Homeಅಂತರಾಷ್ಟ್ರೀಯಭಾರತದಿಂದ ಹತ್ತಿ ಮತ್ತು ಸಕ್ಕರೆ ಆಮದು ಪ್ರಸ್ತಾಪವನ್ನು ತಿರಸ್ಕರಿಸಿದ ಪಾಕಿಸ್ತಾನ

ಭಾರತದಿಂದ ಹತ್ತಿ ಮತ್ತು ಸಕ್ಕರೆ ಆಮದು ಪ್ರಸ್ತಾಪವನ್ನು ತಿರಸ್ಕರಿಸಿದ ಪಾಕಿಸ್ತಾನ

- Advertisement -
- Advertisement -

ಭಾರತದಿಂದ ಹತ್ತಿ ಮತ್ತು ಸಕ್ಕರೆಯನ್ನು ಆಮದು ಮಾಡಿಕೊಳ್ಳುವ ಆರ್ಥಿಕ ಸಮನ್ವಯ ಸಮಿತಿಯ (ಇಸಿಸಿ) ಪ್ರಸ್ತಾವನೆಯನ್ನು ಪಾಕಿಸ್ತಾನದ ಕ್ಯಾಬಿನೆಟ್ ಗುರುವಾರ ತಿರಸ್ಕರಿಸಿದ್ದು, ಭಾರತದೊಂದಿಗೆ ಯಾವುದೇ ವ್ಯಾಪಾರವಿಲ್ಲ ಎಂದು ಇಂದು ಕ್ಯಾಬಿನೆಟ್ ಸ್ಪಷ್ಟವಾಗಿ ಹೇಳಿದೆ.

ಪಾಕಿಸ್ತಾನದ ಹೊಸ ಹಣಕಾಸು ಸಚಿವ ಹಮ್ಮದ್ ಅಝರ್ ಅವರು ಅಧ್ಯಕ್ಷತೆ ವಹಿಸಿದ್ದ ಇಸಿಸಿ ಸಭೆಯಲ್ಲಿ ಭಾರತದಿಂದ ಹತ್ತಿ ಮತ್ತು ಸಕ್ಕರೆ ಆಮದಿನ ಮೇಲಿನ ಎರಡು ವರ್ಷಗಳ ಹಳೆಯ ನಿಷೇಧವನ್ನು ತೆಗೆದುಹಾಕುವುದಾಗಿ ಬುಧವಾರ ಘೋಷಿಸಲಾಗಿತ್ತು.

ಈ ಬಗ್ಗೆ ಪ್ರತಿಕ್ರಿಯಿಸಿದ್ದ, ಇಮ್ರಾನ್ ಖಾನ್ ಅವರ ಆಪ್ತ ಸಹಾಯಕಿ ಮತ್ತು ಮಾನವ ಹಕ್ಕುಗಳ ಸಚಿವೆ ಶಿರೀನ್ ಮಜಾರಿ ಅವರು, ಎಲ್ಲಾ ಇಸಿಸಿ ನಿರ್ಧಾರಗಳನ್ನು ಕ್ಯಾಬಿನೆಟ್ ಅನುಮೋದಿಸಬೇಕಾಗಿದೆ ಮತ್ತು ಆಗ ಮಾತ್ರ ಅವುಗಳನ್ನು ಸರ್ಕಾರದ ಅನುಮೋದನೆ ಎಂದು ಹೇಳಬಹುದು ಎಂದು ಹೇಳಿದ್ದರು.

ಇದನ್ನೂ ಓದಿ: ಸಿಂಗೂರು, ನಂದಿಗ್ರಾಮ ಚಳವಳಿಯ ಮುಂಚೂಣಿಯಲ್ಲಿದ್ದ SUCI ಈ ಚುನಾವಣೆಯಲ್ಲೇನು ಮಾಡುತ್ತಿದೆ?

“ಇಸಿಸಿಯ ಎಲ್ಲಾ ನಿರ್ಧಾರಗಳನ್ನು ಕ್ಯಾಬಿನೆಟ್ ಅನುಮೋದಿಸಬೇಕಾಗಿದೆ. ಆಗ ಮಾತ್ರ ಅವುಗಳನ್ನು ಸರ್ಕಾರದಿಂದ ಅನುಮೋದಿಸಲಾಗಿದೆ ಎಂದು ಹೇಳಬಹುದು. ಆದ್ದರಿಂದ ಇಂದು ಕ್ಯಾಬಿನೆಟ್‌‌ನಲ್ಲಿ ಭಾರತದೊಂದಿಗೆ ವ್ಯಾಪಾರ ಸೇರಿದಂತೆ ಇಸಿಸಿ ನಿರ್ಧಾರಗಳ ಬಗ್ಗೆ ಚರ್ಚೆ ನಡೆಯಲಿದೆ. ನಂತರ ಸರ್ಕಾರ ನಿರ್ಧಾರ ತೆಗೆದುಕೊಳ್ಳುತ್ತದೆ. ಮಾಧ್ಯಮಗಳು ಈ ಬಗ್ಗೆ ಕನಿಷ್ಠ ತಿಳಿದಿರಬೇಕು” ಎಂದು ಶಿರಿನ್ ಮಜಾರಿ ಬೆಳಿಗ್ಗೆ ತಿಳಿಸಿದ್ದರು.

