Homeಅಂತರಾಷ್ಟ್ರೀಯಪಾಕಿಸ್ತಾನ | 450ಕ್ಕೂ ಹೆಚ್ಚು ಜನರನ್ನು ಒತ್ತೆಯಾಳುಗಳಾಗಿ ಇಟ್ಟು ರೈಲು ಅಪಹರಿಸಿದ ಬಲೂಚಿಸ್ತಾನ್ ಪ್ರತ್ಯೇಕವಾದಿಗಳು

ಪಾಕಿಸ್ತಾನ | 450ಕ್ಕೂ ಹೆಚ್ಚು ಜನರನ್ನು ಒತ್ತೆಯಾಳುಗಳಾಗಿ ಇಟ್ಟು ರೈಲು ಅಪಹರಿಸಿದ ಬಲೂಚಿಸ್ತಾನ್ ಪ್ರತ್ಯೇಕವಾದಿಗಳು

- Advertisement -
- Advertisement -

ಪಾಕಿಸ್ತಾನದ ಬಲೂಚಿಸ್ತಾನ್ ಪ್ರಾಂತ್ಯದಲ್ಲಿ ಪೇಶಾವರಕ್ಕೆ ತೆರಳುತ್ತಿದ್ದ ರೈಲೊಂದನ್ನು ಮಂಗಳವಾರ ‘ಬಲೂಚ್ ಲಿಬರೇಶನ್ ಆರ್ಮಿ’ ಎಂಬ ಪ್ರತ್ಯೇಕತಾವಾದಿ ಗುಂಪು ಅಪಹರಿಸಿದ್ದು, ಅದರಲ್ಲಿದ್ದ 450 ಪ್ರಯಾಣಿಕರಲ್ಲಿ 182 ಜನರನ್ನು ಒತ್ತೆಯಾಳನ್ನಾಗಿ ಇರಿಸಿಕೊಂಡಿದ್ದಾರೆ. ತಮ್ಮ ಬೇಡಿಕೆಗಳನ್ನು ಈಡೇರಿಸದಿದ್ದರೆ ಒತ್ತೆಯಾಳುಗಳನ್ನು ಕೊಲ್ಲುವುದಾಗಿ ಬಂಡುಕೋರರು ಬೆದರಿಕೆ ಹಾಕಿದ್ದಾರೆ ಎಂದು ಎಎಫ್‌ಪಿ ವರದಿ ಮಾಡಿದೆ. ಪಾಕಿಸ್ತಾನ

ಸುಮಾರು 450 ಪ್ರಯಾಣಿಕರಲ್ಲಿ ಮಹಿಳೆಯರು, ಮಕ್ಕಳು, ವೃದ್ಧರು ಮತ್ತು ಬಲೂಚ್ ನಾಗರಿಕರು ಸೇರಿದಂತೆ ಎಲ್ಲಾ ನಾಗರಿಕ ಪ್ರಯಾಣಿಕರನ್ನು (ಒಟ್ಟು 450 ರಲ್ಲಿ) ಯಾವುದೇ ಹಾನಿಯಾಗದಂತೆ ಬಿಡುಗಡೆ ಮಾಡಲಾಗಿದೆ ಮತ್ತು ಸುರಕ್ಷಿತ ಮಾರ್ಗವನ್ನು ಒದಗಿಸಲಾಗಿದೆ ಎಂದು ಬಂಡುಕೋರ ಗುಂಪು ಹೇಳಿದೆ. ಒತ್ತೆಯಾಳುಗಳಲ್ಲಿ ರಜೆಯಲ್ಲಿ ಪ್ರಯಾಣಿಸುತ್ತಿದ್ದ ಪಾಕಿಸ್ತಾನಿ ಸೇನೆ, ಪೊಲೀಸ್, ISI ಮತ್ತು ATIF ನ ಸೇವೆ ಸಲ್ಲಿಸುತ್ತಿರುವ ಸದಸ್ಯರು ಸೇರಿದ್ದಾರೆ ಎಂದು ವರದಿಯಾಗಿದೆ.

