Homeಕ್ರೀಡೆಕ್ರಿಕೆಟ್2023ರಲ್ಲಿ ಭಾರತದಲ್ಲಿ ನಡೆಯುವ ಏಕದಿನ ವಿಶ್ವಕಪ್‌ ಕ್ರಿಕೆಟ್ ಬಹಿಷ್ಕರಿಸುವ ಎಚ್ಚರಿಕೆ ನೀಡಿದ ಪಾಕ್

2023ರಲ್ಲಿ ಭಾರತದಲ್ಲಿ ನಡೆಯುವ ಏಕದಿನ ವಿಶ್ವಕಪ್‌ ಕ್ರಿಕೆಟ್ ಬಹಿಷ್ಕರಿಸುವ ಎಚ್ಚರಿಕೆ ನೀಡಿದ ಪಾಕ್

- Advertisement -
- Advertisement -

2023ರ ಏಷ್ಯಾಕಪ್‌ ಪಂದ್ಯಾವಳಿ ನಡೆಯುವ ಪಾಕಿಸ್ತಾನಕ್ಕೆ ಭಾರತೀಯ ಕ್ರಿಕೆಟ್ ತಂಡವು ಪ್ರಯಾಣಿಸುವುದಿಲ್ಲ ಎಂದು ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಹೇಳಿಕೆ ಬೆನ್ನಲ್ಲೆ ಮುಂದಿನ ವರ್ಷ ಭಾರತದಲ್ಲಿ ನಡೆಯುವ ಏಕದಿನ ವಿಶ್ವಕಪ್ ನಲ್ಲಿ ಭಾಗವಹಿಸುವುದಿಲ್ಲ ಎಂದು ಪಾಕ್ ಕ್ರಿಕೆಟ್ ಮಂಡಳಿ ಹೇಳಿದೆ. ಹಾಗಾಗಿ ಎರಡೂ ದೇಶದ ಕ್ರಿಕೆಟ್ ಮಂಡಳಿಗಳ ನಡುವೆ ಭಿನ್ನಾಭಿಪ್ರಾಯ ತಲೆದೋರಿದೆ.

ಏಷ್ಯನ್ ಕ್ರಿಕೆಟ್ ಕೌನ್ಸಿಲ್ ಮುಖ್ಯಸ್ಥರೂ ಆಗಿರುವ ಜಯ್ ಶಾ “ಪಾಕಿಸ್ತಾನಕ್ಕೆ ಭಾರತ ತಂಡ ಪ್ರಯಾಣಿಸಲು ಸಾಧ್ಯವಿಲ್ಲ. ಹಾಗಾಗಿ ತಟಸ್ಥ ಸ್ಥಳದಲ್ಲಿ ಪಂದ್ಯಾವಳಿ ಆಯೋಜಿಸಬೇಕು” ಎಂಬ ಹೇಳೀಕೆ ಬೆನ್ನಲ್ಲೆ ಪಾಕ್ ಕ್ರಿಕೆಟ್ ಮಂಡಳಿ ಸಹ ಭಾರತದಲ್ಲಿ ನಡೆಯುವ ಏಕದಿನ ವಿಶ್ವಕಪ್‌ನಿಂದ ದೂರವುಳಿಯುವುದಾಗಿ ಬೆದರಿಕೆ ಒಡ್ಡಿದೆ.

ಪಾಕಿಸ್ತಾನ ಕ್ರಿಕೆಟ್ ಮಂಡಳಿ (ಪಿಸಿಬಿ) ಜಯ್ ಶಾ ಹೇಳಿಕೆಯು ಏಕಪಕ್ಷೀಯವಾಗಿದ್ದು ಅಂತರಾಷ್ಟ್ರೀಯ ಕ್ರಿಕೆಟ್ ಸಮುದಾಯವನ್ನು ವಿಭಜಿಸಬಹುದು ಎಂದು ಹೇಳಿದೆ. ಏಷ್ಯಾ ಕಪ್ ಅನ್ನು ಪಾಕಿಸ್ತಾನದಿಂದ ಹೊರಕ್ಕೆ ಸ್ಥಳಾಂತರಿಸುವುದು ಭಾರತದಲ್ಲಿ ವಿಶ್ವಕಪ್‌ನಂತಹ ಭವಿಷ್ಯದ ಘಟನೆಗಳ ಮೇಲೆ ಪರಿಣಾಮ ಬೀರಬಹುದು ಎಂದು ಅದು ಹೇಳಿದೆ.

