Homeಮುಖಪುಟಪಾಕಿಸ್ತಾನ ಸಾರ್ವತ್ರಿಕ ಚುನಾವಣೆ: ಸರ್ಕಾರ ರಚಿಸಲು ವಿವಿಧ ಪಕ್ಷಗಳ ಕಸರತ್ತು

ಪಾಕಿಸ್ತಾನ ಸಾರ್ವತ್ರಿಕ ಚುನಾವಣೆ: ಸರ್ಕಾರ ರಚಿಸಲು ವಿವಿಧ ಪಕ್ಷಗಳ ಕಸರತ್ತು

- Advertisement -
- Advertisement -

ಪಾಕಿಸ್ತಾನದ ಸಂಸತ್‌ ಚುನಾವಣೆಯ ಫಲಿತಾಂಶ ಹೊರ ಬಿದ್ದಿದ್ದು, ಯಾವುದೇ ಪಕ್ಷ ಬಹುಮತ ಪಡೆಯದ ಹಿನ್ನೆಲೆ ಅಂತಂತ್ರ ಸ್ಥಿತಿ ನಿರ್ಮಾಣವಾಗಿದೆ. ಈ ಬೆನ್ನಲ್ಲೇ ವಿವಿಧ ಪಕ್ಷಗಳು ಸರ್ಕಾರ ರಚನೆಯ ಕಸರತ್ತು ಆರಂಭಿಸಿವೆ.

ಮಾಜಿ ಪ್ರಧಾನಿಗಳಾದ ನವಾಝ್ ಶರೀಫ್ ಮತ್ತು ಅವರ ಸಹೋದರ ಶೆಹಬಾಝ್ ಷರೀಫ್ ಅವರ ಪಕ್ಷ, ಪಾಕಿಸ್ತಾನ್ ಮುಸ್ಲಿಂ ಲೀಗ್-ನವಾಝ್ (ಪಿಎಂಎಲ್-ಎನ್), ಮತ್ತು ಬಿಲಾವಲ್ ಭುಟ್ಟೋ ಜರ್ದಾರಿ ಅವರ ಪಾಕಿಸ್ತಾನ್ ಪೀಪಲ್ಸ್ ಪಾರ್ಟಿ (ಪಿಪಿಪಿ) ಕೇಂದ್ರ ಮತ್ತು ಪಂಜಾಬ್‌ನಲ್ಲಿ ಸಮ್ಮಿಶ್ರ ಸರ್ಕಾರ ರಚಿಸಲು ಒಪ್ಪಿಕೊಂಡಿವೆ ಎಂದು ಜಿಯೋ ಟಿವಿ ಶನಿವಾರ ವರದಿ ಮಾಡಿದೆ.

ಈ ನಡುವೆ, 2023ರ ಮೇ 9 ರಂದು ಸೇನಾ ನೆಲೆಗಳ ಮೇಲಿನ ದಾಳಿಗೆ ಸಂಬಂಧಿಸಿದ 12 ಪ್ರಕರಣಗಳಲ್ಲಿ ಜೈಲಿನಲ್ಲಿರುವ ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರಿಗೆ ಶನಿವಾರ ಜಾಮೀನು ನೀಡಲಾಗಿದೆ. ಸರ್ಕಾರ ರಚಿಸಲು ನಮ್ಮ ಪಕ್ಷಕ್ಕೆ ಆಹ್ವಾನ ನೀಡಲಾಗಿದೆ ಎಂದು ಇಮ್ರಾನ್‌ ಖಾನ್ ಅವರ ಪಾಕಿಸ್ತಾನ್ ತೆಹ್ರೀಕ್-ಇ-ಇನ್ಸಾಫ್ (ಪಿಟಿಐ) ಪಕ್ಷದ ನಾಯಕರು ಹೇಳಿಕೊಂಡಿದ್ದಾರೆ.

