Homeಅಂತರಾಷ್ಟ್ರೀಯಭಾರತ-ಪಾಕ್ ಸಂಘರ್ಷ ಶಮನ: ಟ್ರಂಪ್‌ಗೆ ನೊಬೆಲ್ ಶಾಂತಿ ಪ್ರಶಸ್ತಿ ನೀಡಲು ಪಾಕ್ ನಾಮನಿರ್ದೇಶನ!

ಭಾರತ-ಪಾಕ್ ಸಂಘರ್ಷ ಶಮನ: ಟ್ರಂಪ್‌ಗೆ ನೊಬೆಲ್ ಶಾಂತಿ ಪ್ರಶಸ್ತಿ ನೀಡಲು ಪಾಕ್ ನಾಮನಿರ್ದೇಶನ!

ಅಮೆರಿಕ ಅಧ್ಯಕ್ಷ ಏನಂದ್ರು?

- Advertisement -
- Advertisement -

ಪಹಲ್ಗಾಮ್ ಭಯೋತ್ಪಾದಕ ದಾಳಿ ಬಳಿಕ ಭಾರತ-ಪಾಕಿಸ್ತಾನ ನಡುವೆ ಏರ್ಪಟ್ಟಿದ್ದ ಸಂಘರ್ಷವನ್ನು ಶಮನ ಮಾಡುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಕ್ಕೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ ಅವರನ್ನು 2026ರ ‘ನೊಬೆಲ್ ಶಾಂತಿ ಪ್ರಶಸ್ತಿ’ಗೆ ಪಾಕಿಸ್ತಾನ ನಾಮನಿರ್ದೇಶನ ಮಾಡಿದೆ ಎಂದು ವರದಿಯಾಗಿದೆ.

ಪಾಕಿಸ್ತಾನ ಸರ್ಕಾರದ ಅಧಿಕೃತ ಎಕ್ಸ್ ಖಾತೆಯಲ್ಲಿ ಈ ಬಗ್ಗೆ ಪೋಸ್ಟ್ ಹಾಕಲಾಗಿದೆ ಎಂದು ಪ್ರಮುಖ ಮಾಧ್ಯಮಗಳು ವರದಿ ಮಾಡಿವೆ.

“ಪಾಕಿಸ್ತಾನ ಸರ್ಕಾರ 2026ರ ನೊಬೆಲ್ ಶಾಂತಿ ಪ್ರಶಸ್ತಿಗೆ ಡೊನಾಲ್ಡ್ ಜೆ.ಟ್ರಂಪ್ ಅವರ ಹೆಸರನ್ನು ಶಿಫಾರಸ್ಸು ಮಾಡುತ್ತಿದೆ. ಭಾರತ-ಪಾಕ್ ಸಂಘರ್ಷದ ಸಂದರ್ಭದಲ್ಲಿ ಟ್ರಂಪ್ ವಹಿಸಿದ ಪ್ರಮುಖ ರಾಜತಾಂತ್ರಿಕ ಮಧ್ಯಸ್ಥಿಕೆ ಮತ್ತು ಪರಿವರ್ತನಾಶೀಲ ನಾಯಕತ್ವ ಪ್ರದರ್ಶಿಸಿದ್ದನ್ನು ಗುರುತಿಸಿ ಪಾಕಿಸ್ತಾನ ಸರ್ಕಾರವು 2026ರ ನೊಬೆಲ್ ಶಾಂತಿ ಪುರಸ್ಕಾರಕ್ಕೆ ಡೊನಾಲ್ಡ್ ಜೆ.ಟ್ರಂಪ್ ಅವರ ಹೆಸರನ್ನು ಅಧಿಕೃತವಾಗಿ ಶಿಫಾರಸ್ಸು ಮಾಡುತ್ತಿದೆ” ಎಂದು ಪೋಸ್ಟ್‌ನಲ್ಲಿ ಹೇಳಿರುವುದಾಗಿ ವರದಿಗಳು ವಿವರಿಸಿವೆ.