ಈ ಕುರಿತು ಪ್ರತಿಕ್ರಿಯಿಸಿರುವ ಭಾರತದ ಕ್ರೀಡಾ ಸಚಿವ ಅನುರಾಗ್ ಠಾಕೂರ್, “ಮುಂದಿನ ವರ್ಷ ಭಾರತದಲ್ಲಿ ODI ವಿಶ್ವಕಪ್ ನಡೆಯಲಿದ್ದು, ಜಗತ್ತಿನ ಎಲ್ಲಾ ದೊಡ್ಡ ತಂಡಗಳು ಇದರಲ್ಲಿ ಪಾಲ್ಗೊಳ್ಳಲಿವೆ. ಏಕೆಂದರೆ ಯಾವುದೇ ಕ್ರೀಡೆಯಲ್ಲಿ ಭಾರತವನ್ನು ಕಡೆಗಣಿಸಲು ಸಾಧ್ಯವಿಲ್ಲ. ಭಾರತ ಕ್ರೀಡೆಗೆ ಅದರಲ್ಲೂ ಕ್ರಿಕೆಟ್‌ಗೆ ಸಾಕಷ್ಟು ಕೊಡುಗೆ ನೀಡಿದೆ. ಭಾರತವಿಲ್ಲದೇ ಕ್ರಿಕೆಟ್ ಎಂದರೇನು?” ಎಂದು ಪ್ರಶ್ನಿಸಿದ್ದಾರೆ.

“ಪಾಕಿಸ್ತಾನಕ್ಕೆ ಏಷ್ಯಾಕಪ್‌ಗಾಗಿ ಭಾರತ ಕ್ರಿಕೆಟ್ ತಂಡದ ಪ್ರಯಾಣದ ಬಗ್ಗೆ ಗೃಹ ಸಚಿವಾಲಯ ನಿರ್ಧರಿಸುತ್ತದೆ. ಸಾಧ್ಯತೆಗಳು ಯಾವಾಗಲೂ ಇರುತ್ತವೆ. COVID-19 ಇರುತ್ತದೆ ಎಂದು ಯಾರು ಭಾವಿಸಿದ್ದರು? ಏನು ಬೇಕಾದರೂ ಆಗಬಹುದು ಆದರೆ ಈಗ ಸಾಧ್ಯತೆಗಳು ಹೆಚ್ಚಿಲ್ಲ. ಇದು ಗೃಹ ಸಚಿವಾಲಯವು ತೆಗೆದುಕೊಳ್ಳುವ ನಿರ್ಧಾರವಾಗಿದೆ. ಒಟ್ಟಾರೆ, ಆಟಗಾರರ ಸುರಕ್ಷತೆ ಮತ್ತು ಭದ್ರತೆಯು ಒಂದು ಪ್ರಮುಖ ವಿಷಯವಾಗಿದೆ” ಎಂದಿದ್ದಾರೆ.

ಕಳೆದ ವರ್ಷದಿಂದ ಪಾಕಿಸ್ತಾನ ತಂಡವು ಮಹತ್ವದ ತಂಡಗಳೊಂದಿಗೆ ದ್ವಿಪಕ್ಷೀಯ ಸರಣಿಗಳನ್ನು ಆಯೋಜಿಸುತ್ತಿದೆ. ಇಂಗ್ಲೆಂಡ್ ಮತ್ತು ಆಸ್ಟ್ರೇಲಿಯಾ ತಂಡಗಳು ಪಾಕ್‌ಗೆ ತೆರಳಿ ಪಂದ್ಯಗಳಾಡಿವೆ. ಆದರೆ ಭಾರತ ತಂಡ ಪಾಕಿಸ್ತಾನಕ್ಕೆ ತೆರಳಿ ಆಡವಾಡಿದ್ದು 2005ರಲ್ಲಿಯೇ ಕೊನೆಯಾಗಿದೆ. ಆಗ ರಾಹುಲ್ ದ್ರಾವಿಡ್ ನೇತೃತ್ವದ ತಂಡ ಪಾಕ್‌ಗೆ ಪ್ರಯಾಣ ಬೆಳೆಸಿತ್ತು. ಪಾಕಿಸ್ತಾನ ತಂಡವು 2012-13ರಲ್ಲಿ ಮೂರು T20Iಗಳು ಮತ್ತು ಮೂರು ಏಕದಿನ ಪಂದ್ಯಗಳಿಗಾಗಿ ಭಾರತಕ್ಕೆ ಪ್ರವಾಸ ಮಾಡಿದ್ದೆ ಕೊನೆಯಾಗಿದೆ.

ಈ ಎಲ್ಲಾ ಗದ್ದಲಗಳ ನಡುವೆ ಇದೇ ಅಕ್ಟೋಬರ್ 23ರ ಭಾನುವಾರ ಟಿ20 ವಿಶ್ವಕಪ್‌ನಲ್ಲಿ ಆಸ್ಟ್ರೇಲಿಯಾದ ಮೆಲ್ಬೋರ್ನ್‌ನಲ್ಲಿ ಭಾರತ-ಪಾಕ್ ತಂಡಗಳು ಪರಸ್ಪರ ಎದುರಾಗುತ್ತಿವೆ. ಅಭಿಮಾನಿಗಳು ಆ ಪಂದ್ಯಕ್ಕಾಗಿ ಕಾತುರರಾಗಿದ್ದಾರೆ.

ಇದನ್ನೂ ಓದಿ; 2023ರ ಏಷ್ಯಾ ಕಪ್‌‌ಗಾಗಿ ಭಾರತ ತಂಡ ಪಾಕಿಸ್ತಾನಕ್ಕೆ ಪ್ರಯಾಣಿಸುವುದಿಲ್ಲ: ಜಯ್ ಶಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...