Homeಅಂತರಾಷ್ಟ್ರೀಯಭಾರತ-ಪಾಕ್ ಸಂಘರ್ಷ ಶಮನ: ಟ್ರಂಪ್‌ಗೆ ನೊಬೆಲ್ ಶಾಂತಿ ಪ್ರಶಸ್ತಿ ನೀಡಲು ಪಾಕ್ ನಾಮನಿರ್ದೇಶನ!

ಭಾರತ-ಪಾಕ್ ಸಂಘರ್ಷ ಶಮನ: ಟ್ರಂಪ್‌ಗೆ ನೊಬೆಲ್ ಶಾಂತಿ ಪ್ರಶಸ್ತಿ ನೀಡಲು ಪಾಕ್ ನಾಮನಿರ್ದೇಶನ!

ಅಮೆರಿಕ ಅಧ್ಯಕ್ಷ ಏನಂದ್ರು?

- Advertisement -
- Advertisement -

ಪಹಲ್ಗಾಮ್ ಭಯೋತ್ಪಾದಕ ದಾಳಿ ಬಳಿಕ ಭಾರತ-ಪಾಕಿಸ್ತಾನ ನಡುವೆ ಏರ್ಪಟ್ಟಿದ್ದ ಸಂಘರ್ಷವನ್ನು ಶಮನ ಮಾಡುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಕ್ಕೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ ಅವರನ್ನು 2026ರ ‘ನೊಬೆಲ್ ಶಾಂತಿ ಪ್ರಶಸ್ತಿ’ಗೆ ಪಾಕಿಸ್ತಾನ ನಾಮನಿರ್ದೇಶನ ಮಾಡಿದೆ ಎಂದು ವರದಿಯಾಗಿದೆ.

ಪಾಕಿಸ್ತಾನ ಸರ್ಕಾರದ ಅಧಿಕೃತ ಎಕ್ಸ್ ಖಾತೆಯಲ್ಲಿ ಈ ಬಗ್ಗೆ ಪೋಸ್ಟ್ ಹಾಕಲಾಗಿದೆ ಎಂದು ಪ್ರಮುಖ ಮಾಧ್ಯಮಗಳು ವರದಿ ಮಾಡಿವೆ.

“ಪಾಕಿಸ್ತಾನ ಸರ್ಕಾರ 2026ರ ನೊಬೆಲ್ ಶಾಂತಿ ಪ್ರಶಸ್ತಿಗೆ ಡೊನಾಲ್ಡ್ ಜೆ.ಟ್ರಂಪ್ ಅವರ ಹೆಸರನ್ನು ಶಿಫಾರಸ್ಸು ಮಾಡುತ್ತಿದೆ. ಭಾರತ-ಪಾಕ್ ಸಂಘರ್ಷದ ಸಂದರ್ಭದಲ್ಲಿ ಟ್ರಂಪ್ ವಹಿಸಿದ ಪ್ರಮುಖ ರಾಜತಾಂತ್ರಿಕ ಮಧ್ಯಸ್ಥಿಕೆ ಮತ್ತು ಪರಿವರ್ತನಾಶೀಲ ನಾಯಕತ್ವ ಪ್ರದರ್ಶಿಸಿದ್ದನ್ನು ಗುರುತಿಸಿ ಪಾಕಿಸ್ತಾನ ಸರ್ಕಾರವು 2026ರ ನೊಬೆಲ್ ಶಾಂತಿ ಪುರಸ್ಕಾರಕ್ಕೆ ಡೊನಾಲ್ಡ್ ಜೆ.ಟ್ರಂಪ್ ಅವರ ಹೆಸರನ್ನು ಅಧಿಕೃತವಾಗಿ ಶಿಫಾರಸ್ಸು ಮಾಡುತ್ತಿದೆ” ಎಂದು ಪೋಸ್ಟ್‌ನಲ್ಲಿ ಹೇಳಿರುವುದಾಗಿ ವರದಿಗಳು ವಿವರಿಸಿವೆ.

