Homeಅಂತರಾಷ್ಟ್ರೀಯಭಾರತದಿಂದ ಹತ್ತಿ ಮತ್ತು ಸಕ್ಕರೆ ಆಮದು ಪ್ರಸ್ತಾಪವನ್ನು ತಿರಸ್ಕರಿಸಿದ ಪಾಕಿಸ್ತಾನ

ಭಾರತದಿಂದ ಹತ್ತಿ ಮತ್ತು ಸಕ್ಕರೆ ಆಮದು ಪ್ರಸ್ತಾಪವನ್ನು ತಿರಸ್ಕರಿಸಿದ ಪಾಕಿಸ್ತಾನ

- Advertisement -
- Advertisement -

ಭಾರತದಿಂದ ಹತ್ತಿ ಮತ್ತು ಸಕ್ಕರೆಯನ್ನು ಆಮದು ಮಾಡಿಕೊಳ್ಳುವ ಆರ್ಥಿಕ ಸಮನ್ವಯ ಸಮಿತಿಯ (ಇಸಿಸಿ) ಪ್ರಸ್ತಾವನೆಯನ್ನು ಪಾಕಿಸ್ತಾನದ ಕ್ಯಾಬಿನೆಟ್ ಗುರುವಾರ ತಿರಸ್ಕರಿಸಿದ್ದು, ಭಾರತದೊಂದಿಗೆ ಯಾವುದೇ ವ್ಯಾಪಾರವಿಲ್ಲ ಎಂದು ಇಂದು ಕ್ಯಾಬಿನೆಟ್ ಸ್ಪಷ್ಟವಾಗಿ ಹೇಳಿದೆ.

ಪಾಕಿಸ್ತಾನದ ಹೊಸ ಹಣಕಾಸು ಸಚಿವ ಹಮ್ಮದ್ ಅಝರ್ ಅವರು ಅಧ್ಯಕ್ಷತೆ ವಹಿಸಿದ್ದ ಇಸಿಸಿ ಸಭೆಯಲ್ಲಿ ಭಾರತದಿಂದ ಹತ್ತಿ ಮತ್ತು ಸಕ್ಕರೆ ಆಮದಿನ ಮೇಲಿನ ಎರಡು ವರ್ಷಗಳ ಹಳೆಯ ನಿಷೇಧವನ್ನು ತೆಗೆದುಹಾಕುವುದಾಗಿ ಬುಧವಾರ ಘೋಷಿಸಲಾಗಿತ್ತು.

ಈ ಬಗ್ಗೆ ಪ್ರತಿಕ್ರಿಯಿಸಿದ್ದ, ಇಮ್ರಾನ್ ಖಾನ್ ಅವರ ಆಪ್ತ ಸಹಾಯಕಿ ಮತ್ತು ಮಾನವ ಹಕ್ಕುಗಳ ಸಚಿವೆ ಶಿರೀನ್ ಮಜಾರಿ ಅವರು, ಎಲ್ಲಾ ಇಸಿಸಿ ನಿರ್ಧಾರಗಳನ್ನು ಕ್ಯಾಬಿನೆಟ್ ಅನುಮೋದಿಸಬೇಕಾಗಿದೆ ಮತ್ತು ಆಗ ಮಾತ್ರ ಅವುಗಳನ್ನು ಸರ್ಕಾರದ ಅನುಮೋದನೆ ಎಂದು ಹೇಳಬಹುದು ಎಂದು ಹೇಳಿದ್ದರು.

ಇದನ್ನೂ ಓದಿ: ಸಿಂಗೂರು, ನಂದಿಗ್ರಾಮ ಚಳವಳಿಯ ಮುಂಚೂಣಿಯಲ್ಲಿದ್ದ SUCI ಈ ಚುನಾವಣೆಯಲ್ಲೇನು ಮಾಡುತ್ತಿದೆ?

