Homeಮುಖಪುಟಪಾಕಿಸ್ತಾನ ನಂಟು : ಸಿಎಂ ಶರ್ಮಾ ಆರೋಪ ನಿರಾಧಾರ, ಸಿ-ಗ್ರೇಡ್ ಸಿನಿಮಾ ಎಂದ ಗೌರವ್ ಗೊಗೊಯ್

ಪಾಕಿಸ್ತಾನ ನಂಟು : ಸಿಎಂ ಶರ್ಮಾ ಆರೋಪ ನಿರಾಧಾರ, ಸಿ-ಗ್ರೇಡ್ ಸಿನಿಮಾ ಎಂದ ಗೌರವ್ ಗೊಗೊಯ್

- Advertisement -
- Advertisement -

ತಮಗೂ ಪಾಕಿಸ್ತಾನಕ್ಕೂ ಸಂಬಂಧವಿದೆ ಎಂಬ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ಅವರ ಆರೋಪಗಳನ್ನು ಅಸ್ಸಾಂ ಕಾಂಗ್ರೆಸ್ ಅಧ್ಯಕ್ಷ ಗೌರವ್ ಗೊಗೊಯ್ ತಳ್ಳಿಹಾಕಿದ್ದು, ಎಸ್‌ಐಟಿ ವರದಿಯು ಕಳೆದ ಆರು ತಿಂಗಳಿನಿಂದ ಮುಖ್ಯಮಂತ್ರಿ ಬಳಿಯೇ ಇದೆ. ಆದರೆ, ಅದರಲ್ಲಿ ತನ್ನ ವಿರುದ್ದ ಯಾವುದೇ ಪುರಾವೆಗಳು ಇಲ್ಲದ ಕಾರಣ ಬಹಿರಂಗಪಡಿಸುತ್ತಿಲ್ಲ ಎಂದಿದ್ದಾರೆ.

ಗುವಾಹಟಿಯಲ್ಲಿ ಸೋಮವಾರ (ಫೆ.9) ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಗೊಗೊಯ್, “ನನ್ನ ಪತ್ನಿ 2013ರಲ್ಲಿ ಕೆಲಸದ ನಿಮಿತ್ತ ಪಾಕಿಸ್ತಾನಕ್ಕೆ ಪ್ರಯಾಣ ಬೆಳೆಸಿದ್ದರು. ಆ ವರ್ಷದ ಡಿಸೆಂಬರ್‌ನಲ್ಲಿ 10 ದಿನಗಳ ಭೇಟಿಯ ಸಮಯದಲ್ಲಿ ನಾನು ಅವರ ಜೊತೆಗಿದ್ದೆ. ಈ ವಿಷಯದ ತನಿಖೆ ನಡೆಸುತ್ತಿದ್ದ ಎಸ್‌ಐಟಿ ಈ ಬಗ್ಗೆ ತನ್ನನ್ನು ಎಂದಿಗೂ ಪ್ರಶ್ನಿಸಿಲ್ಲ” ಎಂದು ಹೇಳಿದ್ದಾರೆ.

