Homeಮುಖಪುಟಪಾಕಿಸ್ತಾನ: ಧರ್ಮನಿಂದನೆ ಆರೋಪದಲ್ಲಿ ಪೊಲೀಸ್ ಬಂಧನದಲ್ಲಿದ್ದ ವ್ಯಕ್ತಿಯ ಕೊಲೆ; ಠಾಣೆಗೆ ನುಗ್ಗಿ ಉದ್ರಿಕ್ತ ಗುಂಪಿನ ಅಟ್ಟಹಾಸ

ಪಾಕಿಸ್ತಾನ: ಧರ್ಮನಿಂದನೆ ಆರೋಪದಲ್ಲಿ ಪೊಲೀಸ್ ಬಂಧನದಲ್ಲಿದ್ದ ವ್ಯಕ್ತಿಯ ಕೊಲೆ; ಠಾಣೆಗೆ ನುಗ್ಗಿ ಉದ್ರಿಕ್ತ ಗುಂಪಿನ ಅಟ್ಟಹಾಸ

- Advertisement -
- Advertisement -

“ಪಾಕಿಸ್ತಾನದ ನಂಕಾನಾ ಸಾಹಿಬ್ ನಗರದಲ್ಲಿ ಧರ್ಮನಿಂದೆಯ ಆರೋಪದ ಮೇಲೆ ಬಂಧಿಸಲಾಗಿದ್ದ ವ್ಯಕ್ತಿಯನ್ನು ಉದ್ರಿಕ್ತ ಗುಂಪೊಂದು ಶನಿವಾರ ಪೊಲೀಸ್ ಠಾಣೆಗೆ ನುಗ್ಗಿ ಕೊಂದಿದೆ” ಎಂದು ಪಾಕಿಸ್ತಾನದ ‘ಡಾನ್’ ಮಾಧ್ಯಮ ವರದಿ ಮಾಡಿದೆ.

ಸಂತ್ರಸ್ತ ಮುಹಮ್ಮದ್ ವಾರಿಸ್, ಕುರಾನ್‌ನ ಕೆಲವು ಪುಟಗಳನ್ನು ಅಪವಿತ್ರಗೊಳಿಸಿದ್ದಾರೆ ಎಂದು ಆರೋಪಿಸಲಾಗಿತ್ತು. ಉದ್ರಿಕ್ತ ಗುಂಪು ಶನಿವಾರ ವಾರಿಸ್‌ನನ್ನು ನೇಣಿಗೆ ಹಾಕಲು ಪ್ರಯತ್ನಿಸಿತ್ತು, ಆದರೆ ಪೊಲೀಸರು ಆತನನ್ನು ವಶಕ್ಕೆ ಪಡೆದುಕೊಂಡಿದ್ದರು.

ದೊಡ್ಡ ಗುಂಪೊಂದು ನಂಕಾನಾ ಸಾಹಿಬ್ ಪೊಲೀಸ್ ಠಾಣೆಯ ಗೇಟ್‌ಗಳನ್ನು ಒಡೆದು, ಆವರಣಕ್ಕೆ ನುಗ್ಗುತ್ತಿರುವ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್‌ ಆಗಿದೆ.

“ಪೊಲೀಸರು ಅವರನ್ನು [ಜನಸಮೂಹ] ತಡೆಯಲು ಸಾಧ್ಯವಾಗಲಿಲ್ಲ. ಏಕೆಂದರೆ ಬೆರಳೆಣಿಕೆಯಷ್ಟು ಅಧಿಕಾರಿಗಳು ಪೊಲೀಸ್ ಠಾಣೆಯಲ್ಲಿ ಇದ್ದರು” ಎಂದು ಪೊಲೀಸ್ ವಕ್ತಾರ ಮುಹಮ್ಮದ್ ವಕಾಸ್ ರಾಯಿಟರ್ಸ್‌‌ಗೆ ತಿಳಿಸಿದ್ದಾರೆ.

ಆರೋಪಿಯನ್ನು ಸೆರೆಮನೆಯಿಂದ ಹೊರಗೆ ಎಳೆದೊಯ್ದು ಹೊಡೆದು ಕೊಲ್ಲಲಾಗಿದೆ. ದೇಹಕ್ಕೆ ಬೆಂಕಿ ಹಚ್ಚುವುದನ್ನು ತಡೆಯಲಷ್ಟೇ ಪೊಲೀಸ್ ಸಿಬ್ಬಂದಿಗೆ ಸಾಧ್ಯವಾಯಿತು ಎಂದು ವಕಾಸ್ ತಿಳಿಸಿದ್ದಾರೆ.