ಸಂಜೆ ಟ್ವೀಟ್ ಮಾಡಿ, “ಭಾರತದೊಂದಿಗೆ ಯಾವುದೇ ವ್ಯಾಪಾರವಿಲ್ಲ ಎಂದು ಇಂದು ಕ್ಯಾಬಿನೆಟ್ ಸ್ಪಷ್ಟವಾಗಿ ಹೇಳಿದೆ. 5 ಆಗಸ್ಟ್ 2019 ರಂದು ಜಮ್ಮುಕಾಶ್ಮೀರದಲ್ಲಿ ಹೇರಲ್ಪಟ್ಟ ಕಾನೂನುಬಾಹಿರ ಕ್ರಮಗಳನ್ನು ಹಿಂಪಡೆಯುವರೆಗೆ ಭಾರತದೊಂದಿಗೆ ಯಾವುದೇ ಸಂಬಂಧವನ್ನು ಸಾಮಾನ್ಯೀಕರಿಸಲಾಗುವುದಿಲ್ಲ ಎಂದು ಪ್ರಧಾನಿ ಸ್ಪಷ್ಟಪಡಿಸಿದ್ದಾರೆ” ಎಂದು ಕಾಶ್ಮೀರದ ಬಗ್ಗೆ ಬಿಗಿ ನಿಲುವಿಗೆ ಹೆಸರುವಾಸಿಯಾದ ಶಿರಿನ್ ಮಜಾರಿ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ನರಗುಂದ: ದಲಿತ ಬಾಲಕಿಯ ಸುಟ್ಟ ಮೃತದೇಹ ಪತ್ತೆ – ಅತ್ಯಾಚಾರ, ಕೊಲೆ ಆರೋಪ

ಭಾರತದಿಂದ ಹತ್ತಿ ಮತ್ತು ಸಕ್ಕರೆಯನ್ನು ಆಮದು ಮಾಡಿಕೊಳ್ಳುವುದಾಗಿ ಅಜರ್ ಬುಧವಾರ ಪ್ರಕಟಿಸಿದ್ದು, ದ್ವಿಪಕ್ಷೀಯ ವ್ಯಾಪಾರ ಸಂಬಂಧಗಳು ಭಾಗಶಃ ಪುನ ಪ್ರಾರಂಭವಾಗುತ್ತದೆ ಎಂಬ ಭರವಸೆಯನ್ನು ಹುಟ್ಟುಹಾಕಿತ್ತು. ಭಾರತವು 2019 ರ ಆಗಸ್ಟ್ 5 ರಂದು ಜಮ್ಮು ಕಾಶ್ಮೀರದ ವಿಶೇಷ ಸ್ಥಾನಮಾನವನ್ನು ಹಿಂತೆಗೆದುಕೊಳ್ಳುವುದರೊಂದಿಗೆ ಈ ವ್ಯಾಪಾರ ಸಂಬಂಧವು ಸ್ಥಗಿತಗೊಂಡಿತ್ತು.

ಭಾರತವು ವಿಶ್ವದ ಅತಿದೊಡ್ಡ ಹತ್ತಿ ಉತ್ಪಾದಕ ಮತ್ತು ಎರಡನೇ ಅತಿದೊಡ್ಡ ಸಕ್ಕರೆ ಉತ್ಪಾದಕ ದೇಶವಾಗಿದೆ.

ಕೊರೊನಾ ಸಾಂಕ್ರಾಮಿಕದ ಮಧ್ಯೆ ಭಾರತದಿಂದ ಔಷಧಗಳು ಮತ್ತು ಅಗತ್ಯ ಔಷಧಿಗಳ ಕಚ್ಚಾ ವಸ್ತುಗಳನ್ನು ಆಮದು ಮಾಡಿಕೊಳ್ಳುವ ನಿಷೇಧವನ್ನು 2020 ರ ಮೇ ತಿಂಗಳಲ್ಲಿ ಪಾಕಿಸ್ತಾನ ತೆಗೆದುಹಾಕಿತ್ತು.

2019 ರ ಆಗಸ್ಟ್‌ನಲ್ಲಿ ಜಮ್ಮು ಕಾಶ್ಮೀರದ ವಿಶೇಷ ಸ್ಥಾನಮಾನವನ್ನು ಹಿಂತೆಗೆದುಕೊಳ್ಳುವ ಭಾರತದ ಕ್ರಮವು ಪಾಕಿಸ್ತಾನಕ್ಕೆ ಕೋಪವನ್ನುಂಟುಮಾಡಿತ್ತು. ಇದರೊಂದಿಗೆ ಭಾರತದೊಂದಿಗೆ ರಾಜತಾಂತ್ರಿಕ ಸಂಬಂಧವು ಕುಸಿದಿದ್ದು, ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನರ್‌ನನ್ನು ವಾಪಾಸ್ ಕಳುಹಿಸಿತ್ತು. ಪಾಕಿಸ್ತಾನವು ಭಾರತದೊಂದಿಗಿನ ಎಲ್ಲಾ ವಾಯು ಮತ್ತು ಭೂ ಸಂಪರ್ಕಗಳನ್ನು ಕಿತ್ತುಹಾಕಿ, ವ್ಯಾಪಾರ ಮತ್ತು ರೈಲ್ವೆ ಸೇವೆಗಳನ್ನು ಸ್ಥಗಿತಗೊಳಿಸಿತ್ತು.

