Homeಅಂತರಾಷ್ಟ್ರೀಯಭಾರತದಿಂದ ಹತ್ತಿ ಮತ್ತು ಸಕ್ಕರೆ ಆಮದು ಪ್ರಸ್ತಾಪವನ್ನು ತಿರಸ್ಕರಿಸಿದ ಪಾಕಿಸ್ತಾನ

ಭಾರತದಿಂದ ಹತ್ತಿ ಮತ್ತು ಸಕ್ಕರೆ ಆಮದು ಪ್ರಸ್ತಾಪವನ್ನು ತಿರಸ್ಕರಿಸಿದ ಪಾಕಿಸ್ತಾನ

- Advertisement -
- Advertisement -

ಭಾರತದಿಂದ ಹತ್ತಿ ಮತ್ತು ಸಕ್ಕರೆಯನ್ನು ಆಮದು ಮಾಡಿಕೊಳ್ಳುವ ಆರ್ಥಿಕ ಸಮನ್ವಯ ಸಮಿತಿಯ (ಇಸಿಸಿ) ಪ್ರಸ್ತಾವನೆಯನ್ನು ಪಾಕಿಸ್ತಾನದ ಕ್ಯಾಬಿನೆಟ್ ಗುರುವಾರ ತಿರಸ್ಕರಿಸಿದ್ದು, ಭಾರತದೊಂದಿಗೆ ಯಾವುದೇ ವ್ಯಾಪಾರವಿಲ್ಲ ಎಂದು ಇಂದು ಕ್ಯಾಬಿನೆಟ್ ಸ್ಪಷ್ಟವಾಗಿ ಹೇಳಿದೆ.

ಪಾಕಿಸ್ತಾನದ ಹೊಸ ಹಣಕಾಸು ಸಚಿವ ಹಮ್ಮದ್ ಅಝರ್ ಅವರು ಅಧ್ಯಕ್ಷತೆ ವಹಿಸಿದ್ದ ಇಸಿಸಿ ಸಭೆಯಲ್ಲಿ ಭಾರತದಿಂದ ಹತ್ತಿ ಮತ್ತು ಸಕ್ಕರೆ ಆಮದಿನ ಮೇಲಿನ ಎರಡು ವರ್ಷಗಳ ಹಳೆಯ ನಿಷೇಧವನ್ನು ತೆಗೆದುಹಾಕುವುದಾಗಿ ಬುಧವಾರ ಘೋಷಿಸಲಾಗಿತ್ತು.

ಈ ಬಗ್ಗೆ ಪ್ರತಿಕ್ರಿಯಿಸಿದ್ದ, ಇಮ್ರಾನ್ ಖಾನ್ ಅವರ ಆಪ್ತ ಸಹಾಯಕಿ ಮತ್ತು ಮಾನವ ಹಕ್ಕುಗಳ ಸಚಿವೆ ಶಿರೀನ್ ಮಜಾರಿ ಅವರು, ಎಲ್ಲಾ ಇಸಿಸಿ ನಿರ್ಧಾರಗಳನ್ನು ಕ್ಯಾಬಿನೆಟ್ ಅನುಮೋದಿಸಬೇಕಾಗಿದೆ ಮತ್ತು ಆಗ ಮಾತ್ರ ಅವುಗಳನ್ನು ಸರ್ಕಾರದ ಅನುಮೋದನೆ ಎಂದು ಹೇಳಬಹುದು ಎಂದು ಹೇಳಿದ್ದರು.

ಇದನ್ನೂ ಓದಿ: ಸಿಂಗೂರು, ನಂದಿಗ್ರಾಮ ಚಳವಳಿಯ ಮುಂಚೂಣಿಯಲ್ಲಿದ್ದ SUCI ಈ ಚುನಾವಣೆಯಲ್ಲೇನು ಮಾಡುತ್ತಿದೆ?

