Homeಕ್ರೀಡೆಕ್ರಿಕೆಟ್ಜಿಂಬಾಬ್ವೆ ಎದುರು 1 ರನ್‌ನಿಂದ ಸೋತ ಪಾಕಿಸ್ತಾನ: ಸೆಮಿಫೈನಲ್ ಹಾದಿ ದುರ್ಗಮ

ಜಿಂಬಾಬ್ವೆ ಎದುರು 1 ರನ್‌ನಿಂದ ಸೋತ ಪಾಕಿಸ್ತಾನ: ಸೆಮಿಫೈನಲ್ ಹಾದಿ ದುರ್ಗಮ

- Advertisement -
- Advertisement -

ಇಂದು ನಡೆದ ಟಿ20 ವಿಶ್ವಕಪ್ ಸೂಪರ್ 12ರ ಪಂದ್ಯದಲ್ಲಿ ಜಿಂಬಾಬ್ವೆ ತಂಡ ಪಾಕಿಸ್ತಾನಕ್ಕೆ ಆಘಾತಕಾರಿ ಸೋಲುಣಿಸಿದೆ. ಸತತ ಎರಡನೇ ಸೋಲು ಕಂಡಿರುವ ಪಾಕಿಸ್ತಾನದ ಸೆಮಿಫೈನಲ್ ಹಾದಿ ಮತ್ತಷ್ಟು ದುರ್ಗಮವಾಗಿದೆ.

ಗೆಲ್ಲಲು 131 ರನ್‌ಗಳ ಸಾಧಾರಣ ಗುರಿ ಪಡೆದ ಪಾಕಿಸ್ತಾನ ತಂಡ 20 ಓವರ್‌ಗಳಲ್ಲಿ 8 ವಿಕೆಟ್ ಕಳೆದುಕೊಂಡು 129 ರನ್‌ಗಳನ್ನಷ್ಟೆ ಗಳಿಸಲು ಸಾಧ್ಯವಾಯಿತು. ಆ ಮೂಲಕ 1 ರನ್‌ಗಳ ಸೋಲೊಪ್ಪಿಕೊಂಡಿತು.

ಕೊನೆಯ ಓವರ್‌ನಲ್ಲಿ ಗೆಲ್ಲಲು ಪಾಕಿಸ್ತಾನಕ್ಕೆ 11 ರನ್‌ಗಳ ಅಗತ್ಯವಿತ್ತು. ಬ್ರಾಡ್ ಇವನ್ ಎಸೆದ ಮೊದಲ ಎಸೆತದಲ್ಲಿ ಪಾಕಿಸ್ತಾನದ ಬ್ಯಾಟರ್ ಮೊಹಮ್ಮದ್ ನವಾಜ್ 3 ರನ್ ಗಳಿಸಿದರು. ಎರಡನೇ ಎಸೆತದಲ್ಲಿ ಮೊಹಮ್ಮದ್ ವಾಸಿಂ ಬೌಂಡರಿ ಗಳಿಸಿದರು. ಅಲ್ಲಿಗೆ ನಾಲ್ಕು ಎಸೆತಗಳಲ್ಲಿ 4 ರನ್ ಮಾತ್ರ ಅಗತ್ಯವಿತ್ತು.

ಮೂರನೇ ಎಸೆತದಲ್ಲಿ ಮೊಹಮ್ಮದ್ ವಾಸಿಂ 1 ರನ್ ಗಳಿಸಿದರು. ನಾಲ್ಕನೇ ಎಸೆತದಲ್ಲಿ ಮೊಹಮ್ಮದ್ ನವಾಜ್ ರನ್ ಗಳಿಸಲು ಸಾಧ್ಯವಾಗಲಿಲ್ಲ. ಆದರೆ ಐದನೇ ಎಸೆತದಲ್ಲಿ ಕ್ಯಾಚಿತ್ತು ಔಟಾದರು. ಕೊನೆ ಬಾಲ್‌ನಲ್ಲಿ ಪಾಕಿಸ್ತಾನ 3 ರನ್ ಗಳಿಸಬೇಕಿತ್ತು. ಶಾಹೀನ್ ಅಫ್ರಿದಿ ಸ್ಟ್ರೈಕರ್‌ನಲ್ಲಿದ್ದರು. ನೇರ ಹೊಡೆದ ಬಾಲ್ ಫೀಲ್ಡರ್ ಕೈ ತಲುಪಿತು. ಎರಡನೇ ರನ್ ಓಡುತ್ತಿದ್ದ ಶಾಹೀನ್ ಅಫ್ರಿದಿ ರನ್ ಔಟಾದರು. ಅಲ್ಲಿಗೆ ಜಿಂಬಾಬ್ವೆ 1 ರನ್‌ಗಳ ರೋಚಕ ಗೆಲುವು ದಾಖಲಿಸಿತು.

