Homeಅಂತರಾಷ್ಟ್ರೀಯಭಾರತದಿಂದ ಹತ್ತಿ ಮತ್ತು ಸಕ್ಕರೆ ಆಮದು ಪ್ರಸ್ತಾಪವನ್ನು ತಿರಸ್ಕರಿಸಿದ ಪಾಕಿಸ್ತಾನ

ಭಾರತದಿಂದ ಹತ್ತಿ ಮತ್ತು ಸಕ್ಕರೆ ಆಮದು ಪ್ರಸ್ತಾಪವನ್ನು ತಿರಸ್ಕರಿಸಿದ ಪಾಕಿಸ್ತಾನ

- Advertisement -
- Advertisement -

ಭಾರತದಿಂದ ಹತ್ತಿ ಮತ್ತು ಸಕ್ಕರೆಯನ್ನು ಆಮದು ಮಾಡಿಕೊಳ್ಳುವ ಆರ್ಥಿಕ ಸಮನ್ವಯ ಸಮಿತಿಯ (ಇಸಿಸಿ) ಪ್ರಸ್ತಾವನೆಯನ್ನು ಪಾಕಿಸ್ತಾನದ ಕ್ಯಾಬಿನೆಟ್ ಗುರುವಾರ ತಿರಸ್ಕರಿಸಿದ್ದು, ಭಾರತದೊಂದಿಗೆ ಯಾವುದೇ ವ್ಯಾಪಾರವಿಲ್ಲ ಎಂದು ಇಂದು ಕ್ಯಾಬಿನೆಟ್ ಸ್ಪಷ್ಟವಾಗಿ ಹೇಳಿದೆ.

ಪಾಕಿಸ್ತಾನದ ಹೊಸ ಹಣಕಾಸು ಸಚಿವ ಹಮ್ಮದ್ ಅಝರ್ ಅವರು ಅಧ್ಯಕ್ಷತೆ ವಹಿಸಿದ್ದ ಇಸಿಸಿ ಸಭೆಯಲ್ಲಿ ಭಾರತದಿಂದ ಹತ್ತಿ ಮತ್ತು ಸಕ್ಕರೆ ಆಮದಿನ ಮೇಲಿನ ಎರಡು ವರ್ಷಗಳ ಹಳೆಯ ನಿಷೇಧವನ್ನು ತೆಗೆದುಹಾಕುವುದಾಗಿ ಬುಧವಾರ ಘೋಷಿಸಲಾಗಿತ್ತು.

ಈ ಬಗ್ಗೆ ಪ್ರತಿಕ್ರಿಯಿಸಿದ್ದ, ಇಮ್ರಾನ್ ಖಾನ್ ಅವರ ಆಪ್ತ ಸಹಾಯಕಿ ಮತ್ತು ಮಾನವ ಹಕ್ಕುಗಳ ಸಚಿವೆ ಶಿರೀನ್ ಮಜಾರಿ ಅವರು, ಎಲ್ಲಾ ಇಸಿಸಿ ನಿರ್ಧಾರಗಳನ್ನು ಕ್ಯಾಬಿನೆಟ್ ಅನುಮೋದಿಸಬೇಕಾಗಿದೆ ಮತ್ತು ಆಗ ಮಾತ್ರ ಅವುಗಳನ್ನು ಸರ್ಕಾರದ ಅನುಮೋದನೆ ಎಂದು ಹೇಳಬಹುದು ಎಂದು ಹೇಳಿದ್ದರು.

ಇದನ್ನೂ ಓದಿ: ಸಿಂಗೂರು, ನಂದಿಗ್ರಾಮ ಚಳವಳಿಯ ಮುಂಚೂಣಿಯಲ್ಲಿದ್ದ SUCI ಈ ಚುನಾವಣೆಯಲ್ಲೇನು ಮಾಡುತ್ತಿದೆ?

“ಇಸಿಸಿಯ ಎಲ್ಲಾ ನಿರ್ಧಾರಗಳನ್ನು ಕ್ಯಾಬಿನೆಟ್ ಅನುಮೋದಿಸಬೇಕಾಗಿದೆ. ಆಗ ಮಾತ್ರ ಅವುಗಳನ್ನು ಸರ್ಕಾರದಿಂದ ಅನುಮೋದಿಸಲಾಗಿದೆ ಎಂದು ಹೇಳಬಹುದು. ಆದ್ದರಿಂದ ಇಂದು ಕ್ಯಾಬಿನೆಟ್‌‌ನಲ್ಲಿ ಭಾರತದೊಂದಿಗೆ ವ್ಯಾಪಾರ ಸೇರಿದಂತೆ ಇಸಿಸಿ ನಿರ್ಧಾರಗಳ ಬಗ್ಗೆ ಚರ್ಚೆ ನಡೆಯಲಿದೆ. ನಂತರ ಸರ್ಕಾರ ನಿರ್ಧಾರ ತೆಗೆದುಕೊಳ್ಳುತ್ತದೆ. ಮಾಧ್ಯಮಗಳು ಈ ಬಗ್ಗೆ ಕನಿಷ್ಠ ತಿಳಿದಿರಬೇಕು” ಎಂದು ಶಿರಿನ್ ಮಜಾರಿ ಬೆಳಿಗ್ಗೆ ತಿಳಿಸಿದ್ದರು.

