Homeಕ್ರೀಡೆಕ್ರಿಕೆಟ್ಜಿಂಬಾಬ್ವೆ ಎದುರು 1 ರನ್‌ನಿಂದ ಸೋತ ಪಾಕಿಸ್ತಾನ: ಸೆಮಿಫೈನಲ್ ಹಾದಿ ದುರ್ಗಮ

ಜಿಂಬಾಬ್ವೆ ಎದುರು 1 ರನ್‌ನಿಂದ ಸೋತ ಪಾಕಿಸ್ತಾನ: ಸೆಮಿಫೈನಲ್ ಹಾದಿ ದುರ್ಗಮ

- Advertisement -
- Advertisement -

ಇಂದು ನಡೆದ ಟಿ20 ವಿಶ್ವಕಪ್ ಸೂಪರ್ 12ರ ಪಂದ್ಯದಲ್ಲಿ ಜಿಂಬಾಬ್ವೆ ತಂಡ ಪಾಕಿಸ್ತಾನಕ್ಕೆ ಆಘಾತಕಾರಿ ಸೋಲುಣಿಸಿದೆ. ಸತತ ಎರಡನೇ ಸೋಲು ಕಂಡಿರುವ ಪಾಕಿಸ್ತಾನದ ಸೆಮಿಫೈನಲ್ ಹಾದಿ ಮತ್ತಷ್ಟು ದುರ್ಗಮವಾಗಿದೆ.

ಗೆಲ್ಲಲು 131 ರನ್‌ಗಳ ಸಾಧಾರಣ ಗುರಿ ಪಡೆದ ಪಾಕಿಸ್ತಾನ ತಂಡ 20 ಓವರ್‌ಗಳಲ್ಲಿ 8 ವಿಕೆಟ್ ಕಳೆದುಕೊಂಡು 129 ರನ್‌ಗಳನ್ನಷ್ಟೆ ಗಳಿಸಲು ಸಾಧ್ಯವಾಯಿತು. ಆ ಮೂಲಕ 1 ರನ್‌ಗಳ ಸೋಲೊಪ್ಪಿಕೊಂಡಿತು.

ಕೊನೆಯ ಓವರ್‌ನಲ್ಲಿ ಗೆಲ್ಲಲು ಪಾಕಿಸ್ತಾನಕ್ಕೆ 11 ರನ್‌ಗಳ ಅಗತ್ಯವಿತ್ತು. ಬ್ರಾಡ್ ಇವನ್ ಎಸೆದ ಮೊದಲ ಎಸೆತದಲ್ಲಿ ಪಾಕಿಸ್ತಾನದ ಬ್ಯಾಟರ್ ಮೊಹಮ್ಮದ್ ನವಾಜ್ 3 ರನ್ ಗಳಿಸಿದರು. ಎರಡನೇ ಎಸೆತದಲ್ಲಿ ಮೊಹಮ್ಮದ್ ವಾಸಿಂ ಬೌಂಡರಿ ಗಳಿಸಿದರು. ಅಲ್ಲಿಗೆ ನಾಲ್ಕು ಎಸೆತಗಳಲ್ಲಿ 4 ರನ್ ಮಾತ್ರ ಅಗತ್ಯವಿತ್ತು.

ಮೂರನೇ ಎಸೆತದಲ್ಲಿ ಮೊಹಮ್ಮದ್ ವಾಸಿಂ 1 ರನ್ ಗಳಿಸಿದರು. ನಾಲ್ಕನೇ ಎಸೆತದಲ್ಲಿ ಮೊಹಮ್ಮದ್ ನವಾಜ್ ರನ್ ಗಳಿಸಲು ಸಾಧ್ಯವಾಗಲಿಲ್ಲ. ಆದರೆ ಐದನೇ ಎಸೆತದಲ್ಲಿ ಕ್ಯಾಚಿತ್ತು ಔಟಾದರು. ಕೊನೆ ಬಾಲ್‌ನಲ್ಲಿ ಪಾಕಿಸ್ತಾನ 3 ರನ್ ಗಳಿಸಬೇಕಿತ್ತು. ಶಾಹೀನ್ ಅಫ್ರಿದಿ ಸ್ಟ್ರೈಕರ್‌ನಲ್ಲಿದ್ದರು. ನೇರ ಹೊಡೆದ ಬಾಲ್ ಫೀಲ್ಡರ್ ಕೈ ತಲುಪಿತು. ಎರಡನೇ ರನ್ ಓಡುತ್ತಿದ್ದ ಶಾಹೀನ್ ಅಫ್ರಿದಿ ರನ್ ಔಟಾದರು. ಅಲ್ಲಿಗೆ ಜಿಂಬಾಬ್ವೆ 1 ರನ್‌ಗಳ ರೋಚಕ ಗೆಲುವು ದಾಖಲಿಸಿತು.