ಘಟನೆಯ ನಂತರ ಪಂಜಾಬ್ ಇನ್ಸ್‌ಪೆಕ್ಟರ್ ಜನರಲ್ ಡಾ ಉಸ್ಮಾನ್ ಅನ್ವರ್ ಅವರು ಸ್ಟೇಷನ್ ಹೌಸ್ ಆಫೀಸರ್ ಮತ್ತು ನಂಕಾನಾ ಸಾಹಿಬ್ ಸರ್ಕಲ್ ಡೆಪ್ಯುಟಿ ಸೂಪರಿಂಟೆಂಡೆಂಟ್ ಆಫ್ ಪೊಲೀಸ್ ನವಾಜ್ ವಾರಕ್ ಅವರನ್ನು ಅಮಾನತುಗೊಳಿಸಿದ್ದಾರೆ ಎಂದು ‘ಜಿಯೋ ನ್ಯೂಸ್’ ವರದಿ ಮಾಡಿದೆ.

ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಷರೀಫ್ ಘಟನೆಯನ್ನು ಟೀಕಿಸಿದ್ದು, ತನಿಖೆಗೆ ಆದೇಶಿಸಿದ್ದಾರೆ ಎಂದು ವರದಿಯಾಗಿದೆ.

ಈ ವರ್ಷದ ಆರಂಭದಲ್ಲಿ ಪಾಕಿಸ್ತಾನದ ಮಾನವ ಹಕ್ಕುಗಳ ಆಯೋಗವು ಬಿಡುಗಡೆ ಮಾಡಿದ ‘ಎ ಬ್ರೀಚ್ ಆಫ್ ಫೇಯ್ತ್: ಫ್ರೀಡಂ ಆಫ್ ರಿಲಿಜನ್ ಆರ್‌ ಬಿಲೀಫ್ ಇನ್ 2021-22’ ಎಂಬ ವರದಿಯು ದೇಶದಲ್ಲಿ ಧರ್ಮನಿಂದೆಯ ಪ್ರಕರಣಗಳ ಆತಂಕಕಾರಿ ಏರಿಕೆಯನ್ನು ಪ್ರಕಟಿಸಿತ್ತು.

2021ರ ಪೊಲೀಸ್ ಅಂಕಿಅಂಶಗಳು, ಈ ವರ್ಷದಲ್ಲಿ ಧರ್ಮನಿಂದೆಯ ಕಾನೂನಿನ ಅಡಿಯಲ್ಲಿ 585 ಪ್ರಕರಣಗಳನ್ನು ದಾಖಲಿಸಲಾಗಿದೆ ಎಂದಿವೆ. ಹೆಚ್ಚಿನ ಪ್ರಕರಣಗಳು ಪಂಜಾಬ್ ಪ್ರಾಂತ್ಯದಲ್ಲಿ ದಾಖಲಾಗಿವೆ ಎಂದು ವರದಿ ತಿಳಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...

ಸೌದಿಗೆ ಪ್ರಯಾಣಿಸುವ ತನ್ನ ನಾಗರಿಕರಿಗೆ ಎಚ್ಚರಿಕೆ ನೀಡಿದ ಅಮೆರಿಕ

ಸೌದಿ ಅರೇಬಿಯಾ ಬೆಂಬಲಿತ ಪಡೆಗಳು ಮತ್ತು ಯೆಮೆನ್‌ನ ಹೌದಿ ಬಂಡುಕೋರರ ನಡುವಿನ ಸಂಘರ್ಷ ತೀವ್ರಗೊಂಡಿದ್ದು, ಸೌದಿ ಯುದ್ಧ ವಿಮಾನವೊಂದನ್ನು ಹೊಡೆದುರುಳಿಸಿರುವುದಾಗಿ ಹೌದಿ ಪಡೆಗಳು ಪ್ರತಿಪಾದಿಸಿವೆ. ಮತ್ತೊಂದೆಡೆ, ಪವಿತ್ರ ನಗರಿ ಮಕ್ಕಾದ ದಕ್ಷಿಣ ಭಾಗದಲ್ಲಿ...

ಪ್ರಜ್ವಲ್ ಪ್ರಕರಣ ಮುಂದಿಟ್ಟುಕೊಂಡು ‘ದೇವೇಗೌಡರ ಕುಟುಂಬದ ಧ್ವನಿ ಅಡಗಿಸಲು ಅಸಾಧ್ಯ’: ಸರ್ಕಾರದ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ಹೊಳೆನರಸೀಪುರ: ಪ್ರಜ್ವಲ್ ರೇವಣ್ಣ ಪ್ರಕರಣದ ನೆಪದಲ್ಲಿ ದೇವೇಗೌಡರ ಕುಟುಂಬದ ಧ್ವನಿಯನ್ನು ಅಡಗಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಜೈಲಿನಲ್ಲಿದ್ದ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣ ಅವರಿಗೆ ಮೊಬೈಲ್‌ ಫೋನ್ ಹಾಗೂ...