ಬಂಡುಕೋರರೊಂದಿಗೆ ಭದ್ರತಾ ಪಡೆಗಳು ಭಾರೀ ಘರ್ಷಣೆ ನಡೆಸಿದ್ದು 11 ಸೈನಿಕರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಅಪಹರಿಸಲ್ಪಟ್ಟ ಜಾಫರ್ ಎಕ್ಸ್‌ಪ್ರೆಸ್ ರೈಲಿನ ಮೇಲೆ ಗುಂಡು ಹಾರಿಸಲಾಯಿತು ಎಂದು ರೈಲ್ವೆ ಮತ್ತು ಪೊಲೀಸ್ ಅಧಿಕಾರಿಗಳು ದೃಢಪಡಿಸಿದ್ದಾರೆ ಎಂದು ರಾಯಿಟರ್ಸ್ ವರದಿ ಮಾಡಿದೆ. ದಾಳಿಯಲ್ಲಿ ಚಾಲಕ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದು, ರೈಲು ಸುರಂಗದೊಳಗೆ ಸಿಲುಕಿಕೊಂಡಿದೆ ಎಂದು ಅವರು ಹೇಳಿದ್ದಾರೆ. ಪಾಕಿಸ್ತಾನ

“ರೈಲಿನಲ್ಲಿದ್ದ 450 ಕ್ಕೂ ಹೆಚ್ಚು ಪ್ರಯಾಣಿಕರನ್ನು ಬಂದೂಕುಧಾರಿಗಳು ಒತ್ತೆಯಾಳಾಗಿ ಇರಿಸಿಕೊಂಡಿದ್ದಾರೆ” ಎಂದು ಕ್ವೆಟ್ಟಾದಲ್ಲಿರುವ ರೈಲ್ವೆ ಸರ್ಕಾರಿ ಅಧಿಕಾರಿ ಮುಹಮ್ಮದ್ ಕಾಶಿಫ್ ಹೇಳಿರುವುದಾಗಿ ಎಎಫ್‌ಪಿ ವರದಿ ಮಾಡಿದೆ. ಕ್ವೆಟ್ಟಾ ಬಲೂಚಿಸ್ತಾನ್‌ನ ಪ್ರಾಂತೀಯ ರಾಜಧಾನಿಯಾಗಿದೆ.

“ರೈಲು ಒಂಬತ್ತು ಬೋಗಿಗಳನ್ನು ಹೊಂದಿದ್ದು, ಸುಮಾರು 500 ಪ್ರಯಾಣಿಕರನ್ನು ಹೊಂದಿತ್ತು. ಸುರಂಗ ಸಂಖ್ಯೆ 8 ರಲ್ಲಿ ಶಸ್ತ್ರಸಜ್ಜಿತ ವ್ಯಕ್ತಿಗಳು ರೈಲನ್ನು ನಿಲ್ಲಿಸಿದರು. ಪ್ರಯಾಣಿಕರು ಮತ್ತು ಸಿಬ್ಬಂದಿಯನ್ನು ಸಂಪರ್ಕಿಸಲು ಪ್ರಯತ್ನಗಳನ್ನು ಮಾಡಲಾಗುತ್ತಿದೆ.” ಎಂದು ಕಾಶಿಫ್ ಅವರು ಹೇಳಿದ್ದಾರೆ ಎಂದು ಡಾನ್‌ ಪತ್ರಿಕೆ ವರದಿ ಮಾಡಿದೆ.

“ರೈಲು ನಿಂತಿರುವ ಪ್ರದೇಶವು ಪರ್ವತ ಪ್ರದೇಶವಾಗಿದ್ದು, ಬಂಡುಕೋರರು ಅಡಗುತಾಣಗಳನ್ನು ಹೊಂದಲು ಮತ್ತು ದಾಳಿಗಳನ್ನು ಯೋಜಿಸಲು ಸುಲಭವಾಗುತ್ತದೆ” ಎಂದು ಪೊಲೀಸ್ ಅಧಿಕಾರಿಯೊಬ್ಬರು AFP ಗೆ ತಿಳಿಸಿದ್ದಾರೆ. ಸುರಂಗದ ಸುತ್ತಲೂ ಸ್ಫೋಟದ ಶಬ್ದ ಕೇಳಿಬಂದಿದ್ದು, ಅವರು ಆ ಪ್ರದೇಶದಲ್ಲಿ ಬಂಡುಕೋರರೊಂದಿಗೆ ಗುಂಡಿನ ಚಕಮಕಿ ನಡೆಸುತ್ತಿದ್ದಾರೆ ಎಂದು ಭದ್ರತಾ ಪಡೆಗಳು ಹೇಳಿರುವುದಾಗಿ ರಾಯಿಟರ್ಸ್ ಉಲ್ಲೇಖಿಸಿದೆ.

