Homeಅಂತರಾಷ್ಟ್ರೀಯಭಾರತದಿಂದ ಹತ್ತಿ ಮತ್ತು ಸಕ್ಕರೆ ಆಮದು ಪ್ರಸ್ತಾಪವನ್ನು ತಿರಸ್ಕರಿಸಿದ ಪಾಕಿಸ್ತಾನ

ಭಾರತದಿಂದ ಹತ್ತಿ ಮತ್ತು ಸಕ್ಕರೆ ಆಮದು ಪ್ರಸ್ತಾಪವನ್ನು ತಿರಸ್ಕರಿಸಿದ ಪಾಕಿಸ್ತಾನ

- Advertisement -
- Advertisement -

ಭಾರತದಿಂದ ಹತ್ತಿ ಮತ್ತು ಸಕ್ಕರೆಯನ್ನು ಆಮದು ಮಾಡಿಕೊಳ್ಳುವ ಆರ್ಥಿಕ ಸಮನ್ವಯ ಸಮಿತಿಯ (ಇಸಿಸಿ) ಪ್ರಸ್ತಾವನೆಯನ್ನು ಪಾಕಿಸ್ತಾನದ ಕ್ಯಾಬಿನೆಟ್ ಗುರುವಾರ ತಿರಸ್ಕರಿಸಿದ್ದು, ಭಾರತದೊಂದಿಗೆ ಯಾವುದೇ ವ್ಯಾಪಾರವಿಲ್ಲ ಎಂದು ಇಂದು ಕ್ಯಾಬಿನೆಟ್ ಸ್ಪಷ್ಟವಾಗಿ ಹೇಳಿದೆ.

ಪಾಕಿಸ್ತಾನದ ಹೊಸ ಹಣಕಾಸು ಸಚಿವ ಹಮ್ಮದ್ ಅಝರ್ ಅವರು ಅಧ್ಯಕ್ಷತೆ ವಹಿಸಿದ್ದ ಇಸಿಸಿ ಸಭೆಯಲ್ಲಿ ಭಾರತದಿಂದ ಹತ್ತಿ ಮತ್ತು ಸಕ್ಕರೆ ಆಮದಿನ ಮೇಲಿನ ಎರಡು ವರ್ಷಗಳ ಹಳೆಯ ನಿಷೇಧವನ್ನು ತೆಗೆದುಹಾಕುವುದಾಗಿ ಬುಧವಾರ ಘೋಷಿಸಲಾಗಿತ್ತು.

ಈ ಬಗ್ಗೆ ಪ್ರತಿಕ್ರಿಯಿಸಿದ್ದ, ಇಮ್ರಾನ್ ಖಾನ್ ಅವರ ಆಪ್ತ ಸಹಾಯಕಿ ಮತ್ತು ಮಾನವ ಹಕ್ಕುಗಳ ಸಚಿವೆ ಶಿರೀನ್ ಮಜಾರಿ ಅವರು, ಎಲ್ಲಾ ಇಸಿಸಿ ನಿರ್ಧಾರಗಳನ್ನು ಕ್ಯಾಬಿನೆಟ್ ಅನುಮೋದಿಸಬೇಕಾಗಿದೆ ಮತ್ತು ಆಗ ಮಾತ್ರ ಅವುಗಳನ್ನು ಸರ್ಕಾರದ ಅನುಮೋದನೆ ಎಂದು ಹೇಳಬಹುದು ಎಂದು ಹೇಳಿದ್ದರು.

ಇದನ್ನೂ ಓದಿ: ಸಿಂಗೂರು, ನಂದಿಗ್ರಾಮ ಚಳವಳಿಯ ಮುಂಚೂಣಿಯಲ್ಲಿದ್ದ SUCI ಈ ಚುನಾವಣೆಯಲ್ಲೇನು ಮಾಡುತ್ತಿದೆ?

