Homeಅಂತರಾಷ್ಟ್ರೀಯಪಾಕಿಸ್ತಾನ | 450ಕ್ಕೂ ಹೆಚ್ಚು ಜನರನ್ನು ಒತ್ತೆಯಾಳುಗಳಾಗಿ ಇಟ್ಟು ರೈಲು ಅಪಹರಿಸಿದ ಬಲೂಚಿಸ್ತಾನ್ ಪ್ರತ್ಯೇಕವಾದಿಗಳು

ಪಾಕಿಸ್ತಾನ | 450ಕ್ಕೂ ಹೆಚ್ಚು ಜನರನ್ನು ಒತ್ತೆಯಾಳುಗಳಾಗಿ ಇಟ್ಟು ರೈಲು ಅಪಹರಿಸಿದ ಬಲೂಚಿಸ್ತಾನ್ ಪ್ರತ್ಯೇಕವಾದಿಗಳು

- Advertisement -
- Advertisement -

ಪಾಕಿಸ್ತಾನದ ಬಲೂಚಿಸ್ತಾನ್ ಪ್ರಾಂತ್ಯದಲ್ಲಿ ಪೇಶಾವರಕ್ಕೆ ತೆರಳುತ್ತಿದ್ದ ರೈಲೊಂದನ್ನು ಮಂಗಳವಾರ ‘ಬಲೂಚ್ ಲಿಬರೇಶನ್ ಆರ್ಮಿ’ ಎಂಬ ಪ್ರತ್ಯೇಕತಾವಾದಿ ಗುಂಪು ಅಪಹರಿಸಿದ್ದು, ಅದರಲ್ಲಿದ್ದ 450 ಪ್ರಯಾಣಿಕರಲ್ಲಿ 182 ಜನರನ್ನು ಒತ್ತೆಯಾಳನ್ನಾಗಿ ಇರಿಸಿಕೊಂಡಿದ್ದಾರೆ. ತಮ್ಮ ಬೇಡಿಕೆಗಳನ್ನು ಈಡೇರಿಸದಿದ್ದರೆ ಒತ್ತೆಯಾಳುಗಳನ್ನು ಕೊಲ್ಲುವುದಾಗಿ ಬಂಡುಕೋರರು ಬೆದರಿಕೆ ಹಾಕಿದ್ದಾರೆ ಎಂದು ಎಎಫ್‌ಪಿ ವರದಿ ಮಾಡಿದೆ. ಪಾಕಿಸ್ತಾನ

ಸುಮಾರು 450 ಪ್ರಯಾಣಿಕರಲ್ಲಿ ಮಹಿಳೆಯರು, ಮಕ್ಕಳು, ವೃದ್ಧರು ಮತ್ತು ಬಲೂಚ್ ನಾಗರಿಕರು ಸೇರಿದಂತೆ ಎಲ್ಲಾ ನಾಗರಿಕ ಪ್ರಯಾಣಿಕರನ್ನು (ಒಟ್ಟು 450 ರಲ್ಲಿ) ಯಾವುದೇ ಹಾನಿಯಾಗದಂತೆ ಬಿಡುಗಡೆ ಮಾಡಲಾಗಿದೆ ಮತ್ತು ಸುರಕ್ಷಿತ ಮಾರ್ಗವನ್ನು ಒದಗಿಸಲಾಗಿದೆ ಎಂದು ಬಂಡುಕೋರ ಗುಂಪು ಹೇಳಿದೆ. ಒತ್ತೆಯಾಳುಗಳಲ್ಲಿ ರಜೆಯಲ್ಲಿ ಪ್ರಯಾಣಿಸುತ್ತಿದ್ದ ಪಾಕಿಸ್ತಾನಿ ಸೇನೆ, ಪೊಲೀಸ್, ISI ಮತ್ತು ATIF ನ ಸೇವೆ ಸಲ್ಲಿಸುತ್ತಿರುವ ಸದಸ್ಯರು ಸೇರಿದ್ದಾರೆ ಎಂದು ವರದಿಯಾಗಿದೆ.