ರೈಲನ್ನು ಅಪಹರಿಸಿದ ನಂತರ ಬಲೂಚ್ ಲಿಬರೇಶನ್ ಆರ್ಮಿ ಹೇಳಿಕೆಯೊಂದನ್ನು ಬಿಡುಗಡೆ ಮಾಡಿದ್ದು, ಭದ್ರತಾ ಪಡೆಗಳು ಸೇರಿದಂತೆ ರೈಲಿನಲ್ಲಿರುವ ಜನರನ್ನು ಒತ್ತೆಯಾಳುಗಳನ್ನಾಗಿ ಮಾಡಿಕೊಂಡಿರುವುದಾಗಿ ಹೇಳಿದೆ. ಭದ್ರತಾ ಪಡೆಗಳು ಹಿಂದೆ ಸರಿಯದಿದ್ದರೆ ಒತ್ತೆಯಾಳುಗಳನ್ನು ಕೊಲ್ಲುವುದಾಗಿ ಗುಂಪು ಬೆದರಿಕೆ ಹಾಕಿದೆ.

ದಾಳಿಯನ್ನು ಖಂಡಿಸಿರುವ ಪಾಕಿಸ್ತಾನದ ಆಂತರಿಕ ಸಚಿವ ಮೊಹ್ಸಿನ್ ನಖ್ವಿ, “ಮುಗ್ಧ ಪ್ರಯಾಣಿಕರ ಮೇಲೆ ಗುಂಡು ಹಾರಿಸುವ ಮೃಗಗಳಿಗೆ ತಮ್ಮ ಸರ್ಕಾರ ಯಾವುದೇ ರಿಯಾಯಿತಿಗಳನ್ನು ನೀಡುವುದಿಲ್ಲ” ಎಂದು ಹೇಳಿದ್ದಾರೆ.

ಬಲೂಚ್ ಲಿಬರೇಶನ್ ಆರ್ಮಿ ಪಾಕಿಸ್ತಾನದ ಬಲೂಚಿಸ್ತಾನ್ ಪ್ರದೇಶದಲ್ಲಿ ಕಾರ್ಯನಿರ್ವಹಿಸುತ್ತಿರುವ ಬಂಡುಕೋರ ಗುಂಪಾಗಿದ್ದು, ಸಶಸ್ತ್ರ ಹೋರಾಟದ ಮೂಲಕ ಈ ಪ್ರದೇಶವನ್ನು ದೇಶದಿಂದ ಬೇರ್ಪಡಿಸುವುದಾಗಿ ಪ್ರತಿಪಾದಿಸುತ್ತದೆ. ಈ ಸಂಘಟನೆಯನ್ನು ಪಾಕಿಸ್ತಾನ ಸರ್ಕಾರ ”ಭಯೋತ್ಪಾದಕ ಸಂಘಟನೆ” ಎಂದು ಗುರುತಿಸಿದೆ. ಈ ಗುಂಪು ಸರ್ಕಾರ, ಸೈನ್ಯ ಮತ್ತು ಚೀನಾದ ಹಿತಾಸಕ್ತಿಗಳ ವಿರುದ್ಧ ಆಗಾಗ್ಗೆ ದಾಳಿಗಳನ್ನು ನಡೆಸುತ್ತಿದೆ.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಕೆಂಪು ಮೆಣಸಿನಕಾಯಿ ಬೆಲೆ ಕುಸಿತ | ಮಧ್ಯಪ್ರವೇಶಿಸುವಂತೆ ಪ್ರಧಾನಿಗೆ ಪತ್ರ ಬರೆದ ಸಿಎಂ ಸಿದ್ದರಾಮಯ್ಯ

ಕೆಂಪು ಮೆಣಸಿನಕಾಯಿ ಬೆಲೆ ಕುಸಿತ | ಮಧ್ಯಪ್ರವೇಶಿಸುವಂತೆ ಪ್ರಧಾನಿಗೆ ಪತ್ರ ಬರೆದ ಸಿಎಂ ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ವಕ್ಷೇತ್ರ ತಿರುವನಂತಪುರದಲ್ಲಿ ಬಿಜೆಪಿ ಭರ್ಜರಿ ಗೆಲುವು : ‘ಪ್ರಜಾಪ್ರಭುತ್ವದ ಸೌಂದರ್ಯ’ ಎಂದ ಕಾಂಗ್ರೆಸ್ ಸಂಸದ ಶಶಿ ತರೂರ್

ಕೇರಳದ ಸ್ಥಳೀಯ ಸಂಸ್ಥೆ ಚುನಾವಣೆಯ ಫಲಿತಾಂಶ ಇಂದು (ಡಿ.13) ಪ್ರಕಟಗೊಂಡಿದ್ದು, ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ 45 ವರ್ಷಗಳ ಸಿಪಿಐ(ಎಂ) ನೇತೃತ್ವದ ಎಲ್‌ಡಿಎಫ್‌...

