Homeಅಂತರಾಷ್ಟ್ರೀಯಭಾರತ-ಪಾಕ್ ಸಂಘರ್ಷ ಶಮನ: ಟ್ರಂಪ್‌ಗೆ ನೊಬೆಲ್ ಶಾಂತಿ ಪ್ರಶಸ್ತಿ ನೀಡಲು ಪಾಕ್ ನಾಮನಿರ್ದೇಶನ!

ಭಾರತ-ಪಾಕ್ ಸಂಘರ್ಷ ಶಮನ: ಟ್ರಂಪ್‌ಗೆ ನೊಬೆಲ್ ಶಾಂತಿ ಪ್ರಶಸ್ತಿ ನೀಡಲು ಪಾಕ್ ನಾಮನಿರ್ದೇಶನ!

ಅಮೆರಿಕ ಅಧ್ಯಕ್ಷ ಏನಂದ್ರು?

- Advertisement -
- Advertisement -

ಪಹಲ್ಗಾಮ್ ಭಯೋತ್ಪಾದಕ ದಾಳಿ ಬಳಿಕ ಭಾರತ-ಪಾಕಿಸ್ತಾನ ನಡುವೆ ಏರ್ಪಟ್ಟಿದ್ದ ಸಂಘರ್ಷವನ್ನು ಶಮನ ಮಾಡುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಕ್ಕೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ ಅವರನ್ನು 2026ರ ‘ನೊಬೆಲ್ ಶಾಂತಿ ಪ್ರಶಸ್ತಿ’ಗೆ ಪಾಕಿಸ್ತಾನ ನಾಮನಿರ್ದೇಶನ ಮಾಡಿದೆ ಎಂದು ವರದಿಯಾಗಿದೆ.

ಪಾಕಿಸ್ತಾನ ಸರ್ಕಾರದ ಅಧಿಕೃತ ಎಕ್ಸ್ ಖಾತೆಯಲ್ಲಿ ಈ ಬಗ್ಗೆ ಪೋಸ್ಟ್ ಹಾಕಲಾಗಿದೆ ಎಂದು ಪ್ರಮುಖ ಮಾಧ್ಯಮಗಳು ವರದಿ ಮಾಡಿವೆ.

“ಪಾಕಿಸ್ತಾನ ಸರ್ಕಾರ 2026ರ ನೊಬೆಲ್ ಶಾಂತಿ ಪ್ರಶಸ್ತಿಗೆ ಡೊನಾಲ್ಡ್ ಜೆ.ಟ್ರಂಪ್ ಅವರ ಹೆಸರನ್ನು ಶಿಫಾರಸ್ಸು ಮಾಡುತ್ತಿದೆ. ಭಾರತ-ಪಾಕ್ ಸಂಘರ್ಷದ ಸಂದರ್ಭದಲ್ಲಿ ಟ್ರಂಪ್ ವಹಿಸಿದ ಪ್ರಮುಖ ರಾಜತಾಂತ್ರಿಕ ಮಧ್ಯಸ್ಥಿಕೆ ಮತ್ತು ಪರಿವರ್ತನಾಶೀಲ ನಾಯಕತ್ವ ಪ್ರದರ್ಶಿಸಿದ್ದನ್ನು ಗುರುತಿಸಿ ಪಾಕಿಸ್ತಾನ ಸರ್ಕಾರವು 2026ರ ನೊಬೆಲ್ ಶಾಂತಿ ಪುರಸ್ಕಾರಕ್ಕೆ ಡೊನಾಲ್ಡ್ ಜೆ.ಟ್ರಂಪ್ ಅವರ ಹೆಸರನ್ನು ಅಧಿಕೃತವಾಗಿ ಶಿಫಾರಸ್ಸು ಮಾಡುತ್ತಿದೆ” ಎಂದು ಪೋಸ್ಟ್‌ನಲ್ಲಿ ಹೇಳಿರುವುದಾಗಿ ವರದಿಗಳು ವಿವರಿಸಿವೆ.