ಬಂಡುಕೋರರೊಂದಿಗೆ ಭದ್ರತಾ ಪಡೆಗಳು ಭಾರೀ ಘರ್ಷಣೆ ನಡೆಸಿದ್ದು 11 ಸೈನಿಕರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಅಪಹರಿಸಲ್ಪಟ್ಟ ಜಾಫರ್ ಎಕ್ಸ್‌ಪ್ರೆಸ್ ರೈಲಿನ ಮೇಲೆ ಗುಂಡು ಹಾರಿಸಲಾಯಿತು ಎಂದು ರೈಲ್ವೆ ಮತ್ತು ಪೊಲೀಸ್ ಅಧಿಕಾರಿಗಳು ದೃಢಪಡಿಸಿದ್ದಾರೆ ಎಂದು ರಾಯಿಟರ್ಸ್ ವರದಿ ಮಾಡಿದೆ. ದಾಳಿಯಲ್ಲಿ ಚಾಲಕ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದು, ರೈಲು ಸುರಂಗದೊಳಗೆ ಸಿಲುಕಿಕೊಂಡಿದೆ ಎಂದು ಅವರು ಹೇಳಿದ್ದಾರೆ. ಪಾಕಿಸ್ತಾನ

“ರೈಲಿನಲ್ಲಿದ್ದ 450 ಕ್ಕೂ ಹೆಚ್ಚು ಪ್ರಯಾಣಿಕರನ್ನು ಬಂದೂಕುಧಾರಿಗಳು ಒತ್ತೆಯಾಳಾಗಿ ಇರಿಸಿಕೊಂಡಿದ್ದಾರೆ” ಎಂದು ಕ್ವೆಟ್ಟಾದಲ್ಲಿರುವ ರೈಲ್ವೆ ಸರ್ಕಾರಿ ಅಧಿಕಾರಿ ಮುಹಮ್ಮದ್ ಕಾಶಿಫ್ ಹೇಳಿರುವುದಾಗಿ ಎಎಫ್‌ಪಿ ವರದಿ ಮಾಡಿದೆ. ಕ್ವೆಟ್ಟಾ ಬಲೂಚಿಸ್ತಾನ್‌ನ ಪ್ರಾಂತೀಯ ರಾಜಧಾನಿಯಾಗಿದೆ.

“ರೈಲು ಒಂಬತ್ತು ಬೋಗಿಗಳನ್ನು ಹೊಂದಿದ್ದು, ಸುಮಾರು 500 ಪ್ರಯಾಣಿಕರನ್ನು ಹೊಂದಿತ್ತು. ಸುರಂಗ ಸಂಖ್ಯೆ 8 ರಲ್ಲಿ ಶಸ್ತ್ರಸಜ್ಜಿತ ವ್ಯಕ್ತಿಗಳು ರೈಲನ್ನು ನಿಲ್ಲಿಸಿದರು. ಪ್ರಯಾಣಿಕರು ಮತ್ತು ಸಿಬ್ಬಂದಿಯನ್ನು ಸಂಪರ್ಕಿಸಲು ಪ್ರಯತ್ನಗಳನ್ನು ಮಾಡಲಾಗುತ್ತಿದೆ.” ಎಂದು ಕಾಶಿಫ್ ಅವರು ಹೇಳಿದ್ದಾರೆ ಎಂದು ಡಾನ್‌ ಪತ್ರಿಕೆ ವರದಿ ಮಾಡಿದೆ.