ಭಾರತ- ಪಾಕಿಸ್ತಾನದ ಸಂಘರ್ಷದ ಬಳಿಕ ಮೊದಲ ಬಾರಿಗೆ ಅಮೆರಿಕಕ್ಕೆ ಭೇಟಿ ನೀಡಿದ್ದ ಪಾಕಿಸ್ತಾನ ಸೇನೆಯ ಮುಖ್ಯಸ್ಥ ಅಸೀಮ್ ಮುನೀರ್ ಅವರಿಗೆ, ಅಧ್ಯಕ್ಷ ಟ್ರಂಪ್ ಜೂನ್ 18ರಂದು ಶ್ವೇತಭವನದಲ್ಲಿ ವಿಶೇಷ ಔತಣಕೂಟ ಆಯೋಜಿಸಿದ್ದರು. ಇದರ ಮರುದಿನವೇ ಪಾಕಿಸ್ತಾನದಿಂದ ಈ ಅಚ್ಚರಿಯ ಹೇಳಿಕೆ ಹೊರಬಿದ್ದಿದೆ.

ಪಹಲ್ಗಾಮ್ ದಾಳಿ ಬಳಿಕ ಪಾಕಿಸ್ತಾನ ಪ್ರೇರಿತ ಮತ್ತು ಇತರ ರೀತಿಯ ಭಯೋತ್ಪಾದನೆಯ ಕುರಿತ ಭಾರತದ ನಿಲುವನ್ನು ಜಗತ್ತಿಗೆ ತಿಳಿಸಲು ಭಾರತ ಸರ್ಕಾರ ಸರ್ವಪಕ್ಷ ಸಂಸದರ ಸುಮಾರು 7 ನಿಯೋಗಗಳನ್ನು ವಿವಿಧ ರಾಷ್ಟ್ರಗಳಿಗೆ ಕಳುಹಿಸಿತ್ತು.

ಈ ನಿಯೋಗಗಳು ಜಾಗತಿಕ ಮಟ್ಟದಲ್ಲಿ ಪಾಕಿಸ್ತಾನದ ಬಣ್ಣ ಬಯಲು ಮಾಡಿದೆ ಎಂದು ಹೇಳಲಾಗಿತ್ತು. ಇದಾಗಿ ಕೆಲ ದಿನಗಳಲ್ಲೇ ಅಮೆರಿಕ ಅಧ್ಯಕ್ಷ ಪಾಕಿಸ್ತಾನದ ಸೇನಾ ಮುಖ್ಯಸ್ಥರಿಗೆ ಔತಣಕೂಟ ಆಯೋಜಿಸಿ ಗೌರವಿಸಿರುವುದು ಭಾರತಕ್ಕೆ ಒಂದು ರೀತಿಯಲ್ಲಿ ರಾಜತಾಂತ್ರಿಕ ಹಿನ್ನಡೆ ಎನ್ನಬಹುದು.

ಟ್ರಂಪ್ ಮಧ್ಯಸ್ಥಿಕೆ ಅಲ್ಲಗಳೆದ ಭಾರತ

ಭಾರತ-ಪಾಕಿಸ್ತಾನ ನಡುವೆ ಸಂಘರ್ಷ ಏರ್ಪಟಿದ್ದಾಗ, ಆರಂಭದಲ್ಲಿ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದ ಅಮೆರಿಕ ಅಧ್ಯಕ್ಷ ಟ್ರಂಪ್, “ಅದು ಆ ಎರಡು ರಾಷ್ಟ್ರಗಳ ನಡುವಿನ ಸಂಘರ್ಷ. ಈ ರೀತಿಯ ಸಂಘರ್ಷ ಭಾರತ-ಪಾಕಿಸ್ತಾನ ನಡುವೆ ಸುದೀರ್ಘ ಸಮಯದಿಂದ ಇದೆ. ನಮಗೆ ಭಾರತ-ಪಾಕಿಸ್ತಾನ ಎರಡೂ ಮಿತ್ರ ರಾಷ್ಟ್ರಗಳೇ. ಅವರ ಸಮಸ್ಯೆಯನ್ನು ಅವರು ಬಗೆ ಹರಿಸಿಕೊಳ್ಳುತ್ತಾರೆ. ನಾವು ಅದರಲ್ಲಿ ತಲೆ ಹಾಕಲು ಹೋಗುವುದಿಲ್ಲ” ಎಂದಿದ್ದರು.