“ಸಿಎಂ ಶರ್ಮಾ ಎಷ್ಟು ಕೀಳು ಮಟ್ಟಕ್ಕೆ ಇಳಿದಿದ್ದಾರೆ ಎಂದರೆ, ಅವರು ನನ್ನ ಮಕ್ಕಗಳ ಬಗ್ಗೆಯೂ ಮಾಹಿತಿಯನ್ನು ಬಹಿರಂಗಪಡಿಸಿದ್ದಾರೆ. ಅವರ ಮಕ್ಕಳ ಬಗ್ಗೆಯೂ ನಮಗೆ ಗೊತ್ತಿದೆ, ಎಲ್ಲರಿಗೂ ಗೊತ್ತಿದೆ. ಆದರೆ, ಅವರ ಮಾಹಿತಿಯನ್ನು ಬಹಿರಂಗಪಡಿಸಲು ಬಯಸುವುದಿಲ್ಲ. ಹಿಮಂತ ಬಿಸ್ವಾ ಶರ್ಮಾ ತಾನು ಸಿಎಂ ಕುರ್ಚಿಯಲ್ಲಿ ಕೂರಲು ಅರ್ಹವಾದ ವ್ಯಕ್ತಿಯಲ್ಲ ಎಂದು ಸಾಬೀತುಪಡಿಸಿದ್ದಾರೆ. ಅವರ ಹೇಳಿಕೆಗಳು ಅಸ್ಸಾಂಗೆ ನಾಚಿಕೆಗೇಡು, ಅವರು ಸುಳ್ಳು ಸುದ್ದಿಯನ್ನು ಏಕೆ ಹರಡುತ್ತಿದ್ದಾರೆ? ಸುಪ್ರೀಂ ಕೋರ್ಟ್‌ ಈ ಬಗ್ಗೆ ಸ್ವಯಂ ಪ್ರೇರಿತ ವಿಚಾರಣೆ ಕೈಗೆತ್ತಿಕೊಳ್ಳಬೇಕು” ಎಂದು ಗೊಗೊಯ್ ಹೇಳಿದ್ದಾರೆ. ತನ್ನ ಅಪ್ರಾಪ್ತ ಮಕ್ಕಳನ್ನು ವಿವಾದಕ್ಕೆ ಎಳೆದಿರುವ ಸಿಎಂ ಶರ್ಮಾ ವಿರುದ್ದ ಕ್ರಮಕ್ಕೆ ಕಾನೂನು ಆಯ್ಕೆಗಳನ್ನು ಪರಿಶೀಲಿಸುವುದಾಗಿ ತಿಳಿಸಿದ್ದಾರೆ.

ತಾನು ನಿರಪರಾಧಿ ಎಂದು ಸಾಬೀತುಪಡಿಸಲು ಎಸ್‌ಐಟಿ ವರದಿಯನ್ನು ಬಹಿರಂಗಗೊಳಿಸುವಂತೆ ಗೊಗೊಯ್ ಒತ್ತಾಯಿಸಿದ್ದಾರೆ. “ನಾನು ಆರಂಭದಿಂದಲೂ ಹೇಳುತ್ತಿದ್ದೇನೆ, ನಾನು ಎಸ್‌ಐಟಿ ತನಿಖೆಯ ವಿರುದ್ದ ಇಲ್ಲ. ಎಸ್‌ಐಟಿ ವರದಿಯನ್ನು ಬಿಡುಗಡೆ ಮಾಡಬೇಕೆಂದೇ ನಾನೂ ಬಯಸುತ್ತಿದ್ದೇನೆ” ಎಂದು ಹೇಳಿದ್ದಾರೆ.

ಶರ್ಮಾ ಅವರ ಪತ್ರಿಕಾಗೋಷ್ಠಿಯ ಸಮಯದ ಬಗ್ಗೆ ಪ್ರತಿಕ್ರಿಯಿಸಿದ ಗೊಗೊಯ್, “ನಿನ್ನೆಯ ಸುದೀರ್ಘ ಪತ್ರಿಕಾಗೋಷ್ಠಿಯ ಹಿಂದಿನ ಪ್ರಮುಖ ಅಂಶವೆಂದರೆ ಕಾಂಗ್ರೆಸ್ ಪಕ್ಷದ ಜನಪ್ರಿಯತೆ ಹೆಚ್ಚುತ್ತಿದೆ… ಅಲ್ಲದೆ ರಾಷ್ಟ್ರೀಯ ಭದ್ರತೆಯ ವಿಷಯವಾಗಿದ್ದರೆ, ಅವರು ಕಳೆದ ಆರು ತಿಂಗಳಿನಿಂದ ಏಕೆ ಸುಮ್ಮನಿದ್ದರು?.. ಕಾಂಗ್ರೆಸ್ ಪಕ್ಷವು 12,000 ಬಿಘಾ ಭೂಮಿ ಸಿಎಂ ಕುಟುಂಬದ ಒಡೆತನದಲ್ಲಿದೆ ಎಂದು ಬಹಿರಂಗಪಡಿಸಿದ ನಂತರ ಸಿಎಂ ಪತ್ರಿಕಾಗೋಷ್ಠಿ ನಡೆಸಬೇಕಾಯಿತು” ಎಂದು ಗೊಗೊಯ್ ತಿಳಿಸಿದ್ದಾರೆ.

