Homeಅಂತರಾಷ್ಟ್ರೀಯಭಾರತ-ಪಾಕ್ ಸಂಘರ್ಷ ಶಮನ: ಟ್ರಂಪ್‌ಗೆ ನೊಬೆಲ್ ಶಾಂತಿ ಪ್ರಶಸ್ತಿ ನೀಡಲು ಪಾಕ್ ನಾಮನಿರ್ದೇಶನ!

ಭಾರತ-ಪಾಕ್ ಸಂಘರ್ಷ ಶಮನ: ಟ್ರಂಪ್‌ಗೆ ನೊಬೆಲ್ ಶಾಂತಿ ಪ್ರಶಸ್ತಿ ನೀಡಲು ಪಾಕ್ ನಾಮನಿರ್ದೇಶನ!

ಅಮೆರಿಕ ಅಧ್ಯಕ್ಷ ಏನಂದ್ರು?

- Advertisement -
- Advertisement -

ಪಹಲ್ಗಾಮ್ ಭಯೋತ್ಪಾದಕ ದಾಳಿ ಬಳಿಕ ಭಾರತ-ಪಾಕಿಸ್ತಾನ ನಡುವೆ ಏರ್ಪಟ್ಟಿದ್ದ ಸಂಘರ್ಷವನ್ನು ಶಮನ ಮಾಡುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಕ್ಕೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ ಅವರನ್ನು 2026ರ ‘ನೊಬೆಲ್ ಶಾಂತಿ ಪ್ರಶಸ್ತಿ’ಗೆ ಪಾಕಿಸ್ತಾನ ನಾಮನಿರ್ದೇಶನ ಮಾಡಿದೆ ಎಂದು ವರದಿಯಾಗಿದೆ.

ಪಾಕಿಸ್ತಾನ ಸರ್ಕಾರದ ಅಧಿಕೃತ ಎಕ್ಸ್ ಖಾತೆಯಲ್ಲಿ ಈ ಬಗ್ಗೆ ಪೋಸ್ಟ್ ಹಾಕಲಾಗಿದೆ ಎಂದು ಪ್ರಮುಖ ಮಾಧ್ಯಮಗಳು ವರದಿ ಮಾಡಿವೆ.

“ಪಾಕಿಸ್ತಾನ ಸರ್ಕಾರ 2026ರ ನೊಬೆಲ್ ಶಾಂತಿ ಪ್ರಶಸ್ತಿಗೆ ಡೊನಾಲ್ಡ್ ಜೆ.ಟ್ರಂಪ್ ಅವರ ಹೆಸರನ್ನು ಶಿಫಾರಸ್ಸು ಮಾಡುತ್ತಿದೆ. ಭಾರತ-ಪಾಕ್ ಸಂಘರ್ಷದ ಸಂದರ್ಭದಲ್ಲಿ ಟ್ರಂಪ್ ವಹಿಸಿದ ಪ್ರಮುಖ ರಾಜತಾಂತ್ರಿಕ ಮಧ್ಯಸ್ಥಿಕೆ ಮತ್ತು ಪರಿವರ್ತನಾಶೀಲ ನಾಯಕತ್ವ ಪ್ರದರ್ಶಿಸಿದ್ದನ್ನು ಗುರುತಿಸಿ ಪಾಕಿಸ್ತಾನ ಸರ್ಕಾರವು 2026ರ ನೊಬೆಲ್ ಶಾಂತಿ ಪುರಸ್ಕಾರಕ್ಕೆ ಡೊನಾಲ್ಡ್ ಜೆ.ಟ್ರಂಪ್ ಅವರ ಹೆಸರನ್ನು ಅಧಿಕೃತವಾಗಿ ಶಿಫಾರಸ್ಸು ಮಾಡುತ್ತಿದೆ” ಎಂದು ಪೋಸ್ಟ್‌ನಲ್ಲಿ ಹೇಳಿರುವುದಾಗಿ ವರದಿಗಳು ವಿವರಿಸಿವೆ.