“ಇಸಿಸಿಯ ಎಲ್ಲಾ ನಿರ್ಧಾರಗಳನ್ನು ಕ್ಯಾಬಿನೆಟ್ ಅನುಮೋದಿಸಬೇಕಾಗಿದೆ. ಆಗ ಮಾತ್ರ ಅವುಗಳನ್ನು ಸರ್ಕಾರದಿಂದ ಅನುಮೋದಿಸಲಾಗಿದೆ ಎಂದು ಹೇಳಬಹುದು. ಆದ್ದರಿಂದ ಇಂದು ಕ್ಯಾಬಿನೆಟ್‌‌ನಲ್ಲಿ ಭಾರತದೊಂದಿಗೆ ವ್ಯಾಪಾರ ಸೇರಿದಂತೆ ಇಸಿಸಿ ನಿರ್ಧಾರಗಳ ಬಗ್ಗೆ ಚರ್ಚೆ ನಡೆಯಲಿದೆ. ನಂತರ ಸರ್ಕಾರ ನಿರ್ಧಾರ ತೆಗೆದುಕೊಳ್ಳುತ್ತದೆ. ಮಾಧ್ಯಮಗಳು ಈ ಬಗ್ಗೆ ಕನಿಷ್ಠ ತಿಳಿದಿರಬೇಕು” ಎಂದು ಶಿರಿನ್ ಮಜಾರಿ ಬೆಳಿಗ್ಗೆ ತಿಳಿಸಿದ್ದರು.

ಸಂಜೆ ಟ್ವೀಟ್ ಮಾಡಿ, “ಭಾರತದೊಂದಿಗೆ ಯಾವುದೇ ವ್ಯಾಪಾರವಿಲ್ಲ ಎಂದು ಇಂದು ಕ್ಯಾಬಿನೆಟ್ ಸ್ಪಷ್ಟವಾಗಿ ಹೇಳಿದೆ. 5 ಆಗಸ್ಟ್ 2019 ರಂದು ಜಮ್ಮುಕಾಶ್ಮೀರದಲ್ಲಿ ಹೇರಲ್ಪಟ್ಟ ಕಾನೂನುಬಾಹಿರ ಕ್ರಮಗಳನ್ನು ಹಿಂಪಡೆಯುವರೆಗೆ ಭಾರತದೊಂದಿಗೆ ಯಾವುದೇ ಸಂಬಂಧವನ್ನು ಸಾಮಾನ್ಯೀಕರಿಸಲಾಗುವುದಿಲ್ಲ ಎಂದು ಪ್ರಧಾನಿ ಸ್ಪಷ್ಟಪಡಿಸಿದ್ದಾರೆ” ಎಂದು ಕಾಶ್ಮೀರದ ಬಗ್ಗೆ ಬಿಗಿ ನಿಲುವಿಗೆ ಹೆಸರುವಾಸಿಯಾದ ಶಿರಿನ್ ಮಜಾರಿ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ನರಗುಂದ: ದಲಿತ ಬಾಲಕಿಯ ಸುಟ್ಟ ಮೃತದೇಹ ಪತ್ತೆ – ಅತ್ಯಾಚಾರ, ಕೊಲೆ ಆರೋಪ

ಭಾರತದಿಂದ ಹತ್ತಿ ಮತ್ತು ಸಕ್ಕರೆಯನ್ನು ಆಮದು ಮಾಡಿಕೊಳ್ಳುವುದಾಗಿ ಅಜರ್ ಬುಧವಾರ ಪ್ರಕಟಿಸಿದ್ದು, ದ್ವಿಪಕ್ಷೀಯ ವ್ಯಾಪಾರ ಸಂಬಂಧಗಳು ಭಾಗಶಃ ಪುನ ಪ್ರಾರಂಭವಾಗುತ್ತದೆ ಎಂಬ ಭರವಸೆಯನ್ನು ಹುಟ್ಟುಹಾಕಿತ್ತು. ಭಾರತವು 2019 ರ ಆಗಸ್ಟ್ 5 ರಂದು ಜಮ್ಮು ಕಾಶ್ಮೀರದ ವಿಶೇಷ ಸ್ಥಾನಮಾನವನ್ನು ಹಿಂತೆಗೆದುಕೊಳ್ಳುವುದರೊಂದಿಗೆ ಈ ವ್ಯಾಪಾರ ಸಂಬಂಧವು ಸ್ಥಗಿತಗೊಂಡಿತ್ತು.

ಭಾರತವು ವಿಶ್ವದ ಅತಿದೊಡ್ಡ ಹತ್ತಿ ಉತ್ಪಾದಕ ಮತ್ತು ಎರಡನೇ ಅತಿದೊಡ್ಡ ಸಕ್ಕರೆ ಉತ್ಪಾದಕ ದೇಶವಾಗಿದೆ.

