Homeಅಂತರಾಷ್ಟ್ರೀಯಪಾಕಿಸ್ತಾನ | 450ಕ್ಕೂ ಹೆಚ್ಚು ಜನರನ್ನು ಒತ್ತೆಯಾಳುಗಳಾಗಿ ಇಟ್ಟು ರೈಲು ಅಪಹರಿಸಿದ ಬಲೂಚಿಸ್ತಾನ್ ಪ್ರತ್ಯೇಕವಾದಿಗಳು

ಪಾಕಿಸ್ತಾನ | 450ಕ್ಕೂ ಹೆಚ್ಚು ಜನರನ್ನು ಒತ್ತೆಯಾಳುಗಳಾಗಿ ಇಟ್ಟು ರೈಲು ಅಪಹರಿಸಿದ ಬಲೂಚಿಸ್ತಾನ್ ಪ್ರತ್ಯೇಕವಾದಿಗಳು

- Advertisement -
- Advertisement -

ಪಾಕಿಸ್ತಾನದ ಬಲೂಚಿಸ್ತಾನ್ ಪ್ರಾಂತ್ಯದಲ್ಲಿ ಪೇಶಾವರಕ್ಕೆ ತೆರಳುತ್ತಿದ್ದ ರೈಲೊಂದನ್ನು ಮಂಗಳವಾರ ‘ಬಲೂಚ್ ಲಿಬರೇಶನ್ ಆರ್ಮಿ’ ಎಂಬ ಪ್ರತ್ಯೇಕತಾವಾದಿ ಗುಂಪು ಅಪಹರಿಸಿದ್ದು, ಅದರಲ್ಲಿದ್ದ 450 ಪ್ರಯಾಣಿಕರಲ್ಲಿ 182 ಜನರನ್ನು ಒತ್ತೆಯಾಳನ್ನಾಗಿ ಇರಿಸಿಕೊಂಡಿದ್ದಾರೆ. ತಮ್ಮ ಬೇಡಿಕೆಗಳನ್ನು ಈಡೇರಿಸದಿದ್ದರೆ ಒತ್ತೆಯಾಳುಗಳನ್ನು ಕೊಲ್ಲುವುದಾಗಿ ಬಂಡುಕೋರರು ಬೆದರಿಕೆ ಹಾಕಿದ್ದಾರೆ ಎಂದು ಎಎಫ್‌ಪಿ ವರದಿ ಮಾಡಿದೆ. ಪಾಕಿಸ್ತಾನ

ಸುಮಾರು 450 ಪ್ರಯಾಣಿಕರಲ್ಲಿ ಮಹಿಳೆಯರು, ಮಕ್ಕಳು, ವೃದ್ಧರು ಮತ್ತು ಬಲೂಚ್ ನಾಗರಿಕರು ಸೇರಿದಂತೆ ಎಲ್ಲಾ ನಾಗರಿಕ ಪ್ರಯಾಣಿಕರನ್ನು (ಒಟ್ಟು 450 ರಲ್ಲಿ) ಯಾವುದೇ ಹಾನಿಯಾಗದಂತೆ ಬಿಡುಗಡೆ ಮಾಡಲಾಗಿದೆ ಮತ್ತು ಸುರಕ್ಷಿತ ಮಾರ್ಗವನ್ನು ಒದಗಿಸಲಾಗಿದೆ ಎಂದು ಬಂಡುಕೋರ ಗುಂಪು ಹೇಳಿದೆ. ಒತ್ತೆಯಾಳುಗಳಲ್ಲಿ ರಜೆಯಲ್ಲಿ ಪ್ರಯಾಣಿಸುತ್ತಿದ್ದ ಪಾಕಿಸ್ತಾನಿ ಸೇನೆ, ಪೊಲೀಸ್, ISI ಮತ್ತು ATIF ನ ಸೇವೆ ಸಲ್ಲಿಸುತ್ತಿರುವ ಸದಸ್ಯರು ಸೇರಿದ್ದಾರೆ ಎಂದು ವರದಿಯಾಗಿದೆ.

