Homeಅಂತರಾಷ್ಟ್ರೀಯಭಾರತದಿಂದ ಹತ್ತಿ ಮತ್ತು ಸಕ್ಕರೆ ಆಮದು ಪ್ರಸ್ತಾಪವನ್ನು ತಿರಸ್ಕರಿಸಿದ ಪಾಕಿಸ್ತಾನ

ಭಾರತದಿಂದ ಹತ್ತಿ ಮತ್ತು ಸಕ್ಕರೆ ಆಮದು ಪ್ರಸ್ತಾಪವನ್ನು ತಿರಸ್ಕರಿಸಿದ ಪಾಕಿಸ್ತಾನ

- Advertisement -
- Advertisement -

ಭಾರತದಿಂದ ಹತ್ತಿ ಮತ್ತು ಸಕ್ಕರೆಯನ್ನು ಆಮದು ಮಾಡಿಕೊಳ್ಳುವ ಆರ್ಥಿಕ ಸಮನ್ವಯ ಸಮಿತಿಯ (ಇಸಿಸಿ) ಪ್ರಸ್ತಾವನೆಯನ್ನು ಪಾಕಿಸ್ತಾನದ ಕ್ಯಾಬಿನೆಟ್ ಗುರುವಾರ ತಿರಸ್ಕರಿಸಿದ್ದು, ಭಾರತದೊಂದಿಗೆ ಯಾವುದೇ ವ್ಯಾಪಾರವಿಲ್ಲ ಎಂದು ಇಂದು ಕ್ಯಾಬಿನೆಟ್ ಸ್ಪಷ್ಟವಾಗಿ ಹೇಳಿದೆ.

ಪಾಕಿಸ್ತಾನದ ಹೊಸ ಹಣಕಾಸು ಸಚಿವ ಹಮ್ಮದ್ ಅಝರ್ ಅವರು ಅಧ್ಯಕ್ಷತೆ ವಹಿಸಿದ್ದ ಇಸಿಸಿ ಸಭೆಯಲ್ಲಿ ಭಾರತದಿಂದ ಹತ್ತಿ ಮತ್ತು ಸಕ್ಕರೆ ಆಮದಿನ ಮೇಲಿನ ಎರಡು ವರ್ಷಗಳ ಹಳೆಯ ನಿಷೇಧವನ್ನು ತೆಗೆದುಹಾಕುವುದಾಗಿ ಬುಧವಾರ ಘೋಷಿಸಲಾಗಿತ್ತು.

ಈ ಬಗ್ಗೆ ಪ್ರತಿಕ್ರಿಯಿಸಿದ್ದ, ಇಮ್ರಾನ್ ಖಾನ್ ಅವರ ಆಪ್ತ ಸಹಾಯಕಿ ಮತ್ತು ಮಾನವ ಹಕ್ಕುಗಳ ಸಚಿವೆ ಶಿರೀನ್ ಮಜಾರಿ ಅವರು, ಎಲ್ಲಾ ಇಸಿಸಿ ನಿರ್ಧಾರಗಳನ್ನು ಕ್ಯಾಬಿನೆಟ್ ಅನುಮೋದಿಸಬೇಕಾಗಿದೆ ಮತ್ತು ಆಗ ಮಾತ್ರ ಅವುಗಳನ್ನು ಸರ್ಕಾರದ ಅನುಮೋದನೆ ಎಂದು ಹೇಳಬಹುದು ಎಂದು ಹೇಳಿದ್ದರು.

ಇದನ್ನೂ ಓದಿ: ಸಿಂಗೂರು, ನಂದಿಗ್ರಾಮ ಚಳವಳಿಯ ಮುಂಚೂಣಿಯಲ್ಲಿದ್ದ SUCI ಈ ಚುನಾವಣೆಯಲ್ಲೇನು ಮಾಡುತ್ತಿದೆ?

