Homeಅಂತರಾಷ್ಟ್ರೀಯಪಾಕಿಸ್ತಾನ: ಪತನದ ಹಾದಿಯಲ್ಲಿರುವ ಇಮ್ರಾನ್‌ ಖಾನ್ ಸರ್ಕಾರ; ಏಪ್ರಿಲ್ 3 ರಂದು ಅವಿಶ್ವಾಸ ನಿರ್ಣಯ ಮಂಡನೆ

ಪಾಕಿಸ್ತಾನ: ಪತನದ ಹಾದಿಯಲ್ಲಿರುವ ಇಮ್ರಾನ್‌ ಖಾನ್ ಸರ್ಕಾರ; ಏಪ್ರಿಲ್ 3 ರಂದು ಅವಿಶ್ವಾಸ ನಿರ್ಣಯ ಮಂಡನೆ

- Advertisement -
- Advertisement -

ಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯದ ಮೇಲಿನ ಮತದಾನ ಏಪ್ರಿಲ್ 3 ರಂದು ನಡೆಯಲಿದೆ ಎಂದು ಆಂತರಿಕ ಸಚಿವ ಶೇಖ್ ರಶೀದ್ ಮಂಗಳವಾರ ತಿಳಿಸಿದ್ದಾರೆ. ಪಾಕ್‌ ರಾಷ್ಟ್ರೀಯ ಅಸೆಂಬ್ಲಿಯ ಅಧಿವೇಶನದಲ್ಲಿ ಸೋಮವಾರ ಇಮ್ರಾನ್‌ ವಿರುದ್ಧ ವಿರೋಧ ಪಕ್ಷಗಳು ಅವಿಶ್ವಾಸ ನಿರ್ಣಯವನ್ನು ಸಲ್ಲಿಸಿವೆ.

“ಮಾರ್ಚ್ 31 ರಂದು ಅವಿಶ್ವಾಸ ನಿರ್ಣಯದ ಮೇಲೆ ಚರ್ಚೆ ನಡೆಯಲಿದೆ. ನಂತರ ಏಪ್ರಿಲ್ 3 ರಂದು ಮತದಾನ ನಡೆಯಲಿದೆ” ಎಂದು ಸಚಿವ ಶೇಖ್ ರಶೀದ್ ಹೇಳಿದ್ದು, ಇದರಲ್ಲಿ ಇಮ್ರಾನ್‌ ಖಾನ್ ಅವರು ವಿಜಯಶಾಲಿಯಾಗುತ್ತಾರೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹50 ₹100 ₹500 ₹1000 Others
ಈ ಹಿಂದೆ ದೂರವಾಗಿದ್ದ ಮಿತ್ರಪಕ್ಷವಾಗಿದ್ದ ಪಾಕಿಸ್ತಾನ್ ಮುಸ್ಲಿಂ ಲೀಗ್-ಕ್ವೈಡ್ (ಪಿಎಂಎಲ್-ಕ್ಯೂ) ಇಮ್ರಾನ್ ಖಾನ್‌ ಸರ್ಕಾರವನ್ನು ಬೆಂಬಲಿಸಲು ಒಪ್ಪಿಕೊಂಡಿದೆ. ಅದರಂತೆಯೆ, ದೂರವಾಗಿರುವ ಎಲ್ಲಾ ಮಿತ್ರಪಕ್ಷಗಳು ಹಿಂತಿರುಗುತ್ತವೆ ಎಂದು ಅವರು ಭವಿಷ್ಯ ನುಡಿದಿದ್ದಾರೆ.

ಆಡಳಿತಾರೂಢ ಪಾಕಿಸ್ತಾನ್ ತೆಹ್ರೀಕ್-ಎ-ಇನ್ಸಾಫ್ (ಪಿಟಿಐ) ಮತ್ತು ವಿರೋಧ ಪಕ್ಷಗಳು ಭಾನುವಾರ ಮತ್ತು ಸೋಮವಾರ ಪ್ರತ್ಯೇಕ ರಾಜಕೀಯ ರ್‍ಯಾಲಿಗಳನ್ನು ನಡೆಸಿದೆ. ಕನಿಷ್ಠ ನಾಲ್ವರು ಭಯೋತ್ಪಾದಕರನ್ನು ಭದ್ರತಾ ಸಂಸ್ಥೆಗಳು ಬಂಧಿಸಿದೆ ಎಂದು ಸಚಿವ ಶೇಖ್ ರಶೀದ್ ಹೇಳಿದ್ದು, ರಾಜಧಾನಿಯನ್ನು ದೊಡ್ಡ ದುರಂತದಿಂದ ರಕ್ಷಿಸಲಾಗಿದೆ ಎಂದು ಪ್ರತಿಪಾಸಿದ್ದಾರೆ.

