Homeಮುಖಪುಟಪಾಕಿಸ್ತಾನ ಸಾರ್ವತ್ರಿಕ ಚುನಾವಣೆ: ಸರ್ಕಾರ ರಚಿಸಲು ವಿವಿಧ ಪಕ್ಷಗಳ ಕಸರತ್ತು

ಪಾಕಿಸ್ತಾನ ಸಾರ್ವತ್ರಿಕ ಚುನಾವಣೆ: ಸರ್ಕಾರ ರಚಿಸಲು ವಿವಿಧ ಪಕ್ಷಗಳ ಕಸರತ್ತು

- Advertisement -
- Advertisement -

ಪಾಕಿಸ್ತಾನದ ಸಂಸತ್‌ ಚುನಾವಣೆಯ ಫಲಿತಾಂಶ ಹೊರ ಬಿದ್ದಿದ್ದು, ಯಾವುದೇ ಪಕ್ಷ ಬಹುಮತ ಪಡೆಯದ ಹಿನ್ನೆಲೆ ಅಂತಂತ್ರ ಸ್ಥಿತಿ ನಿರ್ಮಾಣವಾಗಿದೆ. ಈ ಬೆನ್ನಲ್ಲೇ ವಿವಿಧ ಪಕ್ಷಗಳು ಸರ್ಕಾರ ರಚನೆಯ ಕಸರತ್ತು ಆರಂಭಿಸಿವೆ.

ಮಾಜಿ ಪ್ರಧಾನಿಗಳಾದ ನವಾಝ್ ಶರೀಫ್ ಮತ್ತು ಅವರ ಸಹೋದರ ಶೆಹಬಾಝ್ ಷರೀಫ್ ಅವರ ಪಕ್ಷ, ಪಾಕಿಸ್ತಾನ್ ಮುಸ್ಲಿಂ ಲೀಗ್-ನವಾಝ್ (ಪಿಎಂಎಲ್-ಎನ್), ಮತ್ತು ಬಿಲಾವಲ್ ಭುಟ್ಟೋ ಜರ್ದಾರಿ ಅವರ ಪಾಕಿಸ್ತಾನ್ ಪೀಪಲ್ಸ್ ಪಾರ್ಟಿ (ಪಿಪಿಪಿ) ಕೇಂದ್ರ ಮತ್ತು ಪಂಜಾಬ್‌ನಲ್ಲಿ ಸಮ್ಮಿಶ್ರ ಸರ್ಕಾರ ರಚಿಸಲು ಒಪ್ಪಿಕೊಂಡಿವೆ ಎಂದು ಜಿಯೋ ಟಿವಿ ಶನಿವಾರ ವರದಿ ಮಾಡಿದೆ.

ಈ ನಡುವೆ, 2023ರ ಮೇ 9 ರಂದು ಸೇನಾ ನೆಲೆಗಳ ಮೇಲಿನ ದಾಳಿಗೆ ಸಂಬಂಧಿಸಿದ 12 ಪ್ರಕರಣಗಳಲ್ಲಿ ಜೈಲಿನಲ್ಲಿರುವ ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರಿಗೆ ಶನಿವಾರ ಜಾಮೀನು ನೀಡಲಾಗಿದೆ. ಸರ್ಕಾರ ರಚಿಸಲು ನಮ್ಮ ಪಕ್ಷಕ್ಕೆ ಆಹ್ವಾನ ನೀಡಲಾಗಿದೆ ಎಂದು ಇಮ್ರಾನ್‌ ಖಾನ್ ಅವರ ಪಾಕಿಸ್ತಾನ್ ತೆಹ್ರೀಕ್-ಇ-ಇನ್ಸಾಫ್ (ಪಿಟಿಐ) ಪಕ್ಷದ ನಾಯಕರು ಹೇಳಿಕೊಂಡಿದ್ದಾರೆ.