ಭಾರತ- ಪಾಕಿಸ್ತಾನದ ಸಂಘರ್ಷದ ಬಳಿಕ ಮೊದಲ ಬಾರಿಗೆ ಅಮೆರಿಕಕ್ಕೆ ಭೇಟಿ ನೀಡಿದ್ದ ಪಾಕಿಸ್ತಾನ ಸೇನೆಯ ಮುಖ್ಯಸ್ಥ ಅಸೀಮ್ ಮುನೀರ್ ಅವರಿಗೆ, ಅಧ್ಯಕ್ಷ ಟ್ರಂಪ್ ಜೂನ್ 18ರಂದು ಶ್ವೇತಭವನದಲ್ಲಿ ವಿಶೇಷ ಔತಣಕೂಟ ಆಯೋಜಿಸಿದ್ದರು. ಇದರ ಮರುದಿನವೇ ಪಾಕಿಸ್ತಾನದಿಂದ ಈ ಅಚ್ಚರಿಯ ಹೇಳಿಕೆ ಹೊರಬಿದ್ದಿದೆ.

ಪಹಲ್ಗಾಮ್ ದಾಳಿ ಬಳಿಕ ಪಾಕಿಸ್ತಾನ ಪ್ರೇರಿತ ಮತ್ತು ಇತರ ರೀತಿಯ ಭಯೋತ್ಪಾದನೆಯ ಕುರಿತ ಭಾರತದ ನಿಲುವನ್ನು ಜಗತ್ತಿಗೆ ತಿಳಿಸಲು ಭಾರತ ಸರ್ಕಾರ ಸರ್ವಪಕ್ಷ ಸಂಸದರ ಸುಮಾರು 7 ನಿಯೋಗಗಳನ್ನು ವಿವಿಧ ರಾಷ್ಟ್ರಗಳಿಗೆ ಕಳುಹಿಸಿತ್ತು.

ಈ ನಿಯೋಗಗಳು ಜಾಗತಿಕ ಮಟ್ಟದಲ್ಲಿ ಪಾಕಿಸ್ತಾನದ ಬಣ್ಣ ಬಯಲು ಮಾಡಿದೆ ಎಂದು ಹೇಳಲಾಗಿತ್ತು. ಇದಾಗಿ ಕೆಲ ದಿನಗಳಲ್ಲೇ ಅಮೆರಿಕ ಅಧ್ಯಕ್ಷ ಪಾಕಿಸ್ತಾನದ ಸೇನಾ ಮುಖ್ಯಸ್ಥರಿಗೆ ಔತಣಕೂಟ ಆಯೋಜಿಸಿ ಗೌರವಿಸಿರುವುದು ಭಾರತಕ್ಕೆ ಒಂದು ರೀತಿಯಲ್ಲಿ ರಾಜತಾಂತ್ರಿಕ ಹಿನ್ನಡೆ ಎನ್ನಬಹುದು.

ಟ್ರಂಪ್ ಮಧ್ಯಸ್ಥಿಕೆ ಅಲ್ಲಗಳೆದ ಭಾರತ

ಭಾರತ-ಪಾಕಿಸ್ತಾನ ನಡುವೆ ಸಂಘರ್ಷ ಏರ್ಪಟಿದ್ದಾಗ, ಆರಂಭದಲ್ಲಿ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದ ಅಮೆರಿಕ ಅಧ್ಯಕ್ಷ ಟ್ರಂಪ್, “ಅದು ಆ ಎರಡು ರಾಷ್ಟ್ರಗಳ ನಡುವಿನ ಸಂಘರ್ಷ. ಈ ರೀತಿಯ ಸಂಘರ್ಷ ಭಾರತ-ಪಾಕಿಸ್ತಾನ ನಡುವೆ ಸುದೀರ್ಘ ಸಮಯದಿಂದ ಇದೆ. ನಮಗೆ ಭಾರತ-ಪಾಕಿಸ್ತಾನ ಎರಡೂ ಮಿತ್ರ ರಾಷ್ಟ್ರಗಳೇ. ಅವರ ಸಮಸ್ಯೆಯನ್ನು ಅವರು ಬಗೆ ಹರಿಸಿಕೊಳ್ಳುತ್ತಾರೆ. ನಾವು ಅದರಲ್ಲಿ ತಲೆ ಹಾಕಲು ಹೋಗುವುದಿಲ್ಲ” ಎಂದಿದ್ದರು.

