Homeಅಂತರಾಷ್ಟ್ರೀಯಭಾರತದಿಂದ ಹತ್ತಿ ಮತ್ತು ಸಕ್ಕರೆ ಆಮದು ಪ್ರಸ್ತಾಪವನ್ನು ತಿರಸ್ಕರಿಸಿದ ಪಾಕಿಸ್ತಾನ

ಭಾರತದಿಂದ ಹತ್ತಿ ಮತ್ತು ಸಕ್ಕರೆ ಆಮದು ಪ್ರಸ್ತಾಪವನ್ನು ತಿರಸ್ಕರಿಸಿದ ಪಾಕಿಸ್ತಾನ

- Advertisement -
- Advertisement -

ಭಾರತದಿಂದ ಹತ್ತಿ ಮತ್ತು ಸಕ್ಕರೆಯನ್ನು ಆಮದು ಮಾಡಿಕೊಳ್ಳುವ ಆರ್ಥಿಕ ಸಮನ್ವಯ ಸಮಿತಿಯ (ಇಸಿಸಿ) ಪ್ರಸ್ತಾವನೆಯನ್ನು ಪಾಕಿಸ್ತಾನದ ಕ್ಯಾಬಿನೆಟ್ ಗುರುವಾರ ತಿರಸ್ಕರಿಸಿದ್ದು, ಭಾರತದೊಂದಿಗೆ ಯಾವುದೇ ವ್ಯಾಪಾರವಿಲ್ಲ ಎಂದು ಇಂದು ಕ್ಯಾಬಿನೆಟ್ ಸ್ಪಷ್ಟವಾಗಿ ಹೇಳಿದೆ.

ಪಾಕಿಸ್ತಾನದ ಹೊಸ ಹಣಕಾಸು ಸಚಿವ ಹಮ್ಮದ್ ಅಝರ್ ಅವರು ಅಧ್ಯಕ್ಷತೆ ವಹಿಸಿದ್ದ ಇಸಿಸಿ ಸಭೆಯಲ್ಲಿ ಭಾರತದಿಂದ ಹತ್ತಿ ಮತ್ತು ಸಕ್ಕರೆ ಆಮದಿನ ಮೇಲಿನ ಎರಡು ವರ್ಷಗಳ ಹಳೆಯ ನಿಷೇಧವನ್ನು ತೆಗೆದುಹಾಕುವುದಾಗಿ ಬುಧವಾರ ಘೋಷಿಸಲಾಗಿತ್ತು.

ಈ ಬಗ್ಗೆ ಪ್ರತಿಕ್ರಿಯಿಸಿದ್ದ, ಇಮ್ರಾನ್ ಖಾನ್ ಅವರ ಆಪ್ತ ಸಹಾಯಕಿ ಮತ್ತು ಮಾನವ ಹಕ್ಕುಗಳ ಸಚಿವೆ ಶಿರೀನ್ ಮಜಾರಿ ಅವರು, ಎಲ್ಲಾ ಇಸಿಸಿ ನಿರ್ಧಾರಗಳನ್ನು ಕ್ಯಾಬಿನೆಟ್ ಅನುಮೋದಿಸಬೇಕಾಗಿದೆ ಮತ್ತು ಆಗ ಮಾತ್ರ ಅವುಗಳನ್ನು ಸರ್ಕಾರದ ಅನುಮೋದನೆ ಎಂದು ಹೇಳಬಹುದು ಎಂದು ಹೇಳಿದ್ದರು.

ಇದನ್ನೂ ಓದಿ: ಸಿಂಗೂರು, ನಂದಿಗ್ರಾಮ ಚಳವಳಿಯ ಮುಂಚೂಣಿಯಲ್ಲಿದ್ದ SUCI ಈ ಚುನಾವಣೆಯಲ್ಲೇನು ಮಾಡುತ್ತಿದೆ?

“ಇಸಿಸಿಯ ಎಲ್ಲಾ ನಿರ್ಧಾರಗಳನ್ನು ಕ್ಯಾಬಿನೆಟ್ ಅನುಮೋದಿಸಬೇಕಾಗಿದೆ. ಆಗ ಮಾತ್ರ ಅವುಗಳನ್ನು ಸರ್ಕಾರದಿಂದ ಅನುಮೋದಿಸಲಾಗಿದೆ ಎಂದು ಹೇಳಬಹುದು. ಆದ್ದರಿಂದ ಇಂದು ಕ್ಯಾಬಿನೆಟ್‌‌ನಲ್ಲಿ ಭಾರತದೊಂದಿಗೆ ವ್ಯಾಪಾರ ಸೇರಿದಂತೆ ಇಸಿಸಿ ನಿರ್ಧಾರಗಳ ಬಗ್ಗೆ ಚರ್ಚೆ ನಡೆಯಲಿದೆ. ನಂತರ ಸರ್ಕಾರ ನಿರ್ಧಾರ ತೆಗೆದುಕೊಳ್ಳುತ್ತದೆ. ಮಾಧ್ಯಮಗಳು ಈ ಬಗ್ಗೆ ಕನಿಷ್ಠ ತಿಳಿದಿರಬೇಕು” ಎಂದು ಶಿರಿನ್ ಮಜಾರಿ ಬೆಳಿಗ್ಗೆ ತಿಳಿಸಿದ್ದರು.

