Homeಅಂತರಾಷ್ಟ್ರೀಯಪಾಕಿಸ್ತಾನ: ಪತನದ ಹಾದಿಯಲ್ಲಿರುವ ಇಮ್ರಾನ್‌ ಖಾನ್ ಸರ್ಕಾರ; ಏಪ್ರಿಲ್ 3 ರಂದು ಅವಿಶ್ವಾಸ ನಿರ್ಣಯ ಮಂಡನೆ

ಪಾಕಿಸ್ತಾನ: ಪತನದ ಹಾದಿಯಲ್ಲಿರುವ ಇಮ್ರಾನ್‌ ಖಾನ್ ಸರ್ಕಾರ; ಏಪ್ರಿಲ್ 3 ರಂದು ಅವಿಶ್ವಾಸ ನಿರ್ಣಯ ಮಂಡನೆ

- Advertisement -
- Advertisement -

ಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯದ ಮೇಲಿನ ಮತದಾನ ಏಪ್ರಿಲ್ 3 ರಂದು ನಡೆಯಲಿದೆ ಎಂದು ಆಂತರಿಕ ಸಚಿವ ಶೇಖ್ ರಶೀದ್ ಮಂಗಳವಾರ ತಿಳಿಸಿದ್ದಾರೆ. ಪಾಕ್‌ ರಾಷ್ಟ್ರೀಯ ಅಸೆಂಬ್ಲಿಯ ಅಧಿವೇಶನದಲ್ಲಿ ಸೋಮವಾರ ಇಮ್ರಾನ್‌ ವಿರುದ್ಧ ವಿರೋಧ ಪಕ್ಷಗಳು ಅವಿಶ್ವಾಸ ನಿರ್ಣಯವನ್ನು ಸಲ್ಲಿಸಿವೆ.

“ಮಾರ್ಚ್ 31 ರಂದು ಅವಿಶ್ವಾಸ ನಿರ್ಣಯದ ಮೇಲೆ ಚರ್ಚೆ ನಡೆಯಲಿದೆ. ನಂತರ ಏಪ್ರಿಲ್ 3 ರಂದು ಮತದಾನ ನಡೆಯಲಿದೆ” ಎಂದು ಸಚಿವ ಶೇಖ್ ರಶೀದ್ ಹೇಳಿದ್ದು, ಇದರಲ್ಲಿ ಇಮ್ರಾನ್‌ ಖಾನ್ ಅವರು ವಿಜಯಶಾಲಿಯಾಗುತ್ತಾರೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹50 ₹100 ₹500 ₹1000 Others
ಈ ಹಿಂದೆ ದೂರವಾಗಿದ್ದ ಮಿತ್ರಪಕ್ಷವಾಗಿದ್ದ ಪಾಕಿಸ್ತಾನ್ ಮುಸ್ಲಿಂ ಲೀಗ್-ಕ್ವೈಡ್ (ಪಿಎಂಎಲ್-ಕ್ಯೂ) ಇಮ್ರಾನ್ ಖಾನ್‌ ಸರ್ಕಾರವನ್ನು ಬೆಂಬಲಿಸಲು ಒಪ್ಪಿಕೊಂಡಿದೆ. ಅದರಂತೆಯೆ, ದೂರವಾಗಿರುವ ಎಲ್ಲಾ ಮಿತ್ರಪಕ್ಷಗಳು ಹಿಂತಿರುಗುತ್ತವೆ ಎಂದು ಅವರು ಭವಿಷ್ಯ ನುಡಿದಿದ್ದಾರೆ.

ಆಡಳಿತಾರೂಢ ಪಾಕಿಸ್ತಾನ್ ತೆಹ್ರೀಕ್-ಎ-ಇನ್ಸಾಫ್ (ಪಿಟಿಐ) ಮತ್ತು ವಿರೋಧ ಪಕ್ಷಗಳು ಭಾನುವಾರ ಮತ್ತು ಸೋಮವಾರ ಪ್ರತ್ಯೇಕ ರಾಜಕೀಯ ರ್‍ಯಾಲಿಗಳನ್ನು ನಡೆಸಿದೆ. ಕನಿಷ್ಠ ನಾಲ್ವರು ಭಯೋತ್ಪಾದಕರನ್ನು ಭದ್ರತಾ ಸಂಸ್ಥೆಗಳು ಬಂಧಿಸಿದೆ ಎಂದು ಸಚಿವ ಶೇಖ್ ರಶೀದ್ ಹೇಳಿದ್ದು, ರಾಜಧಾನಿಯನ್ನು ದೊಡ್ಡ ದುರಂತದಿಂದ ರಕ್ಷಿಸಲಾಗಿದೆ ಎಂದು ಪ್ರತಿಪಾಸಿದ್ದಾರೆ.

