Homeಅಂತರಾಷ್ಟ್ರೀಯಪಾಕಿಸ್ತಾನ | 450ಕ್ಕೂ ಹೆಚ್ಚು ಜನರನ್ನು ಒತ್ತೆಯಾಳುಗಳಾಗಿ ಇಟ್ಟು ರೈಲು ಅಪಹರಿಸಿದ ಬಲೂಚಿಸ್ತಾನ್ ಪ್ರತ್ಯೇಕವಾದಿಗಳು

ಪಾಕಿಸ್ತಾನ | 450ಕ್ಕೂ ಹೆಚ್ಚು ಜನರನ್ನು ಒತ್ತೆಯಾಳುಗಳಾಗಿ ಇಟ್ಟು ರೈಲು ಅಪಹರಿಸಿದ ಬಲೂಚಿಸ್ತಾನ್ ಪ್ರತ್ಯೇಕವಾದಿಗಳು

- Advertisement -
- Advertisement -

ಪಾಕಿಸ್ತಾನದ ಬಲೂಚಿಸ್ತಾನ್ ಪ್ರಾಂತ್ಯದಲ್ಲಿ ಪೇಶಾವರಕ್ಕೆ ತೆರಳುತ್ತಿದ್ದ ರೈಲೊಂದನ್ನು ಮಂಗಳವಾರ ‘ಬಲೂಚ್ ಲಿಬರೇಶನ್ ಆರ್ಮಿ’ ಎಂಬ ಪ್ರತ್ಯೇಕತಾವಾದಿ ಗುಂಪು ಅಪಹರಿಸಿದ್ದು, ಅದರಲ್ಲಿದ್ದ 450 ಪ್ರಯಾಣಿಕರಲ್ಲಿ 182 ಜನರನ್ನು ಒತ್ತೆಯಾಳನ್ನಾಗಿ ಇರಿಸಿಕೊಂಡಿದ್ದಾರೆ. ತಮ್ಮ ಬೇಡಿಕೆಗಳನ್ನು ಈಡೇರಿಸದಿದ್ದರೆ ಒತ್ತೆಯಾಳುಗಳನ್ನು ಕೊಲ್ಲುವುದಾಗಿ ಬಂಡುಕೋರರು ಬೆದರಿಕೆ ಹಾಕಿದ್ದಾರೆ ಎಂದು ಎಎಫ್‌ಪಿ ವರದಿ ಮಾಡಿದೆ. ಪಾಕಿಸ್ತಾನ

ಸುಮಾರು 450 ಪ್ರಯಾಣಿಕರಲ್ಲಿ ಮಹಿಳೆಯರು, ಮಕ್ಕಳು, ವೃದ್ಧರು ಮತ್ತು ಬಲೂಚ್ ನಾಗರಿಕರು ಸೇರಿದಂತೆ ಎಲ್ಲಾ ನಾಗರಿಕ ಪ್ರಯಾಣಿಕರನ್ನು (ಒಟ್ಟು 450 ರಲ್ಲಿ) ಯಾವುದೇ ಹಾನಿಯಾಗದಂತೆ ಬಿಡುಗಡೆ ಮಾಡಲಾಗಿದೆ ಮತ್ತು ಸುರಕ್ಷಿತ ಮಾರ್ಗವನ್ನು ಒದಗಿಸಲಾಗಿದೆ ಎಂದು ಬಂಡುಕೋರ ಗುಂಪು ಹೇಳಿದೆ. ಒತ್ತೆಯಾಳುಗಳಲ್ಲಿ ರಜೆಯಲ್ಲಿ ಪ್ರಯಾಣಿಸುತ್ತಿದ್ದ ಪಾಕಿಸ್ತಾನಿ ಸೇನೆ, ಪೊಲೀಸ್, ISI ಮತ್ತು ATIF ನ ಸೇವೆ ಸಲ್ಲಿಸುತ್ತಿರುವ ಸದಸ್ಯರು ಸೇರಿದ್ದಾರೆ ಎಂದು ವರದಿಯಾಗಿದೆ.