ಪಾಕಿಸ್ತಾನ ಸಂಸತ್‌ನ 265 ಸ್ಥಾನಗಳಿಗೆ ಚುನಾವಣೆ ನಡೆದಿದ್ದು, ಸರಳ ಬಹುಮತಕ್ಕೆ ಯಾವುದೇ ಪಕ್ಷಕ್ಕೆ 133 ಸ್ಥಾನಗಳ ಅಗತ್ಯವಿದೆ. ಉಗ್ರರ ದಾಳಿ ಮತ್ತು ಚುನಾವಣಾ ಅಕ್ರಮ ಆರೋಪಗಳ ನಡುವೆ ಪಾಕಿಸ್ತಾನದಲ್ಲಿ ಗುರುವಾರ ಸಂಜೆ 5 ಗಂಟೆಗೆ ಮತದಾನ ಮುಕ್ತಾಯಗೊಂಡಿದೆ. ಸಂಸತ್ತಿನ ಚುನಾವಣೆಯ ನಂತರ, ಹೊಸದಾಗಿ ಆಯ್ಕೆಯಾದ ಸಂಸದರು ಪ್ರಧಾನಿಯನ್ನು ಆಯ್ಕೆ ಮಾಡುತ್ತಾರೆ. ಯಾವುದೇ ಪಕ್ಷವು ಬಹುಮತ ಪಡೆಯದಿದ್ದರೆ, ಹೆಚ್ಚಿನ ಸಂಖ್ಯೆಯ ಸ್ಥಾನಗಳನ್ನು ಪಡೆದಿರುವ ಪಕ್ಷ ಸಮ್ಮಿಶ್ರ ಸರ್ಕಾರ ರಚಿಸಬಹುದು.

ಸರ್ಕಾರ ರಚಿಸುವ ಸಲುವಾಗಿ ಪಿಪಿಪಿ, ಜೆಯುಐ-ಎಫ್, ಎಂಕ್ಯೂಎಂ, ಪಿಎಂಎಲ್‌-ಕ್ಯೂ ಮತ್ತು ಐಪಿಪಿ ಪಕ್ಷಗಳೊಂದಿಗೆ ಪಿಡಿಎಂ (ಪಾಕಿಸ್ತಾನ್ ಡೆಮಾಕ್ರಟಿಕ್ ಮೂವ್‌ಮೆಂಟ್) ಶೈಲಿಯ ಮೈತ್ರಿಕೂಟ ರಚಿಸುವ ಸುಳಿವನ್ನು ಪಾಕಿಸ್ತಾನ್ ಮುಸ್ಲಿಂ ಲೀಗ್-ನವಾಝ್ (ಪಿಎಂಎಲ್-ಎನ್) ನಾಯಕ ನವಾಝ್ ಶರೀಫ್ ನೀಡಿದ್ದಾರೆ. ಆದರೆ, ಸ್ವತಂತ್ರ ಅಭ್ಯರ್ಥಿಗಳ ಕುರಿತು ಅವರು ಏನು ಹೇಳಿಲ್ಲ.

ನಾವು ಸ್ವತಂತ್ರ ಅಭ್ಯರ್ಥಿಗಳನ್ನೂ ಸೇರಿಸಿಕೊಂಡು ಕೇಂದ್ರ ಮತ್ತು ಪಂಜಾಬ್‌ನಲ್ಲಿ ಸರ್ಕಾರ ರಚಿಸುತ್ತೇವೆ ಎಂದು ನವಾಝ್ ಶರೀಫ್ ಅವರ ಸಂಬಂಧಿ ಇಸಾಖ್ ದಾರ್ ಹೇಳಿದ್ದಾಗಿ ಡಾನ್ ವರದಿ ಮಾಡಿದೆ.

ಮತ್ತೊಂದೆಡೆ ಇಮ್ರಾನ್ ಖಾನ್ ಅವರ ಪಾಕಿಸ್ತಾನ್ ತೆಹ್ರೀಕ್-ಎ-ಇನ್ಸಾಫ್ (ಪಿಟಿಐ) ಅಧ್ಯಕ್ಷ ಬ್ಯಾರಿಸ್ಟರ್ ಗೋಹರ್ ಅಲಿ ಖಾನ್ ಅವರು ಕೇಂದ್ರದಲ್ಲಿ ನಮಗೆ ಹೆಚ್ಚಿನ ಸ್ಥಾನ ಬಂದಿದೆ. ಅಧ್ಯಕ್ಷ ಆರಿಫ್ ಅಲ್ವಿ ನಮ್ಮ ಪಕ್ಷವನ್ನು ಸರ್ಕಾರ ರಚಿಸಲು ಆಹ್ವಾನಿಸಲಿದ್ದಾರೆ ಎಂದು ಹೇಳಿರುವುದಾಗಿ ಜಿಯೋಟಿವಿ ಉಲ್ಲೇಖಿಸಿದೆ.

ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರು ಶನಿವಾರ “ವಿಜಯ ಭಾಷಣ” ಮಾಡಿದ್ದಾರೆ. ಏಕೆಂದರೆ, ಅವರ ಪಕ್ಷ ಬೆಂಬಲಿಸಿದ್ದ ಸ್ವತಂತ್ರ ಅಭ್ಯರ್ಥಿಗಳು ಚುನಾವಣಾ ಫಲಿತಾಂಶಗಳಲ್ಲಿ ಪ್ರಾಬಲ್ಯ ಸಾಧಿಸಿದ್ದಾರೆ. ತಮ್ಮ ಪಕ್ಷವಾದ ಪಿಟಿಐ ಚುನಾವಣೆಯಲ್ಲಿ ಹೆಚ್ಚು ಸ್ಥಾನಗಳನ್ನು ಗಳಿಸಿದ್ದು ಕೇಂದ್ರದಲ್ಲಿ ಸರ್ಕಾರ ರಚಿಸಲು ಪ್ರಯತ್ನಿಸಲಿದೆ ಎಂದು ಖಾನ್ ಅವರ ಹಿರಿಯ ಸಹಾಯಕ ಹೇಳಿರುವುದಾಗಿ ಶನಿವಾರ ರಾಯಿಟರ್ಸ್ ವರದಿ ಮಾಡಿದೆ.

ಅಲ್‌-ಜಝೀರಾ ವರದಿಯ ಪ್ರಕಾರ, ಚುನಾವಣೆ ನಡೆದಿರುವ 265 ಸ್ಥಾನಗಳ ಪೈಕಿ 10 ಸ್ಥಾನಗಳ ಫಲಿತಾಂಶ ಇನ್ನೂ ಬಂದಿಲ್ಲ. ಮತದಾನ ಮುಗಿದು ಸುಮಾರು 48 ಗಂಟೆಗಳು ಕಳೆದಿವೆ.

ಅಂತಿಮ ಫಲಿತಾಂಶವನ್ನು ಇಂದು ಮಧ್ಯರಾತ್ರಿಯೊಳಗೆ ಪ್ರಕಟಿಸುವಂತೆ ಇಮ್ರಾನ್ ಖಾನ್ ಅವರ ಪಾಕಿಸ್ತಾನ್ ತೆಹ್ರೀಕ್-ಎ-ಇನ್ಸಾಫ್ ಚುನಾವಣಾ ಆಯೋಗಕ್ಕೆ ಒತ್ತಾಯಿಸಿದೆ. ಇಲ್ಲದಿದ್ದರೆ ಫಲಿತಾಂಶ ಬಾಕಿಯಿರುವ ಪ್ರದೇಶಗಳಲ್ಲಿ ಪ್ರತಿಭಟನೆಗಳನ್ನು ಎದುರಿಸಬೇಕಾಗುತ್ತದೆ ಎಚ್ಚರಿಸಿದೆ.

ಪಾಕಿಸ್ತಾನದಲ್ಲಿ ಸಾರ್ವತ್ರಿಕ ಚುನಾವಣೆಯ ಕುರಿತು ಕಾಶ್ಮೀರದ ಡೆಮಾಕ್ರಟಿಕ್ ಪ್ರೋಗ್ರೆಸಿವ್ ಆಜಾದ್ ಪಾರ್ಟಿ (ಡಿಪಿಎಪಿ) ಅಧ್ಯಕ್ಷ ಗುಲಾಂ ನಬಿ ಆಜಾದ್ ಅವರು ಪ್ರತಿಕ್ರಿಯಿಸಿದ್ದು, “ದೇಶಗಳ ನಡುವಿನ ಉದ್ವಿಗ್ನತೆಗೆ ಪಾಕಿಸ್ತಾನವೇ ಕಾರಣ. ಆದರೆ, ಅಲ್ಲಿನ ನಾಗರಿಕರು ಮುಗ್ಧರು. ನಮ್ಮ ಹಣೆಬರಹದಲ್ಲಿ ಪ್ರಜಾಪ್ರಭುತ್ವವಿತ್ತು. ಅವರ ಹಣೆಬರಹದಲ್ಲಿ ಸರ್ವಾಧಿಕಾರಿಗಳಿದ್ದರು. ಅಲ್ಲಿನ ಸರ್ಕಾರಗಳನ್ನು ಸೇನೆ ನಡೆಸುತ್ತಿದೆ” ಎಂದಿದ್ದಾರೆ.

