Homeಅಂತರಾಷ್ಟ್ರೀಯಭಾರತದಿಂದ ಹತ್ತಿ ಮತ್ತು ಸಕ್ಕರೆ ಆಮದು ಪ್ರಸ್ತಾಪವನ್ನು ತಿರಸ್ಕರಿಸಿದ ಪಾಕಿಸ್ತಾನ

ಭಾರತದಿಂದ ಹತ್ತಿ ಮತ್ತು ಸಕ್ಕರೆ ಆಮದು ಪ್ರಸ್ತಾಪವನ್ನು ತಿರಸ್ಕರಿಸಿದ ಪಾಕಿಸ್ತಾನ

- Advertisement -
- Advertisement -

ಭಾರತದಿಂದ ಹತ್ತಿ ಮತ್ತು ಸಕ್ಕರೆಯನ್ನು ಆಮದು ಮಾಡಿಕೊಳ್ಳುವ ಆರ್ಥಿಕ ಸಮನ್ವಯ ಸಮಿತಿಯ (ಇಸಿಸಿ) ಪ್ರಸ್ತಾವನೆಯನ್ನು ಪಾಕಿಸ್ತಾನದ ಕ್ಯಾಬಿನೆಟ್ ಗುರುವಾರ ತಿರಸ್ಕರಿಸಿದ್ದು, ಭಾರತದೊಂದಿಗೆ ಯಾವುದೇ ವ್ಯಾಪಾರವಿಲ್ಲ ಎಂದು ಇಂದು ಕ್ಯಾಬಿನೆಟ್ ಸ್ಪಷ್ಟವಾಗಿ ಹೇಳಿದೆ.

ಪಾಕಿಸ್ತಾನದ ಹೊಸ ಹಣಕಾಸು ಸಚಿವ ಹಮ್ಮದ್ ಅಝರ್ ಅವರು ಅಧ್ಯಕ್ಷತೆ ವಹಿಸಿದ್ದ ಇಸಿಸಿ ಸಭೆಯಲ್ಲಿ ಭಾರತದಿಂದ ಹತ್ತಿ ಮತ್ತು ಸಕ್ಕರೆ ಆಮದಿನ ಮೇಲಿನ ಎರಡು ವರ್ಷಗಳ ಹಳೆಯ ನಿಷೇಧವನ್ನು ತೆಗೆದುಹಾಕುವುದಾಗಿ ಬುಧವಾರ ಘೋಷಿಸಲಾಗಿತ್ತು.

ಈ ಬಗ್ಗೆ ಪ್ರತಿಕ್ರಿಯಿಸಿದ್ದ, ಇಮ್ರಾನ್ ಖಾನ್ ಅವರ ಆಪ್ತ ಸಹಾಯಕಿ ಮತ್ತು ಮಾನವ ಹಕ್ಕುಗಳ ಸಚಿವೆ ಶಿರೀನ್ ಮಜಾರಿ ಅವರು, ಎಲ್ಲಾ ಇಸಿಸಿ ನಿರ್ಧಾರಗಳನ್ನು ಕ್ಯಾಬಿನೆಟ್ ಅನುಮೋದಿಸಬೇಕಾಗಿದೆ ಮತ್ತು ಆಗ ಮಾತ್ರ ಅವುಗಳನ್ನು ಸರ್ಕಾರದ ಅನುಮೋದನೆ ಎಂದು ಹೇಳಬಹುದು ಎಂದು ಹೇಳಿದ್ದರು.

ಇದನ್ನೂ ಓದಿ: ಸಿಂಗೂರು, ನಂದಿಗ್ರಾಮ ಚಳವಳಿಯ ಮುಂಚೂಣಿಯಲ್ಲಿದ್ದ SUCI ಈ ಚುನಾವಣೆಯಲ್ಲೇನು ಮಾಡುತ್ತಿದೆ?

“ಇಸಿಸಿಯ ಎಲ್ಲಾ ನಿರ್ಧಾರಗಳನ್ನು ಕ್ಯಾಬಿನೆಟ್ ಅನುಮೋದಿಸಬೇಕಾಗಿದೆ. ಆಗ ಮಾತ್ರ ಅವುಗಳನ್ನು ಸರ್ಕಾರದಿಂದ ಅನುಮೋದಿಸಲಾಗಿದೆ ಎಂದು ಹೇಳಬಹುದು. ಆದ್ದರಿಂದ ಇಂದು ಕ್ಯಾಬಿನೆಟ್‌‌ನಲ್ಲಿ ಭಾರತದೊಂದಿಗೆ ವ್ಯಾಪಾರ ಸೇರಿದಂತೆ ಇಸಿಸಿ ನಿರ್ಧಾರಗಳ ಬಗ್ಗೆ ಚರ್ಚೆ ನಡೆಯಲಿದೆ. ನಂತರ ಸರ್ಕಾರ ನಿರ್ಧಾರ ತೆಗೆದುಕೊಳ್ಳುತ್ತದೆ. ಮಾಧ್ಯಮಗಳು ಈ ಬಗ್ಗೆ ಕನಿಷ್ಠ ತಿಳಿದಿರಬೇಕು” ಎಂದು ಶಿರಿನ್ ಮಜಾರಿ ಬೆಳಿಗ್ಗೆ ತಿಳಿಸಿದ್ದರು.