ಇದಕ್ಕೂ ಮೊದಲು ಬ್ಯಾಟ್ ಮಾಡಿದ ಜಿಂಬಾಬ್ವೆ ತಂಡ 20 ಓವರ್‌ಗಳಲ್ಲಿ 8 ವಿಕೆಟ್ ಕಳೆದುಕೊಂಡು 130 ರನ್ ಗಳಿಸಿತು.

ಟಿ20 ವಿಶ್ವಕಪ್ ಸೂಪರ್ 12 ಹಂತದ ಮೊದಲನೇ ಗುಂಪಿನ ಪಂದ್ಯದಲ್ಲಿ ಬಲಿಷ್ಠ ಇಂಗ್ಲೆಂಡ್ ತಂಡವನ್ನು  ಐರ್ಲೆಂಡ್ ಮಣಿಸಿತ್ತು. ಅದಕ್ಕೂ ಮೊದಲು ಅರ್ಹತಾ ಸುತ್ತಿನಲ್ಲಿ 2 ಬಾರಿ ಚಾಂಪಿಯನ್ ಆಗಿದ್ದ ವೆಸ್ಟ್ ಇಂಡೀಸ್ ತಂಡವನ್ನು ಸೋಲಿಸಿ ಮನೆಗೆ ಕಳುಹಿಸಿತ್ತು. ಅದೇ ರೀತಿ ಇಂದು ಬಲಿಷ್ಠ ಪಾಕಿಸ್ತಾನವನ್ನು ಜಿಂಬಾಬ್ವೆ ಸೋಲಿಸಿದೆ. ಸಣ್ಣ ತಂಡಗಳು ಯಾವುದೇ ಒತ್ತಡವಿಲ್ಲದೆ ಆಡಿ ಬಲಿಷ್ಟ ತಂಡಗಳನ್ನು ಮಣಿಸುತ್ತಿವೆ.

ಇದನ್ನೂ ಓದಿ: ನೆದರ್ಲೆಂಡ್ಸ್ ವಿರುದ್ಧ ಸುಲಭ ಜಯ ಸಾಧಿಸಿದ ಭಾರತ: ಸೆಮಿಫೈನಲ್‌ನತ್ತ ಹೆಜ್ಜೆ

ಭಾರತದ ಎದುರು ಸೋಲು ಕಂಡಿದ್ದ ಪಾಕಿಸ್ತಾನ ಈಗ ಜಿಂಬಾಬ್ವೆ ವಿರುದ್ದವೂ ಸೋತಿದೆ. ಇನ್ನೊಂದೆಡೆ 2ನೇ ಗ್ರೂಪ್‌ನಲ್ಲಿ ಎರಡು ತಂಡಕ್ಕೆ ಮಾತ್ರ ಸೆಮಿಫೈನಲ್ ತಲುಪುವ ಅವಕಾಶವಿದೆ. ಭಾರತ ಎರಡು ಗೆಲುವಿನೊಂದಿಗೆ ಮುಂದಿದೆ. ದಕ್ಷಿಣ ಆಫ್ರಿಕಾ ತಂಡ ಒಂದು ಗೆಲುವು ಒಂದು ಟೈನೊಂದಿಗೆ 3 ಅಂಕ ಗಳಿಸಿದೆ. ಹಾಗಾಗಿ ಪಾಕಿಸ್ತಾನದ ಸೆಮಿಫೈನಲ್ ಹಾದಿ ದುರ್ಗಮ ಅಂತಲೇ ಹೇಳಬೇಕಿದೆ.

ಪಾಕಿಸ್ತಾನ ತಂಡ ಮೊದಲನೇ ಪಂದ್ಯದಲ್ಲಿಯೂ ಸಹ ಭಾರತದ ಎದುರು ಗೆಲುವಿನ ಸನಿಹಕ್ಕೆ ಬಂದು ಎಡವಿತ್ತು. ಕೊನೆಯ ಓವರ್‌ನಲ್ಲಿ 16 ರನ್ ಬಿಟ್ಟುಕೊಟ್ಟು ಕೊನೆಯ ಎಸೆತದಲ್ಲಿ ಸೋಲೊಪ್ಪಿಕೊಂಡರು. ಇಂದು ಅದೇ ಪುನಾರಾವರ್ತನೆ ಆಯಿತು. ಬ್ಯಾಟಿಂಗ್‌ನಲ್ಲಿ ಕೊನೆಯವರೆಗೂ ತಲುಪಿ ಒಂದು ರನ್‌ನಿಂದ ಸೋಲು ಕಂಡರು.