ಭಾರತ- ಪಾಕಿಸ್ತಾನದ ಸಂಘರ್ಷದ ಬಳಿಕ ಮೊದಲ ಬಾರಿಗೆ ಅಮೆರಿಕಕ್ಕೆ ಭೇಟಿ ನೀಡಿದ್ದ ಪಾಕಿಸ್ತಾನ ಸೇನೆಯ ಮುಖ್ಯಸ್ಥ ಅಸೀಮ್ ಮುನೀರ್ ಅವರಿಗೆ, ಅಧ್ಯಕ್ಷ ಟ್ರಂಪ್ ಜೂನ್ 18ರಂದು ಶ್ವೇತಭವನದಲ್ಲಿ ವಿಶೇಷ ಔತಣಕೂಟ ಆಯೋಜಿಸಿದ್ದರು. ಇದರ ಮರುದಿನವೇ ಪಾಕಿಸ್ತಾನದಿಂದ ಈ ಅಚ್ಚರಿಯ ಹೇಳಿಕೆ ಹೊರಬಿದ್ದಿದೆ.

ಪಹಲ್ಗಾಮ್ ದಾಳಿ ಬಳಿಕ ಪಾಕಿಸ್ತಾನ ಪ್ರೇರಿತ ಮತ್ತು ಇತರ ರೀತಿಯ ಭಯೋತ್ಪಾದನೆಯ ಕುರಿತ ಭಾರತದ ನಿಲುವನ್ನು ಜಗತ್ತಿಗೆ ತಿಳಿಸಲು ಭಾರತ ಸರ್ಕಾರ ಸರ್ವಪಕ್ಷ ಸಂಸದರ ಸುಮಾರು 7 ನಿಯೋಗಗಳನ್ನು ವಿವಿಧ ರಾಷ್ಟ್ರಗಳಿಗೆ ಕಳುಹಿಸಿತ್ತು.

ಈ ನಿಯೋಗಗಳು ಜಾಗತಿಕ ಮಟ್ಟದಲ್ಲಿ ಪಾಕಿಸ್ತಾನದ ಬಣ್ಣ ಬಯಲು ಮಾಡಿದೆ ಎಂದು ಹೇಳಲಾಗಿತ್ತು. ಇದಾಗಿ ಕೆಲ ದಿನಗಳಲ್ಲೇ ಅಮೆರಿಕ ಅಧ್ಯಕ್ಷ ಪಾಕಿಸ್ತಾನದ ಸೇನಾ ಮುಖ್ಯಸ್ಥರಿಗೆ ಔತಣಕೂಟ ಆಯೋಜಿಸಿ ಗೌರವಿಸಿರುವುದು ಭಾರತಕ್ಕೆ ಒಂದು ರೀತಿಯಲ್ಲಿ ರಾಜತಾಂತ್ರಿಕ ಹಿನ್ನಡೆ ಎನ್ನಬಹುದು.

ಟ್ರಂಪ್ ಮಧ್ಯಸ್ಥಿಕೆ ಅಲ್ಲಗಳೆದ ಭಾರತ

ಭಾರತ-ಪಾಕಿಸ್ತಾನ ನಡುವೆ ಸಂಘರ್ಷ ಏರ್ಪಟಿದ್ದಾಗ, ಆರಂಭದಲ್ಲಿ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದ ಅಮೆರಿಕ ಅಧ್ಯಕ್ಷ ಟ್ರಂಪ್, “ಅದು ಆ ಎರಡು ರಾಷ್ಟ್ರಗಳ ನಡುವಿನ ಸಂಘರ್ಷ. ಈ ರೀತಿಯ ಸಂಘರ್ಷ ಭಾರತ-ಪಾಕಿಸ್ತಾನ ನಡುವೆ ಸುದೀರ್ಘ ಸಮಯದಿಂದ ಇದೆ. ನಮಗೆ ಭಾರತ-ಪಾಕಿಸ್ತಾನ ಎರಡೂ ಮಿತ್ರ ರಾಷ್ಟ್ರಗಳೇ. ಅವರ ಸಮಸ್ಯೆಯನ್ನು ಅವರು ಬಗೆ ಹರಿಸಿಕೊಳ್ಳುತ್ತಾರೆ. ನಾವು ಅದರಲ್ಲಿ ತಲೆ ಹಾಕಲು ಹೋಗುವುದಿಲ್ಲ” ಎಂದಿದ್ದರು.

