Homeಕ್ರೀಡೆಕ್ರಿಕೆಟ್2023ರಲ್ಲಿ ಭಾರತದಲ್ಲಿ ನಡೆಯುವ ಏಕದಿನ ವಿಶ್ವಕಪ್‌ ಕ್ರಿಕೆಟ್ ಬಹಿಷ್ಕರಿಸುವ ಎಚ್ಚರಿಕೆ ನೀಡಿದ ಪಾಕ್

2023ರಲ್ಲಿ ಭಾರತದಲ್ಲಿ ನಡೆಯುವ ಏಕದಿನ ವಿಶ್ವಕಪ್‌ ಕ್ರಿಕೆಟ್ ಬಹಿಷ್ಕರಿಸುವ ಎಚ್ಚರಿಕೆ ನೀಡಿದ ಪಾಕ್

- Advertisement -
- Advertisement -

2023ರ ಏಷ್ಯಾಕಪ್‌ ಪಂದ್ಯಾವಳಿ ನಡೆಯುವ ಪಾಕಿಸ್ತಾನಕ್ಕೆ ಭಾರತೀಯ ಕ್ರಿಕೆಟ್ ತಂಡವು ಪ್ರಯಾಣಿಸುವುದಿಲ್ಲ ಎಂದು ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಹೇಳಿಕೆ ಬೆನ್ನಲ್ಲೆ ಮುಂದಿನ ವರ್ಷ ಭಾರತದಲ್ಲಿ ನಡೆಯುವ ಏಕದಿನ ವಿಶ್ವಕಪ್ ನಲ್ಲಿ ಭಾಗವಹಿಸುವುದಿಲ್ಲ ಎಂದು ಪಾಕ್ ಕ್ರಿಕೆಟ್ ಮಂಡಳಿ ಹೇಳಿದೆ. ಹಾಗಾಗಿ ಎರಡೂ ದೇಶದ ಕ್ರಿಕೆಟ್ ಮಂಡಳಿಗಳ ನಡುವೆ ಭಿನ್ನಾಭಿಪ್ರಾಯ ತಲೆದೋರಿದೆ.

ಏಷ್ಯನ್ ಕ್ರಿಕೆಟ್ ಕೌನ್ಸಿಲ್ ಮುಖ್ಯಸ್ಥರೂ ಆಗಿರುವ ಜಯ್ ಶಾ “ಪಾಕಿಸ್ತಾನಕ್ಕೆ ಭಾರತ ತಂಡ ಪ್ರಯಾಣಿಸಲು ಸಾಧ್ಯವಿಲ್ಲ. ಹಾಗಾಗಿ ತಟಸ್ಥ ಸ್ಥಳದಲ್ಲಿ ಪಂದ್ಯಾವಳಿ ಆಯೋಜಿಸಬೇಕು” ಎಂಬ ಹೇಳೀಕೆ ಬೆನ್ನಲ್ಲೆ ಪಾಕ್ ಕ್ರಿಕೆಟ್ ಮಂಡಳಿ ಸಹ ಭಾರತದಲ್ಲಿ ನಡೆಯುವ ಏಕದಿನ ವಿಶ್ವಕಪ್‌ನಿಂದ ದೂರವುಳಿಯುವುದಾಗಿ ಬೆದರಿಕೆ ಒಡ್ಡಿದೆ.

ಪಾಕಿಸ್ತಾನ ಕ್ರಿಕೆಟ್ ಮಂಡಳಿ (ಪಿಸಿಬಿ) ಜಯ್ ಶಾ ಹೇಳಿಕೆಯು ಏಕಪಕ್ಷೀಯವಾಗಿದ್ದು ಅಂತರಾಷ್ಟ್ರೀಯ ಕ್ರಿಕೆಟ್ ಸಮುದಾಯವನ್ನು ವಿಭಜಿಸಬಹುದು ಎಂದು ಹೇಳಿದೆ. ಏಷ್ಯಾ ಕಪ್ ಅನ್ನು ಪಾಕಿಸ್ತಾನದಿಂದ ಹೊರಕ್ಕೆ ಸ್ಥಳಾಂತರಿಸುವುದು ಭಾರತದಲ್ಲಿ ವಿಶ್ವಕಪ್‌ನಂತಹ ಭವಿಷ್ಯದ ಘಟನೆಗಳ ಮೇಲೆ ಪರಿಣಾಮ ಬೀರಬಹುದು ಎಂದು ಅದು ಹೇಳಿದೆ.

