Homeಮುಖಪುಟಪಾಕಿಸ್ತಾನ ಸಾರ್ವತ್ರಿಕ ಚುನಾವಣೆ: ಸರ್ಕಾರ ರಚಿಸಲು ವಿವಿಧ ಪಕ್ಷಗಳ ಕಸರತ್ತು

ಪಾಕಿಸ್ತಾನ ಸಾರ್ವತ್ರಿಕ ಚುನಾವಣೆ: ಸರ್ಕಾರ ರಚಿಸಲು ವಿವಿಧ ಪಕ್ಷಗಳ ಕಸರತ್ತು

- Advertisement -
- Advertisement -

ಪಾಕಿಸ್ತಾನದ ಸಂಸತ್‌ ಚುನಾವಣೆಯ ಫಲಿತಾಂಶ ಹೊರ ಬಿದ್ದಿದ್ದು, ಯಾವುದೇ ಪಕ್ಷ ಬಹುಮತ ಪಡೆಯದ ಹಿನ್ನೆಲೆ ಅಂತಂತ್ರ ಸ್ಥಿತಿ ನಿರ್ಮಾಣವಾಗಿದೆ. ಈ ಬೆನ್ನಲ್ಲೇ ವಿವಿಧ ಪಕ್ಷಗಳು ಸರ್ಕಾರ ರಚನೆಯ ಕಸರತ್ತು ಆರಂಭಿಸಿವೆ.

ಮಾಜಿ ಪ್ರಧಾನಿಗಳಾದ ನವಾಝ್ ಶರೀಫ್ ಮತ್ತು ಅವರ ಸಹೋದರ ಶೆಹಬಾಝ್ ಷರೀಫ್ ಅವರ ಪಕ್ಷ, ಪಾಕಿಸ್ತಾನ್ ಮುಸ್ಲಿಂ ಲೀಗ್-ನವಾಝ್ (ಪಿಎಂಎಲ್-ಎನ್), ಮತ್ತು ಬಿಲಾವಲ್ ಭುಟ್ಟೋ ಜರ್ದಾರಿ ಅವರ ಪಾಕಿಸ್ತಾನ್ ಪೀಪಲ್ಸ್ ಪಾರ್ಟಿ (ಪಿಪಿಪಿ) ಕೇಂದ್ರ ಮತ್ತು ಪಂಜಾಬ್‌ನಲ್ಲಿ ಸಮ್ಮಿಶ್ರ ಸರ್ಕಾರ ರಚಿಸಲು ಒಪ್ಪಿಕೊಂಡಿವೆ ಎಂದು ಜಿಯೋ ಟಿವಿ ಶನಿವಾರ ವರದಿ ಮಾಡಿದೆ.

ಈ ನಡುವೆ, 2023ರ ಮೇ 9 ರಂದು ಸೇನಾ ನೆಲೆಗಳ ಮೇಲಿನ ದಾಳಿಗೆ ಸಂಬಂಧಿಸಿದ 12 ಪ್ರಕರಣಗಳಲ್ಲಿ ಜೈಲಿನಲ್ಲಿರುವ ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರಿಗೆ ಶನಿವಾರ ಜಾಮೀನು ನೀಡಲಾಗಿದೆ. ಸರ್ಕಾರ ರಚಿಸಲು ನಮ್ಮ ಪಕ್ಷಕ್ಕೆ ಆಹ್ವಾನ ನೀಡಲಾಗಿದೆ ಎಂದು ಇಮ್ರಾನ್‌ ಖಾನ್ ಅವರ ಪಾಕಿಸ್ತಾನ್ ತೆಹ್ರೀಕ್-ಇ-ಇನ್ಸಾಫ್ (ಪಿಟಿಐ) ಪಕ್ಷದ ನಾಯಕರು ಹೇಳಿಕೊಂಡಿದ್ದಾರೆ.

ಪಾಕಿಸ್ತಾನ ಸಂಸತ್‌ನ 265 ಸ್ಥಾನಗಳಿಗೆ ಚುನಾವಣೆ ನಡೆದಿದ್ದು, ಸರಳ ಬಹುಮತಕ್ಕೆ ಯಾವುದೇ ಪಕ್ಷಕ್ಕೆ 133 ಸ್ಥಾನಗಳ ಅಗತ್ಯವಿದೆ. ಉಗ್ರರ ದಾಳಿ ಮತ್ತು ಚುನಾವಣಾ ಅಕ್ರಮ ಆರೋಪಗಳ ನಡುವೆ ಪಾಕಿಸ್ತಾನದಲ್ಲಿ ಗುರುವಾರ ಸಂಜೆ 5 ಗಂಟೆಗೆ ಮತದಾನ ಮುಕ್ತಾಯಗೊಂಡಿದೆ. ಸಂಸತ್ತಿನ ಚುನಾವಣೆಯ ನಂತರ, ಹೊಸದಾಗಿ ಆಯ್ಕೆಯಾದ ಸಂಸದರು ಪ್ರಧಾನಿಯನ್ನು ಆಯ್ಕೆ ಮಾಡುತ್ತಾರೆ. ಯಾವುದೇ ಪಕ್ಷವು ಬಹುಮತ ಪಡೆಯದಿದ್ದರೆ, ಹೆಚ್ಚಿನ ಸಂಖ್ಯೆಯ ಸ್ಥಾನಗಳನ್ನು ಪಡೆದಿರುವ ಪಕ್ಷ ಸಮ್ಮಿಶ್ರ ಸರ್ಕಾರ ರಚಿಸಬಹುದು.