ಇದನ್ನೂ ಓದಿ : ಲೋಕಸಭೆ ಚುನಾವಣೆ: ಅಸಂವಿಧಾನಿಕ ‘CAA’ ಅಬ್ಬರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಾರಣಾಸಿಯಲ್ಲಿ ಆಚರಿಸುವ ಪ್ರಸಿದ್ಧ ‘ಭಸ್ಮ ಹೋಳಿ’ಗೆ ಸಂಸ್ಕೃತ ವಿದ್ವಾಂಸರು ಮತ್ತು ಕಾಶಿ ವಿದ್ವತ್ ಪರಿಷತ್ ವಿರೋಧ 

ವಾರಣಾಸಿ (ಉತ್ತರ ಪ್ರದೇಶ): ನಗರದ ಸ್ಮಶಾನ ಭೂಮಿಗಳಾದ ಮಣಿಕರ್ಣಿಕಾ ಮತ್ತು ಹರಿಶ್ಚಂದ್ರ ಘಾಟ್‌ಗಳಲ್ಲಿ 'ಮಸಾನೆ ಕಿ ಹೋ ಲಿ ' ನುಡಿಸುವ ಸಂಪ್ರದಾಯವನ್ನು ಸಂಸ್ಕೃತ ವಿದ್ವಾಂಸರು ಮತ್ತು ಹಿಂದೂ ಧರ್ಮಗ್ರಂಥಗಳ ತಜ್ಞರ ಪರಿಷತ್ತು...

ಮುಸ್ಲಿಮರೆಂದು ತಿಳಿದು ಮಹಿಳೆಯರಿಗೆ ವಿತರಿಸಿದ್ದ ಕಂಬಳಿ ವಾಪಸ್ ಪಡೆದ ಬಿಜೆಪಿ ಮಾಜಿ ಸಂಸದ

ಬಿಜೆಪಿಯ ಮಾಜಿ ಸಂಸದ ಸುಖ್‌ವೀರ್ ಸಿಂಗ್ ಜೌನ್‌ಪುರಿಯಾ ಅವರು, ಮುಸ್ಲಿಮರೆಂದು ಗೊತ್ತಾದ ಬಳಿಕ ಮಹಿಳೆಯರಿಗೆ ವಿತರಿಸಿದ್ದ ಕಂಬಳಿಯನ್ನು ವಾಪಸ್ ಪಡೆದಿದ್ದಾರೆ ಎಂದು ರಾಜಸ್ಥಾನ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಟಿಕರಾಮ್ ಜುಲ್ಲಿ ಭಾನುವಾರ...

ಜೆಎನ್‌ಯು: ಎಡಪಂಥೀಯ ವಿದ್ಯಾರ್ಥಿ ಸಂಘಟನೆ ಮತ್ತು ಎಬಿವಿಪಿ ನಡುವೆ ಘರ್ಷಣೆ: ಉದ್ವಿಗ್ನತೆ  

ಸೋಮವಾರ ಮುಂಜಾನೆ ನಡೆದ ಪ್ರತಿಭಟನಾ ಮೆರವಣಿಗೆಯಲ್ಲಿ ಎಡಪಂಥೀಯ ಮತ್ತು ಬಲಪಂಥೀಯ ವಿದ್ಯಾರ್ಥಿ ಗುಂಪುಗಳು ಪರಸ್ಪರ ಹಿಂಸಾಚಾರವನ್ನು ಬಿಚ್ಚಿಟ್ಟಿದ್ದಾರೆ ಎಂದು ಆರೋಪಿಸಿದ ನಂತರ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯ (ಜೆಎನ್‌ಯು) ಆವರಣದಲ್ಲಿ ಉದ್ವಿಗ್ನತೆ ಉಂಟಾಗಿದೆ.  ಸೋಮವಾರ ಬೆಳಗಿನ...