ಕೇರಳ ಸ್ಥಳೀಯ ಸಂಸ್ಥೆ ಚುನಾವಣೆ : ಯುಡಿಎಫ್‌ ಸ್ಪಷ್ಟ ಮೇಲುಗೈ

ಇಂದು (2025 ಡಿಸೆಂಬರ್ 13, ಶನಿವಾರ) ಪ್ರಕಟಗೊಂಡ ಕೇರಳದ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶದಲ್ಲಿ ವಿರೋಧ ಪಕ್ಷಗಳ ಒಕ್ಕೂಟವಾದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಸ್ಪಷ್ಟ ಮೇಲುಗೈ ಸಾಧಿಸಿದೆ. ಈ ಮೂಲಕ ರಾಜ್ಯ...

ಕೋಲ್ಕತ್ತಾ ಮೆಸ್ಸಿ ಕಾರ್ಯಕ್ರಮದಲ್ಲಿ ಗಲಾಟೆ | ಕ್ಷಮೆ ಯಾಚಿಸಿದ ಸಿಎಂ ಮಮತಾ ಬ್ಯಾನರ್ಜಿ, ತನಿಖೆಗೆ ಸಮಿತಿ ರಚನೆ; ಆಯೋಜಕನ ಬಂಧನ

ಫುಟ್ಬಾಲ್ ತಾರೆ ಲಿಯೋನೆಲ್ ಮೆಸ್ಸಿ ಭೇಟಿಯ ವೇಳೆ ಶನಿವಾರ (ಡಿಸೆಂಬರ್ 13) ಕೋಲ್ಕತ್ತಾದ ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ಉಂಟಾದ ಗಲಾಟೆಗೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕ್ಷಮೆಯಾಚಿಸಿದ್ದು, ನಿವೃತ್ತ ನ್ಯಾಯಮೂರ್ತಿ...

ಮೆಸ್ಸಿ ನೋಡಲು 25 ಸಾವಿರ ರೂ. ಪಾವತಿಸಿದವರಿಗೆ ನಿರಾಶೆ; ಕೋಪಗೊಂಡ ಅಭಿಮಾನಿಗಳಿಂದ ಕ್ರೀಡಾಂಗಣದಲ್ಲಿ ದಾಂಧಲೆ

ಶನಿವಾರ ನಡೆದ ಲಿಯೋನೆಲ್ ಮೆಸ್ಸಿ ಅವರ ಬಹು ನಿರೀಕ್ಷಿತ "ಗೋಟ್ ಇಂಡಿಯಾ ಟೂರ್" ಕೋಲ್ಕತ್ತಾದಲ್ಲಿ ಅಸ್ತವ್ಯಸ್ತವಾಯಿತು. ಯುವ ಭಾರತಿ ಕ್ರಿರಂಗನ್‌ನಲ್ಲಿ ರೊಚ್ಚಿಗೆದ್ದ ಅಭಿಮಾನಿಗಳ ದಾಂಧಲೆಯಿಂದ ಕ್ರೀಡಾಂಗಣ ಅವ್ಯವಸ್ಥೆಗೆ ಒಳಗಾಯಿತು. ಸಾವಿರಾರು ಅಭಿಮಾನಿಗಳು ಅರ್ಜೆಂಟೀನಾದ...

ಡ್ರಗ್‌ ಪೆಡ್ಲರ್‌ಗಳ ಮನೆ ಒಡೆದು ಹಾಕುವ ಹೇಳಿಕೆ : ಪರಮೇಶ್ವರ್ ಮಾತಿಗೆ ಆತಂಕ ವ್ಯಕ್ತಪಡಿಸಿದ ಕಾಂಗ್ರೆಸ್ ಹಿರಿಯ ನಾಯಕ ಚಿದಂಬರಂ

"ಡ್ರಗ್‌ ಪೆಡ್ಲರ್‌ಗಳ ಬಾಡಿಗೆ ಮನೆಗಳನ್ನು ಒಡೆದು ಹಾಕುವ ಹಂತಕ್ಕೆ ಹೋಗಿದ್ದೇವೆ" ಎಂಬ ಗೃಹ ಸಚಿವ ಜಿ.ಪರಮೇಶ್ವರ್ ಹೇಳಿಕೆಗೆ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಆತಂಕ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ...