ಇದಕ್ಕೂ ಮೊದಲು ಬ್ಯಾಟ್ ಮಾಡಿದ ಜಿಂಬಾಬ್ವೆ ತಂಡ 20 ಓವರ್‌ಗಳಲ್ಲಿ 8 ವಿಕೆಟ್ ಕಳೆದುಕೊಂಡು 130 ರನ್ ಗಳಿಸಿತು.

ಟಿ20 ವಿಶ್ವಕಪ್ ಸೂಪರ್ 12 ಹಂತದ ಮೊದಲನೇ ಗುಂಪಿನ ಪಂದ್ಯದಲ್ಲಿ ಬಲಿಷ್ಠ ಇಂಗ್ಲೆಂಡ್ ತಂಡವನ್ನು  ಐರ್ಲೆಂಡ್ ಮಣಿಸಿತ್ತು. ಅದಕ್ಕೂ ಮೊದಲು ಅರ್ಹತಾ ಸುತ್ತಿನಲ್ಲಿ 2 ಬಾರಿ ಚಾಂಪಿಯನ್ ಆಗಿದ್ದ ವೆಸ್ಟ್ ಇಂಡೀಸ್ ತಂಡವನ್ನು ಸೋಲಿಸಿ ಮನೆಗೆ ಕಳುಹಿಸಿತ್ತು. ಅದೇ ರೀತಿ ಇಂದು ಬಲಿಷ್ಠ ಪಾಕಿಸ್ತಾನವನ್ನು ಜಿಂಬಾಬ್ವೆ ಸೋಲಿಸಿದೆ. ಸಣ್ಣ ತಂಡಗಳು ಯಾವುದೇ ಒತ್ತಡವಿಲ್ಲದೆ ಆಡಿ ಬಲಿಷ್ಟ ತಂಡಗಳನ್ನು ಮಣಿಸುತ್ತಿವೆ.

ಇದನ್ನೂ ಓದಿ: ನೆದರ್ಲೆಂಡ್ಸ್ ವಿರುದ್ಧ ಸುಲಭ ಜಯ ಸಾಧಿಸಿದ ಭಾರತ: ಸೆಮಿಫೈನಲ್‌ನತ್ತ ಹೆಜ್ಜೆ

ಭಾರತದ ಎದುರು ಸೋಲು ಕಂಡಿದ್ದ ಪಾಕಿಸ್ತಾನ ಈಗ ಜಿಂಬಾಬ್ವೆ ವಿರುದ್ದವೂ ಸೋತಿದೆ. ಇನ್ನೊಂದೆಡೆ 2ನೇ ಗ್ರೂಪ್‌ನಲ್ಲಿ ಎರಡು ತಂಡಕ್ಕೆ ಮಾತ್ರ ಸೆಮಿಫೈನಲ್ ತಲುಪುವ ಅವಕಾಶವಿದೆ. ಭಾರತ ಎರಡು ಗೆಲುವಿನೊಂದಿಗೆ ಮುಂದಿದೆ. ದಕ್ಷಿಣ ಆಫ್ರಿಕಾ ತಂಡ ಒಂದು ಗೆಲುವು ಒಂದು ಟೈನೊಂದಿಗೆ 3 ಅಂಕ ಗಳಿಸಿದೆ. ಹಾಗಾಗಿ ಪಾಕಿಸ್ತಾನದ ಸೆಮಿಫೈನಲ್ ಹಾದಿ ದುರ್ಗಮ ಅಂತಲೇ ಹೇಳಬೇಕಿದೆ.

