Homeಮುಖಪುಟಪಾಕಿಸ್ತಾನ ಸಾರ್ವತ್ರಿಕ ಚುನಾವಣೆ: ಸರ್ಕಾರ ರಚಿಸಲು ವಿವಿಧ ಪಕ್ಷಗಳ ಕಸರತ್ತು

ಪಾಕಿಸ್ತಾನ ಸಾರ್ವತ್ರಿಕ ಚುನಾವಣೆ: ಸರ್ಕಾರ ರಚಿಸಲು ವಿವಿಧ ಪಕ್ಷಗಳ ಕಸರತ್ತು

- Advertisement -
- Advertisement -

ಪಾಕಿಸ್ತಾನದ ಸಂಸತ್‌ ಚುನಾವಣೆಯ ಫಲಿತಾಂಶ ಹೊರ ಬಿದ್ದಿದ್ದು, ಯಾವುದೇ ಪಕ್ಷ ಬಹುಮತ ಪಡೆಯದ ಹಿನ್ನೆಲೆ ಅಂತಂತ್ರ ಸ್ಥಿತಿ ನಿರ್ಮಾಣವಾಗಿದೆ. ಈ ಬೆನ್ನಲ್ಲೇ ವಿವಿಧ ಪಕ್ಷಗಳು ಸರ್ಕಾರ ರಚನೆಯ ಕಸರತ್ತು ಆರಂಭಿಸಿವೆ.

ಮಾಜಿ ಪ್ರಧಾನಿಗಳಾದ ನವಾಝ್ ಶರೀಫ್ ಮತ್ತು ಅವರ ಸಹೋದರ ಶೆಹಬಾಝ್ ಷರೀಫ್ ಅವರ ಪಕ್ಷ, ಪಾಕಿಸ್ತಾನ್ ಮುಸ್ಲಿಂ ಲೀಗ್-ನವಾಝ್ (ಪಿಎಂಎಲ್-ಎನ್), ಮತ್ತು ಬಿಲಾವಲ್ ಭುಟ್ಟೋ ಜರ್ದಾರಿ ಅವರ ಪಾಕಿಸ್ತಾನ್ ಪೀಪಲ್ಸ್ ಪಾರ್ಟಿ (ಪಿಪಿಪಿ) ಕೇಂದ್ರ ಮತ್ತು ಪಂಜಾಬ್‌ನಲ್ಲಿ ಸಮ್ಮಿಶ್ರ ಸರ್ಕಾರ ರಚಿಸಲು ಒಪ್ಪಿಕೊಂಡಿವೆ ಎಂದು ಜಿಯೋ ಟಿವಿ ಶನಿವಾರ ವರದಿ ಮಾಡಿದೆ.

ಈ ನಡುವೆ, 2023ರ ಮೇ 9 ರಂದು ಸೇನಾ ನೆಲೆಗಳ ಮೇಲಿನ ದಾಳಿಗೆ ಸಂಬಂಧಿಸಿದ 12 ಪ್ರಕರಣಗಳಲ್ಲಿ ಜೈಲಿನಲ್ಲಿರುವ ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರಿಗೆ ಶನಿವಾರ ಜಾಮೀನು ನೀಡಲಾಗಿದೆ. ಸರ್ಕಾರ ರಚಿಸಲು ನಮ್ಮ ಪಕ್ಷಕ್ಕೆ ಆಹ್ವಾನ ನೀಡಲಾಗಿದೆ ಎಂದು ಇಮ್ರಾನ್‌ ಖಾನ್ ಅವರ ಪಾಕಿಸ್ತಾನ್ ತೆಹ್ರೀಕ್-ಇ-ಇನ್ಸಾಫ್ (ಪಿಟಿಐ) ಪಕ್ಷದ ನಾಯಕರು ಹೇಳಿಕೊಂಡಿದ್ದಾರೆ.