“ಇಸಿಸಿಯ ಎಲ್ಲಾ ನಿರ್ಧಾರಗಳನ್ನು ಕ್ಯಾಬಿನೆಟ್ ಅನುಮೋದಿಸಬೇಕಾಗಿದೆ. ಆಗ ಮಾತ್ರ ಅವುಗಳನ್ನು ಸರ್ಕಾರದಿಂದ ಅನುಮೋದಿಸಲಾಗಿದೆ ಎಂದು ಹೇಳಬಹುದು. ಆದ್ದರಿಂದ ಇಂದು ಕ್ಯಾಬಿನೆಟ್‌‌ನಲ್ಲಿ ಭಾರತದೊಂದಿಗೆ ವ್ಯಾಪಾರ ಸೇರಿದಂತೆ ಇಸಿಸಿ ನಿರ್ಧಾರಗಳ ಬಗ್ಗೆ ಚರ್ಚೆ ನಡೆಯಲಿದೆ. ನಂತರ ಸರ್ಕಾರ ನಿರ್ಧಾರ ತೆಗೆದುಕೊಳ್ಳುತ್ತದೆ. ಮಾಧ್ಯಮಗಳು ಈ ಬಗ್ಗೆ ಕನಿಷ್ಠ ತಿಳಿದಿರಬೇಕು” ಎಂದು ಶಿರಿನ್ ಮಜಾರಿ ಬೆಳಿಗ್ಗೆ ತಿಳಿಸಿದ್ದರು.

ಸಂಜೆ ಟ್ವೀಟ್ ಮಾಡಿ, “ಭಾರತದೊಂದಿಗೆ ಯಾವುದೇ ವ್ಯಾಪಾರವಿಲ್ಲ ಎಂದು ಇಂದು ಕ್ಯಾಬಿನೆಟ್ ಸ್ಪಷ್ಟವಾಗಿ ಹೇಳಿದೆ. 5 ಆಗಸ್ಟ್ 2019 ರಂದು ಜಮ್ಮುಕಾಶ್ಮೀರದಲ್ಲಿ ಹೇರಲ್ಪಟ್ಟ ಕಾನೂನುಬಾಹಿರ ಕ್ರಮಗಳನ್ನು ಹಿಂಪಡೆಯುವರೆಗೆ ಭಾರತದೊಂದಿಗೆ ಯಾವುದೇ ಸಂಬಂಧವನ್ನು ಸಾಮಾನ್ಯೀಕರಿಸಲಾಗುವುದಿಲ್ಲ ಎಂದು ಪ್ರಧಾನಿ ಸ್ಪಷ್ಟಪಡಿಸಿದ್ದಾರೆ” ಎಂದು ಕಾಶ್ಮೀರದ ಬಗ್ಗೆ ಬಿಗಿ ನಿಲುವಿಗೆ ಹೆಸರುವಾಸಿಯಾದ ಶಿರಿನ್ ಮಜಾರಿ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ನರಗುಂದ: ದಲಿತ ಬಾಲಕಿಯ ಸುಟ್ಟ ಮೃತದೇಹ ಪತ್ತೆ – ಅತ್ಯಾಚಾರ, ಕೊಲೆ ಆರೋಪ

ಭಾರತದಿಂದ ಹತ್ತಿ ಮತ್ತು ಸಕ್ಕರೆಯನ್ನು ಆಮದು ಮಾಡಿಕೊಳ್ಳುವುದಾಗಿ ಅಜರ್ ಬುಧವಾರ ಪ್ರಕಟಿಸಿದ್ದು, ದ್ವಿಪಕ್ಷೀಯ ವ್ಯಾಪಾರ ಸಂಬಂಧಗಳು ಭಾಗಶಃ ಪುನ ಪ್ರಾರಂಭವಾಗುತ್ತದೆ ಎಂಬ ಭರವಸೆಯನ್ನು ಹುಟ್ಟುಹಾಕಿತ್ತು. ಭಾರತವು 2019 ರ ಆಗಸ್ಟ್ 5 ರಂದು ಜಮ್ಮು ಕಾಶ್ಮೀರದ ವಿಶೇಷ ಸ್ಥಾನಮಾನವನ್ನು ಹಿಂತೆಗೆದುಕೊಳ್ಳುವುದರೊಂದಿಗೆ ಈ ವ್ಯಾಪಾರ ಸಂಬಂಧವು ಸ್ಥಗಿತಗೊಂಡಿತ್ತು.

ಭಾರತವು ವಿಶ್ವದ ಅತಿದೊಡ್ಡ ಹತ್ತಿ ಉತ್ಪಾದಕ ಮತ್ತು ಎರಡನೇ ಅತಿದೊಡ್ಡ ಸಕ್ಕರೆ ಉತ್ಪಾದಕ ದೇಶವಾಗಿದೆ.