ಕೊರೊನಾ ಸಾಂಕ್ರಾಮಿಕದ ಮಧ್ಯೆ ಭಾರತದಿಂದ ಔಷಧಗಳು ಮತ್ತು ಅಗತ್ಯ ಔಷಧಿಗಳ ಕಚ್ಚಾ ವಸ್ತುಗಳನ್ನು ಆಮದು ಮಾಡಿಕೊಳ್ಳುವ ನಿಷೇಧವನ್ನು 2020 ರ ಮೇ ತಿಂಗಳಲ್ಲಿ ಪಾಕಿಸ್ತಾನ ತೆಗೆದುಹಾಕಿತ್ತು.

2019 ರ ಆಗಸ್ಟ್‌ನಲ್ಲಿ ಜಮ್ಮು ಕಾಶ್ಮೀರದ ವಿಶೇಷ ಸ್ಥಾನಮಾನವನ್ನು ಹಿಂತೆಗೆದುಕೊಳ್ಳುವ ಭಾರತದ ಕ್ರಮವು ಪಾಕಿಸ್ತಾನಕ್ಕೆ ಕೋಪವನ್ನುಂಟುಮಾಡಿತ್ತು. ಇದರೊಂದಿಗೆ ಭಾರತದೊಂದಿಗೆ ರಾಜತಾಂತ್ರಿಕ ಸಂಬಂಧವು ಕುಸಿದಿದ್ದು, ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನರ್‌ನನ್ನು ವಾಪಾಸ್ ಕಳುಹಿಸಿತ್ತು. ಪಾಕಿಸ್ತಾನವು ಭಾರತದೊಂದಿಗಿನ ಎಲ್ಲಾ ವಾಯು ಮತ್ತು ಭೂ ಸಂಪರ್ಕಗಳನ್ನು ಕಿತ್ತುಹಾಕಿ, ವ್ಯಾಪಾರ ಮತ್ತು ರೈಲ್ವೆ ಸೇವೆಗಳನ್ನು ಸ್ಥಗಿತಗೊಳಿಸಿತ್ತು.

ಇದನ್ನೂ ಓದಿ: ಅವಹೇಳನಕಾರಿ ಹೇಳಿಕೆ: ಪ್ರಚಾರದಿಂದ ಎ ರಾಜಾಗೆ 48 ಗಂಟೆಗಳ ನಿಷೇಧ ಹೇರಿದ ಚುನಾವಣಾ ಆಯೋಗ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ ಎಸ್‌ಐಆರ್ ಗಡುವು ವಿಸ್ತರಿಸಲು ಸುಪ್ರೀಂ ಕೋರ್ಟ್ ನಿರ್ದೇಶನ

ಪಶ್ಚಿಮ ಬಂಗಾಳದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಸೋಮವಾರ (ಫೆ.9) ಹಲವಾರು ನಿರ್ದೇಶನಗಳನ್ನು ನೀಡಿದೆ. ಚುನಾವಣಾ ಆಯೋಗವು ನಿಯೋಜಿಸಿರುವ ಮೈಕ್ರೋ-ಅಬ್ಸರ್ವರ್‌ಗಳ (ಸೂಕ್ಷ್ಮ ವೀಕ್ಷಕರು) ಬದಲಿಗೆ ಗ್ರೂಪ್...

ಮುಸ್ಲಿಮರಿಗೆ ಗುಂಡಿಕ್ಕುವಂತೆ ವಿಡಿಯೋ ಹಂಚಿಕೆ: ಅಸ್ಸಾಂ ಸಿಎಂ ವಿರುದ್ಧ ಓವೈಸಿ ದೂರು: ದ್ವೇಷ ಭಾಷಣ ಆದೇಶ ಉಲ್ಲೇಖ 

ಅಸ್ಸಾಂ ಬಿಜೆಪಿ ಘಟಕದ ಅಧಿಕೃತ 'ಎಕ್ಸ್' ಹ್ಯಾಂಡಲ್‌ನಲ್ಲಿ ಪೋಸ್ಟ್ ಮಾಡಲಾದ ಮತ್ತು ಈಗ ಅಳಿಸಲಾದ ವೀಡಿಯೊದಲ್ಲಿ, ಮುಸ್ಲಿಮರ ಮೇಲೆ ಸಾಂಕೇತಿಕವಾಗಿ ಗುಂಡು ಹಾರಿಸುತ್ತಿರುವುದನ್ನು ತೋರಿಸಲಾಗಿದೆ ಎಂದು ಆರೋಪಿಸಿ ಹಿಮಂತ ಬಿಸ್ವಾ ಶರ್ಮಾ ವಿರುದ್ಧ...