ಡ್ರಗ್ ದೊರೆ ‘ಎಲ್ ಮೆಂಚೊ’ ಹತ್ಯೆ : ಮೆಕ್ಸಿಕೋದಲ್ಲಿ ಭುಗಿಲೆದ್ದ ಹಿಂಸಾಚಾರ

'ಎಲ್ ಮೆಂಚೊ' ಎಂದೇ ಪರಿಚಿತನಾಗಿದ್ದ ಡ್ರಗ್ ದೊರೆ ನೆಮೆಸಿಯೊ ಒಸೆಗುಯೆರಾನನ್ನು ಕಾರ್ಯಾಚರಣೆಯೊಂದರಲ್ಲಿ ಕೊಂದಿರುವುದಾಗಿ ಮೆಕ್ಸಿಕನ್ ಸೇನೆ ಭಾನುವಾರ (ಫೆ.22) ಘೋಷಿಸಿದೆ. ಆ ಬಳಿಕ ದೇಶದ ವಿವಿಧ ಭಾಗಗಳಲ್ಲಿ ಭಾರೀ ಹಿಂಸಾಚಾರ ಭುಗಿಲೆದ್ದಿದೆ ಎಂದು...

ನೇಪಾಳ ಬಸ್ ಅಪಘಾತ: ಧಾಡಿಂಗ್‌ನಲ್ಲಿ ತ್ರಿಶೂಲಿ ನದಿಗೆ ಬಸ್ ಬಿದ್ದು 18 ಮಂದಿ ಸಾವು; ಮುಂದುವರಿದ ರಕ್ಷಣಾ ಕಾರ್ಯಾಚರಣೆ

ಧಾಡಿಂಗ್ (ನೇಪಾಳ): ಸೋಮವಾರ ಮುಂಜಾನೆ ನೇಪಾಳದ ಧಾಡಿಂಗ್‌ನಲ್ಲಿ ಪ್ರಯಾಣಿಕರ ಬಸ್ ತ್ರಿಶೂಲಿ ನದಿಗೆ ಉರುಳಿಬಿದ್ದ ಪರಿಣಾಮ ಕನಿಷ್ಠ 18 ಜನರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಅಪಘಾತದಲ್ಲಿ 24 ಕ್ಕೂ ಹೆಚ್ಚು ಪ್ರಯಾಣಿಕರು...

ಅಜಿತ್ ಪವಾರ್ ಸಾವು | ಪತನಗೊಂಡ ವಿಮಾನದ ನಿರ್ವಹಣಾ ಸಂಸ್ಥೆಗೂ ಟಿಡಿಪಿಗೂ ನಂಟು : ರೋಹಿತ್ ಪವಾರ್

ಅಜಿತ್ ಪವಾರ್ ಸಾವಿಗೆ ಕಾರಣವಾದ ಪತನಗೊಂಡ ವಿಮಾನದ ನಿರ್ವಾಹಕ ಸಂಸ್ಥೆ ವಿಎಸ್ಆರ್ ವೆಂಚರ್ಸ್ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ನಡುವೆ ಸಂಬಂಧವಿದೆ ಎಂದು ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ (ಶರದ್ ಪವಾರ್ ಬಣದ)...

