Homeಕ್ರೀಡೆಕ್ರಿಕೆಟ್ಜಿಂಬಾಬ್ವೆ ಎದುರು 1 ರನ್‌ನಿಂದ ಸೋತ ಪಾಕಿಸ್ತಾನ: ಸೆಮಿಫೈನಲ್ ಹಾದಿ ದುರ್ಗಮ

ಜಿಂಬಾಬ್ವೆ ಎದುರು 1 ರನ್‌ನಿಂದ ಸೋತ ಪಾಕಿಸ್ತಾನ: ಸೆಮಿಫೈನಲ್ ಹಾದಿ ದುರ್ಗಮ

- Advertisement -
- Advertisement -

ಇಂದು ನಡೆದ ಟಿ20 ವಿಶ್ವಕಪ್ ಸೂಪರ್ 12ರ ಪಂದ್ಯದಲ್ಲಿ ಜಿಂಬಾಬ್ವೆ ತಂಡ ಪಾಕಿಸ್ತಾನಕ್ಕೆ ಆಘಾತಕಾರಿ ಸೋಲುಣಿಸಿದೆ. ಸತತ ಎರಡನೇ ಸೋಲು ಕಂಡಿರುವ ಪಾಕಿಸ್ತಾನದ ಸೆಮಿಫೈನಲ್ ಹಾದಿ ಮತ್ತಷ್ಟು ದುರ್ಗಮವಾಗಿದೆ.

ಗೆಲ್ಲಲು 131 ರನ್‌ಗಳ ಸಾಧಾರಣ ಗುರಿ ಪಡೆದ ಪಾಕಿಸ್ತಾನ ತಂಡ 20 ಓವರ್‌ಗಳಲ್ಲಿ 8 ವಿಕೆಟ್ ಕಳೆದುಕೊಂಡು 129 ರನ್‌ಗಳನ್ನಷ್ಟೆ ಗಳಿಸಲು ಸಾಧ್ಯವಾಯಿತು. ಆ ಮೂಲಕ 1 ರನ್‌ಗಳ ಸೋಲೊಪ್ಪಿಕೊಂಡಿತು.

ಕೊನೆಯ ಓವರ್‌ನಲ್ಲಿ ಗೆಲ್ಲಲು ಪಾಕಿಸ್ತಾನಕ್ಕೆ 11 ರನ್‌ಗಳ ಅಗತ್ಯವಿತ್ತು. ಬ್ರಾಡ್ ಇವನ್ ಎಸೆದ ಮೊದಲ ಎಸೆತದಲ್ಲಿ ಪಾಕಿಸ್ತಾನದ ಬ್ಯಾಟರ್ ಮೊಹಮ್ಮದ್ ನವಾಜ್ 3 ರನ್ ಗಳಿಸಿದರು. ಎರಡನೇ ಎಸೆತದಲ್ಲಿ ಮೊಹಮ್ಮದ್ ವಾಸಿಂ ಬೌಂಡರಿ ಗಳಿಸಿದರು. ಅಲ್ಲಿಗೆ ನಾಲ್ಕು ಎಸೆತಗಳಲ್ಲಿ 4 ರನ್ ಮಾತ್ರ ಅಗತ್ಯವಿತ್ತು.

ಮೂರನೇ ಎಸೆತದಲ್ಲಿ ಮೊಹಮ್ಮದ್ ವಾಸಿಂ 1 ರನ್ ಗಳಿಸಿದರು. ನಾಲ್ಕನೇ ಎಸೆತದಲ್ಲಿ ಮೊಹಮ್ಮದ್ ನವಾಜ್ ರನ್ ಗಳಿಸಲು ಸಾಧ್ಯವಾಗಲಿಲ್ಲ. ಆದರೆ ಐದನೇ ಎಸೆತದಲ್ಲಿ ಕ್ಯಾಚಿತ್ತು ಔಟಾದರು. ಕೊನೆ ಬಾಲ್‌ನಲ್ಲಿ ಪಾಕಿಸ್ತಾನ 3 ರನ್ ಗಳಿಸಬೇಕಿತ್ತು. ಶಾಹೀನ್ ಅಫ್ರಿದಿ ಸ್ಟ್ರೈಕರ್‌ನಲ್ಲಿದ್ದರು. ನೇರ ಹೊಡೆದ ಬಾಲ್ ಫೀಲ್ಡರ್ ಕೈ ತಲುಪಿತು. ಎರಡನೇ ರನ್ ಓಡುತ್ತಿದ್ದ ಶಾಹೀನ್ ಅಫ್ರಿದಿ ರನ್ ಔಟಾದರು. ಅಲ್ಲಿಗೆ ಜಿಂಬಾಬ್ವೆ 1 ರನ್‌ಗಳ ರೋಚಕ ಗೆಲುವು ದಾಖಲಿಸಿತು.

