Homeಮುಖಪುಟಪಾಕಿಸ್ತಾನ ನಂಟು : ಸಿಎಂ ಶರ್ಮಾ ಆರೋಪ ನಿರಾಧಾರ, ಸಿ-ಗ್ರೇಡ್ ಸಿನಿಮಾ ಎಂದ ಗೌರವ್ ಗೊಗೊಯ್

ಪಾಕಿಸ್ತಾನ ನಂಟು : ಸಿಎಂ ಶರ್ಮಾ ಆರೋಪ ನಿರಾಧಾರ, ಸಿ-ಗ್ರೇಡ್ ಸಿನಿಮಾ ಎಂದ ಗೌರವ್ ಗೊಗೊಯ್

- Advertisement -
- Advertisement -

ತಮಗೂ ಪಾಕಿಸ್ತಾನಕ್ಕೂ ಸಂಬಂಧವಿದೆ ಎಂಬ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ಅವರ ಆರೋಪಗಳನ್ನು ಅಸ್ಸಾಂ ಕಾಂಗ್ರೆಸ್ ಅಧ್ಯಕ್ಷ ಗೌರವ್ ಗೊಗೊಯ್ ತಳ್ಳಿಹಾಕಿದ್ದು, ಎಸ್‌ಐಟಿ ವರದಿಯು ಕಳೆದ ಆರು ತಿಂಗಳಿನಿಂದ ಮುಖ್ಯಮಂತ್ರಿ ಬಳಿಯೇ ಇದೆ. ಆದರೆ, ಅದರಲ್ಲಿ ತನ್ನ ವಿರುದ್ದ ಯಾವುದೇ ಪುರಾವೆಗಳು ಇಲ್ಲದ ಕಾರಣ ಬಹಿರಂಗಪಡಿಸುತ್ತಿಲ್ಲ ಎಂದಿದ್ದಾರೆ.

ಗುವಾಹಟಿಯಲ್ಲಿ ಸೋಮವಾರ (ಫೆ.9) ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಗೊಗೊಯ್, “ನನ್ನ ಪತ್ನಿ 2013ರಲ್ಲಿ ಕೆಲಸದ ನಿಮಿತ್ತ ಪಾಕಿಸ್ತಾನಕ್ಕೆ ಪ್ರಯಾಣ ಬೆಳೆಸಿದ್ದರು. ಆ ವರ್ಷದ ಡಿಸೆಂಬರ್‌ನಲ್ಲಿ 10 ದಿನಗಳ ಭೇಟಿಯ ಸಮಯದಲ್ಲಿ ನಾನು ಅವರ ಜೊತೆಗಿದ್ದೆ. ಈ ವಿಷಯದ ತನಿಖೆ ನಡೆಸುತ್ತಿದ್ದ ಎಸ್‌ಐಟಿ ಈ ಬಗ್ಗೆ ತನ್ನನ್ನು ಎಂದಿಗೂ ಪ್ರಶ್ನಿಸಿಲ್ಲ” ಎಂದು ಹೇಳಿದ್ದಾರೆ.

