Homeಅಂತರಾಷ್ಟ್ರೀಯಭಾರತ-ಪಾಕ್ ಸಂಘರ್ಷ ಶಮನ: ಟ್ರಂಪ್‌ಗೆ ನೊಬೆಲ್ ಶಾಂತಿ ಪ್ರಶಸ್ತಿ ನೀಡಲು ಪಾಕ್ ನಾಮನಿರ್ದೇಶನ!

ಭಾರತ-ಪಾಕ್ ಸಂಘರ್ಷ ಶಮನ: ಟ್ರಂಪ್‌ಗೆ ನೊಬೆಲ್ ಶಾಂತಿ ಪ್ರಶಸ್ತಿ ನೀಡಲು ಪಾಕ್ ನಾಮನಿರ್ದೇಶನ!

ಅಮೆರಿಕ ಅಧ್ಯಕ್ಷ ಏನಂದ್ರು?

- Advertisement -
- Advertisement -

ಪಹಲ್ಗಾಮ್ ಭಯೋತ್ಪಾದಕ ದಾಳಿ ಬಳಿಕ ಭಾರತ-ಪಾಕಿಸ್ತಾನ ನಡುವೆ ಏರ್ಪಟ್ಟಿದ್ದ ಸಂಘರ್ಷವನ್ನು ಶಮನ ಮಾಡುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಕ್ಕೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ ಅವರನ್ನು 2026ರ ‘ನೊಬೆಲ್ ಶಾಂತಿ ಪ್ರಶಸ್ತಿ’ಗೆ ಪಾಕಿಸ್ತಾನ ನಾಮನಿರ್ದೇಶನ ಮಾಡಿದೆ ಎಂದು ವರದಿಯಾಗಿದೆ.

ಪಾಕಿಸ್ತಾನ ಸರ್ಕಾರದ ಅಧಿಕೃತ ಎಕ್ಸ್ ಖಾತೆಯಲ್ಲಿ ಈ ಬಗ್ಗೆ ಪೋಸ್ಟ್ ಹಾಕಲಾಗಿದೆ ಎಂದು ಪ್ರಮುಖ ಮಾಧ್ಯಮಗಳು ವರದಿ ಮಾಡಿವೆ.

“ಪಾಕಿಸ್ತಾನ ಸರ್ಕಾರ 2026ರ ನೊಬೆಲ್ ಶಾಂತಿ ಪ್ರಶಸ್ತಿಗೆ ಡೊನಾಲ್ಡ್ ಜೆ.ಟ್ರಂಪ್ ಅವರ ಹೆಸರನ್ನು ಶಿಫಾರಸ್ಸು ಮಾಡುತ್ತಿದೆ. ಭಾರತ-ಪಾಕ್ ಸಂಘರ್ಷದ ಸಂದರ್ಭದಲ್ಲಿ ಟ್ರಂಪ್ ವಹಿಸಿದ ಪ್ರಮುಖ ರಾಜತಾಂತ್ರಿಕ ಮಧ್ಯಸ್ಥಿಕೆ ಮತ್ತು ಪರಿವರ್ತನಾಶೀಲ ನಾಯಕತ್ವ ಪ್ರದರ್ಶಿಸಿದ್ದನ್ನು ಗುರುತಿಸಿ ಪಾಕಿಸ್ತಾನ ಸರ್ಕಾರವು 2026ರ ನೊಬೆಲ್ ಶಾಂತಿ ಪುರಸ್ಕಾರಕ್ಕೆ ಡೊನಾಲ್ಡ್ ಜೆ.ಟ್ರಂಪ್ ಅವರ ಹೆಸರನ್ನು ಅಧಿಕೃತವಾಗಿ ಶಿಫಾರಸ್ಸು ಮಾಡುತ್ತಿದೆ” ಎಂದು ಪೋಸ್ಟ್‌ನಲ್ಲಿ ಹೇಳಿರುವುದಾಗಿ ವರದಿಗಳು ವಿವರಿಸಿವೆ.