ಕೊರೊನಾ ಸಾಂಕ್ರಾಮಿಕದ ಮಧ್ಯೆ ಭಾರತದಿಂದ ಔಷಧಗಳು ಮತ್ತು ಅಗತ್ಯ ಔಷಧಿಗಳ ಕಚ್ಚಾ ವಸ್ತುಗಳನ್ನು ಆಮದು ಮಾಡಿಕೊಳ್ಳುವ ನಿಷೇಧವನ್ನು 2020 ರ ಮೇ ತಿಂಗಳಲ್ಲಿ ಪಾಕಿಸ್ತಾನ ತೆಗೆದುಹಾಕಿತ್ತು.

2019 ರ ಆಗಸ್ಟ್‌ನಲ್ಲಿ ಜಮ್ಮು ಕಾಶ್ಮೀರದ ವಿಶೇಷ ಸ್ಥಾನಮಾನವನ್ನು ಹಿಂತೆಗೆದುಕೊಳ್ಳುವ ಭಾರತದ ಕ್ರಮವು ಪಾಕಿಸ್ತಾನಕ್ಕೆ ಕೋಪವನ್ನುಂಟುಮಾಡಿತ್ತು. ಇದರೊಂದಿಗೆ ಭಾರತದೊಂದಿಗೆ ರಾಜತಾಂತ್ರಿಕ ಸಂಬಂಧವು ಕುಸಿದಿದ್ದು, ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನರ್‌ನನ್ನು ವಾಪಾಸ್ ಕಳುಹಿಸಿತ್ತು. ಪಾಕಿಸ್ತಾನವು ಭಾರತದೊಂದಿಗಿನ ಎಲ್ಲಾ ವಾಯು ಮತ್ತು ಭೂ ಸಂಪರ್ಕಗಳನ್ನು ಕಿತ್ತುಹಾಕಿ, ವ್ಯಾಪಾರ ಮತ್ತು ರೈಲ್ವೆ ಸೇವೆಗಳನ್ನು ಸ್ಥಗಿತಗೊಳಿಸಿತ್ತು.

ಇದನ್ನೂ ಓದಿ: ಅವಹೇಳನಕಾರಿ ಹೇಳಿಕೆ: ಪ್ರಚಾರದಿಂದ ಎ ರಾಜಾಗೆ 48 ಗಂಟೆಗಳ ನಿಷೇಧ ಹೇರಿದ ಚುನಾವಣಾ ಆಯೋಗ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಾಜಿ ರಾಷ್ಟ್ರಪತಿ ಜಗದೀಪ್ ಧನ್ಕರ್ ರಾಜೀನಾಮೆ ಹಿಂದೆ ಇಡಿ ಒತ್ತಡ : ತನ್ನ ಹೊಸ ಪುಸ್ತಕದಲ್ಲಿ ಸಂಜಯ್ ರಾವುತ್ ಆರೋಪ

ಮಾಜಿ ಉಪರಾಷ್ಟ್ರಪತಿ ಜಗದೀಪ್ ಧನ್ಕರ್ ಅವರು ಮೋದಿ ಸರ್ಕಾರದ ವಿರುದ್ಧ ಕೈಗೊಂಡ ಸ್ವತಂತ್ರ ರಾಜಕೀಯ ನಡೆಗಳಿಗೆ ಪ್ರತಿಯಾಗಿ, ಜಾರಿ ನಿರ್ದೇಶನಾಲಯದ (ಇಡಿ) ಒತ್ತಡಕ್ಕೆ ಮಣಿದು 2025ರಲ್ಲಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದರು ಎಂದು...

ಯುಎನ್‌ಐ ಮಾಧ್ಯಮ ಕಚೇರಿಗೆ ಬೀಗ : ಪೊಲೀಸರ ವರ್ತನೆಗೆ ಪತ್ರಿಕಾ ಸಂಘಗಳು, ವಿಪಕ್ಷ ನಾಯಕರಿಂದ ತೀವ್ರ ಖಂಡನೆ

ಶುಕ್ರವಾರ (ಮಾ.20) ರಾತ್ರಿ ದೆಹಲಿ ಪೊಲೀಸರು ಯುನೈಟೆಡ್ ನ್ಯೂಸ್ ಆಫ್ ಇಂಡಿಯಾ (ಯುಎನ್‌ಐ) ಸುದ್ದಿ ಸಂಸ್ಥೆಯ ಕಚೇರಿಗೆ ಬೀಗ ಜಡಿದ ರೀತಿಗೆ ಪತ್ರಕರ್ತರ ಸಂಘಗಳು ಮತ್ತು ವಿರೋಧ ಪಕ್ಷಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿವೆ. ದೆಹಲಿಯ...