ಆದರೆ, ಮೇ 10ರಂದು ಸಂಜೆ 5.33ರ (ಭಾರತೀಯ ಕಾಲಮಾನ) ಸುಮಾರಿಗೆ ಭಾರತ-ಪಾಕಿಸ್ತಾನ ನಡುವೆ ಕದನ ವಿರಾಮ ಒಪ್ಪಂದಕ್ಕೆ ಒಪ್ಪಿಕೊಂಡಿವೆ ಎಂದು ಟ್ರಂಪ್ ಮೊದಲು ಪೋಸ್ಟ್ ಮಾಡಿದ್ದರು. ಆ ಬಳಿಕವಾಗಿದೆ. ಭಾರತದ ವಿದೇಶಾಂಗ ಕಾರ್ಯದರ್ಶಿ ಮತ್ತು ವಿದೇಶಾಂಗ ಇಲಾಖೆ ಸಚಿವರು ಕದನ ವಿರಾಮದ ಕುರಿತು ಘೋಷಣೆ ಮಾಡಿರುವುದು.

ಈ ಬೆಳವಣಿಗೆ ಭಾರತ-ಪಾಕಿಸ್ತಾನ ನಡುವಿನ ಕದನ ವಿರಾಮ ಒಪ್ಪಂದಲ್ಲಿ ಟ್ರಂಪ್ ಅಥವಾ ಅಮೆರಿಕ ಮಧ್ಯಸ್ಥಿಕೆ ವಹಿಸಿರುವುದನ್ನು ಡೃಢಪಡಿಸಿತ್ತು. ಅಲ್ಲದೆ, ಟ್ರಂಪ್ ತಮ್ಮ ಪೋಸ್ಟ್‌ನಲ್ಲಿ ಕೂಡ ಅಮೆರಿಕ ಮಧ್ಯಸ್ಥಿಕೆಯಿಂದಲೇ ಕದನ ವಿರಾಮ ಏರ್ಪಟ್ಟಿದೆ ಎಂದಿದ್ದರು. (ಟ್ರಂಪ್‌ ಪೋಸ್ಟ್‌ನಲ್ಲಿ ‘Mediate by the United States’ ಎಂದು ಬರೆದಿರುವುದನ್ನು ನೋಡಬಹುದು)

ಸೌದಿಯಲ್ಲಿ ನಡೆದ ಹೂಡಿಕೆ ಸಮಾವೇಶದಲ್ಲಿ ಮಾತನಾಡಿದ್ದ ಟ್ರಂಪ್, ಭಾರತ-ಪಾಕಿಸ್ತಾನ ನಡುವೆ ಕದನ ವಿರಾಮ ಮಾಡಿಸಿದೆ ಎಂದು ಹೇಳಿಕೊಂಡಿದ್ದರು. ಆದರೆ, ಭಾರತ ಟ್ರಂಪ್ ಹೇಳಿಕೆಯನ್ನು ನಿರಾಕರಿಸಿತ್ತು.

ಟ್ರಂಪ್ ಈಗಲೂ ಭಾರತ-ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾವೇ ಎಂದು ಹೇಳಿಕೊಂಡು ತಿರುಗಾಡುತ್ತಿದ್ದಾರೆ. ಭಾರತ ಅದನ್ನು ನಿರಾಕರಿಸುತ್ತಲೇ ಇದೆ. ಈ ನಡುವೆ ಕದನ ವಿರಾಮಕ್ಕೆ ಮಧ್ಯಸ್ಥಿಕೆ ವಹಿಸಿದ್ದಕ್ಕೆ ಟ್ರಂಪ್‌ಗೆ ನೊಬೆಲ್ ಕೊಡುವಂತೆ ಅಮೆರಿಕ ಶಿಫಾರಸ್ಸು ಮಾಡಿರುವುದು ಚರ್ಚೆಯನ್ನು ಮತ್ತೊಂದು ಹಂತಕ್ಕೆ ಕೊಂಡೊಯ್ದಿದೆ.

ಟ್ರಂಪ್ ಪ್ರತಿಕ್ರಿಯೆ ಏನು?