ಭಾರತ- ಪಾಕಿಸ್ತಾನದ ಸಂಘರ್ಷದ ಬಳಿಕ ಮೊದಲ ಬಾರಿಗೆ ಅಮೆರಿಕಕ್ಕೆ ಭೇಟಿ ನೀಡಿದ್ದ ಪಾಕಿಸ್ತಾನ ಸೇನೆಯ ಮುಖ್ಯಸ್ಥ ಅಸೀಮ್ ಮುನೀರ್ ಅವರಿಗೆ, ಅಧ್ಯಕ್ಷ ಟ್ರಂಪ್ ಜೂನ್ 18ರಂದು ಶ್ವೇತಭವನದಲ್ಲಿ ವಿಶೇಷ ಔತಣಕೂಟ ಆಯೋಜಿಸಿದ್ದರು. ಇದರ ಮರುದಿನವೇ ಪಾಕಿಸ್ತಾನದಿಂದ ಈ ಅಚ್ಚರಿಯ ಹೇಳಿಕೆ ಹೊರಬಿದ್ದಿದೆ.

ಪಹಲ್ಗಾಮ್ ದಾಳಿ ಬಳಿಕ ಪಾಕಿಸ್ತಾನ ಪ್ರೇರಿತ ಮತ್ತು ಇತರ ರೀತಿಯ ಭಯೋತ್ಪಾದನೆಯ ಕುರಿತ ಭಾರತದ ನಿಲುವನ್ನು ಜಗತ್ತಿಗೆ ತಿಳಿಸಲು ಭಾರತ ಸರ್ಕಾರ ಸರ್ವಪಕ್ಷ ಸಂಸದರ ಸುಮಾರು 7 ನಿಯೋಗಗಳನ್ನು ವಿವಿಧ ರಾಷ್ಟ್ರಗಳಿಗೆ ಕಳುಹಿಸಿತ್ತು.

ಈ ನಿಯೋಗಗಳು ಜಾಗತಿಕ ಮಟ್ಟದಲ್ಲಿ ಪಾಕಿಸ್ತಾನದ ಬಣ್ಣ ಬಯಲು ಮಾಡಿದೆ ಎಂದು ಹೇಳಲಾಗಿತ್ತು. ಇದಾಗಿ ಕೆಲ ದಿನಗಳಲ್ಲೇ ಅಮೆರಿಕ ಅಧ್ಯಕ್ಷ ಪಾಕಿಸ್ತಾನದ ಸೇನಾ ಮುಖ್ಯಸ್ಥರಿಗೆ ಔತಣಕೂಟ ಆಯೋಜಿಸಿ ಗೌರವಿಸಿರುವುದು ಭಾರತಕ್ಕೆ ಒಂದು ರೀತಿಯಲ್ಲಿ ರಾಜತಾಂತ್ರಿಕ ಹಿನ್ನಡೆ ಎನ್ನಬಹುದು.

ಟ್ರಂಪ್ ಮಧ್ಯಸ್ಥಿಕೆ ಅಲ್ಲಗಳೆದ ಭಾರತ

ಭಾರತ-ಪಾಕಿಸ್ತಾನ ನಡುವೆ ಸಂಘರ್ಷ ಏರ್ಪಟಿದ್ದಾಗ, ಆರಂಭದಲ್ಲಿ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದ ಅಮೆರಿಕ ಅಧ್ಯಕ್ಷ ಟ್ರಂಪ್, “ಅದು ಆ ಎರಡು ರಾಷ್ಟ್ರಗಳ ನಡುವಿನ ಸಂಘರ್ಷ. ಈ ರೀತಿಯ ಸಂಘರ್ಷ ಭಾರತ-ಪಾಕಿಸ್ತಾನ ನಡುವೆ ಸುದೀರ್ಘ ಸಮಯದಿಂದ ಇದೆ. ನಮಗೆ ಭಾರತ-ಪಾಕಿಸ್ತಾನ ಎರಡೂ ಮಿತ್ರ ರಾಷ್ಟ್ರಗಳೇ. ಅವರ ಸಮಸ್ಯೆಯನ್ನು ಅವರು ಬಗೆ ಹರಿಸಿಕೊಳ್ಳುತ್ತಾರೆ. ನಾವು ಅದರಲ್ಲಿ ತಲೆ ಹಾಕಲು ಹೋಗುವುದಿಲ್ಲ” ಎಂದಿದ್ದರು.