ಇದಕ್ಕೂ ಮೊದಲು ಬ್ಯಾಟ್ ಮಾಡಿದ ಜಿಂಬಾಬ್ವೆ ತಂಡ 20 ಓವರ್‌ಗಳಲ್ಲಿ 8 ವಿಕೆಟ್ ಕಳೆದುಕೊಂಡು 130 ರನ್ ಗಳಿಸಿತು.

ಟಿ20 ವಿಶ್ವಕಪ್ ಸೂಪರ್ 12 ಹಂತದ ಮೊದಲನೇ ಗುಂಪಿನ ಪಂದ್ಯದಲ್ಲಿ ಬಲಿಷ್ಠ ಇಂಗ್ಲೆಂಡ್ ತಂಡವನ್ನು  ಐರ್ಲೆಂಡ್ ಮಣಿಸಿತ್ತು. ಅದಕ್ಕೂ ಮೊದಲು ಅರ್ಹತಾ ಸುತ್ತಿನಲ್ಲಿ 2 ಬಾರಿ ಚಾಂಪಿಯನ್ ಆಗಿದ್ದ ವೆಸ್ಟ್ ಇಂಡೀಸ್ ತಂಡವನ್ನು ಸೋಲಿಸಿ ಮನೆಗೆ ಕಳುಹಿಸಿತ್ತು. ಅದೇ ರೀತಿ ಇಂದು ಬಲಿಷ್ಠ ಪಾಕಿಸ್ತಾನವನ್ನು ಜಿಂಬಾಬ್ವೆ ಸೋಲಿಸಿದೆ. ಸಣ್ಣ ತಂಡಗಳು ಯಾವುದೇ ಒತ್ತಡವಿಲ್ಲದೆ ಆಡಿ ಬಲಿಷ್ಟ ತಂಡಗಳನ್ನು ಮಣಿಸುತ್ತಿವೆ.

ಇದನ್ನೂ ಓದಿ: ನೆದರ್ಲೆಂಡ್ಸ್ ವಿರುದ್ಧ ಸುಲಭ ಜಯ ಸಾಧಿಸಿದ ಭಾರತ: ಸೆಮಿಫೈನಲ್‌ನತ್ತ ಹೆಜ್ಜೆ

ಭಾರತದ ಎದುರು ಸೋಲು ಕಂಡಿದ್ದ ಪಾಕಿಸ್ತಾನ ಈಗ ಜಿಂಬಾಬ್ವೆ ವಿರುದ್ದವೂ ಸೋತಿದೆ. ಇನ್ನೊಂದೆಡೆ 2ನೇ ಗ್ರೂಪ್‌ನಲ್ಲಿ ಎರಡು ತಂಡಕ್ಕೆ ಮಾತ್ರ ಸೆಮಿಫೈನಲ್ ತಲುಪುವ ಅವಕಾಶವಿದೆ. ಭಾರತ ಎರಡು ಗೆಲುವಿನೊಂದಿಗೆ ಮುಂದಿದೆ. ದಕ್ಷಿಣ ಆಫ್ರಿಕಾ ತಂಡ ಒಂದು ಗೆಲುವು ಒಂದು ಟೈನೊಂದಿಗೆ 3 ಅಂಕ ಗಳಿಸಿದೆ. ಹಾಗಾಗಿ ಪಾಕಿಸ್ತಾನದ ಸೆಮಿಫೈನಲ್ ಹಾದಿ ದುರ್ಗಮ ಅಂತಲೇ ಹೇಳಬೇಕಿದೆ.

