Homeಅಂತರಾಷ್ಟ್ರೀಯಭಾರತದಿಂದ ಹತ್ತಿ ಮತ್ತು ಸಕ್ಕರೆ ಆಮದು ಪ್ರಸ್ತಾಪವನ್ನು ತಿರಸ್ಕರಿಸಿದ ಪಾಕಿಸ್ತಾನ

ಭಾರತದಿಂದ ಹತ್ತಿ ಮತ್ತು ಸಕ್ಕರೆ ಆಮದು ಪ್ರಸ್ತಾಪವನ್ನು ತಿರಸ್ಕರಿಸಿದ ಪಾಕಿಸ್ತಾನ

- Advertisement -
- Advertisement -

ಭಾರತದಿಂದ ಹತ್ತಿ ಮತ್ತು ಸಕ್ಕರೆಯನ್ನು ಆಮದು ಮಾಡಿಕೊಳ್ಳುವ ಆರ್ಥಿಕ ಸಮನ್ವಯ ಸಮಿತಿಯ (ಇಸಿಸಿ) ಪ್ರಸ್ತಾವನೆಯನ್ನು ಪಾಕಿಸ್ತಾನದ ಕ್ಯಾಬಿನೆಟ್ ಗುರುವಾರ ತಿರಸ್ಕರಿಸಿದ್ದು, ಭಾರತದೊಂದಿಗೆ ಯಾವುದೇ ವ್ಯಾಪಾರವಿಲ್ಲ ಎಂದು ಇಂದು ಕ್ಯಾಬಿನೆಟ್ ಸ್ಪಷ್ಟವಾಗಿ ಹೇಳಿದೆ.

ಪಾಕಿಸ್ತಾನದ ಹೊಸ ಹಣಕಾಸು ಸಚಿವ ಹಮ್ಮದ್ ಅಝರ್ ಅವರು ಅಧ್ಯಕ್ಷತೆ ವಹಿಸಿದ್ದ ಇಸಿಸಿ ಸಭೆಯಲ್ಲಿ ಭಾರತದಿಂದ ಹತ್ತಿ ಮತ್ತು ಸಕ್ಕರೆ ಆಮದಿನ ಮೇಲಿನ ಎರಡು ವರ್ಷಗಳ ಹಳೆಯ ನಿಷೇಧವನ್ನು ತೆಗೆದುಹಾಕುವುದಾಗಿ ಬುಧವಾರ ಘೋಷಿಸಲಾಗಿತ್ತು.

ಈ ಬಗ್ಗೆ ಪ್ರತಿಕ್ರಿಯಿಸಿದ್ದ, ಇಮ್ರಾನ್ ಖಾನ್ ಅವರ ಆಪ್ತ ಸಹಾಯಕಿ ಮತ್ತು ಮಾನವ ಹಕ್ಕುಗಳ ಸಚಿವೆ ಶಿರೀನ್ ಮಜಾರಿ ಅವರು, ಎಲ್ಲಾ ಇಸಿಸಿ ನಿರ್ಧಾರಗಳನ್ನು ಕ್ಯಾಬಿನೆಟ್ ಅನುಮೋದಿಸಬೇಕಾಗಿದೆ ಮತ್ತು ಆಗ ಮಾತ್ರ ಅವುಗಳನ್ನು ಸರ್ಕಾರದ ಅನುಮೋದನೆ ಎಂದು ಹೇಳಬಹುದು ಎಂದು ಹೇಳಿದ್ದರು.

ಇದನ್ನೂ ಓದಿ: ಸಿಂಗೂರು, ನಂದಿಗ್ರಾಮ ಚಳವಳಿಯ ಮುಂಚೂಣಿಯಲ್ಲಿದ್ದ SUCI ಈ ಚುನಾವಣೆಯಲ್ಲೇನು ಮಾಡುತ್ತಿದೆ?

“ಇಸಿಸಿಯ ಎಲ್ಲಾ ನಿರ್ಧಾರಗಳನ್ನು ಕ್ಯಾಬಿನೆಟ್ ಅನುಮೋದಿಸಬೇಕಾಗಿದೆ. ಆಗ ಮಾತ್ರ ಅವುಗಳನ್ನು ಸರ್ಕಾರದಿಂದ ಅನುಮೋದಿಸಲಾಗಿದೆ ಎಂದು ಹೇಳಬಹುದು. ಆದ್ದರಿಂದ ಇಂದು ಕ್ಯಾಬಿನೆಟ್‌‌ನಲ್ಲಿ ಭಾರತದೊಂದಿಗೆ ವ್ಯಾಪಾರ ಸೇರಿದಂತೆ ಇಸಿಸಿ ನಿರ್ಧಾರಗಳ ಬಗ್ಗೆ ಚರ್ಚೆ ನಡೆಯಲಿದೆ. ನಂತರ ಸರ್ಕಾರ ನಿರ್ಧಾರ ತೆಗೆದುಕೊಳ್ಳುತ್ತದೆ. ಮಾಧ್ಯಮಗಳು ಈ ಬಗ್ಗೆ ಕನಿಷ್ಠ ತಿಳಿದಿರಬೇಕು” ಎಂದು ಶಿರಿನ್ ಮಜಾರಿ ಬೆಳಿಗ್ಗೆ ತಿಳಿಸಿದ್ದರು.