ಭಾರತ- ಪಾಕಿಸ್ತಾನದ ಸಂಘರ್ಷದ ಬಳಿಕ ಮೊದಲ ಬಾರಿಗೆ ಅಮೆರಿಕಕ್ಕೆ ಭೇಟಿ ನೀಡಿದ್ದ ಪಾಕಿಸ್ತಾನ ಸೇನೆಯ ಮುಖ್ಯಸ್ಥ ಅಸೀಮ್ ಮುನೀರ್ ಅವರಿಗೆ, ಅಧ್ಯಕ್ಷ ಟ್ರಂಪ್ ಜೂನ್ 18ರಂದು ಶ್ವೇತಭವನದಲ್ಲಿ ವಿಶೇಷ ಔತಣಕೂಟ ಆಯೋಜಿಸಿದ್ದರು. ಇದರ ಮರುದಿನವೇ ಪಾಕಿಸ್ತಾನದಿಂದ ಈ ಅಚ್ಚರಿಯ ಹೇಳಿಕೆ ಹೊರಬಿದ್ದಿದೆ.

ಪಹಲ್ಗಾಮ್ ದಾಳಿ ಬಳಿಕ ಪಾಕಿಸ್ತಾನ ಪ್ರೇರಿತ ಮತ್ತು ಇತರ ರೀತಿಯ ಭಯೋತ್ಪಾದನೆಯ ಕುರಿತ ಭಾರತದ ನಿಲುವನ್ನು ಜಗತ್ತಿಗೆ ತಿಳಿಸಲು ಭಾರತ ಸರ್ಕಾರ ಸರ್ವಪಕ್ಷ ಸಂಸದರ ಸುಮಾರು 7 ನಿಯೋಗಗಳನ್ನು ವಿವಿಧ ರಾಷ್ಟ್ರಗಳಿಗೆ ಕಳುಹಿಸಿತ್ತು.

ಈ ನಿಯೋಗಗಳು ಜಾಗತಿಕ ಮಟ್ಟದಲ್ಲಿ ಪಾಕಿಸ್ತಾನದ ಬಣ್ಣ ಬಯಲು ಮಾಡಿದೆ ಎಂದು ಹೇಳಲಾಗಿತ್ತು. ಇದಾಗಿ ಕೆಲ ದಿನಗಳಲ್ಲೇ ಅಮೆರಿಕ ಅಧ್ಯಕ್ಷ ಪಾಕಿಸ್ತಾನದ ಸೇನಾ ಮುಖ್ಯಸ್ಥರಿಗೆ ಔತಣಕೂಟ ಆಯೋಜಿಸಿ ಗೌರವಿಸಿರುವುದು ಭಾರತಕ್ಕೆ ಒಂದು ರೀತಿಯಲ್ಲಿ ರಾಜತಾಂತ್ರಿಕ ಹಿನ್ನಡೆ ಎನ್ನಬಹುದು.

ಟ್ರಂಪ್ ಮಧ್ಯಸ್ಥಿಕೆ ಅಲ್ಲಗಳೆದ ಭಾರತ

ಭಾರತ-ಪಾಕಿಸ್ತಾನ ನಡುವೆ ಸಂಘರ್ಷ ಏರ್ಪಟಿದ್ದಾಗ, ಆರಂಭದಲ್ಲಿ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದ ಅಮೆರಿಕ ಅಧ್ಯಕ್ಷ ಟ್ರಂಪ್, “ಅದು ಆ ಎರಡು ರಾಷ್ಟ್ರಗಳ ನಡುವಿನ ಸಂಘರ್ಷ. ಈ ರೀತಿಯ ಸಂಘರ್ಷ ಭಾರತ-ಪಾಕಿಸ್ತಾನ ನಡುವೆ ಸುದೀರ್ಘ ಸಮಯದಿಂದ ಇದೆ. ನಮಗೆ ಭಾರತ-ಪಾಕಿಸ್ತಾನ ಎರಡೂ ಮಿತ್ರ ರಾಷ್ಟ್ರಗಳೇ. ಅವರ ಸಮಸ್ಯೆಯನ್ನು ಅವರು ಬಗೆ ಹರಿಸಿಕೊಳ್ಳುತ್ತಾರೆ. ನಾವು ಅದರಲ್ಲಿ ತಲೆ ಹಾಕಲು ಹೋಗುವುದಿಲ್ಲ” ಎಂದಿದ್ದರು.