ಪಾಕಿಸ್ತಾನ ಸಂಸತ್‌ನ 265 ಸ್ಥಾನಗಳಿಗೆ ಚುನಾವಣೆ ನಡೆದಿದ್ದು, ಸರಳ ಬಹುಮತಕ್ಕೆ ಯಾವುದೇ ಪಕ್ಷಕ್ಕೆ 133 ಸ್ಥಾನಗಳ ಅಗತ್ಯವಿದೆ. ಉಗ್ರರ ದಾಳಿ ಮತ್ತು ಚುನಾವಣಾ ಅಕ್ರಮ ಆರೋಪಗಳ ನಡುವೆ ಪಾಕಿಸ್ತಾನದಲ್ಲಿ ಗುರುವಾರ ಸಂಜೆ 5 ಗಂಟೆಗೆ ಮತದಾನ ಮುಕ್ತಾಯಗೊಂಡಿದೆ. ಸಂಸತ್ತಿನ ಚುನಾವಣೆಯ ನಂತರ, ಹೊಸದಾಗಿ ಆಯ್ಕೆಯಾದ ಸಂಸದರು ಪ್ರಧಾನಿಯನ್ನು ಆಯ್ಕೆ ಮಾಡುತ್ತಾರೆ. ಯಾವುದೇ ಪಕ್ಷವು ಬಹುಮತ ಪಡೆಯದಿದ್ದರೆ, ಹೆಚ್ಚಿನ ಸಂಖ್ಯೆಯ ಸ್ಥಾನಗಳನ್ನು ಪಡೆದಿರುವ ಪಕ್ಷ ಸಮ್ಮಿಶ್ರ ಸರ್ಕಾರ ರಚಿಸಬಹುದು.

ಸರ್ಕಾರ ರಚಿಸುವ ಸಲುವಾಗಿ ಪಿಪಿಪಿ, ಜೆಯುಐ-ಎಫ್, ಎಂಕ್ಯೂಎಂ, ಪಿಎಂಎಲ್‌-ಕ್ಯೂ ಮತ್ತು ಐಪಿಪಿ ಪಕ್ಷಗಳೊಂದಿಗೆ ಪಿಡಿಎಂ (ಪಾಕಿಸ್ತಾನ್ ಡೆಮಾಕ್ರಟಿಕ್ ಮೂವ್‌ಮೆಂಟ್) ಶೈಲಿಯ ಮೈತ್ರಿಕೂಟ ರಚಿಸುವ ಸುಳಿವನ್ನು ಪಾಕಿಸ್ತಾನ್ ಮುಸ್ಲಿಂ ಲೀಗ್-ನವಾಝ್ (ಪಿಎಂಎಲ್-ಎನ್) ನಾಯಕ ನವಾಝ್ ಶರೀಫ್ ನೀಡಿದ್ದಾರೆ. ಆದರೆ, ಸ್ವತಂತ್ರ ಅಭ್ಯರ್ಥಿಗಳ ಕುರಿತು ಅವರು ಏನು ಹೇಳಿಲ್ಲ.

ನಾವು ಸ್ವತಂತ್ರ ಅಭ್ಯರ್ಥಿಗಳನ್ನೂ ಸೇರಿಸಿಕೊಂಡು ಕೇಂದ್ರ ಮತ್ತು ಪಂಜಾಬ್‌ನಲ್ಲಿ ಸರ್ಕಾರ ರಚಿಸುತ್ತೇವೆ ಎಂದು ನವಾಝ್ ಶರೀಫ್ ಅವರ ಸಂಬಂಧಿ ಇಸಾಖ್ ದಾರ್ ಹೇಳಿದ್ದಾಗಿ ಡಾನ್ ವರದಿ ಮಾಡಿದೆ.

ಮತ್ತೊಂದೆಡೆ ಇಮ್ರಾನ್ ಖಾನ್ ಅವರ ಪಾಕಿಸ್ತಾನ್ ತೆಹ್ರೀಕ್-ಎ-ಇನ್ಸಾಫ್ (ಪಿಟಿಐ) ಅಧ್ಯಕ್ಷ ಬ್ಯಾರಿಸ್ಟರ್ ಗೋಹರ್ ಅಲಿ ಖಾನ್ ಅವರು ಕೇಂದ್ರದಲ್ಲಿ ನಮಗೆ ಹೆಚ್ಚಿನ ಸ್ಥಾನ ಬಂದಿದೆ. ಅಧ್ಯಕ್ಷ ಆರಿಫ್ ಅಲ್ವಿ ನಮ್ಮ ಪಕ್ಷವನ್ನು ಸರ್ಕಾರ ರಚಿಸಲು ಆಹ್ವಾನಿಸಲಿದ್ದಾರೆ ಎಂದು ಹೇಳಿರುವುದಾಗಿ ಜಿಯೋಟಿವಿ ಉಲ್ಲೇಖಿಸಿದೆ.

ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರು ಶನಿವಾರ “ವಿಜಯ ಭಾಷಣ” ಮಾಡಿದ್ದಾರೆ. ಏಕೆಂದರೆ, ಅವರ ಪಕ್ಷ ಬೆಂಬಲಿಸಿದ್ದ ಸ್ವತಂತ್ರ ಅಭ್ಯರ್ಥಿಗಳು ಚುನಾವಣಾ ಫಲಿತಾಂಶಗಳಲ್ಲಿ ಪ್ರಾಬಲ್ಯ ಸಾಧಿಸಿದ್ದಾರೆ. ತಮ್ಮ ಪಕ್ಷವಾದ ಪಿಟಿಐ ಚುನಾವಣೆಯಲ್ಲಿ ಹೆಚ್ಚು ಸ್ಥಾನಗಳನ್ನು ಗಳಿಸಿದ್ದು ಕೇಂದ್ರದಲ್ಲಿ ಸರ್ಕಾರ ರಚಿಸಲು ಪ್ರಯತ್ನಿಸಲಿದೆ ಎಂದು ಖಾನ್ ಅವರ ಹಿರಿಯ ಸಹಾಯಕ ಹೇಳಿರುವುದಾಗಿ ಶನಿವಾರ ರಾಯಿಟರ್ಸ್ ವರದಿ ಮಾಡಿದೆ.

ಅಲ್‌-ಜಝೀರಾ ವರದಿಯ ಪ್ರಕಾರ, ಚುನಾವಣೆ ನಡೆದಿರುವ 265 ಸ್ಥಾನಗಳ ಪೈಕಿ 10 ಸ್ಥಾನಗಳ ಫಲಿತಾಂಶ ಇನ್ನೂ ಬಂದಿಲ್ಲ. ಮತದಾನ ಮುಗಿದು ಸುಮಾರು 48 ಗಂಟೆಗಳು ಕಳೆದಿವೆ.

ಅಂತಿಮ ಫಲಿತಾಂಶವನ್ನು ಇಂದು ಮಧ್ಯರಾತ್ರಿಯೊಳಗೆ ಪ್ರಕಟಿಸುವಂತೆ ಇಮ್ರಾನ್ ಖಾನ್ ಅವರ ಪಾಕಿಸ್ತಾನ್ ತೆಹ್ರೀಕ್-ಎ-ಇನ್ಸಾಫ್ ಚುನಾವಣಾ ಆಯೋಗಕ್ಕೆ ಒತ್ತಾಯಿಸಿದೆ. ಇಲ್ಲದಿದ್ದರೆ ಫಲಿತಾಂಶ ಬಾಕಿಯಿರುವ ಪ್ರದೇಶಗಳಲ್ಲಿ ಪ್ರತಿಭಟನೆಗಳನ್ನು ಎದುರಿಸಬೇಕಾಗುತ್ತದೆ ಎಚ್ಚರಿಸಿದೆ.

ಪಾಕಿಸ್ತಾನದಲ್ಲಿ ಸಾರ್ವತ್ರಿಕ ಚುನಾವಣೆಯ ಕುರಿತು ಕಾಶ್ಮೀರದ ಡೆಮಾಕ್ರಟಿಕ್ ಪ್ರೋಗ್ರೆಸಿವ್ ಆಜಾದ್ ಪಾರ್ಟಿ (ಡಿಪಿಎಪಿ) ಅಧ್ಯಕ್ಷ ಗುಲಾಂ ನಬಿ ಆಜಾದ್ ಅವರು ಪ್ರತಿಕ್ರಿಯಿಸಿದ್ದು, “ದೇಶಗಳ ನಡುವಿನ ಉದ್ವಿಗ್ನತೆಗೆ ಪಾಕಿಸ್ತಾನವೇ ಕಾರಣ. ಆದರೆ, ಅಲ್ಲಿನ ನಾಗರಿಕರು ಮುಗ್ಧರು. ನಮ್ಮ ಹಣೆಬರಹದಲ್ಲಿ ಪ್ರಜಾಪ್ರಭುತ್ವವಿತ್ತು. ಅವರ ಹಣೆಬರಹದಲ್ಲಿ ಸರ್ವಾಧಿಕಾರಿಗಳಿದ್ದರು. ಅಲ್ಲಿನ ಸರ್ಕಾರಗಳನ್ನು ಸೇನೆ ನಡೆಸುತ್ತಿದೆ” ಎಂದಿದ್ದಾರೆ.

ಇದನ್ನೂ ಓದಿ : ಲೋಕಸಭೆ ಚುನಾವಣೆ: ಅಸಂವಿಧಾನಿಕ ‘CAA’ ಅಬ್ಬರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...