“ರೈಲು ನಿಂತಿರುವ ಪ್ರದೇಶವು ಪರ್ವತ ಪ್ರದೇಶವಾಗಿದ್ದು, ಬಂಡುಕೋರರು ಅಡಗುತಾಣಗಳನ್ನು ಹೊಂದಲು ಮತ್ತು ದಾಳಿಗಳನ್ನು ಯೋಜಿಸಲು ಸುಲಭವಾಗುತ್ತದೆ” ಎಂದು ಪೊಲೀಸ್ ಅಧಿಕಾರಿಯೊಬ್ಬರು AFP ಗೆ ತಿಳಿಸಿದ್ದಾರೆ. ಸುರಂಗದ ಸುತ್ತಲೂ ಸ್ಫೋಟದ ಶಬ್ದ ಕೇಳಿಬಂದಿದ್ದು, ಅವರು ಆ ಪ್ರದೇಶದಲ್ಲಿ ಬಂಡುಕೋರರೊಂದಿಗೆ ಗುಂಡಿನ ಚಕಮಕಿ ನಡೆಸುತ್ತಿದ್ದಾರೆ ಎಂದು ಭದ್ರತಾ ಪಡೆಗಳು ಹೇಳಿರುವುದಾಗಿ ರಾಯಿಟರ್ಸ್ ಉಲ್ಲೇಖಿಸಿದೆ.

ರೈಲನ್ನು ಅಪಹರಿಸಿದ ನಂತರ ಬಲೂಚ್ ಲಿಬರೇಶನ್ ಆರ್ಮಿ ಹೇಳಿಕೆಯೊಂದನ್ನು ಬಿಡುಗಡೆ ಮಾಡಿದ್ದು, ಭದ್ರತಾ ಪಡೆಗಳು ಸೇರಿದಂತೆ ರೈಲಿನಲ್ಲಿರುವ ಜನರನ್ನು ಒತ್ತೆಯಾಳುಗಳನ್ನಾಗಿ ಮಾಡಿಕೊಂಡಿರುವುದಾಗಿ ಹೇಳಿದೆ. ಭದ್ರತಾ ಪಡೆಗಳು ಹಿಂದೆ ಸರಿಯದಿದ್ದರೆ ಒತ್ತೆಯಾಳುಗಳನ್ನು ಕೊಲ್ಲುವುದಾಗಿ ಗುಂಪು ಬೆದರಿಕೆ ಹಾಕಿದೆ.

ದಾಳಿಯನ್ನು ಖಂಡಿಸಿರುವ ಪಾಕಿಸ್ತಾನದ ಆಂತರಿಕ ಸಚಿವ ಮೊಹ್ಸಿನ್ ನಖ್ವಿ, “ಮುಗ್ಧ ಪ್ರಯಾಣಿಕರ ಮೇಲೆ ಗುಂಡು ಹಾರಿಸುವ ಮೃಗಗಳಿಗೆ ತಮ್ಮ ಸರ್ಕಾರ ಯಾವುದೇ ರಿಯಾಯಿತಿಗಳನ್ನು ನೀಡುವುದಿಲ್ಲ” ಎಂದು ಹೇಳಿದ್ದಾರೆ.

ಬಲೂಚ್ ಲಿಬರೇಶನ್ ಆರ್ಮಿ ಪಾಕಿಸ್ತಾನದ ಬಲೂಚಿಸ್ತಾನ್ ಪ್ರದೇಶದಲ್ಲಿ ಕಾರ್ಯನಿರ್ವಹಿಸುತ್ತಿರುವ ಬಂಡುಕೋರ ಗುಂಪಾಗಿದ್ದು, ಸಶಸ್ತ್ರ ಹೋರಾಟದ ಮೂಲಕ ಈ ಪ್ರದೇಶವನ್ನು ದೇಶದಿಂದ ಬೇರ್ಪಡಿಸುವುದಾಗಿ ಪ್ರತಿಪಾದಿಸುತ್ತದೆ. ಈ ಸಂಘಟನೆಯನ್ನು ಪಾಕಿಸ್ತಾನ ಸರ್ಕಾರ ”ಭಯೋತ್ಪಾದಕ ಸಂಘಟನೆ” ಎಂದು ಗುರುತಿಸಿದೆ. ಈ ಗುಂಪು ಸರ್ಕಾರ, ಸೈನ್ಯ ಮತ್ತು ಚೀನಾದ ಹಿತಾಸಕ್ತಿಗಳ ವಿರುದ್ಧ ಆಗಾಗ್ಗೆ ದಾಳಿಗಳನ್ನು ನಡೆಸುತ್ತಿದೆ.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಕೆಂಪು ಮೆಣಸಿನಕಾಯಿ ಬೆಲೆ ಕುಸಿತ | ಮಧ್ಯಪ್ರವೇಶಿಸುವಂತೆ ಪ್ರಧಾನಿಗೆ ಪತ್ರ ಬರೆದ ಸಿಎಂ ಸಿದ್ದರಾಮಯ್ಯ