ಇದನ್ನೂ ಓದಿ: ಕಮಿಷನ್ ಸರ್ವೇ ಸಾಮಾನ್ಯ ವಿಚಾರ; ಇದಕ್ಕೆ ದೊಡ್ಡ ಚರ್ಚೆ ಯಾಕೆ: ಹೆಚ್‌.ಡಿ. ಕುಮಾರಸ್ವಾಮಿ

ಕಳೆದ ಮಧ್ಯರಾತ್ರಿ ನಡೆದ ಶಕ್ತಿ ಪ್ರದರ್ಶನದಲ್ಲಿ ಪಾಕಿಸ್ತಾನದ ವಿರೋಧ ಪಕ್ಷಗಳ ಮೈತ್ರಿಯು ಪ್ರಧಾನ ಮಂತ್ರಿ ಇಮ್ರಾನ್‌ ಖಾನ್ ಅವರ ಸಂಕಷ್ಟದಲ್ಲಿರುವ ಸರ್ಕಾರವನ್ನು ಉರುಳಿಸಲು ಪ್ರತಿಜ್ಞೆ ಮಾಡಿವೆ. ಇದರ ನಂತರ ಸರ್ಕಾರ ಈ ಹೇಳಿಕೆಯನ್ನು ನೀಡಿದೆ.

ಪಾಕಿಸ್ತಾನ್ ಮುಸ್ಲಿಂ ಲೀಗ್ ನವಾಜ್ (ಪಿಎಂಎಲ್-ಎನ್) ಮತ್ತು ಜಮಿಯತ್ ಉಲೇಮಾ-ಎ-ಇಸ್ಲಾಂ ಫಝಲ್ (ಜೆಯುಐ-ಐ) ಸೇರಿದಂತೆ ಪಾಕಿಸ್ತಾನ್ ಡೆಮಾಕ್ರಟಿಕ್ ಮೂವ್‌ಮೆಂಟ್ (ಪಿಡಿಎಂ) ಇಸ್ಲಾಮಾಬಾದ್‌ನ ಶ್ರೀನಗರ ಹೆದ್ದಾರಿಯಲ್ಲಿ ದೊಡ್ಡ ರ್‍ಯಾಲಿಯನ್ನು ಆಯೋಜಿಸಿದೆ.

342 ಸದಸ್ಯರಿರುವ ಪಾಕ್‌ ರಾಷ್ಟ್ರೀಯ ಅಸೆಂಬ್ಲಿಯಲ್ಲಿ ಇಮ್ರಾನ್ ನೇತೃತ್ವದ ಪಾಕಿಸ್ತಾನ್ ತೆಹ್ರೀಕ್-ಎ-ಇನ್ಸಾಫ್ 155 ಸದಸ್ಯರನ್ನು ಹೊಂದಿದ್ದು, ತನ್ನ ಅಧಿಕಾರವನ್ನು ಉಳಿಸಿಕೊಳ್ಳಲು ಕನಿಷ್ಠ 172 ಸಂಸದರ ಅಗತ್ಯವಿದೆ.

ಈ ಮಧ್ಯೆ, ಪಾಕಿಸ್ತಾನದ ವಿದೇಶಾಂಗ ಸಚಿವ ಶಾ ಮಹಮೂದ್ ಖುರೇಷಿ ಮಂಗಳವಾರ ಚೀನಾ ಪ್ರವಾಸ ಕೈಗೊಂಡಿದ್ದು, ಯುದ್ಧಪೀಡಿತ ಅಫ್ಘಾನಿಸ್ತಾನದ ಪ್ರಾದೇಶಿಕ ಸಭೆಯಲ್ಲಿ ಭಾಗವಹಿಸಲು ತೆರಳಿದ್ದಾರೆ. ಪಾಕಿಸ್ತಾನದ ವಿದೇಶಾಂಗ ಕಚೇರಿ (ಎಫ್‌ಒ) ಪ್ರಕಾರ ಅಫ್ಘಾನಿಸ್ತಾನದ ನೆರೆಯ ರಾಷ್ಟ್ರಗಳ ವಿದೇಶಾಂಗ ಮಂತ್ರಿಗಳ ಮೂರನೇ ಸಭೆ ಮಾರ್ಚ್ 29 ರಿಂದ 31 ರವರೆಗೆ ನಡೆಯಲಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹50 ₹100 ₹500 ₹1000 Others

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...