“ಸಿಎಂ ಶರ್ಮಾ ಎಷ್ಟು ಕೀಳು ಮಟ್ಟಕ್ಕೆ ಇಳಿದಿದ್ದಾರೆ ಎಂದರೆ, ಅವರು ನನ್ನ ಮಕ್ಕಗಳ ಬಗ್ಗೆಯೂ ಮಾಹಿತಿಯನ್ನು ಬಹಿರಂಗಪಡಿಸಿದ್ದಾರೆ. ಅವರ ಮಕ್ಕಳ ಬಗ್ಗೆಯೂ ನಮಗೆ ಗೊತ್ತಿದೆ, ಎಲ್ಲರಿಗೂ ಗೊತ್ತಿದೆ. ಆದರೆ, ಅವರ ಮಾಹಿತಿಯನ್ನು ಬಹಿರಂಗಪಡಿಸಲು ಬಯಸುವುದಿಲ್ಲ. ಹಿಮಂತ ಬಿಸ್ವಾ ಶರ್ಮಾ ತಾನು ಸಿಎಂ ಕುರ್ಚಿಯಲ್ಲಿ ಕೂರಲು ಅರ್ಹವಾದ ವ್ಯಕ್ತಿಯಲ್ಲ ಎಂದು ಸಾಬೀತುಪಡಿಸಿದ್ದಾರೆ. ಅವರ ಹೇಳಿಕೆಗಳು ಅಸ್ಸಾಂಗೆ ನಾಚಿಕೆಗೇಡು, ಅವರು ಸುಳ್ಳು ಸುದ್ದಿಯನ್ನು ಏಕೆ ಹರಡುತ್ತಿದ್ದಾರೆ? ಸುಪ್ರೀಂ ಕೋರ್ಟ್‌ ಈ ಬಗ್ಗೆ ಸ್ವಯಂ ಪ್ರೇರಿತ ವಿಚಾರಣೆ ಕೈಗೆತ್ತಿಕೊಳ್ಳಬೇಕು” ಎಂದು ಗೊಗೊಯ್ ಹೇಳಿದ್ದಾರೆ. ತನ್ನ ಅಪ್ರಾಪ್ತ ಮಕ್ಕಳನ್ನು ವಿವಾದಕ್ಕೆ ಎಳೆದಿರುವ ಸಿಎಂ ಶರ್ಮಾ ವಿರುದ್ದ ಕ್ರಮಕ್ಕೆ ಕಾನೂನು ಆಯ್ಕೆಗಳನ್ನು ಪರಿಶೀಲಿಸುವುದಾಗಿ ತಿಳಿಸಿದ್ದಾರೆ.

ತಾನು ನಿರಪರಾಧಿ ಎಂದು ಸಾಬೀತುಪಡಿಸಲು ಎಸ್‌ಐಟಿ ವರದಿಯನ್ನು ಬಹಿರಂಗಗೊಳಿಸುವಂತೆ ಗೊಗೊಯ್ ಒತ್ತಾಯಿಸಿದ್ದಾರೆ. “ನಾನು ಆರಂಭದಿಂದಲೂ ಹೇಳುತ್ತಿದ್ದೇನೆ, ನಾನು ಎಸ್‌ಐಟಿ ತನಿಖೆಯ ವಿರುದ್ದ ಇಲ್ಲ. ಎಸ್‌ಐಟಿ ವರದಿಯನ್ನು ಬಿಡುಗಡೆ ಮಾಡಬೇಕೆಂದೇ ನಾನೂ ಬಯಸುತ್ತಿದ್ದೇನೆ” ಎಂದು ಹೇಳಿದ್ದಾರೆ.

ಶರ್ಮಾ ಅವರ ಪತ್ರಿಕಾಗೋಷ್ಠಿಯ ಸಮಯದ ಬಗ್ಗೆ ಪ್ರತಿಕ್ರಿಯಿಸಿದ ಗೊಗೊಯ್, “ನಿನ್ನೆಯ ಸುದೀರ್ಘ ಪತ್ರಿಕಾಗೋಷ್ಠಿಯ ಹಿಂದಿನ ಪ್ರಮುಖ ಅಂಶವೆಂದರೆ ಕಾಂಗ್ರೆಸ್ ಪಕ್ಷದ ಜನಪ್ರಿಯತೆ ಹೆಚ್ಚುತ್ತಿದೆ… ಅಲ್ಲದೆ ರಾಷ್ಟ್ರೀಯ ಭದ್ರತೆಯ ವಿಷಯವಾಗಿದ್ದರೆ, ಅವರು ಕಳೆದ ಆರು ತಿಂಗಳಿನಿಂದ ಏಕೆ ಸುಮ್ಮನಿದ್ದರು?.. ಕಾಂಗ್ರೆಸ್ ಪಕ್ಷವು 12,000 ಬಿಘಾ ಭೂಮಿ ಸಿಎಂ ಕುಟುಂಬದ ಒಡೆತನದಲ್ಲಿದೆ ಎಂದು ಬಹಿರಂಗಪಡಿಸಿದ ನಂತರ ಸಿಎಂ ಪತ್ರಿಕಾಗೋಷ್ಠಿ ನಡೆಸಬೇಕಾಯಿತು” ಎಂದು ಗೊಗೊಯ್ ತಿಳಿಸಿದ್ದಾರೆ.