ಆದರೆ, ಮೇ 10ರಂದು ಸಂಜೆ 5.33ರ (ಭಾರತೀಯ ಕಾಲಮಾನ) ಸುಮಾರಿಗೆ ಭಾರತ-ಪಾಕಿಸ್ತಾನ ನಡುವೆ ಕದನ ವಿರಾಮ ಒಪ್ಪಂದಕ್ಕೆ ಒಪ್ಪಿಕೊಂಡಿವೆ ಎಂದು ಟ್ರಂಪ್ ಮೊದಲು ಪೋಸ್ಟ್ ಮಾಡಿದ್ದರು. ಆ ಬಳಿಕವಾಗಿದೆ. ಭಾರತದ ವಿದೇಶಾಂಗ ಕಾರ್ಯದರ್ಶಿ ಮತ್ತು ವಿದೇಶಾಂಗ ಇಲಾಖೆ ಸಚಿವರು ಕದನ ವಿರಾಮದ ಕುರಿತು ಘೋಷಣೆ ಮಾಡಿರುವುದು.

ಈ ಬೆಳವಣಿಗೆ ಭಾರತ-ಪಾಕಿಸ್ತಾನ ನಡುವಿನ ಕದನ ವಿರಾಮ ಒಪ್ಪಂದಲ್ಲಿ ಟ್ರಂಪ್ ಅಥವಾ ಅಮೆರಿಕ ಮಧ್ಯಸ್ಥಿಕೆ ವಹಿಸಿರುವುದನ್ನು ಡೃಢಪಡಿಸಿತ್ತು. ಅಲ್ಲದೆ, ಟ್ರಂಪ್ ತಮ್ಮ ಪೋಸ್ಟ್‌ನಲ್ಲಿ ಕೂಡ ಅಮೆರಿಕ ಮಧ್ಯಸ್ಥಿಕೆಯಿಂದಲೇ ಕದನ ವಿರಾಮ ಏರ್ಪಟ್ಟಿದೆ ಎಂದಿದ್ದರು. (ಟ್ರಂಪ್‌ ಪೋಸ್ಟ್‌ನಲ್ಲಿ ‘Mediate by the United States’ ಎಂದು ಬರೆದಿರುವುದನ್ನು ನೋಡಬಹುದು)

ಸೌದಿಯಲ್ಲಿ ನಡೆದ ಹೂಡಿಕೆ ಸಮಾವೇಶದಲ್ಲಿ ಮಾತನಾಡಿದ್ದ ಟ್ರಂಪ್, ಭಾರತ-ಪಾಕಿಸ್ತಾನ ನಡುವೆ ಕದನ ವಿರಾಮ ಮಾಡಿಸಿದೆ ಎಂದು ಹೇಳಿಕೊಂಡಿದ್ದರು. ಆದರೆ, ಭಾರತ ಟ್ರಂಪ್ ಹೇಳಿಕೆಯನ್ನು ನಿರಾಕರಿಸಿತ್ತು.