ಆದರೆ, ಮೇ 10ರಂದು ಸಂಜೆ 5.33ರ (ಭಾರತೀಯ ಕಾಲಮಾನ) ಸುಮಾರಿಗೆ ಭಾರತ-ಪಾಕಿಸ್ತಾನ ನಡುವೆ ಕದನ ವಿರಾಮ ಒಪ್ಪಂದಕ್ಕೆ ಒಪ್ಪಿಕೊಂಡಿವೆ ಎಂದು ಟ್ರಂಪ್ ಮೊದಲು ಪೋಸ್ಟ್ ಮಾಡಿದ್ದರು. ಆ ಬಳಿಕವಾಗಿದೆ. ಭಾರತದ ವಿದೇಶಾಂಗ ಕಾರ್ಯದರ್ಶಿ ಮತ್ತು ವಿದೇಶಾಂಗ ಇಲಾಖೆ ಸಚಿವರು ಕದನ ವಿರಾಮದ ಕುರಿತು ಘೋಷಣೆ ಮಾಡಿರುವುದು.

ಈ ಬೆಳವಣಿಗೆ ಭಾರತ-ಪಾಕಿಸ್ತಾನ ನಡುವಿನ ಕದನ ವಿರಾಮ ಒಪ್ಪಂದಲ್ಲಿ ಟ್ರಂಪ್ ಅಥವಾ ಅಮೆರಿಕ ಮಧ್ಯಸ್ಥಿಕೆ ವಹಿಸಿರುವುದನ್ನು ಡೃಢಪಡಿಸಿತ್ತು. ಅಲ್ಲದೆ, ಟ್ರಂಪ್ ತಮ್ಮ ಪೋಸ್ಟ್‌ನಲ್ಲಿ ಕೂಡ ಅಮೆರಿಕ ಮಧ್ಯಸ್ಥಿಕೆಯಿಂದಲೇ ಕದನ ವಿರಾಮ ಏರ್ಪಟ್ಟಿದೆ ಎಂದಿದ್ದರು. (ಟ್ರಂಪ್‌ ಪೋಸ್ಟ್‌ನಲ್ಲಿ ‘Mediate by the United States’ ಎಂದು ಬರೆದಿರುವುದನ್ನು ನೋಡಬಹುದು)

ಸೌದಿಯಲ್ಲಿ ನಡೆದ ಹೂಡಿಕೆ ಸಮಾವೇಶದಲ್ಲಿ ಮಾತನಾಡಿದ್ದ ಟ್ರಂಪ್, ಭಾರತ-ಪಾಕಿಸ್ತಾನ ನಡುವೆ ಕದನ ವಿರಾಮ ಮಾಡಿಸಿದೆ ಎಂದು ಹೇಳಿಕೊಂಡಿದ್ದರು. ಆದರೆ, ಭಾರತ ಟ್ರಂಪ್ ಹೇಳಿಕೆಯನ್ನು ನಿರಾಕರಿಸಿತ್ತು.

ಟ್ರಂಪ್ ಈಗಲೂ ಭಾರತ-ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾವೇ ಎಂದು ಹೇಳಿಕೊಂಡು ತಿರುಗಾಡುತ್ತಿದ್ದಾರೆ. ಭಾರತ ಅದನ್ನು ನಿರಾಕರಿಸುತ್ತಲೇ ಇದೆ. ಈ ನಡುವೆ ಕದನ ವಿರಾಮಕ್ಕೆ ಮಧ್ಯಸ್ಥಿಕೆ ವಹಿಸಿದ್ದಕ್ಕೆ ಟ್ರಂಪ್‌ಗೆ ನೊಬೆಲ್ ಕೊಡುವಂತೆ ಅಮೆರಿಕ ಶಿಫಾರಸ್ಸು ಮಾಡಿರುವುದು ಚರ್ಚೆಯನ್ನು ಮತ್ತೊಂದು ಹಂತಕ್ಕೆ ಕೊಂಡೊಯ್ದಿದೆ.