ಉಪಚುನಾವಣೆಗೆ ಅಭ್ಯರ್ಥಿಗಳನ್ನು ಘೋಷಿಸಿದ ಕಾಂಗ್ರೆಸ್: ದಾವಣಗೆರೆ ದಕ್ಷಿಣದಲ್ಲಿ ಶಾಮನೂರು ಕುಟುಂಬಕ್ಕೆ ಟಿಕೆಟ್

ಏಪ್ರಿಲ್ 9ರಂದು ನಡೆಯಲಿರುವ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳನ್ನು ಅಂತಿಮಗೊಳಿಸಿದೆ. ದಾವಣಗೆರೆ ದಕ್ಷಿಣದಲ್ಲಿ ಮುಸ್ಲಿಮರ ತೀವ್ರ ವಿರೋಧದ ನಡುವೆಯೂ ಕೃಷಿ ಸಚಿವ ಎಸ್‌.ಎಸ್‌ ಮಲ್ಲಿಕಾರ್ಜುನ್ ಅವರ...

ಕೇರಳ ವಿಧಾನಸಭೆ ಚುನಾವಣೆ : ಮಂಜೇಶ್ವರ ಬಿಜೆಪಿ ಅಭ್ಯರ್ಥಿ ಕೆ. ಸುರೇಂದ್ರನ್ ಮೇಲಿದೆ 242 ಕ್ರಿಮಿನಲ್ ಕೇಸ್!

ಏಪ್ರಿಲ್ 9ರಂದು ನಡೆಯಲಿರುವ ಕೇರಳ ವಿಧಾನಸಭೆ ಚುನಾವಣೆಗೆ ಕಾಸರಗೋಡಿನ ಮಂಜೇಶ್ವರ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ಕೆ. ಸುರೇಂದ್ರನ್ ಮೇಲೆ ಬರೋಬ್ಬರಿ 242 ಕ್ರಿಮಿನಲ್ ಪ್ರಕರಣಗಳು ಬಾಕಿ ಇವೆ. ಈ ಮಾಹಿತಿ ಶನಿವಾರ...

ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡ ಮತದಾನ : ಆರು ಮಂದಿ ಶಾಸಕರನ್ನು ಅಮಾನತುಗೊಳಿಸಿದ ಬಿಜೆಡಿ

ಮಾರ್ಚ್ 16ರಂದು ನಡೆದ ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದ ಆರು ಮಂದಿ ಶಾಸಕರನ್ನು ಒಡಿಶಾದ ಬಿಜು ಜನತಾದಳ (ಬಿಜೆಡಿ) ಅಮಾನತುಗೊಳಿಸಿದೆ ಎಂದು ವರದಿಯಾಗಿದೆ. ಒಟ್ಟು 8 ಶಾಸಕರು ಪಕ್ಷದ ವಿಪ್ ಉಲ್ಲಂಘಿಸಿದ್ದಾರೆ....

ಆಸ್ಕರ್ ನಾಮನಿರ್ದೇಶಿತ ‘ದಿ ವಾಯ್ಸ್ ಆಫ್ ಹಿಂದ್ ರಜಬ್’ ಚಿತ್ರ ಪ್ರದರ್ಶನಕ್ಕೆ ಭಾರತದಲ್ಲಿ ನಿರ್ಬಂಧ!

ಗಾಝಾದ ಆರು ವರ್ಷದ ಬಾಲಕಿ ಹಿಂದ್ ರಜಬ್‌ಳನ್ನು ಇಸ್ರೇಲಿ ಸೈನಿಕರು ಸುಮಾರು 300 ಸುತ್ತು ಗುಂಡಿಕ್ಕಿ ಭೀಕರವಾಗಿ ಹತ್ಯೆ ಮಾಡಿರುವ ಕಥೆಯನ್ನು ಹೇಳುವ, 'ದಿ ವಾಯ್ಸ್ ಆಫ್ ಹಿಂದ್ ರಜಬ್' ಚಲನಚಿತ್ರದ ಪ್ರದರ್ಶನಕ್ಕೆ...