ಕೆಂಪು ಮೆಣಸಿನಕಾಯಿ ಬೆಲೆ ಕುಸಿತ | ಮಧ್ಯಪ್ರವೇಶಿಸುವಂತೆ ಪ್ರಧಾನಿಗೆ ಪತ್ರ ಬರೆದ ಸಿಎಂ ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಫೇಕ್ ಮದುವೆ ಜಾಲಕ್ಕೆ ಬಿದ್ದ ಫೇಮಸ್ ಗೋರಕ್ಷಕ ‘ಬಿಟ್ಟು ಬಜರಂಗಿ’

ಹರಿಯಾಣದಲ್ಲಿ "ಲವ್ ಜಿಹಾದ್" ಮತ್ತು ಅಂತರ್ಧರ್ಮೀಯ ವಿವಾಹಗಳ ವಿರುದ್ಧ ನಿರಂತರವಾಗಿ ಹೋರಾಡುತ್ತಾ, ತನ್ನದೇ ಆದ ಸಾರ್ವಜನಿಕ ಪ್ರಭಾವ ಬೆಳೆಸಿಕೊಂಡಿದ್ದ ರಾಜ್ ಕುಮಾರ್ ಅಲಿಯಾಸ್ ಬಿಟ್ಟು ಬಜರಂಗಿಗೆ ತನಗೆ ಇಂತಹದ್ದೊಂದು ಪರಿಸ್ಥಿತಿ ಎದುರಾಗಬಹುದು ಎಂಬ...

ಕರ್ನಾಟಕದ ಎಸ್‌ಐಆರ್ ಪ್ರಕ್ರಿಯೆಯಲ್ಲಿ ‘ಸಾಮೂಹಿಕ ಅಕ್ರಮ’ ಆರೋಪ: ರಾಜ್ಯ ಮುಖ್ಯ ಚುನಾವಣಾಧಿಕಾರಿಗೆ ದೂರು ನೀಡಿದ ಎನ್‌ಡಿಎ ನಿಯೋಗ

ಬೆಂಗಳೂರು: ಕರ್ನಾಟಕದಲ್ಲಿ ಸದ್ಯ ಚಾಲ್ತಿಯಲ್ಲಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ಸಾಂಸ್ಥಿಕ ಅಕ್ರಮಗಳು ನಡೆಯುತ್ತಿವೆ ಎಂದು ಆರೋಪಿಸಿ, ರಾಜ್ಯದ ಪ್ರಮುಖ ವಿರೋಧ ಪಕ್ಷಗಳಾದ ಬಿಜೆಪಿ ಮತ್ತು...