ಪಾಕಿಸ್ತಾನ ಸಂಸತ್‌ನ 265 ಸ್ಥಾನಗಳಿಗೆ ಚುನಾವಣೆ ನಡೆದಿದ್ದು, ಸರಳ ಬಹುಮತಕ್ಕೆ ಯಾವುದೇ ಪಕ್ಷಕ್ಕೆ 133 ಸ್ಥಾನಗಳ ಅಗತ್ಯವಿದೆ. ಉಗ್ರರ ದಾಳಿ ಮತ್ತು ಚುನಾವಣಾ ಅಕ್ರಮ ಆರೋಪಗಳ ನಡುವೆ ಪಾಕಿಸ್ತಾನದಲ್ಲಿ ಗುರುವಾರ ಸಂಜೆ 5 ಗಂಟೆಗೆ ಮತದಾನ ಮುಕ್ತಾಯಗೊಂಡಿದೆ. ಸಂಸತ್ತಿನ ಚುನಾವಣೆಯ ನಂತರ, ಹೊಸದಾಗಿ ಆಯ್ಕೆಯಾದ ಸಂಸದರು ಪ್ರಧಾನಿಯನ್ನು ಆಯ್ಕೆ ಮಾಡುತ್ತಾರೆ. ಯಾವುದೇ ಪಕ್ಷವು ಬಹುಮತ ಪಡೆಯದಿದ್ದರೆ, ಹೆಚ್ಚಿನ ಸಂಖ್ಯೆಯ ಸ್ಥಾನಗಳನ್ನು ಪಡೆದಿರುವ ಪಕ್ಷ ಸಮ್ಮಿಶ್ರ ಸರ್ಕಾರ ರಚಿಸಬಹುದು.

ಸರ್ಕಾರ ರಚಿಸುವ ಸಲುವಾಗಿ ಪಿಪಿಪಿ, ಜೆಯುಐ-ಎಫ್, ಎಂಕ್ಯೂಎಂ, ಪಿಎಂಎಲ್‌-ಕ್ಯೂ ಮತ್ತು ಐಪಿಪಿ ಪಕ್ಷಗಳೊಂದಿಗೆ ಪಿಡಿಎಂ (ಪಾಕಿಸ್ತಾನ್ ಡೆಮಾಕ್ರಟಿಕ್ ಮೂವ್‌ಮೆಂಟ್) ಶೈಲಿಯ ಮೈತ್ರಿಕೂಟ ರಚಿಸುವ ಸುಳಿವನ್ನು ಪಾಕಿಸ್ತಾನ್ ಮುಸ್ಲಿಂ ಲೀಗ್-ನವಾಝ್ (ಪಿಎಂಎಲ್-ಎನ್) ನಾಯಕ ನವಾಝ್ ಶರೀಫ್ ನೀಡಿದ್ದಾರೆ. ಆದರೆ, ಸ್ವತಂತ್ರ ಅಭ್ಯರ್ಥಿಗಳ ಕುರಿತು ಅವರು ಏನು ಹೇಳಿಲ್ಲ.

ನಾವು ಸ್ವತಂತ್ರ ಅಭ್ಯರ್ಥಿಗಳನ್ನೂ ಸೇರಿಸಿಕೊಂಡು ಕೇಂದ್ರ ಮತ್ತು ಪಂಜಾಬ್‌ನಲ್ಲಿ ಸರ್ಕಾರ ರಚಿಸುತ್ತೇವೆ ಎಂದು ನವಾಝ್ ಶರೀಫ್ ಅವರ ಸಂಬಂಧಿ ಇಸಾಖ್ ದಾರ್ ಹೇಳಿದ್ದಾಗಿ ಡಾನ್ ವರದಿ ಮಾಡಿದೆ.

ಮತ್ತೊಂದೆಡೆ ಇಮ್ರಾನ್ ಖಾನ್ ಅವರ ಪಾಕಿಸ್ತಾನ್ ತೆಹ್ರೀಕ್-ಎ-ಇನ್ಸಾಫ್ (ಪಿಟಿಐ) ಅಧ್ಯಕ್ಷ ಬ್ಯಾರಿಸ್ಟರ್ ಗೋಹರ್ ಅಲಿ ಖಾನ್ ಅವರು ಕೇಂದ್ರದಲ್ಲಿ ನಮಗೆ ಹೆಚ್ಚಿನ ಸ್ಥಾನ ಬಂದಿದೆ. ಅಧ್ಯಕ್ಷ ಆರಿಫ್ ಅಲ್ವಿ ನಮ್ಮ ಪಕ್ಷವನ್ನು ಸರ್ಕಾರ ರಚಿಸಲು ಆಹ್ವಾನಿಸಲಿದ್ದಾರೆ ಎಂದು ಹೇಳಿರುವುದಾಗಿ ಜಿಯೋಟಿವಿ ಉಲ್ಲೇಖಿಸಿದೆ.

ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರು ಶನಿವಾರ “ವಿಜಯ ಭಾಷಣ” ಮಾಡಿದ್ದಾರೆ. ಏಕೆಂದರೆ, ಅವರ ಪಕ್ಷ ಬೆಂಬಲಿಸಿದ್ದ ಸ್ವತಂತ್ರ ಅಭ್ಯರ್ಥಿಗಳು ಚುನಾವಣಾ ಫಲಿತಾಂಶಗಳಲ್ಲಿ ಪ್ರಾಬಲ್ಯ ಸಾಧಿಸಿದ್ದಾರೆ. ತಮ್ಮ ಪಕ್ಷವಾದ ಪಿಟಿಐ ಚುನಾವಣೆಯಲ್ಲಿ ಹೆಚ್ಚು ಸ್ಥಾನಗಳನ್ನು ಗಳಿಸಿದ್ದು ಕೇಂದ್ರದಲ್ಲಿ ಸರ್ಕಾರ ರಚಿಸಲು ಪ್ರಯತ್ನಿಸಲಿದೆ ಎಂದು ಖಾನ್ ಅವರ ಹಿರಿಯ ಸಹಾಯಕ ಹೇಳಿರುವುದಾಗಿ ಶನಿವಾರ ರಾಯಿಟರ್ಸ್ ವರದಿ ಮಾಡಿದೆ.

ಅಲ್‌-ಜಝೀರಾ ವರದಿಯ ಪ್ರಕಾರ, ಚುನಾವಣೆ ನಡೆದಿರುವ 265 ಸ್ಥಾನಗಳ ಪೈಕಿ 10 ಸ್ಥಾನಗಳ ಫಲಿತಾಂಶ ಇನ್ನೂ ಬಂದಿಲ್ಲ. ಮತದಾನ ಮುಗಿದು ಸುಮಾರು 48 ಗಂಟೆಗಳು ಕಳೆದಿವೆ.

ಅಂತಿಮ ಫಲಿತಾಂಶವನ್ನು ಇಂದು ಮಧ್ಯರಾತ್ರಿಯೊಳಗೆ ಪ್ರಕಟಿಸುವಂತೆ ಇಮ್ರಾನ್ ಖಾನ್ ಅವರ ಪಾಕಿಸ್ತಾನ್ ತೆಹ್ರೀಕ್-ಎ-ಇನ್ಸಾಫ್ ಚುನಾವಣಾ ಆಯೋಗಕ್ಕೆ ಒತ್ತಾಯಿಸಿದೆ. ಇಲ್ಲದಿದ್ದರೆ ಫಲಿತಾಂಶ ಬಾಕಿಯಿರುವ ಪ್ರದೇಶಗಳಲ್ಲಿ ಪ್ರತಿಭಟನೆಗಳನ್ನು ಎದುರಿಸಬೇಕಾಗುತ್ತದೆ ಎಚ್ಚರಿಸಿದೆ.

ಪಾಕಿಸ್ತಾನದಲ್ಲಿ ಸಾರ್ವತ್ರಿಕ ಚುನಾವಣೆಯ ಕುರಿತು ಕಾಶ್ಮೀರದ ಡೆಮಾಕ್ರಟಿಕ್ ಪ್ರೋಗ್ರೆಸಿವ್ ಆಜಾದ್ ಪಾರ್ಟಿ (ಡಿಪಿಎಪಿ) ಅಧ್ಯಕ್ಷ ಗುಲಾಂ ನಬಿ ಆಜಾದ್ ಅವರು ಪ್ರತಿಕ್ರಿಯಿಸಿದ್ದು, “ದೇಶಗಳ ನಡುವಿನ ಉದ್ವಿಗ್ನತೆಗೆ ಪಾಕಿಸ್ತಾನವೇ ಕಾರಣ. ಆದರೆ, ಅಲ್ಲಿನ ನಾಗರಿಕರು ಮುಗ್ಧರು. ನಮ್ಮ ಹಣೆಬರಹದಲ್ಲಿ ಪ್ರಜಾಪ್ರಭುತ್ವವಿತ್ತು. ಅವರ ಹಣೆಬರಹದಲ್ಲಿ ಸರ್ವಾಧಿಕಾರಿಗಳಿದ್ದರು. ಅಲ್ಲಿನ ಸರ್ಕಾರಗಳನ್ನು ಸೇನೆ ನಡೆಸುತ್ತಿದೆ” ಎಂದಿದ್ದಾರೆ.

ಇದನ್ನೂ ಓದಿ : ಲೋಕಸಭೆ ಚುನಾವಣೆ: ಅಸಂವಿಧಾನಿಕ ‘CAA’ ಅಬ್ಬರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...