ಟ್ರಂಪ್ ಪ್ರತಿಕ್ರಿಯೆ ಏನು?

ನೋಬೆಲ್‌ಗೆ ಶಿಫಾರಸ್ಸು ಮಾಡಿರುವ ಬಗ್ಗೆ ಪ್ರತಿಕ್ರಿಯಿಸಿರುವ ಟ್ರಂಪ್, “ಹಿಂಸಾತ್ಮಕ ರಕ್ತಪಾತ, ಸಾವಿಗೆ ಹೆಸರುವಾಸಿಯಾಗಿರುವ ಮತ್ತು ದಶಕಗಳಿಂದ ಯುದ್ಧ ನಡೆಯುತ್ತಿರುವ ಕಾಂಗೋ ಪ್ರಜಾಸತ್ತಾತ್ಮಕ ಗಣರಾಜ್ಯ ಮತ್ತು ರುವಾಂಡಾ ಗಣರಾಜ್ಯದ ನಡುವೆ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ಅವರೊಂದಿಗೆ ಸೇರಿ ಒಪ್ಪಂದ ಮಾಡಿಕೊಂಡಿದ್ದೇನೆ ಎಂದು ತಿಳಿಸಲು ನನಗೆ ತುಂಬಾ ಸಂತೋಷವಾಗುತ್ತಿದೆ. ಈ ಯುದ್ಧವು ಇತರ ಯುದ್ಧಗಳಿಗಿಂತ ಹೆಚ್ಚಾಗಿ ಹಿಂಸಾತ್ಮಕ ರಕ್ತಪಾತ ಮತ್ತು ಸಾವಿಗೆ ಹೆಸರುವಾಸಿಯಾಗಿತ್ತು ಮತ್ತು ದಶಕಗಳಿಂದ ನಡೆಯುತ್ತಿತ್ತು. ದಾಖಲೆಗಳಿಗೆ ಸಹಿ ಹಾಕಲು ರುವಾಂಡಾ ಮತ್ತು ಕಾಂಗೋದ ಪ್ರತಿನಿಧಿಗಳು ಸೋಮವಾರ ವಾಷಿಂಗ್ಟನ್‌ ಆಗಮಿಸಲಿದ್ದಾರೆ. ಇದು ಆಫ್ರಿಕಾಕ್ಕೆ ಮತ್ತು ಸ್ಪಷ್ಟವಾಗಿ ಹೇಳುವುದಾದರೆ, ಜಗತ್ತಿಗೆ ಶ್ರೇಷ್ಠ ದಿನ!. ಇದಕ್ಕಾಗಿ ನನಗೆ ನೊಬೆಲ್ ಶಾಂತಿ ಪ್ರಶಸ್ತಿ ಸಿಗುವುದಿಲ್ಲ” ಎಂದು ಸಾಮಾಜಿಕ ಮಾಧ್ಯಮ ಟ್ರುಥ್ ಸೋಶಿಯಲ್‌ನಲ್ಲಿ ಬರೆದುಕೊಂಡಿದ್ದಾರೆ.