“ಇಸಿಸಿಯ ಎಲ್ಲಾ ನಿರ್ಧಾರಗಳನ್ನು ಕ್ಯಾಬಿನೆಟ್ ಅನುಮೋದಿಸಬೇಕಾಗಿದೆ. ಆಗ ಮಾತ್ರ ಅವುಗಳನ್ನು ಸರ್ಕಾರದಿಂದ ಅನುಮೋದಿಸಲಾಗಿದೆ ಎಂದು ಹೇಳಬಹುದು. ಆದ್ದರಿಂದ ಇಂದು ಕ್ಯಾಬಿನೆಟ್‌‌ನಲ್ಲಿ ಭಾರತದೊಂದಿಗೆ ವ್ಯಾಪಾರ ಸೇರಿದಂತೆ ಇಸಿಸಿ ನಿರ್ಧಾರಗಳ ಬಗ್ಗೆ ಚರ್ಚೆ ನಡೆಯಲಿದೆ. ನಂತರ ಸರ್ಕಾರ ನಿರ್ಧಾರ ತೆಗೆದುಕೊಳ್ಳುತ್ತದೆ. ಮಾಧ್ಯಮಗಳು ಈ ಬಗ್ಗೆ ಕನಿಷ್ಠ ತಿಳಿದಿರಬೇಕು” ಎಂದು ಶಿರಿನ್ ಮಜಾರಿ ಬೆಳಿಗ್ಗೆ ತಿಳಿಸಿದ್ದರು.

ಸಂಜೆ ಟ್ವೀಟ್ ಮಾಡಿ, “ಭಾರತದೊಂದಿಗೆ ಯಾವುದೇ ವ್ಯಾಪಾರವಿಲ್ಲ ಎಂದು ಇಂದು ಕ್ಯಾಬಿನೆಟ್ ಸ್ಪಷ್ಟವಾಗಿ ಹೇಳಿದೆ. 5 ಆಗಸ್ಟ್ 2019 ರಂದು ಜಮ್ಮುಕಾಶ್ಮೀರದಲ್ಲಿ ಹೇರಲ್ಪಟ್ಟ ಕಾನೂನುಬಾಹಿರ ಕ್ರಮಗಳನ್ನು ಹಿಂಪಡೆಯುವರೆಗೆ ಭಾರತದೊಂದಿಗೆ ಯಾವುದೇ ಸಂಬಂಧವನ್ನು ಸಾಮಾನ್ಯೀಕರಿಸಲಾಗುವುದಿಲ್ಲ ಎಂದು ಪ್ರಧಾನಿ ಸ್ಪಷ್ಟಪಡಿಸಿದ್ದಾರೆ” ಎಂದು ಕಾಶ್ಮೀರದ ಬಗ್ಗೆ ಬಿಗಿ ನಿಲುವಿಗೆ ಹೆಸರುವಾಸಿಯಾದ ಶಿರಿನ್ ಮಜಾರಿ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ನರಗುಂದ: ದಲಿತ ಬಾಲಕಿಯ ಸುಟ್ಟ ಮೃತದೇಹ ಪತ್ತೆ – ಅತ್ಯಾಚಾರ, ಕೊಲೆ ಆರೋಪ

ಭಾರತದಿಂದ ಹತ್ತಿ ಮತ್ತು ಸಕ್ಕರೆಯನ್ನು ಆಮದು ಮಾಡಿಕೊಳ್ಳುವುದಾಗಿ ಅಜರ್ ಬುಧವಾರ ಪ್ರಕಟಿಸಿದ್ದು, ದ್ವಿಪಕ್ಷೀಯ ವ್ಯಾಪಾರ ಸಂಬಂಧಗಳು ಭಾಗಶಃ ಪುನ ಪ್ರಾರಂಭವಾಗುತ್ತದೆ ಎಂಬ ಭರವಸೆಯನ್ನು ಹುಟ್ಟುಹಾಕಿತ್ತು. ಭಾರತವು 2019 ರ ಆಗಸ್ಟ್ 5 ರಂದು ಜಮ್ಮು ಕಾಶ್ಮೀರದ ವಿಶೇಷ ಸ್ಥಾನಮಾನವನ್ನು ಹಿಂತೆಗೆದುಕೊಳ್ಳುವುದರೊಂದಿಗೆ ಈ ವ್ಯಾಪಾರ ಸಂಬಂಧವು ಸ್ಥಗಿತಗೊಂಡಿತ್ತು.

ಭಾರತವು ವಿಶ್ವದ ಅತಿದೊಡ್ಡ ಹತ್ತಿ ಉತ್ಪಾದಕ ಮತ್ತು ಎರಡನೇ ಅತಿದೊಡ್ಡ ಸಕ್ಕರೆ ಉತ್ಪಾದಕ ದೇಶವಾಗಿದೆ.

