ್ ಖಾನ್ ದಂಪತಿ, ಮತ್ತಿತರರು ದುರ್ಬಳಕೆ ಮಾಡಿಕೊಂಡಿದ್ದಾರೆ ಎಂಬುವುದು ಆರೋಪ.

ರಾಷ್ಟ್ರೀಯ ಖಜಾನೆಗೆ ಸೇರಬೇಕಿದ್ದ ಈ ಹಣವನ್ನು ಬೀಬಿ ಮತ್ತು ಖಾನ್‌ಗೆ ವಿಶ್ವವಿದ್ಯಾಲಯವನ್ನು ಸ್ಥಾಪಿಸಲು ಸಹಾಯ ಮಾಡಿದ ಉದ್ಯಮಿಯ ವೈಯಕ್ತಿಕ ಲಾಭಕ್ಕಾಗಿ ತಿರುಗಿಸಿದ್ದರು ಎಂದು ದೂರಲಾಗಿದೆ.

ಅಲ್-ಖಾದಿರ್ ಟ್ರಸ್ಟ್‌ನ ಟ್ರಸ್ಟಿಯಾಗಿರುವ ಬುಶ್ರಾ ಬೀಬಿ, ಈ ಇತ್ಯರ್ಥದಿಂದ ಲಾಭ ಪಡೆದ ಆರೋಪವನ್ನು ಎದುರಿಸುತ್ತಿದ್ದಾರೆ. ಇದರಲ್ಲಿ ಝೇಲಂನಲ್ಲಿರುವ ಅಲ್-ಖಾದಿರ್ ವಿಶ್ವವಿದ್ಯಾಲಯಕ್ಕಾಗಿ 458 ಕನಾಲ್ ((57 ಎಕರೆ) ಭೂಮಿಯನ್ನು ಸ್ವಾಧೀನಪಡಿಸಿಕೊಂಡಿರುವುದು ಸೇರಿದೆ.

ಇಮ್ರಾನ್ ಖಾನ್ ಮತ್ತು ಅವರ ಪಕ್ಷದ ಇತರ ಹಲವಾರು ನಾಯಕರ ಜೈಲು ಶಿಕ್ಷೆಯಿಂದಾಗಿ ದೇಶದಲ್ಲಿ ಉಂಟಾಗಿರುವ ರಾಜಕೀಯ ಅಸ್ಥಿರತೆಯನ್ನು ಪರಿಹರಿಸಲು ಸರ್ಕಾರ ಮತ್ತು ಖಾನ್ ಅವರ ಪಾಕಿಸ್ತಾನ್ ತೆಹ್ರೀಕ್-ಇ-ಇನ್ಸಾಫ್ (ಪಿಟಿಐ) ಪಕ್ಷದ ನಡುವೆ ನಡೆಯುತ್ತಿರುವ ಮಾತುಕತೆಯ ಮಧ್ಯೆ ನ್ಯಾಯಾಲಯದ ತೀರ್ಪು ಹೊರ ಬಿದ್ದಿದೆ.

ಇಲ್ಲಿಯವರೆಗೆ ಮೂರು ಸುತ್ತಿನ ಮಾತುಕತೆಗಳು ನಡೆದಿದ್ದು, ಪಿಟಿಐ ತನ್ನ ಬೇಡಿಕೆಗಳ ಪಟ್ಟಿಯನ್ನು ಸರ್ಕಾರಕ್ಕೆ ಲಿಖಿತವಾಗಿ ಮಂಡಿಸಿದೆ.

2022ರಲ್ಲಿ ಪ್ರಧಾನಿ ಹುದ್ದೆಯಿಂದ ಪದಚ್ಯುತಗೊಂಡ ನಂತರ ಖಾನ್ ಅವರು ಹಲವಾರು ಪ್ರಕರಣಗಳನ್ನು ಎದುರಿಸುತ್ತಿದ್ದಾರೆ. ಅವರು ಆಗಸ್ಟ್ 2023 ರಿಂದ ಜೈಲಿನಲ್ಲಿದ್ದಾರೆ.

ಇದನ್ನೂ ಓದಿ : ನಟ ಸೈಫ್ ಅಲಿ ಖಾನ್‌ಗೆ ಚಾಕು ಇರಿತ: ಶಂಕಿತನ ಬಂಧಿಸಿದ ಮುಂಬೈ ಪೊಲೀಸರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...