ಆದರೆ, ಮೇ 10ರಂದು ಸಂಜೆ 5.33ರ (ಭಾರತೀಯ ಕಾಲಮಾನ) ಸುಮಾರಿಗೆ ಭಾರತ-ಪಾಕಿಸ್ತಾನ ನಡುವೆ ಕದನ ವಿರಾಮ ಒಪ್ಪಂದಕ್ಕೆ ಒಪ್ಪಿಕೊಂಡಿವೆ ಎಂದು ಟ್ರಂಪ್ ಮೊದಲು ಪೋಸ್ಟ್ ಮಾಡಿದ್ದರು. ಆ ಬಳಿಕವಾಗಿದೆ. ಭಾರತದ ವಿದೇಶಾಂಗ ಕಾರ್ಯದರ್ಶಿ ಮತ್ತು ವಿದೇಶಾಂಗ ಇಲಾಖೆ ಸಚಿವರು ಕದನ ವಿರಾಮದ ಕುರಿತು ಘೋಷಣೆ ಮಾಡಿರುವುದು.

ಈ ಬೆಳವಣಿಗೆ ಭಾರತ-ಪಾಕಿಸ್ತಾನ ನಡುವಿನ ಕದನ ವಿರಾಮ ಒಪ್ಪಂದಲ್ಲಿ ಟ್ರಂಪ್ ಅಥವಾ ಅಮೆರಿಕ ಮಧ್ಯಸ್ಥಿಕೆ ವಹಿಸಿರುವುದನ್ನು ಡೃಢಪಡಿಸಿತ್ತು. ಅಲ್ಲದೆ, ಟ್ರಂಪ್ ತಮ್ಮ ಪೋಸ್ಟ್‌ನಲ್ಲಿ ಕೂಡ ಅಮೆರಿಕ ಮಧ್ಯಸ್ಥಿಕೆಯಿಂದಲೇ ಕದನ ವಿರಾಮ ಏರ್ಪಟ್ಟಿದೆ ಎಂದಿದ್ದರು. (ಟ್ರಂಪ್‌ ಪೋಸ್ಟ್‌ನಲ್ಲಿ ‘Mediate by the United States’ ಎಂದು ಬರೆದಿರುವುದನ್ನು ನೋಡಬಹುದು)

ಸೌದಿಯಲ್ಲಿ ನಡೆದ ಹೂಡಿಕೆ ಸಮಾವೇಶದಲ್ಲಿ ಮಾತನಾಡಿದ್ದ ಟ್ರಂಪ್, ಭಾರತ-ಪಾಕಿಸ್ತಾನ ನಡುವೆ ಕದನ ವಿರಾಮ ಮಾಡಿಸಿದೆ ಎಂದು ಹೇಳಿಕೊಂಡಿದ್ದರು. ಆದರೆ, ಭಾರತ ಟ್ರಂಪ್ ಹೇಳಿಕೆಯನ್ನು ನಿರಾಕರಿಸಿತ್ತು.

ಟ್ರಂಪ್ ಈಗಲೂ ಭಾರತ-ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾವೇ ಎಂದು ಹೇಳಿಕೊಂಡು ತಿರುಗಾಡುತ್ತಿದ್ದಾರೆ. ಭಾರತ ಅದನ್ನು ನಿರಾಕರಿಸುತ್ತಲೇ ಇದೆ. ಈ ನಡುವೆ ಕದನ ವಿರಾಮಕ್ಕೆ ಮಧ್ಯಸ್ಥಿಕೆ ವಹಿಸಿದ್ದಕ್ಕೆ ಟ್ರಂಪ್‌ಗೆ ನೊಬೆಲ್ ಕೊಡುವಂತೆ ಅಮೆರಿಕ ಶಿಫಾರಸ್ಸು ಮಾಡಿರುವುದು ಚರ್ಚೆಯನ್ನು ಮತ್ತೊಂದು ಹಂತಕ್ಕೆ ಕೊಂಡೊಯ್ದಿದೆ.

ಟ್ರಂಪ್ ಪ್ರತಿಕ್ರಿಯೆ ಏನು?