ಕೊರೊನಾ ಸಾಂಕ್ರಾಮಿಕದ ಮಧ್ಯೆ ಭಾರತದಿಂದ ಔಷಧಗಳು ಮತ್ತು ಅಗತ್ಯ ಔಷಧಿಗಳ ಕಚ್ಚಾ ವಸ್ತುಗಳನ್ನು ಆಮದು ಮಾಡಿಕೊಳ್ಳುವ ನಿಷೇಧವನ್ನು 2020 ರ ಮೇ ತಿಂಗಳಲ್ಲಿ ಪಾಕಿಸ್ತಾನ ತೆಗೆದುಹಾಕಿತ್ತು.

2019 ರ ಆಗಸ್ಟ್‌ನಲ್ಲಿ ಜಮ್ಮು ಕಾಶ್ಮೀರದ ವಿಶೇಷ ಸ್ಥಾನಮಾನವನ್ನು ಹಿಂತೆಗೆದುಕೊಳ್ಳುವ ಭಾರತದ ಕ್ರಮವು ಪಾಕಿಸ್ತಾನಕ್ಕೆ ಕೋಪವನ್ನುಂಟುಮಾಡಿತ್ತು. ಇದರೊಂದಿಗೆ ಭಾರತದೊಂದಿಗೆ ರಾಜತಾಂತ್ರಿಕ ಸಂಬಂಧವು ಕುಸಿದಿದ್ದು, ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನರ್‌ನನ್ನು ವಾಪಾಸ್ ಕಳುಹಿಸಿತ್ತು. ಪಾಕಿಸ್ತಾನವು ಭಾರತದೊಂದಿಗಿನ ಎಲ್ಲಾ ವಾಯು ಮತ್ತು ಭೂ ಸಂಪರ್ಕಗಳನ್ನು ಕಿತ್ತುಹಾಕಿ, ವ್ಯಾಪಾರ ಮತ್ತು ರೈಲ್ವೆ ಸೇವೆಗಳನ್ನು ಸ್ಥಗಿತಗೊಳಿಸಿತ್ತು.

ಇದನ್ನೂ ಓದಿ: ಅವಹೇಳನಕಾರಿ ಹೇಳಿಕೆ: ಪ್ರಚಾರದಿಂದ ಎ ರಾಜಾಗೆ 48 ಗಂಟೆಗಳ ನಿಷೇಧ ಹೇರಿದ ಚುನಾವಣಾ ಆಯೋಗ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾರ್ಖಂಡ್‌ ಸಿಎಂಗೆ ರಾಹುಲ್ ಗಾಂಧಿ ಪತ್ರ, ಉದ್ಯೋಗಾಕಾಂಕ್ಷಿಗಳ ಬೆಂಬಲಕ್ಕೆ ಆಗ್ರಹ

ಜಾರ್ಖಂಡ್‌ನಲ್ಲಿ ರಾಜ್ಯ ಸರ್ಕಾರಿ ನೇಮಕಾತಿ ಪರೀಕ್ಷೆಗಳಲ್ಲಿ ನಡೆದಿವೆ ಎನ್ನಲಾದ ಅಕ್ರಮಗಳ ವಿರುದ್ಧ ಉದ್ಯೋಗಾಕಾಂಕ್ಷಿಗಳು ನಡೆಸುತ್ತಿರುವ ಹೋರಾಟದ ಬೆನ್ನಲ್ಲೇ, ಕಾಂಗ್ರೆಸ್ ಸಂಸದ ಹಾಗೂ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರು ಮುಖ್ಯಮಂತ್ರಿ ಹೇಮಂತ್ ಸೋರೆನ್...

“NTA ಮಾಡಿದ ತಪ್ಪಿಗೆ ವಿದ್ಯಾರ್ಥಿಗಳಿಗೆ ಶಿಕ್ಷೆ”: UGC-NET ಇಂಗ್ಲಿಷ್, ವಾಣಿಜ್ಯ ಮತ್ತು ಸಮಾಜಶಾಸ್ತ್ರ ಪತ್ರಿಕೆಗಳ ಮರುಪರೀಕ್ಷೆ ನಿರ್ಧಾರಕ್ಕೆ ದೇಶಾದ್ಯಂತ ಆಕ್ರೋಶ

ನವದೆಹಲಿ: ಕಳೆದ ಜೂನ್ ತಿಂಗಳಿನಲ್ಲಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ನಡೆಸಿದ್ದ ಯುಜಿಸಿ-ನೆಟ್ (UGC-NET) ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳಲ್ಲಿ ಸಾಲು ಸಾಲು ಗಂಭೀರ ದೋಷಗಳು ಕಂಡುಬಂದ ಹಿನ್ನೆಲೆಯಲ್ಲಿ, ಇಂಗ್ಲಿಷ್, ವಾಣಿಜ್ಯ ಮತ್ತು ಸಮಾಜಶಾಸ್ತ್ರ...