ವೈದ್ಯೆ ವಂದನಾ ದಾಸ್ ಹತ್ಯೆ ಪ್ರಕರಣ; ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಕೇರಳ ನ್ಯಾಯಾಲಯ

ಕೊಲ್ಲಂ: ಆಸ್ಪತ್ರೆಯಲ್ಲಿ ನಡೆದ ಡಾ. ವಂದನಾ ದಾಸ್ ಅವರ ಹತ್ಯೆ ಪ್ರಕರಣದಲ್ಲಿ ಶಿಕ್ಷೆಗೊಳಗಾದ ಅಪರಾಧಿ ಜಿ. ಸಂದೀಪ್ ಗೆ ಶನಿವಾರ ಜೀವಾವಧಿ ಶಿಕ್ಷೆ ವಿಧಿಸಲಾಗಿದ್ದು, ಆರೋಪಿಗೆ ಮರಣದಂಡನೆ ವಿಧಿಸುವಂತೆ ಕೋರಿ ಮೇಲ್ಮನವಿ ಸಲ್ಲಿಸುವುದಾಗಿ...

ಕಾಂಗ್ರೆಸ್, ರಾಹುಲ್ ಗಾಂಧಿ ಬಿಜೆಪಿಯ ಬಿ-ಟೀಮ್: ಕೇರಳ ಸಿಎಂ ಪಿಣರಾಯಿ ವಿಜಯನ್

ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಶನಿವಾರ ಕಾಂಗ್ರೆಸ್ ಮತ್ತು ಅದರ ನಾಯಕ ರಾಹುಲ್ ಗಾಂಧಿ ಅವರನ್ನು ಟೀಕಿಸಿದ್ದು, ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ಬಿಜೆಪಿಯ ಬಿ-ಟೀಮ್ ಎಂದು ಆರೋಪಿಸಿದ್ದಾರೆ.   ಕೇಂದ್ರೀಯ ಸಂಸ್ಥೆಗಳು ಕೇರಳ...

‘ಬಿಜೆಪಿ ಮತದಾನದ ಹಕ್ಕನ್ನು ಕಸಿದುಕೊಳ್ಳಲು ಬಿಡುವುದಿಲ್ಲ, ಕೊನೆಯವರೆಗೂ ಹೋರಾಡುತ್ತೇವೆ’; ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದಲ್ಲಿ ವಿಧಾನಸಭಾ ಚುನಾವಣೆಗೆ ಮುನ್ನ, ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಮತದಾರರ ಪಟ್ಟಿಯ ಪರಿಷ್ಕರಣೆಯ ಮೂಲಕ ಜನರ "ಮತದಾನದ ಹಕ್ಕನ್ನು ಕಸಿದುಕೊಳ್ಳಲು" ಪ್ರಯತ್ನಿಸುತ್ತಿದೆ ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ.  "ಮೋದಿ ಜಿ...

ಏಳು ವರ್ಷಗಳ ನಂತರ ಯುಎಪಿಎ ಪ್ರಕರಣದಲ್ಲಿ ಇಬ್ಬರು ಕಾಶ್ಮೀರಿ ಯುವಕರನ್ನು ಖುಲಾಸೆಗೊಳಿಸಿದ ದೆಹಲಿ ನ್ಯಾಯಾಲಯ

ಏಳು ವರ್ಷಗಳಿಗೂ ಹೆಚ್ಚು ಕಾಲದ ನಂತರ, ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆಯಡಿ ಬಂಧಿಸಲ್ಪಟ್ಟ ಇಬ್ಬರು ಕಾಶ್ಮೀರಿ ಯುವಕರನ್ನು ಗುರುವಾರ ದೆಹಲಿ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಪ್ರಾಸಿಕ್ಯೂಷನ್ ತನ್ನ ಆರೋಪಗಳನ್ನು ಸಾಬೀತುಪಡಿಸಲು ವಿಫಲವಾಗಿದೆ ಮತ್ತು ದೆಹಲಿ ಪೊಲೀಸರು...