ಸಂಜೆ ಟ್ವೀಟ್ ಮಾಡಿ, “ಭಾರತದೊಂದಿಗೆ ಯಾವುದೇ ವ್ಯಾಪಾರವಿಲ್ಲ ಎಂದು ಇಂದು ಕ್ಯಾಬಿನೆಟ್ ಸ್ಪಷ್ಟವಾಗಿ ಹೇಳಿದೆ. 5 ಆಗಸ್ಟ್ 2019 ರಂದು ಜಮ್ಮುಕಾಶ್ಮೀರದಲ್ಲಿ ಹೇರಲ್ಪಟ್ಟ ಕಾನೂನುಬಾಹಿರ ಕ್ರಮಗಳನ್ನು ಹಿಂಪಡೆಯುವರೆಗೆ ಭಾರತದೊಂದಿಗೆ ಯಾವುದೇ ಸಂಬಂಧವನ್ನು ಸಾಮಾನ್ಯೀಕರಿಸಲಾಗುವುದಿಲ್ಲ ಎಂದು ಪ್ರಧಾನಿ ಸ್ಪಷ್ಟಪಡಿಸಿದ್ದಾರೆ” ಎಂದು ಕಾಶ್ಮೀರದ ಬಗ್ಗೆ ಬಿಗಿ ನಿಲುವಿಗೆ ಹೆಸರುವಾಸಿಯಾದ ಶಿರಿನ್ ಮಜಾರಿ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ನರಗುಂದ: ದಲಿತ ಬಾಲಕಿಯ ಸುಟ್ಟ ಮೃತದೇಹ ಪತ್ತೆ – ಅತ್ಯಾಚಾರ, ಕೊಲೆ ಆರೋಪ

ಭಾರತದಿಂದ ಹತ್ತಿ ಮತ್ತು ಸಕ್ಕರೆಯನ್ನು ಆಮದು ಮಾಡಿಕೊಳ್ಳುವುದಾಗಿ ಅಜರ್ ಬುಧವಾರ ಪ್ರಕಟಿಸಿದ್ದು, ದ್ವಿಪಕ್ಷೀಯ ವ್ಯಾಪಾರ ಸಂಬಂಧಗಳು ಭಾಗಶಃ ಪುನ ಪ್ರಾರಂಭವಾಗುತ್ತದೆ ಎಂಬ ಭರವಸೆಯನ್ನು ಹುಟ್ಟುಹಾಕಿತ್ತು. ಭಾರತವು 2019 ರ ಆಗಸ್ಟ್ 5 ರಂದು ಜಮ್ಮು ಕಾಶ್ಮೀರದ ವಿಶೇಷ ಸ್ಥಾನಮಾನವನ್ನು ಹಿಂತೆಗೆದುಕೊಳ್ಳುವುದರೊಂದಿಗೆ ಈ ವ್ಯಾಪಾರ ಸಂಬಂಧವು ಸ್ಥಗಿತಗೊಂಡಿತ್ತು.

ಭಾರತವು ವಿಶ್ವದ ಅತಿದೊಡ್ಡ ಹತ್ತಿ ಉತ್ಪಾದಕ ಮತ್ತು ಎರಡನೇ ಅತಿದೊಡ್ಡ ಸಕ್ಕರೆ ಉತ್ಪಾದಕ ದೇಶವಾಗಿದೆ.

ಕೊರೊನಾ ಸಾಂಕ್ರಾಮಿಕದ ಮಧ್ಯೆ ಭಾರತದಿಂದ ಔಷಧಗಳು ಮತ್ತು ಅಗತ್ಯ ಔಷಧಿಗಳ ಕಚ್ಚಾ ವಸ್ತುಗಳನ್ನು ಆಮದು ಮಾಡಿಕೊಳ್ಳುವ ನಿಷೇಧವನ್ನು 2020 ರ ಮೇ ತಿಂಗಳಲ್ಲಿ ಪಾಕಿಸ್ತಾನ ತೆಗೆದುಹಾಕಿತ್ತು.