ಟ್ರಂಪ್ ಈಗಲೂ ಭಾರತ-ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾವೇ ಎಂದು ಹೇಳಿಕೊಂಡು ತಿರುಗಾಡುತ್ತಿದ್ದಾರೆ. ಭಾರತ ಅದನ್ನು ನಿರಾಕರಿಸುತ್ತಲೇ ಇದೆ. ಈ ನಡುವೆ ಕದನ ವಿರಾಮಕ್ಕೆ ಮಧ್ಯಸ್ಥಿಕೆ ವಹಿಸಿದ್ದಕ್ಕೆ ಟ್ರಂಪ್‌ಗೆ ನೊಬೆಲ್ ಕೊಡುವಂತೆ ಅಮೆರಿಕ ಶಿಫಾರಸ್ಸು ಮಾಡಿರುವುದು ಚರ್ಚೆಯನ್ನು ಮತ್ತೊಂದು ಹಂತಕ್ಕೆ ಕೊಂಡೊಯ್ದಿದೆ.

ಟ್ರಂಪ್ ಪ್ರತಿಕ್ರಿಯೆ ಏನು?

ನೋಬೆಲ್‌ಗೆ ಶಿಫಾರಸ್ಸು ಮಾಡಿರುವ ಬಗ್ಗೆ ಪ್ರತಿಕ್ರಿಯಿಸಿರುವ ಟ್ರಂಪ್, “ಹಿಂಸಾತ್ಮಕ ರಕ್ತಪಾತ, ಸಾವಿಗೆ ಹೆಸರುವಾಸಿಯಾಗಿರುವ ಮತ್ತು ದಶಕಗಳಿಂದ ಯುದ್ಧ ನಡೆಯುತ್ತಿರುವ ಕಾಂಗೋ ಪ್ರಜಾಸತ್ತಾತ್ಮಕ ಗಣರಾಜ್ಯ ಮತ್ತು ರುವಾಂಡಾ ಗಣರಾಜ್ಯದ ನಡುವೆ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ಅವರೊಂದಿಗೆ ಸೇರಿ ಒಪ್ಪಂದ ಮಾಡಿಕೊಂಡಿದ್ದೇನೆ ಎಂದು ತಿಳಿಸಲು ನನಗೆ ತುಂಬಾ ಸಂತೋಷವಾಗುತ್ತಿದೆ. ಈ ಯುದ್ಧವು ಇತರ ಯುದ್ಧಗಳಿಗಿಂತ ಹೆಚ್ಚಾಗಿ ಹಿಂಸಾತ್ಮಕ ರಕ್ತಪಾತ ಮತ್ತು ಸಾವಿಗೆ ಹೆಸರುವಾಸಿಯಾಗಿತ್ತು ಮತ್ತು ದಶಕಗಳಿಂದ ನಡೆಯುತ್ತಿತ್ತು. ದಾಖಲೆಗಳಿಗೆ ಸಹಿ ಹಾಕಲು ರುವಾಂಡಾ ಮತ್ತು ಕಾಂಗೋದ ಪ್ರತಿನಿಧಿಗಳು ಸೋಮವಾರ ವಾಷಿಂಗ್ಟನ್‌ ಆಗಮಿಸಲಿದ್ದಾರೆ. ಇದು ಆಫ್ರಿಕಾಕ್ಕೆ ಮತ್ತು ಸ್ಪಷ್ಟವಾಗಿ ಹೇಳುವುದಾದರೆ, ಜಗತ್ತಿಗೆ ಶ್ರೇಷ್ಠ ದಿನ!. ಇದಕ್ಕಾಗಿ ನನಗೆ ನೊಬೆಲ್ ಶಾಂತಿ ಪ್ರಶಸ್ತಿ ಸಿಗುವುದಿಲ್ಲ” ಎಂದು ಸಾಮಾಜಿಕ ಮಾಧ್ಯಮ ಟ್ರುಥ್ ಸೋಶಿಯಲ್‌ನಲ್ಲಿ ಬರೆದುಕೊಂಡಿದ್ದಾರೆ.