ನೋಬೆಲ್‌ಗೆ ಶಿಫಾರಸ್ಸು ಮಾಡಿರುವ ಬಗ್ಗೆ ಪ್ರತಿಕ್ರಿಯಿಸಿರುವ ಟ್ರಂಪ್, “ಹಿಂಸಾತ್ಮಕ ರಕ್ತಪಾತ, ಸಾವಿಗೆ ಹೆಸರುವಾಸಿಯಾಗಿರುವ ಮತ್ತು ದಶಕಗಳಿಂದ ಯುದ್ಧ ನಡೆಯುತ್ತಿರುವ ಕಾಂಗೋ ಪ್ರಜಾಸತ್ತಾತ್ಮಕ ಗಣರಾಜ್ಯ ಮತ್ತು ರುವಾಂಡಾ ಗಣರಾಜ್ಯದ ನಡುವೆ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ಅವರೊಂದಿಗೆ ಸೇರಿ ಒಪ್ಪಂದ ಮಾಡಿಕೊಂಡಿದ್ದೇನೆ ಎಂದು ತಿಳಿಸಲು ನನಗೆ ತುಂಬಾ ಸಂತೋಷವಾಗುತ್ತಿದೆ. ಈ ಯುದ್ಧವು ಇತರ ಯುದ್ಧಗಳಿಗಿಂತ ಹೆಚ್ಚಾಗಿ ಹಿಂಸಾತ್ಮಕ ರಕ್ತಪಾತ ಮತ್ತು ಸಾವಿಗೆ ಹೆಸರುವಾಸಿಯಾಗಿತ್ತು ಮತ್ತು ದಶಕಗಳಿಂದ ನಡೆಯುತ್ತಿತ್ತು. ದಾಖಲೆಗಳಿಗೆ ಸಹಿ ಹಾಕಲು ರುವಾಂಡಾ ಮತ್ತು ಕಾಂಗೋದ ಪ್ರತಿನಿಧಿಗಳು ಸೋಮವಾರ ವಾಷಿಂಗ್ಟನ್‌ ಆಗಮಿಸಲಿದ್ದಾರೆ. ಇದು ಆಫ್ರಿಕಾಕ್ಕೆ ಮತ್ತು ಸ್ಪಷ್ಟವಾಗಿ ಹೇಳುವುದಾದರೆ, ಜಗತ್ತಿಗೆ ಶ್ರೇಷ್ಠ ದಿನ!. ಇದಕ್ಕಾಗಿ ನನಗೆ ನೊಬೆಲ್ ಶಾಂತಿ ಪ್ರಶಸ್ತಿ ಸಿಗುವುದಿಲ್ಲ” ಎಂದು ಸಾಮಾಜಿಕ ಮಾಧ್ಯಮ ಟ್ರುಥ್ ಸೋಶಿಯಲ್‌ನಲ್ಲಿ ಬರೆದುಕೊಂಡಿದ್ದಾರೆ.

“ಭಾರತ ಮತ್ತು ಪಾಕಿಸ್ತಾನದ ನಡುವಿನ ಯುದ್ಧವನ್ನು ನಿಲ್ಲಿಸಿದ್ದಕ್ಕಾಗಿ ನನಗೆ ನೊಬೆಲ್ ಶಾಂತಿ ಪ್ರಶಸ್ತಿ ಸಿಗುವುದಿಲ್ಲ. ಸೆರ್ಬಿಯಾ ಮತ್ತು ಕೊಸೊವೊ ನಡುವಿನ ಯುದ್ಧವನ್ನು ನಿಲ್ಲಿಸಿದ್ದಕ್ಕಾಗಿ ನನಗೆ ನೊಬೆಲ್ ಶಾಂತಿ ಪ್ರಶಸ್ತಿ ಸಿಗುವುದಿಲ್ಲ, ಈಜಿಪ್ಟ್ ಮತ್ತು ಇಥಿಯೋಪಿಯಾ ನಡುವೆ ಶಾಂತಿ ಕಾಪಾಡಿದ್ದಕ್ಕಾಗಿ ನನಗೆ ನೊಬೆಲ್ ಶಾಂತಿ ಪ್ರಶಸ್ತಿ ಸಿಗುವುದಿಲ್ಲ. (ಯುಎಸ್‌ ಮೂರ್ಖತನದಿಂದ ಹಣಕಾಸು ಒದಗಿಸಿದ ಇಥಿಯೋಪಿಯನ್ ನಿರ್ಮಿಸಿದ ಬೃಹತ್ ಅಣೆಕಟ್ಟು, ನೈಲ್ ನದಿಗೆ ಹರಿಯುವ ನೀರನ್ನು ಗಣನೀಯವಾಗಿ ಕಡಿಮೆ ಮಾಡುತ್ತದೆ) ಮತ್ತು ಮಧ್ಯಪ್ರಾಚ್ಯದಲ್ಲಿ ಅಬ್ರಹಾಂ ಒಪ್ಪಂದಗಳನ್ನು ಮಾಡಿದ್ದಕ್ಕಾಗಿ ನನಗೆ ನೊಬೆಲ್ ಶಾಂತಿ ಪ್ರಶಸ್ತಿ ಸಿಗುವುದಿಲ್ಲ” ಎಂದಿದ್ದಾರೆ.