“ಸಿಎಂ ಶರ್ಮಾ ತಮ್ಮ ಸಾಮಾಜಿಕ ಮಾಧ್ಯಮದ ವಿಡಿಯೋಗಳ ಮೂಲಕ ಮುಸ್ಲಿಮರ ವಿರುದ್ಧ ನರಮೇಧವನ್ನು ಪ್ರಚೋದಿಸುತ್ತಿದ್ದಾರೆ” ಎಂದು ಗೊಗೊಯ್ ಆರೋಪಿಸಿದ್ದಾರೆ.

ಸಿಎಂ ಶರ್ಮಾ ಅವರು ಗೌರವ್ ಗೊಗೊಯ್ ಅವರ ಪತ್ನಿ ಎಲಿಜಬೆತ್ ಕೋಲ್ಬರ್ನ್ ಮತ್ತು ಪಾಕಿಸ್ತಾನಿ ಪ್ರಜೆ ಅಲಿ ತೌಕೀರ್ ಶೇಖ್ ನಡುವೆ ಆಳವಾದ ಸಂಬಂಧವಿದೆ ಎಂದು ಆರೋಪಿಸಿದ್ದಾರೆ. ಗುಪ್ತಚರ ಬ್ಯೂರೋದ ಮಾಹಿತಿಯನ್ನು ಪಾಕಿಸ್ತಾನಕ್ಕೆ ರವಾನಿಸಲಾಗಿದೆ ಎಂದು ಶರ್ಮಾ ಹೇಳಿಕೊಂಡಿದ್ದಾರೆ ಮತ್ತು ಗೌರವ್ ಗೊಗೊಯ್ ಅವರು 2013ರಲ್ಲಿ ಪಾಕಿಸ್ತಾನಕ್ಕೆ ‘ಅತ್ಯಂತ ಗೌಪ್ಯ ಭೇಟಿ’ ನೀಡಿದ್ದಾರೆ ಎಂದು ಆರೋಪಿಸಿದ್ದಾರೆ. ಈ ಆರೋಪಗಳನ್ನು ಗೌರವ್ ಗೊಗೊಯ್ ಅವರು “ಸಿ-ಗ್ರೇಡ್ ಸಿನಿಮಾ” ಮತ್ತು “ಸಂಪೂರ್ಣ ಸುಳ್ಳು” ಎಂದು ತಳ್ಳಿಹಾಕಿದ್ದಾರೆ.

ಭಾರತಕ್ಕೆ ವರ್ಗಾವಣೆಯಾಗುವ ಮೊದಲು ಕೋಲ್ಬರ್ನ್ ಅವರು ತೌಕೀರ್ ಶೇಖ್ ನಡೆಸುತ್ತಿದ್ದ ‘ಲೀಡ್ ಪಾಕಿಸ್ತಾನ್’ ಸಂಸ್ಥೆಯೊಂದಿಗೆ ಕೆಲಸ ಮಾಡಿದ್ದರು. ಭಾರತಕ್ಕೆ ಬಂದ ಮೇಲೆ ವಿದೇಶಿ ಕೊಡುಗೆ ನಿಯಂತ್ರಣ ಕಾಯ್ದೆ (ಎಫ್‌ಸಿಆರ್‌ಎ) ನಿಯಮಗಳನ್ನು ಉಲ್ಲಂಘಿಸಿ ಶೇಖ್ ಅವರಿಂದ ಸಂಬಳ ಪಡೆಯುವುದನ್ನು ಮುಂದುವರೆಸಿದ್ದರು ಎಂದು ಶರ್ಮಾ ಆರೋಪ ಮಾಡಿದ್ದಾರೆ.

ಭಾರತದಲ್ಲಿ ಕೆಲಸ ಮಾಡಿದ ನಂತರ, ಕೋಲ್ಬರ್ನ್ ಶೇಖ್ ಅವರಿಗೆ ಮಾಹಿತಿಯನ್ನು ಸಂಗ್ರಹಿಸಿ ವರದಿಗಳನ್ನು ನೀಡಿದ್ದಾರೆ. ಗೊಗೊಯ್ ಅವರು ತಮ್ಮ ಚುನಾವಣಾ ಅಫಿಡವಿಟ್‌ನಲ್ಲಿ ಪಾಕಿಸ್ತಾನಿ ಬ್ಯಾಂಕ್ ಖಾತೆಯನ್ನು ಘೋಷಿಸಿಲ್ಲ ಎಂದು ಹಿಮಂತ ಬಿಸ್ವ ಶರ್ಮಾ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...