“ಭಾರತ ಮತ್ತು ಪಾಕಿಸ್ತಾನದ ನಡುವಿನ ಯುದ್ಧವನ್ನು ನಿಲ್ಲಿಸಿದ್ದಕ್ಕಾಗಿ ನನಗೆ ನೊಬೆಲ್ ಶಾಂತಿ ಪ್ರಶಸ್ತಿ ಸಿಗುವುದಿಲ್ಲ. ಸೆರ್ಬಿಯಾ ಮತ್ತು ಕೊಸೊವೊ ನಡುವಿನ ಯುದ್ಧವನ್ನು ನಿಲ್ಲಿಸಿದ್ದಕ್ಕಾಗಿ ನನಗೆ ನೊಬೆಲ್ ಶಾಂತಿ ಪ್ರಶಸ್ತಿ ಸಿಗುವುದಿಲ್ಲ, ಈಜಿಪ್ಟ್ ಮತ್ತು ಇಥಿಯೋಪಿಯಾ ನಡುವೆ ಶಾಂತಿ ಕಾಪಾಡಿದ್ದಕ್ಕಾಗಿ ನನಗೆ ನೊಬೆಲ್ ಶಾಂತಿ ಪ್ರಶಸ್ತಿ ಸಿಗುವುದಿಲ್ಲ. (ಯುಎಸ್‌ ಮೂರ್ಖತನದಿಂದ ಹಣಕಾಸು ಒದಗಿಸಿದ ಇಥಿಯೋಪಿಯನ್ ನಿರ್ಮಿಸಿದ ಬೃಹತ್ ಅಣೆಕಟ್ಟು, ನೈಲ್ ನದಿಗೆ ಹರಿಯುವ ನೀರನ್ನು ಗಣನೀಯವಾಗಿ ಕಡಿಮೆ ಮಾಡುತ್ತದೆ) ಮತ್ತು ಮಧ್ಯಪ್ರಾಚ್ಯದಲ್ಲಿ ಅಬ್ರಹಾಂ ಒಪ್ಪಂದಗಳನ್ನು ಮಾಡಿದ್ದಕ್ಕಾಗಿ ನನಗೆ ನೊಬೆಲ್ ಶಾಂತಿ ಪ್ರಶಸ್ತಿ ಸಿಗುವುದಿಲ್ಲ” ಎಂದಿದ್ದಾರೆ.

“ಎಲ್ಲವೂ ಸರಿಯಾಗಿ ನಡೆದರೆ, ಇನ್ನಷ್ಟು ದೇಶಗಳು ಶಾಂತಿ ಒಪ್ಪಂದಕ್ಕೆ ಸಹಿ ಹಾಕಲಿವೆ. ಈ ಮೂಲಕ ಈ ಯುಗದಲ್ಲೇ ಮೊದಲ ಬಾರಿಗೆ ಮಧ್ಯಪ್ರಾಚ್ಯ ಒಂದಾಗಲಿದೆ. ಇಲ್ಲ, ರಷ್ಯಾ-ಉಕ್ರೇನ್ ಮತ್ತು ಇಸ್ರೇಲ್-ಇರಾನ್ ಸೇರಿದಂತೆ ನಾನು ಏನೇ ಮಾಡಿದರೂ ನನಗೆ ನೊಬೆಲ್ ಶಾಂತಿ ಪ್ರಶಸ್ತಿ ಸಿಗುವುದಿಲ್ಲ. ನನ್ನ ಶ್ರಮದ ಫಲಿತಾಂಶಗಳು ಏನೇ ಇರಲಿ. ಅದು ಜನರಿಗೆ ತಿಳಿದಿದೆ. ನನಗೆ ಅಷ್ಟೇ ಮುಖ್ಯ” ಎಂದು ಟ್ರಂಪ್ ಹೇಳಿದ್ದಾರೆ.

ಇಸ್ರೇಲ್-ಇರಾನ್ ಯುದ್ಧಕ್ಕೆ ಅಮೆರಿಕ ಎಂಟ್ರಿ | 2 ವಾರಗಳಲ್ಲಿ ನಿರ್ಧರಿಸುತ್ತೇನೆ ಎಂದ ಟ್ರಂಪ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...