ಬಿಹಾರದ ಅಶೋಕಧಾಮ ದೇಗುಲದಲ್ಲಿ ಕಾಲ್ತುಳಿತ: ಶ್ರಾವಣ ಸೋಮವಾರದ ಪೂಜೆ ವೇಳೆ 7 ಮಹಿಳೆಯರು ಸಾವು, 12 ಕ್ಕೂ ಹೆಚ್ಚು ಜನರಿಗೆ ಗಾಯ

ಪಾಟ್ನಾ/ಲಖಿಸರಾಯ್: ಶ್ರಾವಣ ಮಾಸದ ಪವಿತ್ರ ಸೋಮವಾರದಂದು ಧಾರ್ಮಿಕ ಕೇಂದ್ರವೊಂದರಲ್ಲಿ ಸಂಭವಿಸಿದ ಭೀಕರ ಅಪಘಾತ ಇಡೀ ರಾಜ್ಯವನ್ನೇ ದಿಗ್ಭ್ರಮೆಗೊಳಿಸಿದೆ. ಬಿಹಾರದ ಲಖಿಸರಾಯ್ ಜಿಲ್ಲೆಯಲ್ಲಿರುವ ಐತಿಹಾಸಿಕ ಅಶೋಕಧಾಮ ದೇವಾಲಯದ ಆವರಣದ ಬಳಿ ಮುಂಜಾನೆ ನಡೆದ ಭೀಕರ...

ಎಲ್ಲಾ ಯೋಜನೆಗಳೂ ಗುಜರಾತ್‌ಗೇ ಏಕೆ?: ಬಿಜೆಪಿ ಕೇಂದ್ರ ನಾಯಕತ್ವ ವಿರುದ್ಧವೇ ಬಹಿರಂಗವಾಗಿ ತಿರುಗಿಬಿದ್ದ ಅಣ್ಣಾಮಲೈ!

BJP ನಾಯಕತ್ವದ ನಿರ್ಧಾರಗಳು ‘ದೆಹಲಿ ಕೇಂದ್ರಿತ’ ಹಾಗೂ ದೇಶದ ಅಭಿವೃದ್ಧಿ ಮಾದರಿಯು ‘ಗುಜರಾತ್‌ ಕೇಂದ್ರಿತ’ವಾಗುತ್ತಿದೆ ಎಂದು ತಮಿಳುನಾಡು ಬಿಜೆಪಿಯ ನಿಕಟಪೂರ್ವ ರಾಜ್ಯಾಧ್ಯಕ್ಷ ಹಾಗೂ ‘ವಿ ದಿ ಲೀಡರ್ಸ್’ ಸಂಘಟನೆಯ ಸಂಸ್ಥಾಪಕ ಕೆ. ಅಣ್ಣಾಮಲೈ...

ಜಾರ್ಖಂಡ್ ವಿದ್ಯಾರ್ಥಿಗಳ ಹೋರಾಟ; ಹೇಮಂತ್ ಸೊರೇನ್ – ರಾಹುಲ್ ಗಾಂಧಿ ಪ್ರತಿಕೃತಿ ದಹಿಸಿದ ಪ್ರತಿಭಟನಾಕಾರರು

ಜಾರ್ಖಂಡ್ ನೇಮಕಾತಿ ಪರೀಕ್ಷೆಗಳಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ ಆಗಸ್ಟ್ 16 ರಂದು (ಭಾನುವಾರ) ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆ ತೀವ್ರಗೊಂಡಿದೆ. ಮುಖ್ಯಮಂತ್ರಿ ಹೇಮಂತ್ ಸೊರೇನ್, ರಾಹುಲ್ ಗಾಂಧಿ ಮತ್ತು ಆರ್‌ಜೆಡಿ ನಾಯಕ ತೇಜಸ್ವಿ...