ಬಂಡುಕೋರರೊಂದಿಗೆ ಭದ್ರತಾ ಪಡೆಗಳು ಭಾರೀ ಘರ್ಷಣೆ ನಡೆಸಿದ್ದು 11 ಸೈನಿಕರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಅಪಹರಿಸಲ್ಪಟ್ಟ ಜಾಫರ್ ಎಕ್ಸ್‌ಪ್ರೆಸ್ ರೈಲಿನ ಮೇಲೆ ಗುಂಡು ಹಾರಿಸಲಾಯಿತು ಎಂದು ರೈಲ್ವೆ ಮತ್ತು ಪೊಲೀಸ್ ಅಧಿಕಾರಿಗಳು ದೃಢಪಡಿಸಿದ್ದಾರೆ ಎಂದು ರಾಯಿಟರ್ಸ್ ವರದಿ ಮಾಡಿದೆ. ದಾಳಿಯಲ್ಲಿ ಚಾಲಕ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದು, ರೈಲು ಸುರಂಗದೊಳಗೆ ಸಿಲುಕಿಕೊಂಡಿದೆ ಎಂದು ಅವರು ಹೇಳಿದ್ದಾರೆ. ಪಾಕಿಸ್ತಾನ

“ರೈಲಿನಲ್ಲಿದ್ದ 450 ಕ್ಕೂ ಹೆಚ್ಚು ಪ್ರಯಾಣಿಕರನ್ನು ಬಂದೂಕುಧಾರಿಗಳು ಒತ್ತೆಯಾಳಾಗಿ ಇರಿಸಿಕೊಂಡಿದ್ದಾರೆ” ಎಂದು ಕ್ವೆಟ್ಟಾದಲ್ಲಿರುವ ರೈಲ್ವೆ ಸರ್ಕಾರಿ ಅಧಿಕಾರಿ ಮುಹಮ್ಮದ್ ಕಾಶಿಫ್ ಹೇಳಿರುವುದಾಗಿ ಎಎಫ್‌ಪಿ ವರದಿ ಮಾಡಿದೆ. ಕ್ವೆಟ್ಟಾ ಬಲೂಚಿಸ್ತಾನ್‌ನ ಪ್ರಾಂತೀಯ ರಾಜಧಾನಿಯಾಗಿದೆ.

“ರೈಲು ಒಂಬತ್ತು ಬೋಗಿಗಳನ್ನು ಹೊಂದಿದ್ದು, ಸುಮಾರು 500 ಪ್ರಯಾಣಿಕರನ್ನು ಹೊಂದಿತ್ತು. ಸುರಂಗ ಸಂಖ್ಯೆ 8 ರಲ್ಲಿ ಶಸ್ತ್ರಸಜ್ಜಿತ ವ್ಯಕ್ತಿಗಳು ರೈಲನ್ನು ನಿಲ್ಲಿಸಿದರು. ಪ್ರಯಾಣಿಕರು ಮತ್ತು ಸಿಬ್ಬಂದಿಯನ್ನು ಸಂಪರ್ಕಿಸಲು ಪ್ರಯತ್ನಗಳನ್ನು ಮಾಡಲಾಗುತ್ತಿದೆ.” ಎಂದು ಕಾಶಿಫ್ ಅವರು ಹೇಳಿದ್ದಾರೆ ಎಂದು ಡಾನ್‌ ಪತ್ರಿಕೆ ವರದಿ ಮಾಡಿದೆ.

“ರೈಲು ನಿಂತಿರುವ ಪ್ರದೇಶವು ಪರ್ವತ ಪ್ರದೇಶವಾಗಿದ್ದು, ಬಂಡುಕೋರರು ಅಡಗುತಾಣಗಳನ್ನು ಹೊಂದಲು ಮತ್ತು ದಾಳಿಗಳನ್ನು ಯೋಜಿಸಲು ಸುಲಭವಾಗುತ್ತದೆ” ಎಂದು ಪೊಲೀಸ್ ಅಧಿಕಾರಿಯೊಬ್ಬರು AFP ಗೆ ತಿಳಿಸಿದ್ದಾರೆ. ಸುರಂಗದ ಸುತ್ತಲೂ ಸ್ಫೋಟದ ಶಬ್ದ ಕೇಳಿಬಂದಿದ್ದು, ಅವರು ಆ ಪ್ರದೇಶದಲ್ಲಿ ಬಂಡುಕೋರರೊಂದಿಗೆ ಗುಂಡಿನ ಚಕಮಕಿ ನಡೆಸುತ್ತಿದ್ದಾರೆ ಎಂದು ಭದ್ರತಾ ಪಡೆಗಳು ಹೇಳಿರುವುದಾಗಿ ರಾಯಿಟರ್ಸ್ ಉಲ್ಲೇಖಿಸಿದೆ.