ಇದನ್ನೂ ಓದಿ: ಅವಹೇಳನಕಾರಿ ಹೇಳಿಕೆ: ಪ್ರಚಾರದಿಂದ ಎ ರಾಜಾಗೆ 48 ಗಂಟೆಗಳ ನಿಷೇಧ ಹೇರಿದ ಚುನಾವಣಾ ಆಯೋಗ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...

ಅಸ್ಸಾಂ ಪ್ರವಾಹದ ಭೀಕರತೆ: 78 ಬಲಿ, 3 ಲಕ್ಷ ಜನರ ಬದುಕು ಸಂಕಷ್ಟಕ್ಕೆ: ವ್ಯವಸ್ಥೆಯ ವೈಫಲ್ಯಕ್ಕೆ ಬೆಲೆ ತೆತ್ತುತ್ತಿರುವ ನಾಗರಿಕರು

ಈಶಾನ್ಯ ಭಾರತದ ಗೇಟ್‌ವೇ ಎಂದೇ ಕರೆಯಲ್ಪಡುವ ಅಸ್ಸಾಂನಲ್ಲಿ ಪ್ರವಾಹದ ಅಟ್ಟಹಾಸ ಮುಂದುವರಿದಿದ್ದು, ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಇತ್ತೀಚಿನ ಅಧಿಕೃತ ವರದಿಗಳ ಪ್ರಕಾರ, ಶಿವಸಾಗರ್ ಜಿಲ್ಲೆಯಲ್ಲಿ ಇಬ್ಬರು ಹಾಗೂ ಗೋಲಾಘಾಟ್‌ನಲ್ಲಿ ಒಬ್ಬರು ನೀರಿನಲ್ಲಿ...

ನೀಟ್ ಪ್ರತಿಭಟನೆಯಲ್ಲಿ ಪೆಲೆಟ್ ಗನ್ ಬಳಕೆ ಆರೋಪ; RAF ಮದ್ದುಗುಂಡುಗಳ ದಾಖಲೆ ಕೇಳಿದ ಸುಪ್ರೀಂ ಕೋರ್ಟ್

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಜಂತರ್ ಮಂತರ್‌ನಲ್ಲಿ ನಿಯೋಜಿಸಲಾಗಿದ್ದ ಕ್ಷಿಪ್ರ ಕಾರ್ಯ ಪಡೆ (RAF) ಯ ಮದ್ದುಗುಂಡುಗಳ ದಾಖಲೆಯನ್ನು ಸಂರಕ್ಷಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ (ಜುಲೈ...

ಕ್ರಿಸ್ತನಿಗಿಂತ ಮೊದಲೇ ಇಲ್ಲಿದ್ದೇವೆ..ನಮಗೆ ಯಾವುದೇ ದಾಖಲೆಗಳು ಬೇಡ : ಎಸ್‌ಐಆರ್ ತಿರಸ್ಕರಿಸಿದ ಜಾರ್ಖಂಡ್‌ನ ಆದಿವಾಸಿಗಳು

ಜಾರ್ಖಂಡ್‌ನ ಖುಂತಿ ಜಿಲ್ಲೆಯ ದಟ್ಟ ಅರಣ್ಯ ಭಾಗದಲ್ಲಿ ವಾಸಿಸುವ ಮುಂಡಾ ಬುಡಕಟ್ಟು ಸಮುದಾಯದ ಒಂದು ವರ್ಗವು ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ತೀವ್ರವಾಗಿ ವಿರೋಧಿಸಿದ್ದು, ಆಧುನಿಕ...

NICE ನಲ್ಲಿ ಯೋಜನೆಯಲ್ಲಿ ‘ನೈಸ್’ ಎನ್ನುವಂತಹದ್ದು ಏನೂ ಇಲ್ಲ: ರಾಜ್ಯದ ಅತಿದೊಡ್ಡ ಹಗರಣ ಎಂದ ಹೈಕೋರ್ಟ್

ಬೆಂಗಳೂರು-ಮೈಸೂರು ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್ ಯೋಜನೆ (ಬಿಎಂಐಸಿಪಿ) ಅಥವಾ 'ನೈಸ್' ಯೋಜನೆ ಕರ್ನಾಟಕದ ಇತಿಹಾಸದಲ್ಲೇ ಅತ್ಯಂತ ದೊಡ್ಡ ಹಗರಣಗಳಲ್ಲಿ ಒಂದಾಗಿ ಕಾಣಿಸುತ್ತಿದೆ ಎಂದು ಕರ್ನಾಟಕ ಹೈಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ನಂದಿ ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್...

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...