“ಸಿಎಂ ಶರ್ಮಾ ತಮ್ಮ ಸಾಮಾಜಿಕ ಮಾಧ್ಯಮದ ವಿಡಿಯೋಗಳ ಮೂಲಕ ಮುಸ್ಲಿಮರ ವಿರುದ್ಧ ನರಮೇಧವನ್ನು ಪ್ರಚೋದಿಸುತ್ತಿದ್ದಾರೆ” ಎಂದು ಗೊಗೊಯ್ ಆರೋಪಿಸಿದ್ದಾರೆ.

ಸಿಎಂ ಶರ್ಮಾ ಅವರು ಗೌರವ್ ಗೊಗೊಯ್ ಅವರ ಪತ್ನಿ ಎಲಿಜಬೆತ್ ಕೋಲ್ಬರ್ನ್ ಮತ್ತು ಪಾಕಿಸ್ತಾನಿ ಪ್ರಜೆ ಅಲಿ ತೌಕೀರ್ ಶೇಖ್ ನಡುವೆ ಆಳವಾದ ಸಂಬಂಧವಿದೆ ಎಂದು ಆರೋಪಿಸಿದ್ದಾರೆ. ಗುಪ್ತಚರ ಬ್ಯೂರೋದ ಮಾಹಿತಿಯನ್ನು ಪಾಕಿಸ್ತಾನಕ್ಕೆ ರವಾನಿಸಲಾಗಿದೆ ಎಂದು ಶರ್ಮಾ ಹೇಳಿಕೊಂಡಿದ್ದಾರೆ ಮತ್ತು ಗೌರವ್ ಗೊಗೊಯ್ ಅವರು 2013ರಲ್ಲಿ ಪಾಕಿಸ್ತಾನಕ್ಕೆ ‘ಅತ್ಯಂತ ಗೌಪ್ಯ ಭೇಟಿ’ ನೀಡಿದ್ದಾರೆ ಎಂದು ಆರೋಪಿಸಿದ್ದಾರೆ. ಈ ಆರೋಪಗಳನ್ನು ಗೌರವ್ ಗೊಗೊಯ್ ಅವರು “ಸಿ-ಗ್ರೇಡ್ ಸಿನಿಮಾ” ಮತ್ತು “ಸಂಪೂರ್ಣ ಸುಳ್ಳು” ಎಂದು ತಳ್ಳಿಹಾಕಿದ್ದಾರೆ.

ಭಾರತಕ್ಕೆ ವರ್ಗಾವಣೆಯಾಗುವ ಮೊದಲು ಕೋಲ್ಬರ್ನ್ ಅವರು ತೌಕೀರ್ ಶೇಖ್ ನಡೆಸುತ್ತಿದ್ದ ‘ಲೀಡ್ ಪಾಕಿಸ್ತಾನ್’ ಸಂಸ್ಥೆಯೊಂದಿಗೆ ಕೆಲಸ ಮಾಡಿದ್ದರು. ಭಾರತಕ್ಕೆ ಬಂದ ಮೇಲೆ ವಿದೇಶಿ ಕೊಡುಗೆ ನಿಯಂತ್ರಣ ಕಾಯ್ದೆ (ಎಫ್‌ಸಿಆರ್‌ಎ) ನಿಯಮಗಳನ್ನು ಉಲ್ಲಂಘಿಸಿ ಶೇಖ್ ಅವರಿಂದ ಸಂಬಳ ಪಡೆಯುವುದನ್ನು ಮುಂದುವರೆಸಿದ್ದರು ಎಂದು ಶರ್ಮಾ ಆರೋಪ ಮಾಡಿದ್ದಾರೆ.

ಭಾರತದಲ್ಲಿ ಕೆಲಸ ಮಾಡಿದ ನಂತರ, ಕೋಲ್ಬರ್ನ್ ಶೇಖ್ ಅವರಿಗೆ ಮಾಹಿತಿಯನ್ನು ಸಂಗ್ರಹಿಸಿ ವರದಿಗಳನ್ನು ನೀಡಿದ್ದಾರೆ. ಗೊಗೊಯ್ ಅವರು ತಮ್ಮ ಚುನಾವಣಾ ಅಫಿಡವಿಟ್‌ನಲ್ಲಿ ಪಾಕಿಸ್ತಾನಿ ಬ್ಯಾಂಕ್ ಖಾತೆಯನ್ನು ಘೋಷಿಸಿಲ್ಲ ಎಂದು ಹಿಮಂತ ಬಿಸ್ವ ಶರ್ಮಾ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...