ಆಪರೇಷನ್ ಡೆಮಾಲಿಶ್‌ಮೆಂಟ್ ಅಡಿಯಲ್ಲಿ 200ಕ್ಕೂ ಹೆಚ್ಚು ನಕ್ಸಲ್ ಸ್ಮಾರಕಗಳನ್ನು ನೆಲಸಮಗೊಳಿಸಿದ ಭದ್ರತಾ ಪಡೆಗಳು 

ನವದೆಹಲಿ: ನಕ್ಸಲ್ ಚಟುವಟಿಕೆಗಳ ವಿರುದ್ಧ ತೀವ್ರಗೊಂಡ ಕಾರ್ಯಾಚರಣೆ ನಿರ್ಣಾಯಕ ಹಂತವನ್ನು ಪ್ರವೇಶಿಸಿರುವುದಾಗಿ ಭದ್ರತಾಪಡೆಯ ಅಧಿಕಾರಿಗಳು ತಿಳಿಸಿದ್ದಾರೆ.  ಆಪರೇಷನ್ ಡೆಮಾಲಿಶ್‌ಮೆಂಟ್ ಎಂದು ಕರೆಯಲ್ಪಡುವ ಇತ್ತೀಚಿನ ಕಾರ್ಯಾಚರಣೆಯ ಅಡಿಯಲ್ಲಿ ನಕ್ಸಲ್ ಕಾರ್ಯಕರ್ತರು ತಮ್ಮ ನಾಯಕರನ್ನು ಸ್ಮರಿಸಲು ಮತ್ತು...

ಮುಸ್ಲಿಮರಿಗೆ ನೀಡಿದ್ದ 5% ಮೀಸಲಾತಿ ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಕ್ರಮ ಪ್ರಶ್ನಿಸಿ ಬಾಂಬೆ ಹೈಕೋರ್ಟ್ ಗೆ ಅರ್ಜಿ 

ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಮುಸ್ಲಿಮರಿಗೆ 5% ಮೀಸಲಾತಿಯನ್ನು ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಇತ್ತೀಚಿನ ನಿರ್ಧಾರವನ್ನು ಮುಂಬೈ ಮೂಲದ ವಕೀಲರು ಬಾಂಬೆ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ. ವಕೀಲ ಸೈಯದ್ ಎಜಾಜ್ ಅಬ್ಬಾಸ್ ನಖ್ವಿ ಅವರು ವಕೀಲ...

ವಿಧಾನಸಭಾ ಚುನಾವಣೆಯಲ್ಲಿ ನೇಮಮ್ ನಿಂದ ಸ್ಪರ್ಧಿಸುವ ಬಯಕೆಯನ್ನು ಪುನರುಚ್ಚರಿಸಿದ ಬಿಜೆಪಿ ಕೇರಳ ಅಧ್ಯಕ್ಷ ರಾಜೀವ್ ಚಂದ್ರಶೇಖರ್ 

ತಿರುವನಂತಪುರಂ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕೇರಳದ ನೇಮಮ್ ಕ್ಷೇತ್ರದಿಂದ ಸ್ಪರ್ಧಿಸುವ ತಮ್ಮ ಇಚ್ಛೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ ಭಾನುವಾರ ಪುನರುಚ್ಚರಿಸಿದ್ದಾರೆ. ನೇಮಮ್‌ನಲ್ಲಿ ಬಿಜೆಪಿಯ ಚುನಾವಣಾ ಗೋಡೆ ಬರಹ ಅಭಿಯಾನಕ್ಕೆ ಚಾಲನೆ ನೀಡಿದ ನಂತರ...

ಯುವತಿಯನ್ನು ಬಂಧಿಸಿಟ್ಟು ಚಿತ್ರಹಿಂಸೆ : ಆರೋಪಿಯ ಬಂಧನ

ಯುವಕನೋರ್ವ ತನ್ನ ಲಿವ್-ಇನ್ ಸಂಗಾತಿಯಾದ 19 ವರ್ಷದ ಯುವತಿಯನ್ನು ಕೊಠಡಿಯಲ್ಲಿ ಬಂಧಿಸಿಟ್ಟು ಚಿತ್ರಹಿಂಸೆ ನೀಡಿರುವ ಘಟನೆ ಗುರುಗಾಂವ್‌ನ ಸೆಕ್ಟರ್ 69ರಲ್ಲಿ ನಡೆದಿದೆ. ಆರೋಪಿಯನ್ನು ದೆಹಲಿಯ ನರೇಲಾ ನಿವಾಸಿ 19 ವರ್ಷದ ಶಿವಂ ಎಂದು ಗುರುತಿಸಲಾಗಿದೆ....