ಬಂಡುಕೋರರೊಂದಿಗೆ ಭದ್ರತಾ ಪಡೆಗಳು ಭಾರೀ ಘರ್ಷಣೆ ನಡೆಸಿದ್ದು 11 ಸೈನಿಕರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಅಪಹರಿಸಲ್ಪಟ್ಟ ಜಾಫರ್ ಎಕ್ಸ್‌ಪ್ರೆಸ್ ರೈಲಿನ ಮೇಲೆ ಗುಂಡು ಹಾರಿಸಲಾಯಿತು ಎಂದು ರೈಲ್ವೆ ಮತ್ತು ಪೊಲೀಸ್ ಅಧಿಕಾರಿಗಳು ದೃಢಪಡಿಸಿದ್ದಾರೆ ಎಂದು ರಾಯಿಟರ್ಸ್ ವರದಿ ಮಾಡಿದೆ. ದಾಳಿಯಲ್ಲಿ ಚಾಲಕ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದು, ರೈಲು ಸುರಂಗದೊಳಗೆ ಸಿಲುಕಿಕೊಂಡಿದೆ ಎಂದು ಅವರು ಹೇಳಿದ್ದಾರೆ. ಪಾಕಿಸ್ತಾನ

“ರೈಲಿನಲ್ಲಿದ್ದ 450 ಕ್ಕೂ ಹೆಚ್ಚು ಪ್ರಯಾಣಿಕರನ್ನು ಬಂದೂಕುಧಾರಿಗಳು ಒತ್ತೆಯಾಳಾಗಿ ಇರಿಸಿಕೊಂಡಿದ್ದಾರೆ” ಎಂದು ಕ್ವೆಟ್ಟಾದಲ್ಲಿರುವ ರೈಲ್ವೆ ಸರ್ಕಾರಿ ಅಧಿಕಾರಿ ಮುಹಮ್ಮದ್ ಕಾಶಿಫ್ ಹೇಳಿರುವುದಾಗಿ ಎಎಫ್‌ಪಿ ವರದಿ ಮಾಡಿದೆ. ಕ್ವೆಟ್ಟಾ ಬಲೂಚಿಸ್ತಾನ್‌ನ ಪ್ರಾಂತೀಯ ರಾಜಧಾನಿಯಾಗಿದೆ.

“ರೈಲು ಒಂಬತ್ತು ಬೋಗಿಗಳನ್ನು ಹೊಂದಿದ್ದು, ಸುಮಾರು 500 ಪ್ರಯಾಣಿಕರನ್ನು ಹೊಂದಿತ್ತು. ಸುರಂಗ ಸಂಖ್ಯೆ 8 ರಲ್ಲಿ ಶಸ್ತ್ರಸಜ್ಜಿತ ವ್ಯಕ್ತಿಗಳು ರೈಲನ್ನು ನಿಲ್ಲಿಸಿದರು. ಪ್ರಯಾಣಿಕರು ಮತ್ತು ಸಿಬ್ಬಂದಿಯನ್ನು ಸಂಪರ್ಕಿಸಲು ಪ್ರಯತ್ನಗಳನ್ನು ಮಾಡಲಾಗುತ್ತಿದೆ.” ಎಂದು ಕಾಶಿಫ್ ಅವರು ಹೇಳಿದ್ದಾರೆ ಎಂದು ಡಾನ್‌ ಪತ್ರಿಕೆ ವರದಿ ಮಾಡಿದೆ.

“ರೈಲು ನಿಂತಿರುವ ಪ್ರದೇಶವು ಪರ್ವತ ಪ್ರದೇಶವಾಗಿದ್ದು, ಬಂಡುಕೋರರು ಅಡಗುತಾಣಗಳನ್ನು ಹೊಂದಲು ಮತ್ತು ದಾಳಿಗಳನ್ನು ಯೋಜಿಸಲು ಸುಲಭವಾಗುತ್ತದೆ” ಎಂದು ಪೊಲೀಸ್ ಅಧಿಕಾರಿಯೊಬ್ಬರು AFP ಗೆ ತಿಳಿಸಿದ್ದಾರೆ. ಸುರಂಗದ ಸುತ್ತಲೂ ಸ್ಫೋಟದ ಶಬ್ದ ಕೇಳಿಬಂದಿದ್ದು, ಅವರು ಆ ಪ್ರದೇಶದಲ್ಲಿ ಬಂಡುಕೋರರೊಂದಿಗೆ ಗುಂಡಿನ ಚಕಮಕಿ ನಡೆಸುತ್ತಿದ್ದಾರೆ ಎಂದು ಭದ್ರತಾ ಪಡೆಗಳು ಹೇಳಿರುವುದಾಗಿ ರಾಯಿಟರ್ಸ್ ಉಲ್ಲೇಖಿಸಿದೆ.