ಪಾಕಿಸ್ತಾನ ತಂಡ ಮೊದಲನೇ ಪಂದ್ಯದಲ್ಲಿಯೂ ಸಹ ಭಾರತದ ಎದುರು ಗೆಲುವಿನ ಸನಿಹಕ್ಕೆ ಬಂದು ಎಡವಿತ್ತು. ಕೊನೆಯ ಓವರ್‌ನಲ್ಲಿ 16 ರನ್ ಬಿಟ್ಟುಕೊಟ್ಟು ಕೊನೆಯ ಎಸೆತದಲ್ಲಿ ಸೋಲೊಪ್ಪಿಕೊಂಡರು. ಇಂದು ಅದೇ ಪುನಾರಾವರ್ತನೆ ಆಯಿತು. ಬ್ಯಾಟಿಂಗ್‌ನಲ್ಲಿ ಕೊನೆಯವರೆಗೂ ತಲುಪಿ ಒಂದು ರನ್‌ನಿಂದ ಸೋಲು ಕಂಡರು.

ಪಾಕಿಸ್ತಾನಕ್ಕೆ ಸೂಪರ್ 12 ಹಂತದಲ್ಲಿ ಕೊನೆಯ ಮೂರು ಪಂದ್ಯಗಳು ಬಾಕಿ ಇವೆ. ದಕ್ಷಿಣ ಆಫ್ರಿಕಾ, ಬಾಂಗ್ಲಾದೇಶ ಮತ್ತು ನೆದರ್ಲೆಂಡ್ಸ್ ವಿರುದ್ದ ಪಾಕ್ ಗೆಲ್ಲಲೇಬೇಕು. ಅಷ್ಟು ಮಾತ್ರವಲ್ಲದೆ ಭಾರತ ಮತ್ತು ದಕ್ಷಿಣ ಆಫ್ರಿಕಾ ತಂಡಗಳು ಸತತ ಸೋತರೆ ಮಾತ್ರ ಪಾಕಿಸ್ತಾನಕ್ಕೆ ಸೆಮಿಫೈನಲ್ ಅವಕಾಶವಿದೆ. ಅದರೆ ಅದು ಅಷ್ಟು ಸುಲಭವಲ್ಲ.

ಕಳೆದ ವರ್ಷದ ಟಿ20 ವಿಶ್ವಕಪ್‌ನಲ್ಲಿ ಪಾಕಿಸ್ತಾನ 5ಕ್ಕೆ 5 ಪಂದ್ಯ ಗೆದ್ದು ಸೆಮಿಫೈನಲ್ ತಲುಪಿತ್ತು. ಆದರೆ ಅಲ್ಲಿ ಆಸ್ಟ್ರೇಲಿಯಾದ ಎದುರು ಸೋಲನ್ನು ಅನುಭವಿಸಿತ್ತು. ಆದರೆ ಈ ಬಾರಿ ಸೆಮಿಫೈನಲ್ ತಲುಪುವುದು ದುಸ್ತರವಾಗಿದೆ.

ಪಾಕಿಸ್ತಾನದ ಸೋಲಿನಿಂದ ಭಾರತ ಮತ್ತು ದಕ್ಷಿಣ ಆಫ್ರಿಕಾ ತಂಡಗಳ ಸೆಮಿಫೈನಲ್ ಹಾದಿ ಮತ್ತಷ್ಟು ಸುಲಭವಾಗಲಿದೆ. ನವೆಂಬರ್ 03 ರಂದು ಪಾಕಿಸ್ತಾನ ಮತ್ತು ದಕ್ಷಿಣ ಆಫ್ರಿಕ ತಂಡದ ನಡುವಿನ ಪಂದ್ಯ ಮತ್ತಷ್ಟು ಮಹತ್ವ ಪಡೆದುಕೊಂಡಿದೆ.