ರೈಲನ್ನು ಅಪಹರಿಸಿದ ನಂತರ ಬಲೂಚ್ ಲಿಬರೇಶನ್ ಆರ್ಮಿ ಹೇಳಿಕೆಯೊಂದನ್ನು ಬಿಡುಗಡೆ ಮಾಡಿದ್ದು, ಭದ್ರತಾ ಪಡೆಗಳು ಸೇರಿದಂತೆ ರೈಲಿನಲ್ಲಿರುವ ಜನರನ್ನು ಒತ್ತೆಯಾಳುಗಳನ್ನಾಗಿ ಮಾಡಿಕೊಂಡಿರುವುದಾಗಿ ಹೇಳಿದೆ. ಭದ್ರತಾ ಪಡೆಗಳು ಹಿಂದೆ ಸರಿಯದಿದ್ದರೆ ಒತ್ತೆಯಾಳುಗಳನ್ನು ಕೊಲ್ಲುವುದಾಗಿ ಗುಂಪು ಬೆದರಿಕೆ ಹಾಕಿದೆ.

ದಾಳಿಯನ್ನು ಖಂಡಿಸಿರುವ ಪಾಕಿಸ್ತಾನದ ಆಂತರಿಕ ಸಚಿವ ಮೊಹ್ಸಿನ್ ನಖ್ವಿ, “ಮುಗ್ಧ ಪ್ರಯಾಣಿಕರ ಮೇಲೆ ಗುಂಡು ಹಾರಿಸುವ ಮೃಗಗಳಿಗೆ ತಮ್ಮ ಸರ್ಕಾರ ಯಾವುದೇ ರಿಯಾಯಿತಿಗಳನ್ನು ನೀಡುವುದಿಲ್ಲ” ಎಂದು ಹೇಳಿದ್ದಾರೆ.

ಬಲೂಚ್ ಲಿಬರೇಶನ್ ಆರ್ಮಿ ಪಾಕಿಸ್ತಾನದ ಬಲೂಚಿಸ್ತಾನ್ ಪ್ರದೇಶದಲ್ಲಿ ಕಾರ್ಯನಿರ್ವಹಿಸುತ್ತಿರುವ ಬಂಡುಕೋರ ಗುಂಪಾಗಿದ್ದು, ಸಶಸ್ತ್ರ ಹೋರಾಟದ ಮೂಲಕ ಈ ಪ್ರದೇಶವನ್ನು ದೇಶದಿಂದ ಬೇರ್ಪಡಿಸುವುದಾಗಿ ಪ್ರತಿಪಾದಿಸುತ್ತದೆ. ಈ ಸಂಘಟನೆಯನ್ನು ಪಾಕಿಸ್ತಾನ ಸರ್ಕಾರ ”ಭಯೋತ್ಪಾದಕ ಸಂಘಟನೆ” ಎಂದು ಗುರುತಿಸಿದೆ. ಈ ಗುಂಪು ಸರ್ಕಾರ, ಸೈನ್ಯ ಮತ್ತು ಚೀನಾದ ಹಿತಾಸಕ್ತಿಗಳ ವಿರುದ್ಧ ಆಗಾಗ್ಗೆ ದಾಳಿಗಳನ್ನು ನಡೆಸುತ್ತಿದೆ.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಕೆಂಪು ಮೆಣಸಿನಕಾಯಿ ಬೆಲೆ ಕುಸಿತ | ಮಧ್ಯಪ್ರವೇಶಿಸುವಂತೆ ಪ್ರಧಾನಿಗೆ ಪತ್ರ ಬರೆದ ಸಿಎಂ ಸಿದ್ದರಾಮಯ್ಯ

ಕೆಂಪು ಮೆಣಸಿನಕಾಯಿ ಬೆಲೆ ಕುಸಿತ | ಮಧ್ಯಪ್ರವೇಶಿಸುವಂತೆ ಪ್ರಧಾನಿಗೆ ಪತ್ರ ಬರೆದ ಸಿಎಂ ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...