ಪಾಕಿಸ್ತಾನಕ್ಕೆ ಸೂಪರ್ 12 ಹಂತದಲ್ಲಿ ಕೊನೆಯ ಮೂರು ಪಂದ್ಯಗಳು ಬಾಕಿ ಇವೆ. ದಕ್ಷಿಣ ಆಫ್ರಿಕಾ, ಬಾಂಗ್ಲಾದೇಶ ಮತ್ತು ನೆದರ್ಲೆಂಡ್ಸ್ ವಿರುದ್ದ ಪಾಕ್ ಗೆಲ್ಲಲೇಬೇಕು. ಅಷ್ಟು ಮಾತ್ರವಲ್ಲದೆ ಭಾರತ ಮತ್ತು ದಕ್ಷಿಣ ಆಫ್ರಿಕಾ ತಂಡಗಳು ಸತತ ಸೋತರೆ ಮಾತ್ರ ಪಾಕಿಸ್ತಾನಕ್ಕೆ ಸೆಮಿಫೈನಲ್ ಅವಕಾಶವಿದೆ. ಅದರೆ ಅದು ಅಷ್ಟು ಸುಲಭವಲ್ಲ.

ಕಳೆದ ವರ್ಷದ ಟಿ20 ವಿಶ್ವಕಪ್‌ನಲ್ಲಿ ಪಾಕಿಸ್ತಾನ 5ಕ್ಕೆ 5 ಪಂದ್ಯ ಗೆದ್ದು ಸೆಮಿಫೈನಲ್ ತಲುಪಿತ್ತು. ಆದರೆ ಅಲ್ಲಿ ಆಸ್ಟ್ರೇಲಿಯಾದ ಎದುರು ಸೋಲನ್ನು ಅನುಭವಿಸಿತ್ತು. ಆದರೆ ಈ ಬಾರಿ ಸೆಮಿಫೈನಲ್ ತಲುಪುವುದು ದುಸ್ತರವಾಗಿದೆ.

ಪಾಕಿಸ್ತಾನದ ಸೋಲಿನಿಂದ ಭಾರತ ಮತ್ತು ದಕ್ಷಿಣ ಆಫ್ರಿಕಾ ತಂಡಗಳ ಸೆಮಿಫೈನಲ್ ಹಾದಿ ಮತ್ತಷ್ಟು ಸುಲಭವಾಗಲಿದೆ. ನವೆಂಬರ್ 03 ರಂದು ಪಾಕಿಸ್ತಾನ ಮತ್ತು ದಕ್ಷಿಣ ಆಫ್ರಿಕ ತಂಡದ ನಡುವಿನ ಪಂದ್ಯ ಮತ್ತಷ್ಟು ಮಹತ್ವ ಪಡೆದುಕೊಂಡಿದೆ.

ಇದನ್ನೂ ಓದಿ; ಟಿ20 ವಿಶ್ವಕಪ್ ಕ್ರಿಕೆಟ್: ಬಲಿಷ್ಠ ಇಂಗ್ಲೆಂಡ್ ಮಣಿಸಿದ ಐರ್ಲೆಂಡ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...

ಉತ್ತರಪ್ರದೇಶ: ಕಬ್ಬಿನ ಗದ್ದೆಯಲ್ಲಿ ಸುಟ್ಟ, ಅರೆನಗ್ನ ಮಹಿಳೆಯ ಮೃತದೇಹ ಪತ್ತೆ: ಅತ್ಯಾಚಾರ ಮಾಡಿ ಬೆಂಕಿ ಹಚ್ಚಿರುವ ಶಂಕೆ

ಹಾಪುರ್: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಬಹದ್ದೂರ್‌ಗಢ ಪೊಲೀಸ್ ಠಾಣೆ ವ್ಯಾಪ್ತಿಯ ಲಹಾದ್ರಾ ಗ್ರಾಮದ ಇಟ್ಟಿಗೆ ಗೂಡುಗಳ ಹಿಂದಿನ ಕಬ್ಬಿನ ಗದ್ದೆಯಲ್ಲಿ ಸುಮಾರು 30 ವರ್ಷ ವಯಸ್ಸಿನ...