ನೋಬೆಲ್‌ಗೆ ಶಿಫಾರಸ್ಸು ಮಾಡಿರುವ ಬಗ್ಗೆ ಪ್ರತಿಕ್ರಿಯಿಸಿರುವ ಟ್ರಂಪ್, “ಹಿಂಸಾತ್ಮಕ ರಕ್ತಪಾತ, ಸಾವಿಗೆ ಹೆಸರುವಾಸಿಯಾಗಿರುವ ಮತ್ತು ದಶಕಗಳಿಂದ ಯುದ್ಧ ನಡೆಯುತ್ತಿರುವ ಕಾಂಗೋ ಪ್ರಜಾಸತ್ತಾತ್ಮಕ ಗಣರಾಜ್ಯ ಮತ್ತು ರುವಾಂಡಾ ಗಣರಾಜ್ಯದ ನಡುವೆ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ಅವರೊಂದಿಗೆ ಸೇರಿ ಒಪ್ಪಂದ ಮಾಡಿಕೊಂಡಿದ್ದೇನೆ ಎಂದು ತಿಳಿಸಲು ನನಗೆ ತುಂಬಾ ಸಂತೋಷವಾಗುತ್ತಿದೆ. ಈ ಯುದ್ಧವು ಇತರ ಯುದ್ಧಗಳಿಗಿಂತ ಹೆಚ್ಚಾಗಿ ಹಿಂಸಾತ್ಮಕ ರಕ್ತಪಾತ ಮತ್ತು ಸಾವಿಗೆ ಹೆಸರುವಾಸಿಯಾಗಿತ್ತು ಮತ್ತು ದಶಕಗಳಿಂದ ನಡೆಯುತ್ತಿತ್ತು. ದಾಖಲೆಗಳಿಗೆ ಸಹಿ ಹಾಕಲು ರುವಾಂಡಾ ಮತ್ತು ಕಾಂಗೋದ ಪ್ರತಿನಿಧಿಗಳು ಸೋಮವಾರ ವಾಷಿಂಗ್ಟನ್‌ ಆಗಮಿಸಲಿದ್ದಾರೆ. ಇದು ಆಫ್ರಿಕಾಕ್ಕೆ ಮತ್ತು ಸ್ಪಷ್ಟವಾಗಿ ಹೇಳುವುದಾದರೆ, ಜಗತ್ತಿಗೆ ಶ್ರೇಷ್ಠ ದಿನ!. ಇದಕ್ಕಾಗಿ ನನಗೆ ನೊಬೆಲ್ ಶಾಂತಿ ಪ್ರಶಸ್ತಿ ಸಿಗುವುದಿಲ್ಲ” ಎಂದು ಸಾಮಾಜಿಕ ಮಾಧ್ಯಮ ಟ್ರುಥ್ ಸೋಶಿಯಲ್‌ನಲ್ಲಿ ಬರೆದುಕೊಂಡಿದ್ದಾರೆ.

“ಭಾರತ ಮತ್ತು ಪಾಕಿಸ್ತಾನದ ನಡುವಿನ ಯುದ್ಧವನ್ನು ನಿಲ್ಲಿಸಿದ್ದಕ್ಕಾಗಿ ನನಗೆ ನೊಬೆಲ್ ಶಾಂತಿ ಪ್ರಶಸ್ತಿ ಸಿಗುವುದಿಲ್ಲ. ಸೆರ್ಬಿಯಾ ಮತ್ತು ಕೊಸೊವೊ ನಡುವಿನ ಯುದ್ಧವನ್ನು ನಿಲ್ಲಿಸಿದ್ದಕ್ಕಾಗಿ ನನಗೆ ನೊಬೆಲ್ ಶಾಂತಿ ಪ್ರಶಸ್ತಿ ಸಿಗುವುದಿಲ್ಲ, ಈಜಿಪ್ಟ್ ಮತ್ತು ಇಥಿಯೋಪಿಯಾ ನಡುವೆ ಶಾಂತಿ ಕಾಪಾಡಿದ್ದಕ್ಕಾಗಿ ನನಗೆ ನೊಬೆಲ್ ಶಾಂತಿ ಪ್ರಶಸ್ತಿ ಸಿಗುವುದಿಲ್ಲ. (ಯುಎಸ್‌ ಮೂರ್ಖತನದಿಂದ ಹಣಕಾಸು ಒದಗಿಸಿದ ಇಥಿಯೋಪಿಯನ್ ನಿರ್ಮಿಸಿದ ಬೃಹತ್ ಅಣೆಕಟ್ಟು, ನೈಲ್ ನದಿಗೆ ಹರಿಯುವ ನೀರನ್ನು ಗಣನೀಯವಾಗಿ ಕಡಿಮೆ ಮಾಡುತ್ತದೆ) ಮತ್ತು ಮಧ್ಯಪ್ರಾಚ್ಯದಲ್ಲಿ ಅಬ್ರಹಾಂ ಒಪ್ಪಂದಗಳನ್ನು ಮಾಡಿದ್ದಕ್ಕಾಗಿ ನನಗೆ ನೊಬೆಲ್ ಶಾಂತಿ ಪ್ರಶಸ್ತಿ ಸಿಗುವುದಿಲ್ಲ” ಎಂದಿದ್ದಾರೆ.