SIR: ಮತದಾರರ ಹಕ್ಕು ರಕ್ಷಣೆಗೆ ಕಣಕ್ಕಿಳಿದ ‘ನಾಗರಿಕ ಮತ ಕಾವಲು ಸಮಿತಿ’

ರಾಜ್ಯದ ಶೋಷಿತ, ಹಿಂದುಳಿದ ಮತ್ತು ಅಂಚಿನಲ್ಲಿರುವ ಸಮುದಾಯಗಳ ಮತದಾನದ ಹಕ್ಕಿಗೆ ಯಾವುದೇ ಚ್ಯುತಿ ಬಾರದಂತೆ ತಡೆಯಲು ಬೂತ್ ಮಟ್ಟದಿಂದ ಹಿಡಿದು ರಾಜ್ಯ ಮಟ್ಟದವರೆಗೆ ‘ನಾಗರಿಕ ಮತ ಕಾವಲು ಸಮಿತಿ’ಯನ್ನು ಅಸ್ತಿತ್ವಕ್ಕೆ ತರಲಾಗಿದೆ. ಎಸ್‌ಐಆರ್...

ಮೋಹನ್‌ಲಾಲ್ ‘ದಂತ’ ಕಥೆ: ಅರಣ್ಯ ಇಲಾಖೆ ಮುಂದೆ 10 ಆನೆ ದಂತ, 13 ಮೂರ್ತಿಗಳ ಅಚ್ಚರಿಯ ಘೋಷಣೆ!

ನಟ ಮೋಹನ್‌ಲಾಲ್ ಅವರು ತಾವೇ ಕಾನೂನುಬಾಹಿರವಾಗಿ ವನ್ಯಜೀವಿ ವಸ್ತುಗಳನ್ನು ಹೊಂದಿರುವ ಆರೋಪದ ಮೇಲೆ ವಿಚಾರಣೆ ಎದುರಿಸುತ್ತಿದ್ದರೂ, ತಮ್ಮ ಬಳಿ 10 ಆನೆ ದಂತಗಳು ಮತ್ತು 13 ದಂತದ ಮೂರ್ತಿಗಳು ಇರುವುದಾಗಿ ಕೇರಳ ಅರಣ್ಯ...

ಅಯೋಧ್ಯೆ ರಾಮಮಂದಿರ ಹಗರಣ: ‘ಕದ್ದ ಹಣ’ ಹಂಚಿಕೆಯ ಮೊಬೈಲ್ ಚಾಟ್‌ಗಳು ಬಹಿರಂಗ; ತೀವ್ರಗೊಂಡ ತನಿಖೆ

ಲಕ್ನೋ: ಅಯೋಧ್ಯೆಯ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ನಿಧಿ ದುರುಪಯೋಗ ಮತ್ತು ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಅತ್ಯಂತ ಸ್ಫೋಟಕ ಮಾಹಿತಿ ಹೊರಬಿದ್ದಿದ್ದು, ತನಿಖೆ ತೀವ್ರಗೊಂಡಿದೆ. ಪ್ರಕರಣದ ಪ್ರಮುಖ ಆರೋಪಿಗಳ ಮೊಬೈಲ್ ಫೋನ್‌ಗಳ...

ಅಪ್ರಾಪ್ತ ಬಾಲಕಿಯ ಅತ್ಯಾಚಾರ-ಕೊಲೆ ಆರೋಪ : ಪ. ಬಂಗಾಳದ ಬಾರುಯಿಪುರದಲ್ಲಿ ಹಿಂಸಾಚಾರ ; ಶಂಕಿತ ಆರೋಪಿಯ ಗುಂಪು ಹತ್ಯೆ

ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಬಾರುಯಿಪುರದಲ್ಲಿ ಶನಿವಾರ (ಜು.4) ಮಧ್ಯಾಹ್ನದಿಂದ ನಾಪತ್ತೆಯಾಗಿದ್ದ ಅಪ್ರಾಪ್ತ ಬಾಲಕಿಯೊಬ್ಬಳ ಶವ ಭಾನುವಾರ (ಜು.5) ಬೆಳಿಗ್ಗೆ ಕೆರೆಯಲ್ಲಿ ಪತ್ತೆಯಾಗಿದ್ದು, ಆ ಬಳಿಕ ಅಲ್ಲಿ ತೀವ್ರ ಹಿಂಸಾತ್ಮಕ...