ಸಂಜೆ ಟ್ವೀಟ್ ಮಾಡಿ, “ಭಾರತದೊಂದಿಗೆ ಯಾವುದೇ ವ್ಯಾಪಾರವಿಲ್ಲ ಎಂದು ಇಂದು ಕ್ಯಾಬಿನೆಟ್ ಸ್ಪಷ್ಟವಾಗಿ ಹೇಳಿದೆ. 5 ಆಗಸ್ಟ್ 2019 ರಂದು ಜಮ್ಮುಕಾಶ್ಮೀರದಲ್ಲಿ ಹೇರಲ್ಪಟ್ಟ ಕಾನೂನುಬಾಹಿರ ಕ್ರಮಗಳನ್ನು ಹಿಂಪಡೆಯುವರೆಗೆ ಭಾರತದೊಂದಿಗೆ ಯಾವುದೇ ಸಂಬಂಧವನ್ನು ಸಾಮಾನ್ಯೀಕರಿಸಲಾಗುವುದಿಲ್ಲ ಎಂದು ಪ್ರಧಾನಿ ಸ್ಪಷ್ಟಪಡಿಸಿದ್ದಾರೆ” ಎಂದು ಕಾಶ್ಮೀರದ ಬಗ್ಗೆ ಬಿಗಿ ನಿಲುವಿಗೆ ಹೆಸರುವಾಸಿಯಾದ ಶಿರಿನ್ ಮಜಾರಿ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ನರಗುಂದ: ದಲಿತ ಬಾಲಕಿಯ ಸುಟ್ಟ ಮೃತದೇಹ ಪತ್ತೆ – ಅತ್ಯಾಚಾರ, ಕೊಲೆ ಆರೋಪ

ಭಾರತದಿಂದ ಹತ್ತಿ ಮತ್ತು ಸಕ್ಕರೆಯನ್ನು ಆಮದು ಮಾಡಿಕೊಳ್ಳುವುದಾಗಿ ಅಜರ್ ಬುಧವಾರ ಪ್ರಕಟಿಸಿದ್ದು, ದ್ವಿಪಕ್ಷೀಯ ವ್ಯಾಪಾರ ಸಂಬಂಧಗಳು ಭಾಗಶಃ ಪುನ ಪ್ರಾರಂಭವಾಗುತ್ತದೆ ಎಂಬ ಭರವಸೆಯನ್ನು ಹುಟ್ಟುಹಾಕಿತ್ತು. ಭಾರತವು 2019 ರ ಆಗಸ್ಟ್ 5 ರಂದು ಜಮ್ಮು ಕಾಶ್ಮೀರದ ವಿಶೇಷ ಸ್ಥಾನಮಾನವನ್ನು ಹಿಂತೆಗೆದುಕೊಳ್ಳುವುದರೊಂದಿಗೆ ಈ ವ್ಯಾಪಾರ ಸಂಬಂಧವು ಸ್ಥಗಿತಗೊಂಡಿತ್ತು.

ಭಾರತವು ವಿಶ್ವದ ಅತಿದೊಡ್ಡ ಹತ್ತಿ ಉತ್ಪಾದಕ ಮತ್ತು ಎರಡನೇ ಅತಿದೊಡ್ಡ ಸಕ್ಕರೆ ಉತ್ಪಾದಕ ದೇಶವಾಗಿದೆ.

ಕೊರೊನಾ ಸಾಂಕ್ರಾಮಿಕದ ಮಧ್ಯೆ ಭಾರತದಿಂದ ಔಷಧಗಳು ಮತ್ತು ಅಗತ್ಯ ಔಷಧಿಗಳ ಕಚ್ಚಾ ವಸ್ತುಗಳನ್ನು ಆಮದು ಮಾಡಿಕೊಳ್ಳುವ ನಿಷೇಧವನ್ನು 2020 ರ ಮೇ ತಿಂಗಳಲ್ಲಿ ಪಾಕಿಸ್ತಾನ ತೆಗೆದುಹಾಕಿತ್ತು.

2019 ರ ಆಗಸ್ಟ್‌ನಲ್ಲಿ ಜಮ್ಮು ಕಾಶ್ಮೀರದ ವಿಶೇಷ ಸ್ಥಾನಮಾನವನ್ನು ಹಿಂತೆಗೆದುಕೊಳ್ಳುವ ಭಾರತದ ಕ್ರಮವು ಪಾಕಿಸ್ತಾನಕ್ಕೆ ಕೋಪವನ್ನುಂಟುಮಾಡಿತ್ತು. ಇದರೊಂದಿಗೆ ಭಾರತದೊಂದಿಗೆ ರಾಜತಾಂತ್ರಿಕ ಸಂಬಂಧವು ಕುಸಿದಿದ್ದು, ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನರ್‌ನನ್ನು ವಾಪಾಸ್ ಕಳುಹಿಸಿತ್ತು. ಪಾಕಿಸ್ತಾನವು ಭಾರತದೊಂದಿಗಿನ ಎಲ್ಲಾ ವಾಯು ಮತ್ತು ಭೂ ಸಂಪರ್ಕಗಳನ್ನು ಕಿತ್ತುಹಾಕಿ, ವ್ಯಾಪಾರ ಮತ್ತು ರೈಲ್ವೆ ಸೇವೆಗಳನ್ನು ಸ್ಥಗಿತಗೊಳಿಸಿತ್ತು.

ಇದನ್ನೂ ಓದಿ: ಅವಹೇಳನಕಾರಿ ಹೇಳಿಕೆ: ಪ್ರಚಾರದಿಂದ ಎ ರಾಜಾಗೆ 48 ಗಂಟೆಗಳ ನಿಷೇಧ ಹೇರಿದ ಚುನಾವಣಾ ಆಯೋಗ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...