2019 ರ ಆಗಸ್ಟ್‌ನಲ್ಲಿ ಜಮ್ಮು ಕಾಶ್ಮೀರದ ವಿಶೇಷ ಸ್ಥಾನಮಾನವನ್ನು ಹಿಂತೆಗೆದುಕೊಳ್ಳುವ ಭಾರತದ ಕ್ರಮವು ಪಾಕಿಸ್ತಾನಕ್ಕೆ ಕೋಪವನ್ನುಂಟುಮಾಡಿತ್ತು. ಇದರೊಂದಿಗೆ ಭಾರತದೊಂದಿಗೆ ರಾಜತಾಂತ್ರಿಕ ಸಂಬಂಧವು ಕುಸಿದಿದ್ದು, ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನರ್‌ನನ್ನು ವಾಪಾಸ್ ಕಳುಹಿಸಿತ್ತು. ಪಾಕಿಸ್ತಾನವು ಭಾರತದೊಂದಿಗಿನ ಎಲ್ಲಾ ವಾಯು ಮತ್ತು ಭೂ ಸಂಪರ್ಕಗಳನ್ನು ಕಿತ್ತುಹಾಕಿ, ವ್ಯಾಪಾರ ಮತ್ತು ರೈಲ್ವೆ ಸೇವೆಗಳನ್ನು ಸ್ಥಗಿತಗೊಳಿಸಿತ್ತು.

ಇದನ್ನೂ ಓದಿ: ಅವಹೇಳನಕಾರಿ ಹೇಳಿಕೆ: ಪ್ರಚಾರದಿಂದ ಎ ರಾಜಾಗೆ 48 ಗಂಟೆಗಳ ನಿಷೇಧ ಹೇರಿದ ಚುನಾವಣಾ ಆಯೋಗ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಸಿಕ್‌| ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರು

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ನಿಫಾದ್ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿಯನ್ನು ಖಂಡಿಸಿ ಮತ್ತು ಅಧಿಕಾರಿಗಳ ನಿರ್ಲಕ್ಷ್ಯವನ್ನು ಖಂಡಿಸಿದ ಪ್ರತಿಭಟನಾಕಾರರ ಗುಂಪೊಂದು ನಗರ ಪಂಚಾಯತ್ ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು...

ವಿವಾಹಿತೆ ಮೇಲೆ ಅತ್ಯಾಚಾರ ಆರೋಪ : ಬಿಜೆಪಿ ಮಾಜಿ ಶಾಸಕನ ವಿರುದ್ಧ ಎಫ್‌ಐಆರ್

ಗನ್‌ ಪಾಯಿಂಟ್‌ ಇಟ್ಟು ಬೆದರಿಸಿ 22 ವರ್ಷದ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಹಾರಾಷ್ಟ್ರದ ಬಿಜೆಪಿ ಮಾಜಿ ಶಾಸಕ ಮತ್ತು ವಜಾಗೊಂಡಿರುವ ಪೊಲೀಸ್ ಸಿಬ್ಬಂದಿಯೊಬ್ಬರ ವಿರುದ್ಧ ಗುರುವಾರ (ಸೆ.17)...

ಬ್ರಿಕ್ಸ್ ಶೃಂಗಸಭೆಯಲ್ಲಿ ಸಂಪೂರ್ಣ ಸಸ್ಯಹಾರಿ ಮೆನು; ಶಿವಸೇನೆ ತೀವ್ರ ವಾಗ್ದಾಳಿ

ದೆಹಲಿಯಲ್ಲಿ ನಡೆದ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ವಿದೇಶಿ ಪ್ರತಿನಿಧಿಗಳಿಗೆ ಕೇವಲ ಸಸ್ಯಹಾರಿ ಆಹಾರವನ್ನು ಬಡಿಸಿರುವುದನ್ನು ಖಂಡಿಸಿರುವ ಶಿವಸೇನೆ (ಯುಬಿಟಿ) ಗುರುವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇದು ಅಂತರರಾಷ್ಟ್ರೀಯ ಅತಿಥಿಗಳ ಮೇಲೆ...

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...

ಕೇರಳ | ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹ ಆರೋಪ : ರಿಪೋರ್ಟರ್ ಟಿವಿ ಎಂಡಿ ಆಂಟೋ ಆಗಸ್ಟಿನ್ ಬಂಧನ

ಕೇರಳ ಅಬಕಾರಿ ಇಲಾಖೆಯು ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಂಟೋ ಆಗಸ್ಟಿನ್ ಅವರನ್ನು ಗುರುವಾರ (ಸೆ.17) ಮುಂಜಾನೆ ಬಂಧಿಸಿದೆ. ಎರ್ನಾಕುಲಂನಲ್ಲಿರುವ ಸುದ್ದಿ ವಾಹಿನಿಯ ಕಚೇರಿಯಿಂದ ಮುಂಜಾನೆ ಸುಮಾರು...

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...