“ಎಲ್ಲವೂ ಸರಿಯಾಗಿ ನಡೆದರೆ, ಇನ್ನಷ್ಟು ದೇಶಗಳು ಶಾಂತಿ ಒಪ್ಪಂದಕ್ಕೆ ಸಹಿ ಹಾಕಲಿವೆ. ಈ ಮೂಲಕ ಈ ಯುಗದಲ್ಲೇ ಮೊದಲ ಬಾರಿಗೆ ಮಧ್ಯಪ್ರಾಚ್ಯ ಒಂದಾಗಲಿದೆ. ಇಲ್ಲ, ರಷ್ಯಾ-ಉಕ್ರೇನ್ ಮತ್ತು ಇಸ್ರೇಲ್-ಇರಾನ್ ಸೇರಿದಂತೆ ನಾನು ಏನೇ ಮಾಡಿದರೂ ನನಗೆ ನೊಬೆಲ್ ಶಾಂತಿ ಪ್ರಶಸ್ತಿ ಸಿಗುವುದಿಲ್ಲ. ನನ್ನ ಶ್ರಮದ ಫಲಿತಾಂಶಗಳು ಏನೇ ಇರಲಿ. ಅದು ಜನರಿಗೆ ತಿಳಿದಿದೆ. ನನಗೆ ಅಷ್ಟೇ ಮುಖ್ಯ” ಎಂದು ಟ್ರಂಪ್ ಹೇಳಿದ್ದಾರೆ.

ಇಸ್ರೇಲ್-ಇರಾನ್ ಯುದ್ಧಕ್ಕೆ ಅಮೆರಿಕ ಎಂಟ್ರಿ | 2 ವಾರಗಳಲ್ಲಿ ನಿರ್ಧರಿಸುತ್ತೇನೆ ಎಂದ ಟ್ರಂಪ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...

ಮುಂಬೈ| ಬುರ್ಖಾ ಧರಿಸಿ ಲೋಕಲ್‌ ಟ್ರೈನ್‌ನ ಮಹಿಳಾ ಬೋಗಿಯಲ್ಲಿ ಪ್ರಯಾಣಿಸಿದ ವ್ಯಕ್ತಿ ಬಂಧನ

ಮುಂಬೈನ ಉಪನಗರ ರೈಲಿನ ಮಹಿಳಾ ಬೋಗಿಯಲ್ಲಿ ಬುರ್ಖಾ ಧರಿಸಿ ಪ್ರಯಾಣಿಸುತ್ತಿದ್ದ ಆರೋಪದ ಮೇಲೆ ನಾಸಿಕ್‌ನ 57 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ. ಈ ಘಟನೆ ಫೆಬ್ರವರಿ 6 ರಂದು ಘಾಟ್ಕೋಪರ್...

ಎಪ್‌ಸ್ಟೀನ್‌ ಫೈಲ್ಸ್ ಜನಾಕ್ರೋಶ : ಎಐ ಶೃಂಗಸಭೆಯಿಂದ ದೂರ ಉಳಿದ ಬಿಲ್‌ ಗೇಟ್ಸ್‌

ಎಪ್‌ಸ್ಟೀನ್‌ ಫೈಲ್ಸ್‌ ಮುಂದಿಟ್ಟುಕೊಂಡು ಜನರು ತೀವ್ರ ವಿರೋಧ ವ್ಯಕ್ತಪಡಿಸಿದ ಬೆನ್ನಲ್ಲೇ, 'ಇಂಡಿಯಾ ಎಐ ಇಂಪ್ಯಾಕ್ಟ್ ಶೃಂಗಸಭೆ'ಯಿಂದ ಮೈಕ್ರೋಸಾಫ್ಟ್‌ ಸಹ-ಸಂಸ್ಥಾಪಕ ಬಿಲ್ ಗೇಟ್ಸ್ ದೂರ ಉಳಿದಿದ್ದಾರೆ. ಈ ಕುರಿತು ಗೇಟ್ಸ್ ಫೌಂಡೇಶನ್ ಇಂಡಿಯಾ ಗುರುವಾರ...