ಪಾಕಿಸ್ತಾನ ತಂಡ ಮೊದಲನೇ ಪಂದ್ಯದಲ್ಲಿಯೂ ಸಹ ಭಾರತದ ಎದುರು ಗೆಲುವಿನ ಸನಿಹಕ್ಕೆ ಬಂದು ಎಡವಿತ್ತು. ಕೊನೆಯ ಓವರ್‌ನಲ್ಲಿ 16 ರನ್ ಬಿಟ್ಟುಕೊಟ್ಟು ಕೊನೆಯ ಎಸೆತದಲ್ಲಿ ಸೋಲೊಪ್ಪಿಕೊಂಡರು. ಇಂದು ಅದೇ ಪುನಾರಾವರ್ತನೆ ಆಯಿತು. ಬ್ಯಾಟಿಂಗ್‌ನಲ್ಲಿ ಕೊನೆಯವರೆಗೂ ತಲುಪಿ ಒಂದು ರನ್‌ನಿಂದ ಸೋಲು ಕಂಡರು.

ಪಾಕಿಸ್ತಾನಕ್ಕೆ ಸೂಪರ್ 12 ಹಂತದಲ್ಲಿ ಕೊನೆಯ ಮೂರು ಪಂದ್ಯಗಳು ಬಾಕಿ ಇವೆ. ದಕ್ಷಿಣ ಆಫ್ರಿಕಾ, ಬಾಂಗ್ಲಾದೇಶ ಮತ್ತು ನೆದರ್ಲೆಂಡ್ಸ್ ವಿರುದ್ದ ಪಾಕ್ ಗೆಲ್ಲಲೇಬೇಕು. ಅಷ್ಟು ಮಾತ್ರವಲ್ಲದೆ ಭಾರತ ಮತ್ತು ದಕ್ಷಿಣ ಆಫ್ರಿಕಾ ತಂಡಗಳು ಸತತ ಸೋತರೆ ಮಾತ್ರ ಪಾಕಿಸ್ತಾನಕ್ಕೆ ಸೆಮಿಫೈನಲ್ ಅವಕಾಶವಿದೆ. ಅದರೆ ಅದು ಅಷ್ಟು ಸುಲಭವಲ್ಲ.

ಕಳೆದ ವರ್ಷದ ಟಿ20 ವಿಶ್ವಕಪ್‌ನಲ್ಲಿ ಪಾಕಿಸ್ತಾನ 5ಕ್ಕೆ 5 ಪಂದ್ಯ ಗೆದ್ದು ಸೆಮಿಫೈನಲ್ ತಲುಪಿತ್ತು. ಆದರೆ ಅಲ್ಲಿ ಆಸ್ಟ್ರೇಲಿಯಾದ ಎದುರು ಸೋಲನ್ನು ಅನುಭವಿಸಿತ್ತು. ಆದರೆ ಈ ಬಾರಿ ಸೆಮಿಫೈನಲ್ ತಲುಪುವುದು ದುಸ್ತರವಾಗಿದೆ.

ಪಾಕಿಸ್ತಾನದ ಸೋಲಿನಿಂದ ಭಾರತ ಮತ್ತು ದಕ್ಷಿಣ ಆಫ್ರಿಕಾ ತಂಡಗಳ ಸೆಮಿಫೈನಲ್ ಹಾದಿ ಮತ್ತಷ್ಟು ಸುಲಭವಾಗಲಿದೆ. ನವೆಂಬರ್ 03 ರಂದು ಪಾಕಿಸ್ತಾನ ಮತ್ತು ದಕ್ಷಿಣ ಆಫ್ರಿಕ ತಂಡದ ನಡುವಿನ ಪಂದ್ಯ ಮತ್ತಷ್ಟು ಮಹತ್ವ ಪಡೆದುಕೊಂಡಿದೆ.

ಇದನ್ನೂ ಓದಿ; ಟಿ20 ವಿಶ್ವಕಪ್ ಕ್ರಿಕೆಟ್: ಬಲಿಷ್ಠ ಇಂಗ್ಲೆಂಡ್ ಮಣಿಸಿದ ಐರ್ಲೆಂಡ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...