ನರವಾಣೆ ಪುಸ್ತಕಕ್ಕೆ ಹೆದರಿ ಪ್ರಧಾನಿ ಲೋಕಸಭೆಗೆ ಬರುತ್ತಿಲ್ಲ : ರಾಹುಲ್ ಗಾಂಧಿ

ಪ್ರತಿಪಕ್ಷಗಳು ಎತ್ತಿರುವ ವಿಷಯಗಳಿಂದ, ವಿಶೇಷವಾಗಿ ಮಾಜಿ ಸೇನಾ ಮುಖ್ಯಸ್ಥ ಎಂ.ಎಂ ನರವಾಣೆ ಅವರ ಪುಸ್ತಕದ ವಿಚಾರಕ್ಕೆ ಪ್ರಧಾನಿ ನರೇಂದ್ರ ಮೋದಿ ಭಯಗೊಂಡಿದ್ದಾರೆ. ಹಾಗಾಗಿ, ಅವರು ರಾಷ್ಟ್ರಪತಿಯ ಭಾಷಣದ ವಂದನಾ ನಿರ್ಣಯದ ಮೇಲಿನ ಚರ್ಚೆಗೆ...

ಡಿಜಿಟಲ್ ‘ಡಕಾಯಿತಿ’: 54,000 ಕೋಟಿಗೂ ಹೆಚ್ಚಿನ ಹಣ ವಂಚನೆ: ಎಸ್‌ಒಪಿ ರಚಿಸಲು ಕೇಂದ್ರಕ್ಕೆ ಸೂಚನೆ ನೀಡಿದ ಸುಪ್ರೀಂ

ನವದೆಹಲಿ: ಡಿಜಿಟಲ್ ವಂಚನೆಯಿಂದ 54,000 ಕೋಟಿ ರೂ.ಗಳಿಗೂ ಹೆಚ್ಚು ಹಣವನ್ನು ವಂಚಿಸುವುದು ಸಂಪೂರ್ಣ "ದರೋಡೆ ಅಥವಾ ಡಕಾಯಿತಿ" ಎಂದು ಸುಪ್ರೀಂ ಕೋರ್ಟ್ ಸೋಮವಾರ ಬಣ್ಣಿಸಿದೆ ಮತ್ತು ಅಂತಹ ಪ್ರಕರಣಗಳನ್ನು ನಿಭಾಯಿಸಲು ಆರ್‌ಬಿಐ, ಬ್ಯಾಂಕುಗಳು...

ಪಾಕಿಸ್ತಾನ ನಂಟು : ಸಿಎಂ ಶರ್ಮಾ ಆರೋಪ ನಿರಾಧಾರ, ಸಿ-ಗ್ರೇಡ್ ಸಿನಿಮಾ ಎಂದ ಗೌರವ್ ಗೊಗೊಯ್

ತಮಗೂ ಪಾಕಿಸ್ತಾನಕ್ಕೂ ಸಂಬಂಧವಿದೆ ಎಂಬ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ಅವರ ಆರೋಪಗಳನ್ನು ಅಸ್ಸಾಂ ಕಾಂಗ್ರೆಸ್ ಅಧ್ಯಕ್ಷ ಗೌರವ್ ಗೊಗೊಯ್ ತಳ್ಳಿಹಾಕಿದ್ದು, ಎಸ್‌ಐಟಿ ವರದಿಯು ಕಳೆದ ಆರು ತಿಂಗಳಿನಿಂದ ಮುಖ್ಯಮಂತ್ರಿ ಬಳಿಯೇ ಇದೆ....

ಪಂಜಾಬ್: ತರಗತಿಯೊಳಗೆ ವಿದ್ಯಾರ್ಥಿನಿಯನ್ನು ಕೊಂದು, ತಾನು ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾದ ಕಾನೂನು ವಿದ್ಯಾರ್ಥಿ

ಚಂಡೀಗಢ: ಪಂಜಾಬ್‌ನ ತರ್ನ್ ತರಣ್ ಜಿಲ್ಲೆಯಲ್ಲಿ ಕಾನೂನು ವಿದ್ಯಾರ್ಥಿಯೊಬ್ಬ ಶಾಲಾ ಕೋಣೆಯೊಳಗೆ ವಿದ್ಯಾರ್ಥಿನಿಯ ತಲೆಗೆ ಗುಂಡು ಹಾರಿಸಿ ಕೊಂದ ಘಟನೆ ಸೋಮವಾರ ನಡೆದಿದೆ. ಸಹಪಾಠಿಗಳು ಭಯಭೀತರಾಗಿ ನೋಡುತ್ತಿದ್ದ ವೇಳೆ ಈ ಘಟನೆ ನಡೆದಿದೆ. ವಿದ್ಯಾರ್ಥಿನಿಯನ್ನು...