ಆದರೆ, ಮೇ 10ರಂದು ಸಂಜೆ 5.33ರ (ಭಾರತೀಯ ಕಾಲಮಾನ) ಸುಮಾರಿಗೆ ಭಾರತ-ಪಾಕಿಸ್ತಾನ ನಡುವೆ ಕದನ ವಿರಾಮ ಒಪ್ಪಂದಕ್ಕೆ ಒಪ್ಪಿಕೊಂಡಿವೆ ಎಂದು ಟ್ರಂಪ್ ಮೊದಲು ಪೋಸ್ಟ್ ಮಾಡಿದ್ದರು. ಆ ಬಳಿಕವಾಗಿದೆ. ಭಾರತದ ವಿದೇಶಾಂಗ ಕಾರ್ಯದರ್ಶಿ ಮತ್ತು ವಿದೇಶಾಂಗ ಇಲಾಖೆ ಸಚಿವರು ಕದನ ವಿರಾಮದ ಕುರಿತು ಘೋಷಣೆ ಮಾಡಿರುವುದು.

ಈ ಬೆಳವಣಿಗೆ ಭಾರತ-ಪಾಕಿಸ್ತಾನ ನಡುವಿನ ಕದನ ವಿರಾಮ ಒಪ್ಪಂದಲ್ಲಿ ಟ್ರಂಪ್ ಅಥವಾ ಅಮೆರಿಕ ಮಧ್ಯಸ್ಥಿಕೆ ವಹಿಸಿರುವುದನ್ನು ಡೃಢಪಡಿಸಿತ್ತು. ಅಲ್ಲದೆ, ಟ್ರಂಪ್ ತಮ್ಮ ಪೋಸ್ಟ್‌ನಲ್ಲಿ ಕೂಡ ಅಮೆರಿಕ ಮಧ್ಯಸ್ಥಿಕೆಯಿಂದಲೇ ಕದನ ವಿರಾಮ ಏರ್ಪಟ್ಟಿದೆ ಎಂದಿದ್ದರು. (ಟ್ರಂಪ್‌ ಪೋಸ್ಟ್‌ನಲ್ಲಿ ‘Mediate by the United States’ ಎಂದು ಬರೆದಿರುವುದನ್ನು ನೋಡಬಹುದು)

ಸೌದಿಯಲ್ಲಿ ನಡೆದ ಹೂಡಿಕೆ ಸಮಾವೇಶದಲ್ಲಿ ಮಾತನಾಡಿದ್ದ ಟ್ರಂಪ್, ಭಾರತ-ಪಾಕಿಸ್ತಾನ ನಡುವೆ ಕದನ ವಿರಾಮ ಮಾಡಿಸಿದೆ ಎಂದು ಹೇಳಿಕೊಂಡಿದ್ದರು. ಆದರೆ, ಭಾರತ ಟ್ರಂಪ್ ಹೇಳಿಕೆಯನ್ನು ನಿರಾಕರಿಸಿತ್ತು.