ಈ ಕುರಿತು ಪ್ರತಿಕ್ರಿಯಿಸಿರುವ ಭಾರತದ ಕ್ರೀಡಾ ಸಚಿವ ಅನುರಾಗ್ ಠಾಕೂರ್, “ಮುಂದಿನ ವರ್ಷ ಭಾರತದಲ್ಲಿ ODI ವಿಶ್ವಕಪ್ ನಡೆಯಲಿದ್ದು, ಜಗತ್ತಿನ ಎಲ್ಲಾ ದೊಡ್ಡ ತಂಡಗಳು ಇದರಲ್ಲಿ ಪಾಲ್ಗೊಳ್ಳಲಿವೆ. ಏಕೆಂದರೆ ಯಾವುದೇ ಕ್ರೀಡೆಯಲ್ಲಿ ಭಾರತವನ್ನು ಕಡೆಗಣಿಸಲು ಸಾಧ್ಯವಿಲ್ಲ. ಭಾರತ ಕ್ರೀಡೆಗೆ ಅದರಲ್ಲೂ ಕ್ರಿಕೆಟ್‌ಗೆ ಸಾಕಷ್ಟು ಕೊಡುಗೆ ನೀಡಿದೆ. ಭಾರತವಿಲ್ಲದೇ ಕ್ರಿಕೆಟ್ ಎಂದರೇನು?” ಎಂದು ಪ್ರಶ್ನಿಸಿದ್ದಾರೆ.

“ಪಾಕಿಸ್ತಾನಕ್ಕೆ ಏಷ್ಯಾಕಪ್‌ಗಾಗಿ ಭಾರತ ಕ್ರಿಕೆಟ್ ತಂಡದ ಪ್ರಯಾಣದ ಬಗ್ಗೆ ಗೃಹ ಸಚಿವಾಲಯ ನಿರ್ಧರಿಸುತ್ತದೆ. ಸಾಧ್ಯತೆಗಳು ಯಾವಾಗಲೂ ಇರುತ್ತವೆ. COVID-19 ಇರುತ್ತದೆ ಎಂದು ಯಾರು ಭಾವಿಸಿದ್ದರು? ಏನು ಬೇಕಾದರೂ ಆಗಬಹುದು ಆದರೆ ಈಗ ಸಾಧ್ಯತೆಗಳು ಹೆಚ್ಚಿಲ್ಲ. ಇದು ಗೃಹ ಸಚಿವಾಲಯವು ತೆಗೆದುಕೊಳ್ಳುವ ನಿರ್ಧಾರವಾಗಿದೆ. ಒಟ್ಟಾರೆ, ಆಟಗಾರರ ಸುರಕ್ಷತೆ ಮತ್ತು ಭದ್ರತೆಯು ಒಂದು ಪ್ರಮುಖ ವಿಷಯವಾಗಿದೆ” ಎಂದಿದ್ದಾರೆ.

ಕಳೆದ ವರ್ಷದಿಂದ ಪಾಕಿಸ್ತಾನ ತಂಡವು ಮಹತ್ವದ ತಂಡಗಳೊಂದಿಗೆ ದ್ವಿಪಕ್ಷೀಯ ಸರಣಿಗಳನ್ನು ಆಯೋಜಿಸುತ್ತಿದೆ. ಇಂಗ್ಲೆಂಡ್ ಮತ್ತು ಆಸ್ಟ್ರೇಲಿಯಾ ತಂಡಗಳು ಪಾಕ್‌ಗೆ ತೆರಳಿ ಪಂದ್ಯಗಳಾಡಿವೆ. ಆದರೆ ಭಾರತ ತಂಡ ಪಾಕಿಸ್ತಾನಕ್ಕೆ ತೆರಳಿ ಆಡವಾಡಿದ್ದು 2005ರಲ್ಲಿಯೇ ಕೊನೆಯಾಗಿದೆ. ಆಗ ರಾಹುಲ್ ದ್ರಾವಿಡ್ ನೇತೃತ್ವದ ತಂಡ ಪಾಕ್‌ಗೆ ಪ್ರಯಾಣ ಬೆಳೆಸಿತ್ತು. ಪಾಕಿಸ್ತಾನ ತಂಡವು 2012-13ರಲ್ಲಿ ಮೂರು T20Iಗಳು ಮತ್ತು ಮೂರು ಏಕದಿನ ಪಂದ್ಯಗಳಿಗಾಗಿ ಭಾರತಕ್ಕೆ ಪ್ರವಾಸ ಮಾಡಿದ್ದೆ ಕೊನೆಯಾಗಿದೆ.

ಈ ಎಲ್ಲಾ ಗದ್ದಲಗಳ ನಡುವೆ ಇದೇ ಅಕ್ಟೋಬರ್ 23ರ ಭಾನುವಾರ ಟಿ20 ವಿಶ್ವಕಪ್‌ನಲ್ಲಿ ಆಸ್ಟ್ರೇಲಿಯಾದ ಮೆಲ್ಬೋರ್ನ್‌ನಲ್ಲಿ ಭಾರತ-ಪಾಕ್ ತಂಡಗಳು ಪರಸ್ಪರ ಎದುರಾಗುತ್ತಿವೆ. ಅಭಿಮಾನಿಗಳು ಆ ಪಂದ್ಯಕ್ಕಾಗಿ ಕಾತುರರಾಗಿದ್ದಾರೆ.

ಇದನ್ನೂ ಓದಿ; 2023ರ ಏಷ್ಯಾ ಕಪ್‌‌ಗಾಗಿ ಭಾರತ ತಂಡ ಪಾಕಿಸ್ತಾನಕ್ಕೆ ಪ್ರಯಾಣಿಸುವುದಿಲ್ಲ: ಜಯ್ ಶಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...