“ಇಸಿಸಿಯ ಎಲ್ಲಾ ನಿರ್ಧಾರಗಳನ್ನು ಕ್ಯಾಬಿನೆಟ್ ಅನುಮೋದಿಸಬೇಕಾಗಿದೆ. ಆಗ ಮಾತ್ರ ಅವುಗಳನ್ನು ಸರ್ಕಾರದಿಂದ ಅನುಮೋದಿಸಲಾಗಿದೆ ಎಂದು ಹೇಳಬಹುದು. ಆದ್ದರಿಂದ ಇಂದು ಕ್ಯಾಬಿನೆಟ್‌‌ನಲ್ಲಿ ಭಾರತದೊಂದಿಗೆ ವ್ಯಾಪಾರ ಸೇರಿದಂತೆ ಇಸಿಸಿ ನಿರ್ಧಾರಗಳ ಬಗ್ಗೆ ಚರ್ಚೆ ನಡೆಯಲಿದೆ. ನಂತರ ಸರ್ಕಾರ ನಿರ್ಧಾರ ತೆಗೆದುಕೊಳ್ಳುತ್ತದೆ. ಮಾಧ್ಯಮಗಳು ಈ ಬಗ್ಗೆ ಕನಿಷ್ಠ ತಿಳಿದಿರಬೇಕು” ಎಂದು ಶಿರಿನ್ ಮಜಾರಿ ಬೆಳಿಗ್ಗೆ ತಿಳಿಸಿದ್ದರು.

ಸಂಜೆ ಟ್ವೀಟ್ ಮಾಡಿ, “ಭಾರತದೊಂದಿಗೆ ಯಾವುದೇ ವ್ಯಾಪಾರವಿಲ್ಲ ಎಂದು ಇಂದು ಕ್ಯಾಬಿನೆಟ್ ಸ್ಪಷ್ಟವಾಗಿ ಹೇಳಿದೆ. 5 ಆಗಸ್ಟ್ 2019 ರಂದು ಜಮ್ಮುಕಾಶ್ಮೀರದಲ್ಲಿ ಹೇರಲ್ಪಟ್ಟ ಕಾನೂನುಬಾಹಿರ ಕ್ರಮಗಳನ್ನು ಹಿಂಪಡೆಯುವರೆಗೆ ಭಾರತದೊಂದಿಗೆ ಯಾವುದೇ ಸಂಬಂಧವನ್ನು ಸಾಮಾನ್ಯೀಕರಿಸಲಾಗುವುದಿಲ್ಲ ಎಂದು ಪ್ರಧಾನಿ ಸ್ಪಷ್ಟಪಡಿಸಿದ್ದಾರೆ” ಎಂದು ಕಾಶ್ಮೀರದ ಬಗ್ಗೆ ಬಿಗಿ ನಿಲುವಿಗೆ ಹೆಸರುವಾಸಿಯಾದ ಶಿರಿನ್ ಮಜಾರಿ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ನರಗುಂದ: ದಲಿತ ಬಾಲಕಿಯ ಸುಟ್ಟ ಮೃತದೇಹ ಪತ್ತೆ – ಅತ್ಯಾಚಾರ, ಕೊಲೆ ಆರೋಪ

ಭಾರತದಿಂದ ಹತ್ತಿ ಮತ್ತು ಸಕ್ಕರೆಯನ್ನು ಆಮದು ಮಾಡಿಕೊಳ್ಳುವುದಾಗಿ ಅಜರ್ ಬುಧವಾರ ಪ್ರಕಟಿಸಿದ್ದು, ದ್ವಿಪಕ್ಷೀಯ ವ್ಯಾಪಾರ ಸಂಬಂಧಗಳು ಭಾಗಶಃ ಪುನ ಪ್ರಾರಂಭವಾಗುತ್ತದೆ ಎಂಬ ಭರವಸೆಯನ್ನು ಹುಟ್ಟುಹಾಕಿತ್ತು. ಭಾರತವು 2019 ರ ಆಗಸ್ಟ್ 5 ರಂದು ಜಮ್ಮು ಕಾಶ್ಮೀರದ ವಿಶೇಷ ಸ್ಥಾನಮಾನವನ್ನು ಹಿಂತೆಗೆದುಕೊಳ್ಳುವುದರೊಂದಿಗೆ ಈ ವ್ಯಾಪಾರ ಸಂಬಂಧವು ಸ್ಥಗಿತಗೊಂಡಿತ್ತು.

ಭಾರತವು ವಿಶ್ವದ ಅತಿದೊಡ್ಡ ಹತ್ತಿ ಉತ್ಪಾದಕ ಮತ್ತು ಎರಡನೇ ಅತಿದೊಡ್ಡ ಸಕ್ಕರೆ ಉತ್ಪಾದಕ ದೇಶವಾಗಿದೆ.