ಬೆಂಗಳೂರಿನಲ್ಲಿ ರಂಜಾನ್ ಆಹಾರ ಮೇಳ ನಡೆಸದಂತೆ ಹೋಟೆಲ್‌ಗಳಿಗೆ ಎಚ್ಚರಿಕೆ

ಬೆಂಗಳೂರು: ಫ್ರೇಸರ್ ಟೌನ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿನ ಎಂಎಂ ರಸ್ತೆಯಲ್ಲಿ ರಂಜಾನ್ ಆಹಾರ ಮೇಳ ನಡೆಸದಂತೆ ಹೋಟೆಲ್ ಮಾಲೀಕರಿಗೆ ಸ್ಥಳೀಯ ನಿವಾಸಿಗಳು ಎಚ್ಚರಿಕೆ ನೀಡಿದ್ದಾರೆ. ರಂಜಾನ್ ಆಹಾರ ಮೇಳದಿಂದ ಸಂಚಾರ ದಟ್ಟಣೆ. ಅವ್ಯವಸ್ಥೆಯ ಜೊತೆಗೆ...

‘ದಿ ಕೇರಳ ಸ್ಟೋರಿ-2’ ಚಲನಚಿತ್ರ ಜಾತ್ಯತೀತತೆಗೆ ಬೆದರಿಕೆ: ಮುಖ್ಯಮಂತ್ರಿ ಪಿಣರಾಯಿ ವಿಜಯನ್

'ದಿ ಕೇರಳ ಸ್ಟೋರಿ' ಚಿತ್ರದ ಎರಡನೇ ಭಾಗ ಬಿಡುಗಡೆಯಾಗುತ್ತಿರುವ ಬಗ್ಗೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಕಳವಳ ವ್ಯಕ್ತಪಡಿಸಿದ್ದು, ಇದರ ಮೊದಲ ಭಾಗವು "ರಾಜ್ಯದ ವಿರುದ್ಧ ದ್ವೇಷವನ್ನು ಹರಡುವ ಮತ್ತು ನಮ್ಮ ಜಾತ್ಯತೀತ...

ಬಿಜೆಪಿ ಸೇರಲು ಸಿದ್ದರಾದ ಭೂಪೇನ್ ಬೋರಾ : ಪ್ರಿಯಾಂಕಾ, ಡಿಕೆಶಿ ಸೇರಿದಂತೆ ‘ಕೈ ಟ್ರಬಲ್ ಶೂಟರ್‌ಗಳು’ ಅಸ್ಸಾಂಗೆ ದೌಡು

ರಾಜ್ಯ ಕಾಂಗ್ರೆಸ್‌ ಘಟಕದ ಮಾಜಿ ಅಧ್ಯಕ್ಷ ಭೂಪೇನ್ ಬೋರಾ ಬಿಜೆಪಿಗೆ ಹಾರಲು ಸಿದ್ದರಾಗಿರುವ ನಡುವೆ ಪ್ರಿಯಾಂಕಾ ಗಾಂಧಿ, ಡಿ.ಕೆ ಶಿವಕುಮಾರ್ ಸೇರಿದಂತೆ ಕಾಂಗ್ರೆಸ್‌ನ ಟ್ರಬಲ್ ಶೂಟರ್‌ಗಳ ತಂಡ ಅಸ್ಸಾಂಗೆ ದೌಡಾಯಿಸಿದೆ. ಅಸ್ಸಾಂ ಕಾಂಗ್ರೆಸ್ ಅಭ್ಯರ್ಥಿಗಳ...

ಸರ್ಕಾರದ ಭರವಸೆಗೆ ಮಣಿಯದ ಸಾರಿಗೆ ಸಿಬ್ಬಂದಿ : ಮುಷ್ಕರ ಮುಂದುವರಿಸಲು ನಿರ್ಧಾರ

ಹಿಂಬಾಕಿ ಪಾವತಿ, ವೇತನ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ರಾಜ್ಯದ ನಾಲ್ಕು ಸಾರಿಗೆ ನಿಗಮಗಳಾದ ಕೆಎಸ್‌ಆರ್‌ಟಿಸಿ, ಕೆಕೆಆರ್‌ಟಿಸಿ, ಎನ್‌ಡಬ್ಲ್ಯುಕೆಆರ್‌ಟಿಸಿ ಹಾಗೂ ಬಿಎಂಟಿಸಿಯ ನೌಕರರು ಇಂದು (ಫೆ.19) ಮುಷ್ಕರಕ್ಕೆ ಕರೆ ಕೊಟ್ಟಿದ್ದಾರೆ. ನೌಕರರ ಪ್ರತಿಭಟನೆ...