ರೈಲನ್ನು ಅಪಹರಿಸಿದ ನಂತರ ಬಲೂಚ್ ಲಿಬರೇಶನ್ ಆರ್ಮಿ ಹೇಳಿಕೆಯೊಂದನ್ನು ಬಿಡುಗಡೆ ಮಾಡಿದ್ದು, ಭದ್ರತಾ ಪಡೆಗಳು ಸೇರಿದಂತೆ ರೈಲಿನಲ್ಲಿರುವ ಜನರನ್ನು ಒತ್ತೆಯಾಳುಗಳನ್ನಾಗಿ ಮಾಡಿಕೊಂಡಿರುವುದಾಗಿ ಹೇಳಿದೆ. ಭದ್ರತಾ ಪಡೆಗಳು ಹಿಂದೆ ಸರಿಯದಿದ್ದರೆ ಒತ್ತೆಯಾಳುಗಳನ್ನು ಕೊಲ್ಲುವುದಾಗಿ ಗುಂಪು ಬೆದರಿಕೆ ಹಾಕಿದೆ.

ದಾಳಿಯನ್ನು ಖಂಡಿಸಿರುವ ಪಾಕಿಸ್ತಾನದ ಆಂತರಿಕ ಸಚಿವ ಮೊಹ್ಸಿನ್ ನಖ್ವಿ, “ಮುಗ್ಧ ಪ್ರಯಾಣಿಕರ ಮೇಲೆ ಗುಂಡು ಹಾರಿಸುವ ಮೃಗಗಳಿಗೆ ತಮ್ಮ ಸರ್ಕಾರ ಯಾವುದೇ ರಿಯಾಯಿತಿಗಳನ್ನು ನೀಡುವುದಿಲ್ಲ” ಎಂದು ಹೇಳಿದ್ದಾರೆ.

ಬಲೂಚ್ ಲಿಬರೇಶನ್ ಆರ್ಮಿ ಪಾಕಿಸ್ತಾನದ ಬಲೂಚಿಸ್ತಾನ್ ಪ್ರದೇಶದಲ್ಲಿ ಕಾರ್ಯನಿರ್ವಹಿಸುತ್ತಿರುವ ಬಂಡುಕೋರ ಗುಂಪಾಗಿದ್ದು, ಸಶಸ್ತ್ರ ಹೋರಾಟದ ಮೂಲಕ ಈ ಪ್ರದೇಶವನ್ನು ದೇಶದಿಂದ ಬೇರ್ಪಡಿಸುವುದಾಗಿ ಪ್ರತಿಪಾದಿಸುತ್ತದೆ. ಈ ಸಂಘಟನೆಯನ್ನು ಪಾಕಿಸ್ತಾನ ಸರ್ಕಾರ ”ಭಯೋತ್ಪಾದಕ ಸಂಘಟನೆ” ಎಂದು ಗುರುತಿಸಿದೆ. ಈ ಗುಂಪು ಸರ್ಕಾರ, ಸೈನ್ಯ ಮತ್ತು ಚೀನಾದ ಹಿತಾಸಕ್ತಿಗಳ ವಿರುದ್ಧ ಆಗಾಗ್ಗೆ ದಾಳಿಗಳನ್ನು ನಡೆಸುತ್ತಿದೆ.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಕೆಂಪು ಮೆಣಸಿನಕಾಯಿ ಬೆಲೆ ಕುಸಿತ | ಮಧ್ಯಪ್ರವೇಶಿಸುವಂತೆ ಪ್ರಧಾನಿಗೆ ಪತ್ರ ಬರೆದ ಸಿಎಂ ಸಿದ್ದರಾಮಯ್ಯ

ಕೆಂಪು ಮೆಣಸಿನಕಾಯಿ ಬೆಲೆ ಕುಸಿತ | ಮಧ್ಯಪ್ರವೇಶಿಸುವಂತೆ ಪ್ರಧಾನಿಗೆ ಪತ್ರ ಬರೆದ ಸಿಎಂ ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...