ಸರ್ಕಾರ ರಚಿಸುವ ಸಲುವಾಗಿ ಪಿಪಿಪಿ, ಜೆಯುಐ-ಎಫ್, ಎಂಕ್ಯೂಎಂ, ಪಿಎಂಎಲ್‌-ಕ್ಯೂ ಮತ್ತು ಐಪಿಪಿ ಪಕ್ಷಗಳೊಂದಿಗೆ ಪಿಡಿಎಂ (ಪಾಕಿಸ್ತಾನ್ ಡೆಮಾಕ್ರಟಿಕ್ ಮೂವ್‌ಮೆಂಟ್) ಶೈಲಿಯ ಮೈತ್ರಿಕೂಟ ರಚಿಸುವ ಸುಳಿವನ್ನು ಪಾಕಿಸ್ತಾನ್ ಮುಸ್ಲಿಂ ಲೀಗ್-ನವಾಝ್ (ಪಿಎಂಎಲ್-ಎನ್) ನಾಯಕ ನವಾಝ್ ಶರೀಫ್ ನೀಡಿದ್ದಾರೆ. ಆದರೆ, ಸ್ವತಂತ್ರ ಅಭ್ಯರ್ಥಿಗಳ ಕುರಿತು ಅವರು ಏನು ಹೇಳಿಲ್ಲ.

ನಾವು ಸ್ವತಂತ್ರ ಅಭ್ಯರ್ಥಿಗಳನ್ನೂ ಸೇರಿಸಿಕೊಂಡು ಕೇಂದ್ರ ಮತ್ತು ಪಂಜಾಬ್‌ನಲ್ಲಿ ಸರ್ಕಾರ ರಚಿಸುತ್ತೇವೆ ಎಂದು ನವಾಝ್ ಶರೀಫ್ ಅವರ ಸಂಬಂಧಿ ಇಸಾಖ್ ದಾರ್ ಹೇಳಿದ್ದಾಗಿ ಡಾನ್ ವರದಿ ಮಾಡಿದೆ.

ಮತ್ತೊಂದೆಡೆ ಇಮ್ರಾನ್ ಖಾನ್ ಅವರ ಪಾಕಿಸ್ತಾನ್ ತೆಹ್ರೀಕ್-ಎ-ಇನ್ಸಾಫ್ (ಪಿಟಿಐ) ಅಧ್ಯಕ್ಷ ಬ್ಯಾರಿಸ್ಟರ್ ಗೋಹರ್ ಅಲಿ ಖಾನ್ ಅವರು ಕೇಂದ್ರದಲ್ಲಿ ನಮಗೆ ಹೆಚ್ಚಿನ ಸ್ಥಾನ ಬಂದಿದೆ. ಅಧ್ಯಕ್ಷ ಆರಿಫ್ ಅಲ್ವಿ ನಮ್ಮ ಪಕ್ಷವನ್ನು ಸರ್ಕಾರ ರಚಿಸಲು ಆಹ್ವಾನಿಸಲಿದ್ದಾರೆ ಎಂದು ಹೇಳಿರುವುದಾಗಿ ಜಿಯೋಟಿವಿ ಉಲ್ಲೇಖಿಸಿದೆ.

ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರು ಶನಿವಾರ “ವಿಜಯ ಭಾಷಣ” ಮಾಡಿದ್ದಾರೆ. ಏಕೆಂದರೆ, ಅವರ ಪಕ್ಷ ಬೆಂಬಲಿಸಿದ್ದ ಸ್ವತಂತ್ರ ಅಭ್ಯರ್ಥಿಗಳು ಚುನಾವಣಾ ಫಲಿತಾಂಶಗಳಲ್ಲಿ ಪ್ರಾಬಲ್ಯ ಸಾಧಿಸಿದ್ದಾರೆ. ತಮ್ಮ ಪಕ್ಷವಾದ ಪಿಟಿಐ ಚುನಾವಣೆಯಲ್ಲಿ ಹೆಚ್ಚು ಸ್ಥಾನಗಳನ್ನು ಗಳಿಸಿದ್ದು ಕೇಂದ್ರದಲ್ಲಿ ಸರ್ಕಾರ ರಚಿಸಲು ಪ್ರಯತ್ನಿಸಲಿದೆ ಎಂದು ಖಾನ್ ಅವರ ಹಿರಿಯ ಸಹಾಯಕ ಹೇಳಿರುವುದಾಗಿ ಶನಿವಾರ ರಾಯಿಟರ್ಸ್ ವರದಿ ಮಾಡಿದೆ.