ಸಂಜೆ ಟ್ವೀಟ್ ಮಾಡಿ, “ಭಾರತದೊಂದಿಗೆ ಯಾವುದೇ ವ್ಯಾಪಾರವಿಲ್ಲ ಎಂದು ಇಂದು ಕ್ಯಾಬಿನೆಟ್ ಸ್ಪಷ್ಟವಾಗಿ ಹೇಳಿದೆ. 5 ಆಗಸ್ಟ್ 2019 ರಂದು ಜಮ್ಮುಕಾಶ್ಮೀರದಲ್ಲಿ ಹೇರಲ್ಪಟ್ಟ ಕಾನೂನುಬಾಹಿರ ಕ್ರಮಗಳನ್ನು ಹಿಂಪಡೆಯುವರೆಗೆ ಭಾರತದೊಂದಿಗೆ ಯಾವುದೇ ಸಂಬಂಧವನ್ನು ಸಾಮಾನ್ಯೀಕರಿಸಲಾಗುವುದಿಲ್ಲ ಎಂದು ಪ್ರಧಾನಿ ಸ್ಪಷ್ಟಪಡಿಸಿದ್ದಾರೆ” ಎಂದು ಕಾಶ್ಮೀರದ ಬಗ್ಗೆ ಬಿಗಿ ನಿಲುವಿಗೆ ಹೆಸರುವಾಸಿಯಾದ ಶಿರಿನ್ ಮಜಾರಿ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ನರಗುಂದ: ದಲಿತ ಬಾಲಕಿಯ ಸುಟ್ಟ ಮೃತದೇಹ ಪತ್ತೆ – ಅತ್ಯಾಚಾರ, ಕೊಲೆ ಆರೋಪ

ಭಾರತದಿಂದ ಹತ್ತಿ ಮತ್ತು ಸಕ್ಕರೆಯನ್ನು ಆಮದು ಮಾಡಿಕೊಳ್ಳುವುದಾಗಿ ಅಜರ್ ಬುಧವಾರ ಪ್ರಕಟಿಸಿದ್ದು, ದ್ವಿಪಕ್ಷೀಯ ವ್ಯಾಪಾರ ಸಂಬಂಧಗಳು ಭಾಗಶಃ ಪುನ ಪ್ರಾರಂಭವಾಗುತ್ತದೆ ಎಂಬ ಭರವಸೆಯನ್ನು ಹುಟ್ಟುಹಾಕಿತ್ತು. ಭಾರತವು 2019 ರ ಆಗಸ್ಟ್ 5 ರಂದು ಜಮ್ಮು ಕಾಶ್ಮೀರದ ವಿಶೇಷ ಸ್ಥಾನಮಾನವನ್ನು ಹಿಂತೆಗೆದುಕೊಳ್ಳುವುದರೊಂದಿಗೆ ಈ ವ್ಯಾಪಾರ ಸಂಬಂಧವು ಸ್ಥಗಿತಗೊಂಡಿತ್ತು.

ಭಾರತವು ವಿಶ್ವದ ಅತಿದೊಡ್ಡ ಹತ್ತಿ ಉತ್ಪಾದಕ ಮತ್ತು ಎರಡನೇ ಅತಿದೊಡ್ಡ ಸಕ್ಕರೆ ಉತ್ಪಾದಕ ದೇಶವಾಗಿದೆ.

ಕೊರೊನಾ ಸಾಂಕ್ರಾಮಿಕದ ಮಧ್ಯೆ ಭಾರತದಿಂದ ಔಷಧಗಳು ಮತ್ತು ಅಗತ್ಯ ಔಷಧಿಗಳ ಕಚ್ಚಾ ವಸ್ತುಗಳನ್ನು ಆಮದು ಮಾಡಿಕೊಳ್ಳುವ ನಿಷೇಧವನ್ನು 2020 ರ ಮೇ ತಿಂಗಳಲ್ಲಿ ಪಾಕಿಸ್ತಾನ ತೆಗೆದುಹಾಕಿತ್ತು.

2019 ರ ಆಗಸ್ಟ್‌ನಲ್ಲಿ ಜಮ್ಮು ಕಾಶ್ಮೀರದ ವಿಶೇಷ ಸ್ಥಾನಮಾನವನ್ನು ಹಿಂತೆಗೆದುಕೊಳ್ಳುವ ಭಾರತದ ಕ್ರಮವು ಪಾಕಿಸ್ತಾನಕ್ಕೆ ಕೋಪವನ್ನುಂಟುಮಾಡಿತ್ತು. ಇದರೊಂದಿಗೆ ಭಾರತದೊಂದಿಗೆ ರಾಜತಾಂತ್ರಿಕ ಸಂಬಂಧವು ಕುಸಿದಿದ್ದು, ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನರ್‌ನನ್ನು ವಾಪಾಸ್ ಕಳುಹಿಸಿತ್ತು. ಪಾಕಿಸ್ತಾನವು ಭಾರತದೊಂದಿಗಿನ ಎಲ್ಲಾ ವಾಯು ಮತ್ತು ಭೂ ಸಂಪರ್ಕಗಳನ್ನು ಕಿತ್ತುಹಾಕಿ, ವ್ಯಾಪಾರ ಮತ್ತು ರೈಲ್ವೆ ಸೇವೆಗಳನ್ನು ಸ್ಥಗಿತಗೊಳಿಸಿತ್ತು.

ಇದನ್ನೂ ಓದಿ: ಅವಹೇಳನಕಾರಿ ಹೇಳಿಕೆ: ಪ್ರಚಾರದಿಂದ ಎ ರಾಜಾಗೆ 48 ಗಂಟೆಗಳ ನಿಷೇಧ ಹೇರಿದ ಚುನಾವಣಾ ಆಯೋಗ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...