ಇದನ್ನೂ ಓದಿ; ಟಿ20 ವಿಶ್ವಕಪ್ ಕ್ರಿಕೆಟ್: ಬಲಿಷ್ಠ ಇಂಗ್ಲೆಂಡ್ ಮಣಿಸಿದ ಐರ್ಲೆಂಡ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗಂಗಾವತಿ : ವಿದೇಶಿ ಮಹಿಳೆ ಸೇರಿ ಇಬ್ಬರ ಅತ್ಯಾಚಾರ, ಓರ್ವನ ಕೊಲೆ ಪ್ರಕರಣ : ಮೂವರು ದೋಷಿಗಳು ಎಂದ ಕೋರ್ಟ್

ಕೊಪ್ಪಳದ ಗಂಗಾವತಿ ತಾಲೂಕಿನ ಸಾಣಾಪುರ ಕೆರೆ ಬಳಿ ಸ್ಥಳೀಯ ಹೋಮ್‌ ಸ್ಟೇ ಮಾಲಕಿ ಮತ್ತು ಇಸ್ರೇಲಿ ಯುವತಿ ಮೇಲೆ ಅತ್ಯಾಚಾರವೆಸಗಿ, ಅವರ ಜೊತೆಗಿದ್ದ ಯುವಕನನ್ನು ಕೊಲೆಗೈದ ಪ್ರಕರಣದ ಮೂವರು ಆರೋಪಿಗಳನ್ನು ಒಂದನೇ ಹೆಚ್ಚುವರಿ...

ರಾಜಸ್ಥಾನದ ಬುಂಡಿಯಲ್ಲಿ ಎರಡು ಬಾಲ್ಯ ವಿವಾಹಗಳು ಸ್ಥಗಿತ; ಬಾಲಕಿಯರ ದೂರಿನ ಮೇರೆಗೆ ಅಧಿಕಾರಿಗಳ ಮಧ್ಯಪ್ರವೇಶ

ಕೋಟಾ: ಫೆಬ್ರವರಿ 10ರಂದು ನಿಗದಿಯಾಗಿದ್ದ ತಮ್ಮ ವಿವಾಹಗಳನ್ನು ನಿಲ್ಲಿಸುವಂತೆ ರಾಜಸ್ಥಾನದ ಬುಂಡಿ ಜಿಲ್ಲೆಯ 12ನೇ ತರಗತಿಯಲ್ಲಿ ಓದುತ್ತಿರುವ ಇಬ್ಬರು ಹುಡುಗಿಯರು ಅಧಿಕಾರಿಗಳನ್ನು ಸಂಪರ್ಕಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. 17 ವರ್ಷದ ಬಾಲಕಿಯೊಬ್ಬಳು ತನ್ನ...

ಮುಂಬೈ ಮೇಯರ್ ಅಭ್ಯರ್ಥಿಯಾಗಿ ಬಿಜೆಪಿಯ ರಿತು ತಾವ್ಡೆ, ಉಪಮೇಯರ್ ಹುದ್ದೆಗೆ ಶಿವಸೇನೆಯ ಸಂಜಯ್ ಶಂಕರ್ ಘಾಡಿ ಹೆಸರು ಘೋಷಣೆ

ಮುಂಬೈ: ಭಾರತೀಯ ಜನತಾ ಪಕ್ಷ (ಬಿಜೆಪಿ) ಶನಿವಾರ ಮುಂಬೈ ಮೇಯರ್ ಚುನಾವಣೆಗೆ ಕಾರ್ಪೊರೇಟರ್ ರಿತು ತವಾಡೆ ಅವರನ್ನು ನಾಮನಿರ್ದೇಶನ ಮಾಡಿದ್ದರೆ, ಅದರ ಮಿತ್ರ ಪಕ್ಷ ಶಿವಸೇನೆ ಸಂಜಯ್ ಘಾಡಿ ಅವರನ್ನು ಉಪ ಮೇಯರ್...