ಅಲ್‌-ಜಝೀರಾ ವರದಿಯ ಪ್ರಕಾರ, ಚುನಾವಣೆ ನಡೆದಿರುವ 265 ಸ್ಥಾನಗಳ ಪೈಕಿ 10 ಸ್ಥಾನಗಳ ಫಲಿತಾಂಶ ಇನ್ನೂ ಬಂದಿಲ್ಲ. ಮತದಾನ ಮುಗಿದು ಸುಮಾರು 48 ಗಂಟೆಗಳು ಕಳೆದಿವೆ.

ಅಂತಿಮ ಫಲಿತಾಂಶವನ್ನು ಇಂದು ಮಧ್ಯರಾತ್ರಿಯೊಳಗೆ ಪ್ರಕಟಿಸುವಂತೆ ಇಮ್ರಾನ್ ಖಾನ್ ಅವರ ಪಾಕಿಸ್ತಾನ್ ತೆಹ್ರೀಕ್-ಎ-ಇನ್ಸಾಫ್ ಚುನಾವಣಾ ಆಯೋಗಕ್ಕೆ ಒತ್ತಾಯಿಸಿದೆ. ಇಲ್ಲದಿದ್ದರೆ ಫಲಿತಾಂಶ ಬಾಕಿಯಿರುವ ಪ್ರದೇಶಗಳಲ್ಲಿ ಪ್ರತಿಭಟನೆಗಳನ್ನು ಎದುರಿಸಬೇಕಾಗುತ್ತದೆ ಎಚ್ಚರಿಸಿದೆ.

ಪಾಕಿಸ್ತಾನದಲ್ಲಿ ಸಾರ್ವತ್ರಿಕ ಚುನಾವಣೆಯ ಕುರಿತು ಕಾಶ್ಮೀರದ ಡೆಮಾಕ್ರಟಿಕ್ ಪ್ರೋಗ್ರೆಸಿವ್ ಆಜಾದ್ ಪಾರ್ಟಿ (ಡಿಪಿಎಪಿ) ಅಧ್ಯಕ್ಷ ಗುಲಾಂ ನಬಿ ಆಜಾದ್ ಅವರು ಪ್ರತಿಕ್ರಿಯಿಸಿದ್ದು, “ದೇಶಗಳ ನಡುವಿನ ಉದ್ವಿಗ್ನತೆಗೆ ಪಾಕಿಸ್ತಾನವೇ ಕಾರಣ. ಆದರೆ, ಅಲ್ಲಿನ ನಾಗರಿಕರು ಮುಗ್ಧರು. ನಮ್ಮ ಹಣೆಬರಹದಲ್ಲಿ ಪ್ರಜಾಪ್ರಭುತ್ವವಿತ್ತು. ಅವರ ಹಣೆಬರಹದಲ್ಲಿ ಸರ್ವಾಧಿಕಾರಿಗಳಿದ್ದರು. ಅಲ್ಲಿನ ಸರ್ಕಾರಗಳನ್ನು ಸೇನೆ ನಡೆಸುತ್ತಿದೆ” ಎಂದಿದ್ದಾರೆ.

ಇದನ್ನೂ ಓದಿ : ಲೋಕಸಭೆ ಚುನಾವಣೆ: ಅಸಂವಿಧಾನಿಕ ‘CAA’ ಅಬ್ಬರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಆರ್‌ಎಸ್‌ಎಸ್‌ ನೋಂದಣಿಯಾದರೆ ಒಳ್ಳೆಯದು’: ರಾಮಮಂದಿರ ಹಗರಣ ವಿಚಾರದಲ್ಲಿ ‘ಸತ್ಯ ಹೊರಬರಬೇಕು’: ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

‘ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು (ಆರ್‌ಎಸ್‌ಎಸ್‌) ನೋಂದಣಿ ಮಾಡಿಸಿದರೆ ಯಾರಿಗೂ ಆರೋಪ ಮಾಡಲು ಅವಕಾಶ ಇರುವುದಿಲ್ಲ’ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಶುಕ್ರವಾರ ಹೇಳಿದ್ದಾರೆ. ಆರ್‌ಎಸ್‌ಎಸ್ ನೋಂದಣಿ ಕುರಿತು ಕರ್ನಾಟಕದ ಗೃಹ ಸಚಿವ...