ಇದನ್ನೂ ಓದಿ: ಕಮಿಷನ್ ಸರ್ವೇ ಸಾಮಾನ್ಯ ವಿಚಾರ; ಇದಕ್ಕೆ ದೊಡ್ಡ ಚರ್ಚೆ ಯಾಕೆ: ಹೆಚ್‌.ಡಿ. ಕುಮಾರಸ್ವಾಮಿ

ಕಳೆದ ಮಧ್ಯರಾತ್ರಿ ನಡೆದ ಶಕ್ತಿ ಪ್ರದರ್ಶನದಲ್ಲಿ ಪಾಕಿಸ್ತಾನದ ವಿರೋಧ ಪಕ್ಷಗಳ ಮೈತ್ರಿಯು ಪ್ರಧಾನ ಮಂತ್ರಿ ಇಮ್ರಾನ್‌ ಖಾನ್ ಅವರ ಸಂಕಷ್ಟದಲ್ಲಿರುವ ಸರ್ಕಾರವನ್ನು ಉರುಳಿಸಲು ಪ್ರತಿಜ್ಞೆ ಮಾಡಿವೆ. ಇದರ ನಂತರ ಸರ್ಕಾರ ಈ ಹೇಳಿಕೆಯನ್ನು ನೀಡಿದೆ.

ಪಾಕಿಸ್ತಾನ್ ಮುಸ್ಲಿಂ ಲೀಗ್ ನವಾಜ್ (ಪಿಎಂಎಲ್-ಎನ್) ಮತ್ತು ಜಮಿಯತ್ ಉಲೇಮಾ-ಎ-ಇಸ್ಲಾಂ ಫಝಲ್ (ಜೆಯುಐ-ಐ) ಸೇರಿದಂತೆ ಪಾಕಿಸ್ತಾನ್ ಡೆಮಾಕ್ರಟಿಕ್ ಮೂವ್‌ಮೆಂಟ್ (ಪಿಡಿಎಂ) ಇಸ್ಲಾಮಾಬಾದ್‌ನ ಶ್ರೀನಗರ ಹೆದ್ದಾರಿಯಲ್ಲಿ ದೊಡ್ಡ ರ್‍ಯಾಲಿಯನ್ನು ಆಯೋಜಿಸಿದೆ.

342 ಸದಸ್ಯರಿರುವ ಪಾಕ್‌ ರಾಷ್ಟ್ರೀಯ ಅಸೆಂಬ್ಲಿಯಲ್ಲಿ ಇಮ್ರಾನ್ ನೇತೃತ್ವದ ಪಾಕಿಸ್ತಾನ್ ತೆಹ್ರೀಕ್-ಎ-ಇನ್ಸಾಫ್ 155 ಸದಸ್ಯರನ್ನು ಹೊಂದಿದ್ದು, ತನ್ನ ಅಧಿಕಾರವನ್ನು ಉಳಿಸಿಕೊಳ್ಳಲು ಕನಿಷ್ಠ 172 ಸಂಸದರ ಅಗತ್ಯವಿದೆ.

ಈ ಮಧ್ಯೆ, ಪಾಕಿಸ್ತಾನದ ವಿದೇಶಾಂಗ ಸಚಿವ ಶಾ ಮಹಮೂದ್ ಖುರೇಷಿ ಮಂಗಳವಾರ ಚೀನಾ ಪ್ರವಾಸ ಕೈಗೊಂಡಿದ್ದು, ಯುದ್ಧಪೀಡಿತ ಅಫ್ಘಾನಿಸ್ತಾನದ ಪ್ರಾದೇಶಿಕ ಸಭೆಯಲ್ಲಿ ಭಾಗವಹಿಸಲು ತೆರಳಿದ್ದಾರೆ. ಪಾಕಿಸ್ತಾನದ ವಿದೇಶಾಂಗ ಕಚೇರಿ (ಎಫ್‌ಒ) ಪ್ರಕಾರ ಅಫ್ಘಾನಿಸ್ತಾನದ ನೆರೆಯ ರಾಷ್ಟ್ರಗಳ ವಿದೇಶಾಂಗ ಮಂತ್ರಿಗಳ ಮೂರನೇ ಸಭೆ ಮಾರ್ಚ್ 29 ರಿಂದ 31 ರವರೆಗೆ ನಡೆಯಲಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹50 ₹100 ₹500 ₹1000 Others

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...