ಸಂಜೆ ಟ್ವೀಟ್ ಮಾಡಿ, “ಭಾರತದೊಂದಿಗೆ ಯಾವುದೇ ವ್ಯಾಪಾರವಿಲ್ಲ ಎಂದು ಇಂದು ಕ್ಯಾಬಿನೆಟ್ ಸ್ಪಷ್ಟವಾಗಿ ಹೇಳಿದೆ. 5 ಆಗಸ್ಟ್ 2019 ರಂದು ಜಮ್ಮುಕಾಶ್ಮೀರದಲ್ಲಿ ಹೇರಲ್ಪಟ್ಟ ಕಾನೂನುಬಾಹಿರ ಕ್ರಮಗಳನ್ನು ಹಿಂಪಡೆಯುವರೆಗೆ ಭಾರತದೊಂದಿಗೆ ಯಾವುದೇ ಸಂಬಂಧವನ್ನು ಸಾಮಾನ್ಯೀಕರಿಸಲಾಗುವುದಿಲ್ಲ ಎಂದು ಪ್ರಧಾನಿ ಸ್ಪಷ್ಟಪಡಿಸಿದ್ದಾರೆ” ಎಂದು ಕಾಶ್ಮೀರದ ಬಗ್ಗೆ ಬಿಗಿ ನಿಲುವಿಗೆ ಹೆಸರುವಾಸಿಯಾದ ಶಿರಿನ್ ಮಜಾರಿ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ನರಗುಂದ: ದಲಿತ ಬಾಲಕಿಯ ಸುಟ್ಟ ಮೃತದೇಹ ಪತ್ತೆ – ಅತ್ಯಾಚಾರ, ಕೊಲೆ ಆರೋಪ

ಭಾರತದಿಂದ ಹತ್ತಿ ಮತ್ತು ಸಕ್ಕರೆಯನ್ನು ಆಮದು ಮಾಡಿಕೊಳ್ಳುವುದಾಗಿ ಅಜರ್ ಬುಧವಾರ ಪ್ರಕಟಿಸಿದ್ದು, ದ್ವಿಪಕ್ಷೀಯ ವ್ಯಾಪಾರ ಸಂಬಂಧಗಳು ಭಾಗಶಃ ಪುನ ಪ್ರಾರಂಭವಾಗುತ್ತದೆ ಎಂಬ ಭರವಸೆಯನ್ನು ಹುಟ್ಟುಹಾಕಿತ್ತು. ಭಾರತವು 2019 ರ ಆಗಸ್ಟ್ 5 ರಂದು ಜಮ್ಮು ಕಾಶ್ಮೀರದ ವಿಶೇಷ ಸ್ಥಾನಮಾನವನ್ನು ಹಿಂತೆಗೆದುಕೊಳ್ಳುವುದರೊಂದಿಗೆ ಈ ವ್ಯಾಪಾರ ಸಂಬಂಧವು ಸ್ಥಗಿತಗೊಂಡಿತ್ತು.

ಭಾರತವು ವಿಶ್ವದ ಅತಿದೊಡ್ಡ ಹತ್ತಿ ಉತ್ಪಾದಕ ಮತ್ತು ಎರಡನೇ ಅತಿದೊಡ್ಡ ಸಕ್ಕರೆ ಉತ್ಪಾದಕ ದೇಶವಾಗಿದೆ.

ಕೊರೊನಾ ಸಾಂಕ್ರಾಮಿಕದ ಮಧ್ಯೆ ಭಾರತದಿಂದ ಔಷಧಗಳು ಮತ್ತು ಅಗತ್ಯ ಔಷಧಿಗಳ ಕಚ್ಚಾ ವಸ್ತುಗಳನ್ನು ಆಮದು ಮಾಡಿಕೊಳ್ಳುವ ನಿಷೇಧವನ್ನು 2020 ರ ಮೇ ತಿಂಗಳಲ್ಲಿ ಪಾಕಿಸ್ತಾನ ತೆಗೆದುಹಾಕಿತ್ತು.

2019 ರ ಆಗಸ್ಟ್‌ನಲ್ಲಿ ಜಮ್ಮು ಕಾಶ್ಮೀರದ ವಿಶೇಷ ಸ್ಥಾನಮಾನವನ್ನು ಹಿಂತೆಗೆದುಕೊಳ್ಳುವ ಭಾರತದ ಕ್ರಮವು ಪಾಕಿಸ್ತಾನಕ್ಕೆ ಕೋಪವನ್ನುಂಟುಮಾಡಿತ್ತು. ಇದರೊಂದಿಗೆ ಭಾರತದೊಂದಿಗೆ ರಾಜತಾಂತ್ರಿಕ ಸಂಬಂಧವು ಕುಸಿದಿದ್ದು, ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನರ್‌ನನ್ನು ವಾಪಾಸ್ ಕಳುಹಿಸಿತ್ತು. ಪಾಕಿಸ್ತಾನವು ಭಾರತದೊಂದಿಗಿನ ಎಲ್ಲಾ ವಾಯು ಮತ್ತು ಭೂ ಸಂಪರ್ಕಗಳನ್ನು ಕಿತ್ತುಹಾಕಿ, ವ್ಯಾಪಾರ ಮತ್ತು ರೈಲ್ವೆ ಸೇವೆಗಳನ್ನು ಸ್ಥಗಿತಗೊಳಿಸಿತ್ತು.

ಇದನ್ನೂ ಓದಿ: ಅವಹೇಳನಕಾರಿ ಹೇಳಿಕೆ: ಪ್ರಚಾರದಿಂದ ಎ ರಾಜಾಗೆ 48 ಗಂಟೆಗಳ ನಿಷೇಧ ಹೇರಿದ ಚುನಾವಣಾ ಆಯೋಗ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...