ಪಾಕಿಸ್ತಾನದ ಶಿಯಾ ಮಸೀದಿಯಲ್ಲಿ ನಡೆದ ಆತ್ಮಾಹುತಿ ಬಾಂಬ್ ದಾಳಿ ಹೊಣೆ ಹೊತ್ತ ಐಸಿಸ್ 

ಪಾಕಿಸ್ತಾನದ ರಾಜಧಾನಿ ಇಸ್ಲಾಮಾಬಾದ್‌ನ ಮಸೀದಿಯಲ್ಲಿ ನಡೆದ ಆತ್ಮಾಹುತಿ ಬಾಂಬ್ ಸ್ಫೋಟದ ಹೊಣೆಯನ್ನು ಇಸ್ಲಾಮಿಕ್ ಸ್ಟೇಟ್ ಎಂದು ಕರೆಯಲ್ಪಡುವ ಗುಂಪು ಹೊತ್ತುಕೊಂಡಿದೆ, ಈ ಬಾಂಬ್ ಸ್ಫೋಟದಲ್ಲಿ ಕನಿಷ್ಠ 31 ಜನರು ಸಾವನ್ನಪ್ಪಿದ್ದಾರೆ ಮತ್ತು 169...

ಸಮನ್ಸ್ ಚರ್ಚೆ ನಡುವೆ ‘ಸಹಯೋಗ್’ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಕುನಾಲ್ ಕಾಮ್ರಾ

ಮಹಾರಾಷ್ಟ್ರದ ಮಾಜಿ ಉಪಮುಖ್ಯಮಂತ್ರಿ ಹಾಗೂ ಹಾಲಿ ಉಪ ಮುಖ್ಯಮಂತ್ರಿ ಏಕನಾಥ್ ಶಿಂದೆ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಮಹಾರಾಷ್ಟ್ರ ವಿಧಾನಪರಿಷತ್ತಿನ ಹಕ್ಕುಚ್ಯುತಿ ಸಮಿತಿ ಹಾಸ್ಯ ಕಲಾವಿದ ಕುನಾಲ್ ಕಾಮ್ರಾ ಅವರಿಗೆ...

ದ್ವೇಷ ಭಾಷಣ-ನಕಲಿ ಸುದ್ದಿಗಳಿಗೆ ಕಡಿವಾಣ ಹಾಕಲು AI ತಂತ್ರಜ್ಞಾನ ಬಳಕೆಗೆ ಮುಂದಾದ ರಾಜ್ಯ ಸರ್ಕಾರ: 67.26 ಕೋಟಿ ರೂ ವೆಚ್ಚದಲ್ಲಿ ಸಾಫ್ಟ್‌ವೇರ್ ಅಭಿವೃದ್ಧಿ..!

ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳು (ತಡೆಗಟ್ಟುವಿಕೆ) ಮಸೂದೆ, 2025 ಬಾಕಿ ಉಳಿದಿರುವುದರಿಂದ, ದ್ವೇಷ ಭಾಷಣ, ನಕಲಿ ಸುದ್ದಿ ಮತ್ತು ಸಂಘಟಿತ ಆನ್‌ಲೈನ್ ತಪ್ಪು ಮಾಹಿತಿಯ ಹೆಚ್ಚಳವನ್ನು ನಿಭಾಯಿಸಲು ರಾಜ್ಯ ಸರ್ಕಾರ...

ಭಾರತ-ಅಮೆರಿಕ ವ್ಯಾಪಾರ ಒಪ್ಪಂದ : ಭಾರತದ ಮೇಲಿನ ಸುಂಕ ಶೇ.18ಕ್ಕೆ ಇಳಿಕೆ

ವ್ಯಾಪಾರ ಒಪ್ಪಂದಕ್ಕೆ ಸಂಬಂಧಪಟ್ಟಂತೆ ಭಾರತ ಮತ್ತು ಅಮೆರಿಕ ಶನಿವಾರ (ಫೆ.7) ಜಂಟಿ ಹೇಳಿಕೆ ಬಿಡುಗಡೆ ಮಾಡಿದ್ದು, ಮಧ್ಯಂತರ ವ್ಯಾಪಾರ ಒಪ್ಪಂದದ ಚೌಕಟ್ಟನ್ನು (Interim Trade Agreement Framework) ಅಂತಿಮಗೊಳಿಸಿರುವುದಾಗಿ ತಿಳಿಸಿವೆ. ಈ ಒಪ್ಪಂದದ ಅಡಿಯಲ್ಲಿ,...