ಕರ್ನಾಟಕದಲ್ಲಿ 2 ಗಂಟೆಗಳ ಬೃಹತ್ ಕಾರ್ಯಾಚರಣೆ: 800 ಬಾಲಕಾರ್ಮಿಕರ ರಕ್ಷಣೆ; ಬೆಂಗಳೂರಿನಲ್ಲೇ 503 ಮಕ್ಕಳು

ಬಾಲಕಾರ್ಮಿಕ ಪದ್ಧತಿಯ ವಿರುದ್ಧ ಕರ್ನಾಟಕ ಪೊಲೀಸರು ಹಾಗೂ ಕಾರ್ಮಿಕ ಇಲಾಖೆ ಶನಿವಾರ ರಾಜ್ಯಾದ್ಯಂತ ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ 800 ಮಕ್ಕಳನ್ನು ರಕ್ಷಿಸಲಾಗಿದೆ. ರಾಜ್ಯದ 962 ಪೊಲೀಸ್ ಠಾಣೆಗಳು ಹಾಗೂ ಘಟಕಗಳ ವ್ಯಾಪ್ತಿಯಲ್ಲಿ 16,951...

‘ದಿ ಹಿಂದೂ’, ‘ದೈನಿಕ್ ಭಾಸ್ಕರ್’ ಗಳಲ್ಲಿ ಅತ್ಯಾಚಾರ ಅಪರಾಧಿ ಗುರ್ಮೀತ್ ರಾಮ್ ರಹೀಮ್ ಸಮರ್ಥಿಸುವ ಜಾಹೀರಾತು: ಓದುಗರಲ್ಲಿ ಕ್ಷಮೆಯಾಚಿಸಿದ ‘ದಿ ಹಿಂದೂ’

ನವದೆಹಲಿ: ಇಬ್ಬರು ಮಹಿಳಾ ಶಿಷ್ಯೆಯರ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಶಿಕ್ಷೆಗೊಳಗಾಗಿರುವ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಸಿಂಗ್ ಅವರನ್ನು ಸಮರ್ಥಿಸುವ ರೀತಿಯಲ್ಲಿ ಪೂರ್ಣ ಪುಟದ ಮುಖಪುಟ ಜಾಹೀರಾತು...

ದ್ವಿ-ರಾಷ್ಟ್ರ ಪರಿಹಾರ : ಬ್ರಿಕ್ಸ್ ನಿಲುವು ಸ್ವಾಗತಿಸಿದ ಪ್ಯಾಲೆಸ್ತೀನ್

ಪ್ಯಾಲೆಸ್ತೀನ್-ಇಸ್ರೇಲ್ ವಿವಾದಕ್ಕೆ ದ್ವಿ-ರಾಷ್ಟ್ರ ಪರಿಹಾರವನ್ನು ಕಂಡುಕೊಳ್ಳುವಂತೆ ಕರೆ ನೀಡಿರುವ ಬ್ರಿಕ್ಸ್ (BRICS) ಜಂಟಿ ಘೋಷಣೆಯನ್ನು ಪ್ಯಾಲೆಸ್ತೀನ್ ವಿದೇಶಾಂಗ ಮತ್ತು ವಲಸಿಗರ ಸಚಿವಾಲಯವು ಮುಕ್ತಕಂಠದಿಂದ ಸ್ವಾಗತಿಸಿದೆ. ಬ್ರಿಕ್ಸ್‌ ಶೃಂಗಸಭೆ, ಜೆರುಸಲೆಮ್ ಸೇರಿದಂತೆ ಪ್ಯಾಲೆಸ್ತೀನಿಯರನ್ನು ಅವರದೇ ಭೂಮಿಯಿಂದ...

ತೆಲಂಗಾಣ| ಅಂತರ್ಜಾತಿ ವಿವಾಹಕ್ಕೆ ಯುವತಿ ಕುಟುಂಬದ ವಿರೋಧ; ದಲಿತ ಯುವಕನ ಮನೆ ಧ್ವಂಸ

ಹೈದರಾಬಾದ್ ಸಮೀಪದ ಗದ್ವಾಲ್ ಜಿಲ್ಲೆಯ ರೆಪಲ್ಲೆ ಗ್ರಾಮದಲ್ಲಿ ಅಂತರ್ಜಾತಿ ವಿವಾಹದ ಹಿನ್ನೆಲೆಯಲ್ಲಿ ದಲಿತ ಯುವಕನ ಮನೆಯನ್ನು ಧ್ವಂಸಗೊಳಿಸಿರುವ ಘಟನೆಗೆ ಸಂಬಂಧಿಸಿದಂತೆ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ದಲಿತ ಬಹುಜನ ಫ್ರಂಟ್, ಹ್ಯೂಮನ್...