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...

ರಾಮ ಮಂದಿರ ಹಗರಣ: ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಟ್ರಸ್ಟಿ ಅನಿಲ್ ಮಿಶ್ರಾ ರಾಜೀನಾಮೆ

ಶ್ರೀ ರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್, ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು, ಸದಸ್ಯ ಟ್ರಸ್ಟಿ ಅನಿಲ್ ಮಿಶ್ರಾ ಅವರೊಂದಿಗೆ ಶುಕ್ರವಾರ ರಾಜೀನಾಮೆ...

‘ಕೂಡಿ ಹಾಕಿ ಥಳಿಸುತ್ತಿದ್ದರು, ತಪ್ಪಿಸಿಕೊಳ್ಳದಂತೆ ನಾಯಿ ಬಿಟ್ಟಿದ್ದರು’: ಭೀಕರ ಶೋಷಣೆಯಿಂದ 12 ಜೀತ ಕಾರ್ಮಿಕರ ರಕ್ಷಣೆ

ಮೂರು ತಿಂಗಳ ಕಾಲ 68 ವರ್ಷದ ಮೆಹರ್ಬಾನ್ ಶಾ ಅನಿಶ್ಚಿತತೆಯಲ್ಲಿ ಜೀವನ ನಡೆಸುತ್ತಿದ್ದರು. ದುಡಿಯಲು ಹೋಗಿದ್ದ ಅವರ ಕಿರಿಯ ಮಗ ದಿಲ್ಶಾದ್ ಮೊಹಮ್ಮದ್ ಜೀವಂತವಾಗಿದ್ದಾನಾ?, ಇಲ್ಲಾ ಮರಣ ಹೊಂದಿದ್ದಾನಾ? ಎಂಬುವುದು ಅವರಿಗೆ ಗೊತ್ತಿರಲಿಲ್ಲ. 24...

ಅಯ್ಯೋಧ್ಯೆ ರಾಮ ಮಂದಿರ ಹಗರಣ: ಎಂಟು ಜನರ ವಿರುದ್ಧ ಎಫ್‌ಐಆರ್; ಪ್ರಭಾವಿ ವ್ಯಕ್ತಿಗಳನ್ನು ರಕ್ಷಿಸಲಾಗಿದೆ ಎಂದು ಪ್ರತಿಪಕ್ಷಗಳ ಆರೋಪ 

ಅಯೋಧ್ಯೆ: ವಿಶ್ವದಾದ್ಯಂತ ಕೋಟ್ಯಂತರ ಭಕ್ತರ ಆರಾಧ್ಯ ದೈವವಾಗಿರುವ ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಭಕ್ತರು ಸಮರ್ಪಿಸಿದ ನಗದು, ಚಿನ್ನಾಭರಣ ಸೇರಿದಂತೆ ಇತರೆ ಬೆಲೆಬಾಳುವ ಕಾಣಿಕೆಗಳ ಕಳ್ಳತನ ಮತ್ತು ಹಣ ದುರುಪಯೋಗದ ಗಂಭೀರ ಹಗರಣವೊಂದು...

ಪೋಕ್ಸೋ ಕೇಸ್ : ವಚನಾನಂದ ಸ್ವಾಮಿಯ ನಿರೀಕ್ಷಣಾ ಜಾಮೀನು ರದ್ದು

ಪೋಕ್ಸೋ ಪ್ರಕರಣದಲ್ಲಿ ವಚನಾನಂದ ಸ್ವಾಮಿಗೆ ಸೆಷನ್ಸ್ ಕೋರ್ಟ್ ನೀಡಿದ್ದ ನಿರೀಕ್ಷಣಾ ಜಾಮೀನನ್ನು ಹೈಕೋರ್ಟ್ ಗುರುವಾರ (ಜೂನ್ 25) ರದ್ದುಗೊಳಿಸಿದೆ. ಅಲ್ಲದೆ, ಸೆಷನ್ಸ್ ಕೋರ್ಟ್ ಜಾಮೀನು ನೀಡಿದ ರೀತಿಯ ಬಗ್ಗೆ ತೀವ್ರ ಕಳವಳ ಮತ್ತು...

ಎಸ್‌ಐಆರ್‌ಗೂ ಸರ್ಕಾರಿ ಸೌಲಭ್ಯಕ್ಕೂ ಲಿಂಕ್; ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ : ನಿಜವಾದ ಆತಂಕ

ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳದ ಹೊಸ ಸರ್ಕಾರ ನೀಡಿರುವ ಆದೇಶಗಳ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ 23 ಜೂನ್ 2026ರಂದು ನಿರಾಕರಿಸಿದೆ. ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ವಿಶೇಷ...

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...