ಅಸ್ಸಾಂ ಸಿಎಂ ಮುಸ್ಲಿಮರ ವಿರುದ್ಧ ನರಮೇಧವನ್ನು ಪ್ರಚೋದಿಸುತ್ತಿದ್ದಾರೆ : ಗೌರವ್ ಗೊಗೊಯ್

ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ಅವರು ಮುಸ್ಲಿಮರ ವಿರುದ್ದ ದ್ವೇಷ ಹರಡುತ್ತಿದ್ದಾರೆ, ಅವರ ಜನಾಂಗೀಯ ಹತ್ಯೆಗೆ ಪ್ರಚೋದಿಸುತ್ತಿದ್ದಾರೆ ಎಂದು ಅಸ್ಸಾಂ ರಾಜ್ಯ ಕಾಂಗ್ರೆಸ್‌ ಘಟಕದ ಅಧ್ಯಕ್ಷ ಹಾಗೂ ಸಂಸದ ಗೌರವ್ ಗೊಗೊಯ್ ಹೇಳಿದ್ದಾರೆ. ಅಸ್ಸಾಂ...

‘ಎಂಡಿಎಂಎ ಡ್ರಗ್ಸ್ ಕೇಂದ್ರವಾಗಿ ಮಾರ್ಪಟ್ಟ ಮಧ್ಯಪ್ರದೇಶ-ರಾಜಸ್ಥಾನ ಗಡಿ’: 13ಕೋಟಿ ಮೌಲ್ಯದ ಡ್ರಗ್ಸ್ ವಶಕ್ಕೆ ಪಡೆದ ಪೊಲೀಸರು. 

ಭೋಪಾಲ್: ದೇಶದ ಅಫೀಮು ಕೃಷಿ ಮತ್ತು ಕಳ್ಳಸಾಗಣೆ ಮಾರ್ಗವಾಗಿ ದೀರ್ಘಕಾಲದಿಂದ ಕುಖ್ಯಾತಿ ಗಳಿಸಿರುವ ಪಶ್ಚಿಮ ಮಧ್ಯಪ್ರದೇಶ ಮತ್ತು ಪಕ್ಕದ ಆಗ್ನೇಯ ರಾಜಸ್ಥಾನದ ಜಿಲ್ಲೆಗಳು ಈಗ MDMA ಸಂಶ್ಲೇಷಿತ ಡ್ರಗ್ಸ್ ಅಕ್ರಮ ಉತ್ಪಾದನೆ ಮತ್ತು...

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಲು ಮುಂದಾದ ವಿರೋಧ ಪಕ್ಷಗಳು: ವರದಿ

ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರ ವಿರುದ್ಧ ವಿರೋಧ ಪಕ್ಷಗಳು ಅವಿಶ್ವಾಸ ನಿರ್ಣಯ ಮಂಡಿಸುವ ಸಾಧ್ಯತೆಯಿದೆ ಎಂದು ವರದಿಯಾಗಿದೆ. ವಿಪಕ್ಷ ಸಂಸದರು ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ 'ಅನಿರೀಕ್ಷಿತ ಕೃತ್ಯ' ಎಸಗಲು ಸಂಚು...

ಮೆಟಾ-ವಾಟ್ಸಾಪ್ ಗೌಪ್ಯತೆ ನೀತಿ ಪ್ರಕರಣ: ಸುಪ್ರೀಂ ಕೋರ್ಟ್ ವಿಚಾರಣೆ ಫೆಬ್ರವರಿ 23ಕ್ಕೆ ಮುಂದೂಡಿಕೆ 

ನವದೆಹಲಿ: ಗೌಪ್ಯತೆ ನೀತಿಯ ಮೇಲೆ 213.14 ಕೋಟಿ ರೂ. ದಂಡ ವಿಧಿಸಿದ ಭಾರತೀಯ ಸ್ಪರ್ಧಾ ಆಯೋಗದ (ಸಿಸಿಐ) ಆದೇಶದ ವಿರುದ್ಧ ಮೆಟಾ ಪ್ಲಾಟ್‌ಫಾರ್ಮ್ಸ್ ಇಂಕ್ ಮತ್ತು ವಾಟ್ಸಾಪ್ ಸಲ್ಲಿಸಿದ ಅರ್ಜಿಗಳನ್ನು ಸುಪ್ರೀಂ ಕೋರ್ಟ್...