ಟ್ರಂಪ್ ಈಗಲೂ ಭಾರತ-ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾವೇ ಎಂದು ಹೇಳಿಕೊಂಡು ತಿರುಗಾಡುತ್ತಿದ್ದಾರೆ. ಭಾರತ ಅದನ್ನು ನಿರಾಕರಿಸುತ್ತಲೇ ಇದೆ. ಈ ನಡುವೆ ಕದನ ವಿರಾಮಕ್ಕೆ ಮಧ್ಯಸ್ಥಿಕೆ ವಹಿಸಿದ್ದಕ್ಕೆ ಟ್ರಂಪ್‌ಗೆ ನೊಬೆಲ್ ಕೊಡುವಂತೆ ಅಮೆರಿಕ ಶಿಫಾರಸ್ಸು ಮಾಡಿರುವುದು ಚರ್ಚೆಯನ್ನು ಮತ್ತೊಂದು ಹಂತಕ್ಕೆ ಕೊಂಡೊಯ್ದಿದೆ.

ಟ್ರಂಪ್ ಪ್ರತಿಕ್ರಿಯೆ ಏನು?

ನೋಬೆಲ್‌ಗೆ ಶಿಫಾರಸ್ಸು ಮಾಡಿರುವ ಬಗ್ಗೆ ಪ್ರತಿಕ್ರಿಯಿಸಿರುವ ಟ್ರಂಪ್, “ಹಿಂಸಾತ್ಮಕ ರಕ್ತಪಾತ, ಸಾವಿಗೆ ಹೆಸರುವಾಸಿಯಾಗಿರುವ ಮತ್ತು ದಶಕಗಳಿಂದ ಯುದ್ಧ ನಡೆಯುತ್ತಿರುವ ಕಾಂಗೋ ಪ್ರಜಾಸತ್ತಾತ್ಮಕ ಗಣರಾಜ್ಯ ಮತ್ತು ರುವಾಂಡಾ ಗಣರಾಜ್ಯದ ನಡುವೆ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ಅವರೊಂದಿಗೆ ಸೇರಿ ಒಪ್ಪಂದ ಮಾಡಿಕೊಂಡಿದ್ದೇನೆ ಎಂದು ತಿಳಿಸಲು ನನಗೆ ತುಂಬಾ ಸಂತೋಷವಾಗುತ್ತಿದೆ. ಈ ಯುದ್ಧವು ಇತರ ಯುದ್ಧಗಳಿಗಿಂತ ಹೆಚ್ಚಾಗಿ ಹಿಂಸಾತ್ಮಕ ರಕ್ತಪಾತ ಮತ್ತು ಸಾವಿಗೆ ಹೆಸರುವಾಸಿಯಾಗಿತ್ತು ಮತ್ತು ದಶಕಗಳಿಂದ ನಡೆಯುತ್ತಿತ್ತು. ದಾಖಲೆಗಳಿಗೆ ಸಹಿ ಹಾಕಲು ರುವಾಂಡಾ ಮತ್ತು ಕಾಂಗೋದ ಪ್ರತಿನಿಧಿಗಳು ಸೋಮವಾರ ವಾಷಿಂಗ್ಟನ್‌ ಆಗಮಿಸಲಿದ್ದಾರೆ. ಇದು ಆಫ್ರಿಕಾಕ್ಕೆ ಮತ್ತು ಸ್ಪಷ್ಟವಾಗಿ ಹೇಳುವುದಾದರೆ, ಜಗತ್ತಿಗೆ ಶ್ರೇಷ್ಠ ದಿನ!. ಇದಕ್ಕಾಗಿ ನನಗೆ ನೊಬೆಲ್ ಶಾಂತಿ ಪ್ರಶಸ್ತಿ ಸಿಗುವುದಿಲ್ಲ” ಎಂದು ಸಾಮಾಜಿಕ ಮಾಧ್ಯಮ ಟ್ರುಥ್ ಸೋಶಿಯಲ್‌ನಲ್ಲಿ ಬರೆದುಕೊಂಡಿದ್ದಾರೆ.