ಕೊರೊನಾ ಸಾಂಕ್ರಾಮಿಕದ ಮಧ್ಯೆ ಭಾರತದಿಂದ ಔಷಧಗಳು ಮತ್ತು ಅಗತ್ಯ ಔಷಧಿಗಳ ಕಚ್ಚಾ ವಸ್ತುಗಳನ್ನು ಆಮದು ಮಾಡಿಕೊಳ್ಳುವ ನಿಷೇಧವನ್ನು 2020 ರ ಮೇ ತಿಂಗಳಲ್ಲಿ ಪಾಕಿಸ್ತಾನ ತೆಗೆದುಹಾಕಿತ್ತು.

2019 ರ ಆಗಸ್ಟ್‌ನಲ್ಲಿ ಜಮ್ಮು ಕಾಶ್ಮೀರದ ವಿಶೇಷ ಸ್ಥಾನಮಾನವನ್ನು ಹಿಂತೆಗೆದುಕೊಳ್ಳುವ ಭಾರತದ ಕ್ರಮವು ಪಾಕಿಸ್ತಾನಕ್ಕೆ ಕೋಪವನ್ನುಂಟುಮಾಡಿತ್ತು. ಇದರೊಂದಿಗೆ ಭಾರತದೊಂದಿಗೆ ರಾಜತಾಂತ್ರಿಕ ಸಂಬಂಧವು ಕುಸಿದಿದ್ದು, ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನರ್‌ನನ್ನು ವಾಪಾಸ್ ಕಳುಹಿಸಿತ್ತು. ಪಾಕಿಸ್ತಾನವು ಭಾರತದೊಂದಿಗಿನ ಎಲ್ಲಾ ವಾಯು ಮತ್ತು ಭೂ ಸಂಪರ್ಕಗಳನ್ನು ಕಿತ್ತುಹಾಕಿ, ವ್ಯಾಪಾರ ಮತ್ತು ರೈಲ್ವೆ ಸೇವೆಗಳನ್ನು ಸ್ಥಗಿತಗೊಳಿಸಿತ್ತು.

ಇದನ್ನೂ ಓದಿ: ಅವಹೇಳನಕಾರಿ ಹೇಳಿಕೆ: ಪ್ರಚಾರದಿಂದ ಎ ರಾಜಾಗೆ 48 ಗಂಟೆಗಳ ನಿಷೇಧ ಹೇರಿದ ಚುನಾವಣಾ ಆಯೋಗ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗೋಮಾಂಸ ಸಾಗಣೆ ಆರೋಪದ ಮೇಲೆ ವಾಹನ ಮುಟ್ಟುಗೋಲು: ಉತ್ತರ ಪ್ರದೇಶ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್

ಗೋಮಾಂಸ ಸಾಗಣೆ ಮಾಡುತ್ತಿದ್ದಾರೆ ಎಂದು ಕೇವಲ ಅನುಮಾನದ ಮೇಲೆ ವ್ಯಕ್ತಿಯ ವಿರುದ್ಧ ಕ್ರಮ ಕೈಗೊಳ್ಳುವುದು ಕಾನೂನುಬಾಹಿರ ಎಂದು ಅಲಹಾಬಾದ್ ಹೈಕೋರ್ಟ್ ಅಭಿಪ್ರಾಯಪಟ್ಟಿದ್ದು, ಅಂತಹ ಯಾವುದೇ ಕ್ರಮ ತೆಗೆದುಕೊಳ್ಳುವ ಮೊದಲು ವೈಜ್ಞಾನಿಕ ದೃಢೀಕರಣ ಅಗತ್ಯ...

ಎಕ್ಸಿಟ್‌ ಪೋಲ್ಸ್‌ಗಳು ‘ಹಣ-ಒತ್ತಡ’ದಿಂದ ಕೂಡಿವೆ; ಟಿಎಂಸಿ 226 ಸ್ಥಾನಗಳನ್ನು ಮೀರಲಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದಲ್ಲಿ ಎರಡನೇ ಹಂತದ ಮತದಾನದ ನಂತರ ಇತ್ತೀಚಿನ ಚುನಾವಣೋತ್ತರ ಸಮೀಕ್ಷೆಗಳ ವಿಶ್ವಾಸಾರ್ಹತೆಯನ್ನು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬಲವಾಗಿ ತಳ್ಳಿಹಾಕಿದ್ದಾರೆ. ಅವರ ಪಕ್ಷವಾದ ತೃಣಮೂಲ ಕಾಂಗ್ರೆಸ್ (ಟಿಎಂಸಿ) 294 ಸದಸ್ಯರ ವಿಧಾನಸಭೆಯಲ್ಲಿ 226...