“ಎಲ್ಲವೂ ಸರಿಯಾಗಿ ನಡೆದರೆ, ಇನ್ನಷ್ಟು ದೇಶಗಳು ಶಾಂತಿ ಒಪ್ಪಂದಕ್ಕೆ ಸಹಿ ಹಾಕಲಿವೆ. ಈ ಮೂಲಕ ಈ ಯುಗದಲ್ಲೇ ಮೊದಲ ಬಾರಿಗೆ ಮಧ್ಯಪ್ರಾಚ್ಯ ಒಂದಾಗಲಿದೆ. ಇಲ್ಲ, ರಷ್ಯಾ-ಉಕ್ರೇನ್ ಮತ್ತು ಇಸ್ರೇಲ್-ಇರಾನ್ ಸೇರಿದಂತೆ ನಾನು ಏನೇ ಮಾಡಿದರೂ ನನಗೆ ನೊಬೆಲ್ ಶಾಂತಿ ಪ್ರಶಸ್ತಿ ಸಿಗುವುದಿಲ್ಲ. ನನ್ನ ಶ್ರಮದ ಫಲಿತಾಂಶಗಳು ಏನೇ ಇರಲಿ. ಅದು ಜನರಿಗೆ ತಿಳಿದಿದೆ. ನನಗೆ ಅಷ್ಟೇ ಮುಖ್ಯ” ಎಂದು ಟ್ರಂಪ್ ಹೇಳಿದ್ದಾರೆ.

ಇಸ್ರೇಲ್-ಇರಾನ್ ಯುದ್ಧಕ್ಕೆ ಅಮೆರಿಕ ಎಂಟ್ರಿ | 2 ವಾರಗಳಲ್ಲಿ ನಿರ್ಧರಿಸುತ್ತೇನೆ ಎಂದ ಟ್ರಂಪ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಬಳಿಕ ಒಡಿಶಾದ ಕರಡು ಮತದಾರರ ಪಟ್ಟಿ ಪ್ರಕಟ : 20 ಲಕ್ಷ ಹೆಸರುಗಳು ಡಿಲೀಟ್

ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಗಣತಿ ಹಂತದ ಬಳಿಕ ಚುನಾವಣಾ ಆಯೋಗ ಭಾನುವಾರ (ಜು.5) ಒಡಿಶಾದ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದು, ಇದರಲ್ಲಿ 20 ಲಕ್ಷಕ್ಕೂ ಹೆಚ್ಚು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...

SIR: ಟಾರ್ಗೆಟ್ ಮತ್ತು ಒತ್ತಡದ ಕೆಲಸದಿಂದ ಮೂವರು ಸಿಬ್ಬಂದಿ ಸಾವು

ಕರ್ನಾಟಕದಲ್ಲಿ ನಡೆಯುತ್ತಿರುವ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯು ಕೆಳಹಂತದ ನೌಕರರ ಪಾಲಿಗೆ ಮರಣಶಾಸನವಾಗುತ್ತಿದೆಯೇ ಎಂಬ ಗಂಭೀರ ಪ್ರಶ್ನೆಯೊಂದು ಎದ್ದಿದೆ. ಅಧಿಕಾರಿಗಳು ನೀಡುತ್ತಿರುವ ಅತಿಯಾದ ಒತ್ತಡ ಮತ್ತು ಟಾರ್ಗೆಟ್ ಬೆನ್ನತ್ತುವ ಧಾವಂತದಿಂದಾಗಿ...

ಖಮೇನಿ ಅಂತ್ಯಕ್ರಿಯೆ ವೇಳೆ ಟ್ರಂಪ್ ಉದ್ಧಟತನದ ಹೇಳಿಕೆ: “ಇತಿಹಾಸ, ಗೌರವವಿಲ್ಲದ ದೇಶ ಅಮೆರಿಕ” ಎಂದು ಇರಾನ್ ತೀಕ್ಷ್ಣ ತಿರುಗೇಟು

ಟೆಹ್ರಾನ್: ಇರಾನ್‌ನ ಮಾಜಿ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ನಿಧನದ ನಂತರ ಜಾಗತಿಕ ರಾಜತಾಂತ್ರಿಕ ವಲಯದಲ್ಲಿ ಭಾರೀ ವಾಕ್ಸಮರ ಉಂಟಾಗಿದೆ. ಖಮೇನಿ ಅವರ ಅಂತ್ಯಕ್ರಿಯೆಯ ಸಂದರ್ಭದಲ್ಲಿ ಒಟ್ಟುಗೂಡಿರುವ ಇರಾನ್‌ನ ಇಡೀ...