“ಭಾರತ ಮತ್ತು ಪಾಕಿಸ್ತಾನದ ನಡುವಿನ ಯುದ್ಧವನ್ನು ನಿಲ್ಲಿಸಿದ್ದಕ್ಕಾಗಿ ನನಗೆ ನೊಬೆಲ್ ಶಾಂತಿ ಪ್ರಶಸ್ತಿ ಸಿಗುವುದಿಲ್ಲ. ಸೆರ್ಬಿಯಾ ಮತ್ತು ಕೊಸೊವೊ ನಡುವಿನ ಯುದ್ಧವನ್ನು ನಿಲ್ಲಿಸಿದ್ದಕ್ಕಾಗಿ ನನಗೆ ನೊಬೆಲ್ ಶಾಂತಿ ಪ್ರಶಸ್ತಿ ಸಿಗುವುದಿಲ್ಲ, ಈಜಿಪ್ಟ್ ಮತ್ತು ಇಥಿಯೋಪಿಯಾ ನಡುವೆ ಶಾಂತಿ ಕಾಪಾಡಿದ್ದಕ್ಕಾಗಿ ನನಗೆ ನೊಬೆಲ್ ಶಾಂತಿ ಪ್ರಶಸ್ತಿ ಸಿಗುವುದಿಲ್ಲ. (ಯುಎಸ್‌ ಮೂರ್ಖತನದಿಂದ ಹಣಕಾಸು ಒದಗಿಸಿದ ಇಥಿಯೋಪಿಯನ್ ನಿರ್ಮಿಸಿದ ಬೃಹತ್ ಅಣೆಕಟ್ಟು, ನೈಲ್ ನದಿಗೆ ಹರಿಯುವ ನೀರನ್ನು ಗಣನೀಯವಾಗಿ ಕಡಿಮೆ ಮಾಡುತ್ತದೆ) ಮತ್ತು ಮಧ್ಯಪ್ರಾಚ್ಯದಲ್ಲಿ ಅಬ್ರಹಾಂ ಒಪ್ಪಂದಗಳನ್ನು ಮಾಡಿದ್ದಕ್ಕಾಗಿ ನನಗೆ ನೊಬೆಲ್ ಶಾಂತಿ ಪ್ರಶಸ್ತಿ ಸಿಗುವುದಿಲ್ಲ” ಎಂದಿದ್ದಾರೆ.

“ಎಲ್ಲವೂ ಸರಿಯಾಗಿ ನಡೆದರೆ, ಇನ್ನಷ್ಟು ದೇಶಗಳು ಶಾಂತಿ ಒಪ್ಪಂದಕ್ಕೆ ಸಹಿ ಹಾಕಲಿವೆ. ಈ ಮೂಲಕ ಈ ಯುಗದಲ್ಲೇ ಮೊದಲ ಬಾರಿಗೆ ಮಧ್ಯಪ್ರಾಚ್ಯ ಒಂದಾಗಲಿದೆ. ಇಲ್ಲ, ರಷ್ಯಾ-ಉಕ್ರೇನ್ ಮತ್ತು ಇಸ್ರೇಲ್-ಇರಾನ್ ಸೇರಿದಂತೆ ನಾನು ಏನೇ ಮಾಡಿದರೂ ನನಗೆ ನೊಬೆಲ್ ಶಾಂತಿ ಪ್ರಶಸ್ತಿ ಸಿಗುವುದಿಲ್ಲ. ನನ್ನ ಶ್ರಮದ ಫಲಿತಾಂಶಗಳು ಏನೇ ಇರಲಿ. ಅದು ಜನರಿಗೆ ತಿಳಿದಿದೆ. ನನಗೆ ಅಷ್ಟೇ ಮುಖ್ಯ” ಎಂದು ಟ್ರಂಪ್ ಹೇಳಿದ್ದಾರೆ.

ಇಸ್ರೇಲ್-ಇರಾನ್ ಯುದ್ಧಕ್ಕೆ ಅಮೆರಿಕ ಎಂಟ್ರಿ | 2 ವಾರಗಳಲ್ಲಿ ನಿರ್ಧರಿಸುತ್ತೇನೆ ಎಂದ ಟ್ರಂಪ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...

ಪ್ರಜಾಪ್ರಭುತ್ವದ ರಕ್ಷಣೆಗೆ ಎಸ್‌ಐಆರ್ (SIR) ವಿರುದ್ಧ ಜನಜಾಗೃತಿ ಜಾಥಾಕ್ಕೆ ಶಿವಮೊಗ್ಗದಲ್ಲಿ ಚಾಲನೆ

ಕೇಂದ್ರ ಸರ್ಕಾರದ ಎಸ್‌ಐಆರ್ (SIR) ನೀತಿಯ ವಿರುದ್ಧ ರಾಜ್ಯಾದ್ಯಂತ ಜನವಿರೋಧಿ ಅಲೆ ಎದ್ದಿದೆ. "ಸಂತ-ಶರಣರ ಈ ನಾಡಿನಲ್ಲಿ ಯಾವುದೇ ರೀತಿಯ ದುಷ್ಟ ಆಟ, ಮೋಸ, ವಂಚನೆಗೆ ಅವಕಾಶವಿಲ್ಲ" ಎಂಬ ದೃಢ ಸಂಕಲ್ಪದೊಂದಿಗೆ 'ಎಸ್‌ಐಆರ್...