“ಭಾರತ ಮತ್ತು ಪಾಕಿಸ್ತಾನದ ನಡುವಿನ ಯುದ್ಧವನ್ನು ನಿಲ್ಲಿಸಿದ್ದಕ್ಕಾಗಿ ನನಗೆ ನೊಬೆಲ್ ಶಾಂತಿ ಪ್ರಶಸ್ತಿ ಸಿಗುವುದಿಲ್ಲ. ಸೆರ್ಬಿಯಾ ಮತ್ತು ಕೊಸೊವೊ ನಡುವಿನ ಯುದ್ಧವನ್ನು ನಿಲ್ಲಿಸಿದ್ದಕ್ಕಾಗಿ ನನಗೆ ನೊಬೆಲ್ ಶಾಂತಿ ಪ್ರಶಸ್ತಿ ಸಿಗುವುದಿಲ್ಲ, ಈಜಿಪ್ಟ್ ಮತ್ತು ಇಥಿಯೋಪಿಯಾ ನಡುವೆ ಶಾಂತಿ ಕಾಪಾಡಿದ್ದಕ್ಕಾಗಿ ನನಗೆ ನೊಬೆಲ್ ಶಾಂತಿ ಪ್ರಶಸ್ತಿ ಸಿಗುವುದಿಲ್ಲ. (ಯುಎಸ್‌ ಮೂರ್ಖತನದಿಂದ ಹಣಕಾಸು ಒದಗಿಸಿದ ಇಥಿಯೋಪಿಯನ್ ನಿರ್ಮಿಸಿದ ಬೃಹತ್ ಅಣೆಕಟ್ಟು, ನೈಲ್ ನದಿಗೆ ಹರಿಯುವ ನೀರನ್ನು ಗಣನೀಯವಾಗಿ ಕಡಿಮೆ ಮಾಡುತ್ತದೆ) ಮತ್ತು ಮಧ್ಯಪ್ರಾಚ್ಯದಲ್ಲಿ ಅಬ್ರಹಾಂ ಒಪ್ಪಂದಗಳನ್ನು ಮಾಡಿದ್ದಕ್ಕಾಗಿ ನನಗೆ ನೊಬೆಲ್ ಶಾಂತಿ ಪ್ರಶಸ್ತಿ ಸಿಗುವುದಿಲ್ಲ” ಎಂದಿದ್ದಾರೆ.

“ಎಲ್ಲವೂ ಸರಿಯಾಗಿ ನಡೆದರೆ, ಇನ್ನಷ್ಟು ದೇಶಗಳು ಶಾಂತಿ ಒಪ್ಪಂದಕ್ಕೆ ಸಹಿ ಹಾಕಲಿವೆ. ಈ ಮೂಲಕ ಈ ಯುಗದಲ್ಲೇ ಮೊದಲ ಬಾರಿಗೆ ಮಧ್ಯಪ್ರಾಚ್ಯ ಒಂದಾಗಲಿದೆ. ಇಲ್ಲ, ರಷ್ಯಾ-ಉಕ್ರೇನ್ ಮತ್ತು ಇಸ್ರೇಲ್-ಇರಾನ್ ಸೇರಿದಂತೆ ನಾನು ಏನೇ ಮಾಡಿದರೂ ನನಗೆ ನೊಬೆಲ್ ಶಾಂತಿ ಪ್ರಶಸ್ತಿ ಸಿಗುವುದಿಲ್ಲ. ನನ್ನ ಶ್ರಮದ ಫಲಿತಾಂಶಗಳು ಏನೇ ಇರಲಿ. ಅದು ಜನರಿಗೆ ತಿಳಿದಿದೆ. ನನಗೆ ಅಷ್ಟೇ ಮುಖ್ಯ” ಎಂದು ಟ್ರಂಪ್ ಹೇಳಿದ್ದಾರೆ.

ಇಸ್ರೇಲ್-ಇರಾನ್ ಯುದ್ಧಕ್ಕೆ ಅಮೆರಿಕ ಎಂಟ್ರಿ | 2 ವಾರಗಳಲ್ಲಿ ನಿರ್ಧರಿಸುತ್ತೇನೆ ಎಂದ ಟ್ರಂಪ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...