ಮ್ಯಾಚ್ ಮಧ್ಯೆ ಕಾಂಡೊಮ್ ಜಾಹೀರಾತು: ಬಿಸಿಸಿಐ ವಿರುದ್ಧ ಕಿಡಿಕಾರಿದ ಮಾಜಿ ಕ್ರಿಕೆಟಿಗ, TMC ಸಂಸದ ಕೀರ್ತಿ ಆಜಾದ್

ಮ್ಯಾಂಚೆಸ್ಟರ್‌ನ ಓಲ್ಡ್ ಟ್ರಾಫರ್ಡ್‌ನಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್ ನಡುವಿನ ಟಿ20 ಅಂತರರಾಷ್ಟ್ರೀಯ ಪಂದ್ಯದ ನೇರ ಪ್ರಸಾರದ ವೇಳೆ ಕಾಂಡೊಮ್ ಜಾಹೀರಾತುಗಳನ್ನು ಪ್ರಸಾರ ಮಾಡಿದ್ದನ್ನು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಮತ್ತು ಮಾಜಿ...

ಒಂದೇ ಒಂದು ಇಟ್ಟಿಗೆ ಇಟ್ಟಿಲ್ಲ : ಕಳೆದ ಆರು ವರ್ಷಗಳಿಂದ ಕಾಗದದ ಮೇಲೆಯೇ ಕಾರ್ಯ ನಿರ್ವಹಿಸುತ್ತಿರುವ 100 ಹಾಸಿಗೆಗಳ ಆಸ್ಪತ್ರೆ!

ಮಧ್ಯ ಪ್ರದೇಶದ ಇಂದೋರ್‌ನ ಖಜರಾನಾದಲ್ಲಿ ಮಂಜೂರಾದ 100 ಹಾಸಿಗೆಗಳ ಸಿವಿಲ್ ಆಸ್ಪತ್ರೆಯು ಕಳೆದ 6 ವರ್ಷಗಳಿಂದ ಕೇವಲ ಕಾಗದದ ಮೇಲಷ್ಟೇ (ದಾಖಲೆಗಳಲ್ಲಿ) ಅಸ್ತಿತ್ವದಲ್ಲಿರುವುದು ವರದಿಯಾಗಿದೆ. ಈ ವಿಲಕ್ಷಣ ಮತ್ತು ಆಘಾತಕಾರಿ ಆಡಳಿತಾತ್ಮಕ ವೈಫಲ್ಯದ ಪ್ರಕರಣವು...

ವೋಟ್‌ಯಿಂದ ಹಿಡಿದು ಮಂದಿರದ ಚಂದಾದವರೆಗೆ ಬಿಜೆಪಿಯದ್ದು ಬರೀ ‘ಚೋರಿ’ ಎಂದ ಕಾಂಗ್ರೆಸ್

ಅಯೋಧ್ಯೆಯ ರಾಮ ಮಂದಿರದಲ್ಲಿ ನಡೆದಿದೆ ಎನ್ನಲಾದ ದೇಣಿಗೆ ದುರುಪಯೋಗದ ವಿಚಾರವಾಗಿ ಭಾನುವಾರ ಕಾಂಗ್ರೆಸ್ ಪಕ್ಷವು ಬಿಜೆಪಿ-ಆರ್‌ಎಸ್‌ಎಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದೆ. ಇದು ಅವರದೇ ಆದ ಇಕೋ ಸಿಸ್ಟಮ್‌ನ ದೊಡ್ಡ "ಹಗರಣ"ವಾಗಿದ್ದು, ಈ...