ಜೂನ್ 13 ರಿಂದ ಕರ್ನಾಟಕದಲ್ಲಿ ‘SIR ವಿರೋಧಿ’ ಜನಜಾಗೃತಿ ಜಾಥ

ರಾಜ್ಯ ಚುನಾವಣಾ ಆಯೋಗವು ಎಸ್‌ಐಆರ್ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ನಾಗರಿಕರ ಆಕ್ಷೇಪಣೆಗಳಿಗೆ ಸ್ಪಂದಿಸದಿರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಾಗೂ ‘ಎದ್ದೇಳು ಕರ್ನಾಟಕ’ ಸಂಘಟನೆಯ ವತಿಯಿಂದ ಜೂನ್ 13 ರಿಂದ...

‘ಕಾನೂನು ಪ್ರಕ್ರಿಯೆಯದುರುಪಯೋಗ’: ನ್ಯೂಸ್‌ಕ್ಲಿಕ್ ವಿರುದ್ಧದ ದೆಹಲಿ ಪೊಲೀಸ್, ಇಡಿ ಪ್ರಕರಣಗಳನ್ನು ರದ್ದುಗೊಳಿಸಿದ ಹೈಕೋರ್ಟ್

ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ನಿಯಮಗಳ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ನ್ಯೂಸ್‌ಕ್ಲಿಕ್ ಸುದ್ದಿ ಸಂಸ್ಥೆ ಮತ್ತು ಅದರ ಮುಖ್ಯ ಸಂಪಾದಕ ಪ್ರಬೀರ್ ಪುರಕಾಯಸ್ಥ ವಿರುದ್ಧ ದೆಹಲಿ ಪೊಲೀಸರು ಹಾಗೂ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿದ್ದ ಪ್ರಕರಣಗಳನ್ನು ದೆಹಲಿ...

ಕಾಂಗ್ರೆಸ್ ಜೊತೆ ವಿಲೀನ? ಅದೆಲ್ಲ ಬರೀ ಸುಳ್ಳು ಎಂದ ಟಿಎಂಸಿ

ಕಾಂಗ್ರೆಸ್ ಪಕ್ಷದೊಂದಿಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಿಲೀನವಾಗಬಹುದು ಎಂಬ ವರದಿಗಳನ್ನು ಟಿಎಂಸಿ ಉನ್ನತ ಮೂಲಗಳು ಬುಧವಾರ (ಇಂದು) ಸಂಪೂರ್ಣವಾಗಿ ತಳ್ಳಿಹಾಕಿವೆ. "ನಮ್ಮ ಪಕ್ಷಕ್ಕೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ ಮತ್ತು ವಿಲೀನಕ್ಕೆ...

ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರ : ಬಿಜೆಪಿಯ ಸೀಟ್ ಚೋರಿ?

ರಾಜ್ಯಸಭಾ ಚುನಾವಣೆಗೆ ಮಧ್ಯಪ್ರದೇಶದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದ ಮೀನಾಕ್ಷಿ ನಟರಾಜನ್ ಅವರ ನಾಮಪತ್ರವನ್ನು ಚುನಾವಣಾ ಆಯೋಗ ತಿರಸ್ಕರಿಸಿರುವುದು ದೇಶದಲ್ಲಿ ದೊಡ್ಡ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ಕಾಂಗ್ರೆಸ್ ಈ ವಿಚಾರವನ್ನು ಬಹಳ ಗಂಭೀರವಾಗಿ ಪರಿಗಣಿಸಿ ಬುಧವಾರ (ಜೂ. 10)...