SIR ಬಳಿಕ ಒಡಿಶಾದ ಕರಡು ಮತದಾರರ ಪಟ್ಟಿ ಪ್ರಕಟ : 20 ಲಕ್ಷ ಹೆಸರುಗಳು ಡಿಲೀಟ್

ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಗಣತಿ ಹಂತದ ಬಳಿಕ ಚುನಾವಣಾ ಆಯೋಗ ಭಾನುವಾರ (ಜು.5) ಒಡಿಶಾದ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದು, ಇದರಲ್ಲಿ 20 ಲಕ್ಷಕ್ಕೂ ಹೆಚ್ಚು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...

SIR: ಟಾರ್ಗೆಟ್ ಮತ್ತು ಒತ್ತಡದ ಕೆಲಸದಿಂದ ಮೂವರು ಸಿಬ್ಬಂದಿ ಸಾವು

ಕರ್ನಾಟಕದಲ್ಲಿ ನಡೆಯುತ್ತಿರುವ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯು ಕೆಳಹಂತದ ನೌಕರರ ಪಾಲಿಗೆ ಮರಣಶಾಸನವಾಗುತ್ತಿದೆಯೇ ಎಂಬ ಗಂಭೀರ ಪ್ರಶ್ನೆಯೊಂದು ಎದ್ದಿದೆ. ಅಧಿಕಾರಿಗಳು ನೀಡುತ್ತಿರುವ ಅತಿಯಾದ ಒತ್ತಡ ಮತ್ತು ಟಾರ್ಗೆಟ್ ಬೆನ್ನತ್ತುವ ಧಾವಂತದಿಂದಾಗಿ...

ಖಮೇನಿ ಅಂತ್ಯಕ್ರಿಯೆ ವೇಳೆ ಟ್ರಂಪ್ ಉದ್ಧಟತನದ ಹೇಳಿಕೆ: “ಇತಿಹಾಸ, ಗೌರವವಿಲ್ಲದ ದೇಶ ಅಮೆರಿಕ” ಎಂದು ಇರಾನ್ ತೀಕ್ಷ್ಣ ತಿರುಗೇಟು

ಟೆಹ್ರಾನ್: ಇರಾನ್‌ನ ಮಾಜಿ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ನಿಧನದ ನಂತರ ಜಾಗತಿಕ ರಾಜತಾಂತ್ರಿಕ ವಲಯದಲ್ಲಿ ಭಾರೀ ವಾಕ್ಸಮರ ಉಂಟಾಗಿದೆ. ಖಮೇನಿ ಅವರ ಅಂತ್ಯಕ್ರಿಯೆಯ ಸಂದರ್ಭದಲ್ಲಿ ಒಟ್ಟುಗೂಡಿರುವ ಇರಾನ್‌ನ ಇಡೀ...

ಮ್ಯಾಚ್ ಮಧ್ಯೆ ಕಾಂಡೊಮ್ ಜಾಹೀರಾತು: ಬಿಸಿಸಿಐ ವಿರುದ್ಧ ಕಿಡಿಕಾರಿದ ಮಾಜಿ ಕ್ರಿಕೆಟಿಗ, TMC ಸಂಸದ ಕೀರ್ತಿ ಆಜಾದ್

ಮ್ಯಾಂಚೆಸ್ಟರ್‌ನ ಓಲ್ಡ್ ಟ್ರಾಫರ್ಡ್‌ನಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್ ನಡುವಿನ ಟಿ20 ಅಂತರರಾಷ್ಟ್ರೀಯ ಪಂದ್ಯದ ನೇರ ಪ್ರಸಾರದ ವೇಳೆ ಕಾಂಡೊಮ್ ಜಾಹೀರಾತುಗಳನ್ನು ಪ್ರಸಾರ ಮಾಡಿದ್ದನ್ನು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಮತ್ತು ಮಾಜಿ...