ಮುಸ್ಲಿಮರನ್ನು ಮಾದಕ ದ್ರವ್ಯ, ಭಯೋತ್ಪಾದನೆಗೆ ಲಿಂಕ್ ಮಾಡಿ ಪೋಸ್ಟ್: ಕೇರಳ ಹಿಂದೂ ಐಕ್ಯ ವೇದಿಕೆ ಮುಖ್ಯಸ್ಥ ಆರ್‌ವಿ ಬಾಬು ವಿರುದ್ಧ ಪ್ರಕರಣ ದಾಖಲು

ಕೊಚ್ಚಿ: ಮುಸ್ಲಿಂ ಸಮುದಾಯ ಮತ್ತು ಅದರ ಧಾರ್ಮಿಕ ಮುಖಂಡರನ್ನು ಗುರಿಯಾಗಿಸಿಕೊಂಡು ಸಾಮಾಜಿಕ ಮಾಧ್ಯಮದಲ್ಲಿ ಆಕ್ಷೇಪಾರ್ಹ ಹಾಗೂ ಕೋಮು ಪ್ರಚೋದನಾತ್ಮಕ ಪೋಸ್ಟ್ ಹಂಚಿಕೊಂಡಿದ್ದಕ್ಕಾಗಿ ಕೇರಳದ ಹಿಂದೂ ಐಕ್ಯ ವೇದಿಕೆಯ ರಾಜ್ಯ ಅಧ್ಯಕ್ಷ ಆರ್.ವಿ. ಬಾಬು...

ಇರಾನ್ ಜನರು ಅವರನ್ನು ದ್ವೇಷಿಸುತ್ತಾರೆ ಅಂದುಕೊಂಡಿದ್ದೆ: ಖಮೇನಿ ಅಂತ್ಯಕ್ರಿಯೆಯ ಜನಸಾಗರ ನೋಡಿ ಶಾಕ್ ಆದ ಟ್ರಂಪ್

ಇರಾನ್‌ನ ಮಾಜಿ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಅಂತ್ಯಕ್ರಿಯೆಯಲ್ಲಿ ಲಕ್ಷಾಂತರ ಜನರು ಭಾಗವಹಿಸಿ ಕಣ್ಣೀರು ಹಾಕುತ್ತಿರುವುದನ್ನು ನೋಡಿ ತಮಗೆ ತೀವ್ರ ಆಘಾತವಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ....

‘ನಿಮ್ಮ ಮೌನ ಯುವಜನರನ್ನು ಕೇವಲ ಕೀಟಗಳಂತೆ ನೋಡುತ್ತೀರಿ ಎಂಬುದಕ್ಕೆ ಒಪ್ಪಿಗೆಯಾಗಿದೆ’: ಮೋದಿಗೆ ಬಹಿರಂಗ ಪತ್ರ ಬರೆದ ಸಿಜೆಪಿ

"ಈ ದೇಶದ ಯುವಜನರನ್ನು ನೀವು ಕೇವಲ ನಿರ್ಲಕ್ಷಿಸಬೇಕಾದ ಕೀಟಗಳಂತೆ ನೋಡುತ್ತಿದ್ದೀರಾ?" ಎಂದು ಪ್ರಶ್ನಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಪ್ರಧಾನಿ ನರೇಂದ್ರ ಮೋದಿ ಅವರಿಗೆ ಶನಿವಾರ (ಜುಲೈ 4) ಬಹಿರಂಗ ಪತ್ರ ಬರೆದಿದೆ. ದೇಶದ...

ಮಮತಾ ಬ್ಯಾನರ್ಜಿಗೆ ಬಿಗ್ ಶಾಕ್: ನೇಮಕಗೊಂಡ ತಿಂಗಳಲ್ಲೇ ಟಿಎಂಸಿ ರಾಜ್ಯಾಧ್ಯಕ್ಷೆ ಚಂದ್ರಿಮಾ ಭಟ್ಟಾಚಾರ್ಯ ರಾಜೀನಾಮೆ

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಹೀನಾಯ ಸೋಲಿನ ಹಿನ್ನೆಲೆಯಲ್ಲಿ, ಅತ್ಯಂತ ನಿರ್ಣಾಯಕವಾದ ಸಾಂಸ್ಥಿಕ ಜವಾಬ್ದಾರಿಗೆ ನೇಮಕಗೊಂಡ ಕೇವಲ ಒಂದು ತಿಂಗಳ ಒಳಗಾಗಿಯೇ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ರಾಜ್ಯ ಘಟಕದ ಅಧ್ಯಕ್ಷೆ ಚಂದ್ರಿಮಾ...