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ: ಶಶಿ ತರೂರ್ ಕ್ಷೇತ್ರ ತಿರುವನಂತಪುರಂನಲ್ಲಿ ಬಿಜೆಪಿ ಮುನ್ನಡೆ

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ, ವಿಶೇಷವಾಗಿ ತಿರುವನಂತಪುರಂನಲ್ಲಿ ಭಾರತೀಯ ಜನತಾ ಪಕ್ಷದ ಸಾಧನೆಯನ್ನು ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಶನಿವಾರ ಅಭಿನಂದಿಸಿದ್ದಾರೆ. ಜನರ ತೀರ್ಪನ್ನು ಗೌರವಿಸಬೇಕು ಎಂದು ಹೇಳಿದ್ದಾರೆ. ಎಕ್ಸ್‌ನಲ್ಲಿ ದೀರ್ಘ...

ಆಳಂದ ಮತಗಳ್ಳತನ | ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಸೇರಿ 7 ಮಂದಿ ವಿರುದ್ಧ ಎಸ್‌ಐಟಿ ಚಾರ್ಜ್‌ಶೀಟ್‌

ಕಲಬುರಗಿಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಮತಗಳ್ಳತನ (ಚುನಾವಣಾ ಆಕ್ರಮ) ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದು, ಆಳಂದದ ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್...

ಉತ್ತರ ಪ್ರದೇಶ| ಗಸ್ತು ವಾಹನ ಹಳ್ಳಕ್ಕೆ ಉರುಳಿಸಿದ ಪಾನಮತ್ತ ಪೊಲೀಸರು; ಕ್ರೇನ್ ಚಾಲಕನ ಮೇಲೆ ಹಲ್ಲೆ

ಶುಕ್ರವಾರ (ಡಿಸೆಂಬರ್ 12) ರಾತ್ರಿ ಪೊಲೀಸರೊಬ್ಬರು ಕಾರಿನ ನಿಯಂತ್ರಣ ಕಳೆದುಕೊಂಡ ಬಳಿಕ '112' ಪೊಲೀಸ್ ಪ್ರತಿಕ್ರಿಯೆ ವಾಹನ (ಪಿಆರ್‌ವಿ) ಹಳ್ಳಕ್ಕೆ ಉರುಳಿದೆ. ವರದಿಗಳ ಪ್ರಕಾರ, ಘಟನೆಯ ಸಮಯದಲ್ಲಿ ಪೊಲೀಸರು ಪಾನಮತ್ತರಾಗಿದ್ದರು. ಕಾರ್ ಕಂದಕಕ್ಕೆ...

ಲಿಯೋನೆಲ್ ಮೆಸ್ಸಿ ಇಂಡಿಯಾ ಪ್ರವಾಸ; ಅಭೂತಪೂರ್ವ ಸ್ವಾಗತ ಕೋರಿದ ಕೋಲ್ಕತ್ತಾ ಅಭಿಮಾನಿಗಳು

ಇಂಡಿಯಾ ಪ್ರವಾಸ ಪ್ರಾರಂಭಿಸಿರುವ ಅರ್ಜೆಂಟೀನಾದ ಪುಟ್‌ಬಾಲ್‌ ತಾರೆ ಲಿಯೋನೆಲ್ ಮೆಸ್ಸಿ ಕೋಲ್ಕತ್ತಾಗೆ ಬಂದಿಳಿದಿದ್ದಾರೆ. ಶನಿವಾರ ಬೆಳಗಿನ ಜಾವ ವಿಮಾನ ನಿಲ್ದಾಣದಲ್ಲಿ ನೆರೆದಿದ್ದ ಸಾವಿರಾರು ಅಭಿಮಾನಿಗಳಿಂದ ಅವರಿಗೆ ಅಭೂತಪೂರ್ವ ಸ್ವಾಗತ ಕೋರಿದರು. ಅರ್ಜೆಂಟೀನಾದ ಸೂಪರ್‌ಸ್ಟಾರ್ ದುಬೈ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ಆರು ಅಪರಾಧಿಗಳಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಮಲಯಾಳಂ ಮೂಲದ ಬಹುಭಾಷಾ ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದ (2017ರ ಪ್ರಕರಣ) ಆರು ಅಪರಾಧಿಗಳಿಗೆ ಇಪ್ಪತ್ತು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಶುಕ್ರವಾರ (ಡಿಸೆಂಬರ್ 12) ಕೇರಳ ನ್ಯಾಯಾಲಯ ಆದೇಶಿಸಿದೆ. ಡಿಸೆಂಬರ್...