ಗುಜರಾತ್‌| ರಾಮ ಮಂದಿರ ಕಾರ್ಯಕ್ರಮದಲ್ಲಿ ದಲಿತರಿಗೆ ಪ್ರತ್ಯೇಕ ಊಟದ ವ್ಯವಸ್ಥೆ; ಅಸ್ಪೃಶ್ಯತೆ ಆಚರಣೆ ಆರೋಪ

ಗುಜರಾತ್‌ನ ಜುನಾಗಢ್ ಜಿಲ್ಲೆಯಲ್ಲಿ ಜಾತಿ ತಾರತಮ್ಯದ ಆರೋಪ ಹೊರಿಸಲಾಗಿದ್ದು, ಧಾರ್ಮಿಕ ಕಾರ್ಯಕ್ರಮದ ಸಂದರ್ಭದಲ್ಲಿ ದೇವಾಲಯದ ಆಯೋಜಕರು ಅಸ್ಪೃಶ್ಯತೆ ಆಚರಿಸುತ್ತಿದ್ದಾರೆ ಎಂದು ದಲಿತ ಸಮುದಾಯದ ಸದಸ್ಯರು ಆರೋಪಿಸಿದ್ದಾರೆ. ಭುಟ್ಡಿ ಗ್ರಾಮದ ನಿವಾಸಿ 25 ವರ್ಷದ ಅಜಯ್...

ಕೋಗಿಲು ಬಡಾವಣೆ ಮನೆಗಳ ನೆಲಸಮ: ಹದಿನೈದು ದಿನಗಳೊಳಗೆ ಪುನರ್ವಸತಿ ಕಲ್ಪಿಸದಿದ್ದರೆ ತೀವ್ರ ಹೋರಾಟದ ಎಚ್ಚರಿಕೆ

ಬೆಂಗಳೂರು ಉತ್ತರ ತಾಲ್ಲೂಕಿನ ಯಲಹಂಕ ಪ್ರದೇಶದ ಕೋಗಿಲು ಲೇಔಟ್‌ನ ಫಕೀರ್ ಕಾಲೋನಿ ಮತ್ತು ಮಹಾನಾಯಕ ಅಂಬೇಡ್ಕರ್ ನಗರ (ವಾಸಿಂ ಲೇಔಟ್‌) ಪ್ರದೇಶದ ಬಡ ನಿವಾಸಿಗಳ ಮನೆಗಳನ್ನು 2025 ಡಿಸೆಂಬರ್ 20ರಂದು ಬೆಳಿಗ್ಗೆ ಸುಮಾರು...

ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟ 95.20 ರೂ.ಗೆ ಕುಸಿತ ಕಂಡ ಭಾರತೀಯ ರೂಪಾಯಿ ಮೌಲ್ಯ 

ನವದೆಹಲಿ: ಏಪ್ರಿಲ್ 30ರಂದು ಆರಂಭಿಕ ವಹಿವಾಟಿನಲ್ಲಿ ಭಾರತೀಯ ರೂಪಾಯಿ ಮೌಲ್ಯವು ಅಮೆರಿಕನ್ ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟವಾದ 95.07 ಕ್ಕೆ ಕುಸಿದಿದೆ. ಕರೆನ್ಸಿ 0.4% ಕುಸಿತದೊಂದಿಗೆ 95.2325 ಕ್ಕೆ ಇಳಿದಿದೆ. ಇದು ಮಾರ್ಚ್...

ತಮಿಳುನಾಡು| ದಲಿತ ಯುವಕನ ಶವ ಪತ್ತೆ; ‘ಜಾತಿ ಕಾರಣಕ್ಕೆ ಹತ್ಯೆಯಾಗಿದೆ’ ಎಂದು ಕುಟುಂಬದ ಆರೋಪ

ತಮಿಳುನಾಡಿನ ಪುದುಕ್ಕೊಟ್ಟೈ ಜಿಲ್ಲೆಯ ಕ್ವಾರಿ ಕೆರೆಯ ಬಳಿ 20 ವರ್ಷದ ದಲಿತ ಯುವಕನ ಶವ ಪತ್ತೆಯಾಗಿದ್ದು, ಹಿಂದುಳಿದ ವರ್ಗದ ಯುವತಿಯೊಂದಿಗಿನ ಸಂಬಂಧದಿಂದಾಗಿ ಆತನನ್ನು ಕೊಲ್ಲಲಾಗಿದೆ ಎಂದು ಆತನ ಕುಟುಂಬ ಆರೋಪಿಸಿದೆ. ಆದರೆ, ಈ...

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...