BJP ರಾಷ್ಟ್ರೀಯ ವಕ್ತಾರ ಹುದ್ದೆಗೆ ಮತ್ತೆ ರಾಜೀನಾಮೆ! ಕಾರಣ ಬಿಚ್ಚಿಟ್ಟ ಶೆಹಝಾದ್ ಪೂನಾವಾಲಾ

BJP ರಾಷ್ಟ್ರೀಯ ವಕ್ತಾರ ಶೆಹಝಾದ್ ಪೂನಾವಾಲಾ ಅವರು ಪಕ್ಷದ ಪ್ರಾಥಮಿಕ ಸದಸ್ಯತ್ವ ಹಾಗೂ ತಮ್ಮ ಹುದ್ದೆಗೆ ಮತ್ತೊಮ್ಮೆ ರಾಜೀನಾಮೆ ನೀಡಿದ್ದಾರೆ. ತಮ್ಮ ರಾಜೀನಾಮೆ ಪತ್ರವನ್ನು ತಕ್ಷಣವೇ ಅಂಗೀಕರಿಸುವಂತೆ ಅವರು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ...

NALSAR ಘಟಿಕೋತ್ಸವ ವಿವಾದ: ಆಹ್ವಾನ ತಿರಸ್ಕರಿಸಿದ ಸಿಜೆಐ ಸೂರ್ಯಕಾಂತ್!

ಹೈದರಾಬಾದ್‌ನ ಪ್ರತಿಷ್ಠಿತ NALSAR ಕಾನೂನು ವಿಶ್ವವಿದ್ಯಾಲಯದ ಘಟಿಕೋತ್ಸವಕ್ಕೆ ಮುಖ್ಯ ಅತಿಥಿಯಾಗಿ ಭಾಗವಹಿಸುವ ಕುರಿತು ಎದ್ದಿದ್ದ ವಿವಾದಕ್ಕೆ ಕೊನೆಗೂ ತೆರೆ ಬಿದ್ದಿದೆ. ತಾವು ಈ ಆಹ್ವಾನವನ್ನು ಸ್ವೀಕರಿಸಿಲ್ಲ, ಹೀಗಾಗಿ ಘಟಿಕೋತ್ಸವದಲ್ಲಿ ಭಾಗವಹಿಸುವ ಪ್ರಶ್ನೆಯೇ ಉದ್ಭವಿಸುವುದಿಲ್ಲ...

ಹೈದರಾಬಾದ್ : ಡಿಜಿಟಲೀಕರಣಗೊಂಡ ಶೇ. 21ರಷ್ಟು ಮತದಾರರಿಗೆ SIR ನೋಟಿಸ್

ಹೈದರಾಬಾದ್ ಜಿಲ್ಲಾ ಚುನಾವಣಾ ಪ್ರಾಧಿಕಾರವು (ಡಿಇಎ) ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) 2026ರ ಅಡಿಯಲ್ಲಿ ಸೋಮವಾರ (ಆ. 17) ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದ ನಂತರ, 5.82 ಲಕ್ಷ ಮತದಾರರಿಗೆ ನೋಟಿಸ್ ಜಾರಿ...

ಕಾವೇರಿ: ರೈತರ ಹಿತ ಕಾಯುವುದು ನನ್ನ ಮೊದಲ ಕರ್ತವ್ಯ ಡಿ.ಕೆ.ಶಿವಕುಮಾರ್

ರಾಜ್ಯದ ಜಲಾಶಯಗಳಲ್ಲಿ ನೀರಿನ ಲಭ್ಯತೆ ಕಡಿಮೆಯಿರುವಾಗ ನಮ್ಮ ರೈತರನ್ನು ಬದುಕಿಸುವ ಸವಾಲಿನ ಜೊತೆಗೆ ಕಾನೂನನ್ನೂ ಕಾಪಾಡಬೇಕಾದ ಹೊಣೆಗಾರಿಕೆ ಇದೆ. ಕಾವೇರಿ ವಿಚಾರದಲ್ಲಿ ನಮ್ಮ ರೈತರ ಹಿತ ಕಾಯುವುದು ನನ್ನ ಮೊದಲ ಕರ್ತವ್ಯ ಎಂದು...

‘ಅಸ್ತಿತ್ವದ ಸಮಸ್ಯೆಯಲ್ಲ, ಹೊಣೆಗಾರಿಕೆಯೇ ಮುಖ್ಯ’: ಆರ್‌ಎಸ್‌ಎಸ್ ನೋಂದಣಿ ಕುರಿತು ಬಿ.ಎಲ್. ಸಂತೋಷ್ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ನೋಂದಣಿ ಹಾಗೂ ಅದರ ಕಾನೂನಾತ್ಮಕ ಅಸ್ತಿತ್ವಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಬಿ.ಎಲ್. ಸಂತೋಷ್ ಹಾಗೂ ಕರ್ನಾಟಕದ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್...