‘ಮಹಿಳೆಯನ್ನು ಗರ್ಭಧಾರಣೆ ಪೂರ್ಣಗೊಳಿಸುವಂತೆ ಒತ್ತಾಯಿಸಲು ಸಾಧ್ಯವಿಲ್ಲ’: ಅಪ್ರಾಪ್ತೆಗೆ 30 ವಾರಗಳ ಗರ್ಭಧಾರಣೆ ಅಂತ್ಯಗೊಳಿಸಲು ಸುಪ್ರೀಂ ಅನುಮತಿ

ನವದೆಹಲಿ: 17 ವರ್ಷದ ಬಾಲಕಿಯ 30 ವಾರಗಳ ಗರ್ಭಧಾರಣೆಯನ್ನು ವೈದ್ಯಕೀಯವಾಗಿ ಮುಕ್ತಾಯಗೊಳಿಸುವಂತೆ ನಿರ್ದೇಶಿಸಿದ ಸುಪ್ರೀಂ ಕೋರ್ಟ್, ನ್ಯಾಯಾಲಯಗಳು ಮಹಿಳೆಯನ್ನು, ಅಪ್ರಾಪ್ತ ವಯಸ್ಕಳನ್ನು ಹೊರತುಪಡಿಸಿ, ಗರ್ಭಧಾರಣೆಯನ್ನು ಮುಂದುವರಿಸಲು ಒತ್ತಾಯಿಸಲು ಸಾಧ್ಯವಿಲ್ಲ ಎಂದು ಶುಕ್ರವಾರ ಹೇಳಿದೆ. ನ್ಯಾಯಮೂರ್ತಿಗಳಾದ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಶಿಯಾ ಧಾರ್ಮಿಕ ಕೇಂದ್ರದಲ್ಲಿ ಆತ್ಮಾಹುತಿ ಬಾಂಬ್ ದಾಳಿ: ಕನಿಷ್ಠ 30 ಸಾವು, 160 ಕ್ಕೂ ಹೆಚ್ಚು ಜನರಿಗೆ ಗಾಯ

ಇಸ್ಲಾಮಾಬಾದ್: ಶುಕ್ರವಾರ ಇಸ್ಲಾಮಾಬಾದ್‌ನ ಶಿಯಾ ಧಾರ್ಮಿಕ ಕೇಂದ್ರದಲ್ಲಿ ಪ್ರಾರ್ಥನೆ ವೇಳೆ ನಡೆದ ಆತ್ಮಾಹುತಿ ದಾಳಿಯಲ್ಲಿ ಕನಿಷ್ಠ 30 ಜನರು ಸಾವನ್ನಪ್ಪಿ, 160 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.  ಪಾಕಿಸ್ತಾನ ರಾಜಧಾನಿಯ ಶೆಹಜಾದ್ ಟೌನ್ ಪ್ರದೇಶದ...

ನಾಳೆ ದೊರೈರಾಜ್‌ ಅವರ ‘ನಮ್ಮ ಹಟ್ಟಿ’ ಆತ್ಮಕಥೆ ಬಿಡುಗಡೆ

ದಲಿತ ಚಳವಳಿಯ ಹಿರಿಯ ಮುಖಂಡರಾದ ತುಮಕೂರಿನ ಕೆ.ದೊರೈರಾಜ್‌ ಅವರ 'ನಮ್ಮಹಟ್ಟಿ' ಆತ್ಮಕಥೆ ಶನಿವಾರ ಬೆಂಗಳೂರಿನ ಚಿತ್ರಕಲಾ ಪರಿಷತ್ತಿನಲ್ಲಿ ಬಿಡುಗಡೆಯಾಗಲಿದೆ. ಸರ್ಕಾರಿ ಅಧಿಕಾರಿಯಾಗಿದ್ದ ದೊರೈರಾಜ್‌ ಅವರು, ತಮ್ಮ ವಿದ್ಯಾರ್ಥಿ ಜೀವನದಿಂದಲೇ ದಲಿತ ಚಳವಳಿಯಲ್ಲಿ ಗುರುತಿಸಿಕೊಂಡವರು....