ಕ್ಯಾಂಪಸ್ ಜಾತಿ ತಾರತಮ್ಯ ವಿರುದ್ಧದ ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ರಾಜ್ಯ ಸಚಿವ ಸಂಪುಟ ಗುರುವಾರ (ಏ.16) ರಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ'ಗೆ ಅನುಮೋದನೆ ನೀಡಿತು. ಜೊತೆಗೆ, ಪ್ರಮುಖ ಮೂಲಸೌಕರ್ಯ ಮತ್ತು...

ಮಧ್ಯಪ್ರದೇಶ| ವಂದೇ ಮಾತರಂ ಹಾಡಲು ನಿರಾಕರಣೆ; ಇಬ್ಬರು ಕಾಂಗ್ರೆಸ್ ಕೌನ್ಸಿಲರ್‌ಗಳ ವಿರುದ್ಧ ಎಫ್‌ಐಆರ್

ಏಪ್ರಿಲ್ 8 ರಂದು ಇಂದೋರ್ ಮುನ್ಸಿಪಲ್ ಕಾರ್ಪೊರೇಷನ್‌ನ ಬಜೆಟ್ ಅಧಿವೇಶನದಲ್ಲಿ ಧಾರ್ಮಿಕ ಮತ್ತು ಸಾಂವಿಧಾನಿಕ ಕಾರಣಗಳನ್ನು ಉಲ್ಲೇಖಿಸಿ ವಂದೇ ಮಾತರಂ ಹಾಡಲು ನಿರಾಕರಿಸಿದ್ದಕ್ಕಾಗಿ ಮಧ್ಯಪ್ರದೇಶ ಪೊಲೀಸರು ಇಬ್ಬರು ಕಾಂಗ್ರೆಸ್ ಕೌನ್ಸಿಲರ್‌ಗಳ ವಿರುದ್ಧ ಎಫ್‌ಐಆರ್...

ನ್ಯಾಯಾಂಗ ಸೇವೆಗಳು, ಸರ್ಕಾರಿ ಸಮಿತಿಗಳಲ್ಲಿ ಶೇ. 50 ಮಹಿಳಾ ಪ್ರಾತಿನಿಧ್ಯ ಕೋರಿ ಪಿಐಎಲ್ : ವಜಾಗೊಳಿಸಿದ ಸುಪ್ರೀಂ ಕೋರ್ಟ್

ಸರ್ಕಾರಿ ಸಮಿತಿಗಳು ಮತ್ತು ನ್ಯಾಯಾಂಗ ಸೇವೆಯ ಖಾಲಿ ಇರುವ ಸ್ಥಾನಗಳಲ್ಲಿ ಮಹಿಳೆಯರಿಗೆ ಶೇ. 50ರಷ್ಟು ಪ್ರಾತಿನಿಧ್ಯ ನೀಡಬೇಕೆಂದು ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆಗೆ ಸ್ವೀಕರಿಸಲು ಸುಪ್ರೀಂ ಕೋರ್ಟ್ ಗುರುವಾರ...

ರಷ್ಯಾ ತೈಲ ಖರೀದಿಸಲು ಭಾರತಕ್ಕೆ ನೀಡಿದ್ದ ಕಾಲಾವಕಾಶ ವಿಸ್ತರಿಸುವುದಿಲ್ಲ: ಅಮೆರಿಕ

ಇರಾನ್ ಮತ್ತು ರಷ್ಯಾದಿಂದ ತೈಲವನ್ನು ಖರೀದಿಸಲು ಭಾರತ ಸೇರಿದಂತೆ ವಿವಿಧ ದೇಶಗಳಿಗೆ ಈವರೆಗೆ ನೀಡಲಾಗಿದ್ದ ನಿರ್ಬಂಧ ಸಡಿಲಿಕೆಯನ್ನು ಇನ್ನು ಮುಂದೆ ಮುಂದುವರಿಸುವುದಿಲ್ಲ ಎಂದು ಅಮೆರಿಕದ ಖಜಾನೆ ಕಾರ್ಯದರ್ಶಿ ಸ್ಕಾಟ್ ಬೆಸೆಂಟ್ ಬುಧವಾರ (ಏ.15)...