Homeಅಂತರಾಷ್ಟ್ರೀಯಭಾರತದಿಂದ ಹತ್ತಿ ಮತ್ತು ಸಕ್ಕರೆ ಆಮದು ಪ್ರಸ್ತಾಪವನ್ನು ತಿರಸ್ಕರಿಸಿದ ಪಾಕಿಸ್ತಾನ

ಭಾರತದಿಂದ ಹತ್ತಿ ಮತ್ತು ಸಕ್ಕರೆ ಆಮದು ಪ್ರಸ್ತಾಪವನ್ನು ತಿರಸ್ಕರಿಸಿದ ಪಾಕಿಸ್ತಾನ

- Advertisement -
- Advertisement -

ಭಾರತದಿಂದ ಹತ್ತಿ ಮತ್ತು ಸಕ್ಕರೆಯನ್ನು ಆಮದು ಮಾಡಿಕೊಳ್ಳುವ ಆರ್ಥಿಕ ಸಮನ್ವಯ ಸಮಿತಿಯ (ಇಸಿಸಿ) ಪ್ರಸ್ತಾವನೆಯನ್ನು ಪಾಕಿಸ್ತಾನದ ಕ್ಯಾಬಿನೆಟ್ ಗುರುವಾರ ತಿರಸ್ಕರಿಸಿದ್ದು, ಭಾರತದೊಂದಿಗೆ ಯಾವುದೇ ವ್ಯಾಪಾರವಿಲ್ಲ ಎಂದು ಇಂದು ಕ್ಯಾಬಿನೆಟ್ ಸ್ಪಷ್ಟವಾಗಿ ಹೇಳಿದೆ.

ಪಾಕಿಸ್ತಾನದ ಹೊಸ ಹಣಕಾಸು ಸಚಿವ ಹಮ್ಮದ್ ಅಝರ್ ಅವರು ಅಧ್ಯಕ್ಷತೆ ವಹಿಸಿದ್ದ ಇಸಿಸಿ ಸಭೆಯಲ್ಲಿ ಭಾರತದಿಂದ ಹತ್ತಿ ಮತ್ತು ಸಕ್ಕರೆ ಆಮದಿನ ಮೇಲಿನ ಎರಡು ವರ್ಷಗಳ ಹಳೆಯ ನಿಷೇಧವನ್ನು ತೆಗೆದುಹಾಕುವುದಾಗಿ ಬುಧವಾರ ಘೋಷಿಸಲಾಗಿತ್ತು.

ಈ ಬಗ್ಗೆ ಪ್ರತಿಕ್ರಿಯಿಸಿದ್ದ, ಇಮ್ರಾನ್ ಖಾನ್ ಅವರ ಆಪ್ತ ಸಹಾಯಕಿ ಮತ್ತು ಮಾನವ ಹಕ್ಕುಗಳ ಸಚಿವೆ ಶಿರೀನ್ ಮಜಾರಿ ಅವರು, ಎಲ್ಲಾ ಇಸಿಸಿ ನಿರ್ಧಾರಗಳನ್ನು ಕ್ಯಾಬಿನೆಟ್ ಅನುಮೋದಿಸಬೇಕಾಗಿದೆ ಮತ್ತು ಆಗ ಮಾತ್ರ ಅವುಗಳನ್ನು ಸರ್ಕಾರದ ಅನುಮೋದನೆ ಎಂದು ಹೇಳಬಹುದು ಎಂದು ಹೇಳಿದ್ದರು.

ಇದನ್ನೂ ಓದಿ: ಸಿಂಗೂರು, ನಂದಿಗ್ರಾಮ ಚಳವಳಿಯ ಮುಂಚೂಣಿಯಲ್ಲಿದ್ದ SUCI ಈ ಚುನಾವಣೆಯಲ್ಲೇನು ಮಾಡುತ್ತಿದೆ?

“ಇಸಿಸಿಯ ಎಲ್ಲಾ ನಿರ್ಧಾರಗಳನ್ನು ಕ್ಯಾಬಿನೆಟ್ ಅನುಮೋದಿಸಬೇಕಾಗಿದೆ. ಆಗ ಮಾತ್ರ ಅವುಗಳನ್ನು ಸರ್ಕಾರದಿಂದ ಅನುಮೋದಿಸಲಾಗಿದೆ ಎಂದು ಹೇಳಬಹುದು. ಆದ್ದರಿಂದ ಇಂದು ಕ್ಯಾಬಿನೆಟ್‌‌ನಲ್ಲಿ ಭಾರತದೊಂದಿಗೆ ವ್ಯಾಪಾರ ಸೇರಿದಂತೆ ಇಸಿಸಿ ನಿರ್ಧಾರಗಳ ಬಗ್ಗೆ ಚರ್ಚೆ ನಡೆಯಲಿದೆ. ನಂತರ ಸರ್ಕಾರ ನಿರ್ಧಾರ ತೆಗೆದುಕೊಳ್ಳುತ್ತದೆ. ಮಾಧ್ಯಮಗಳು ಈ ಬಗ್ಗೆ ಕನಿಷ್ಠ ತಿಳಿದಿರಬೇಕು” ಎಂದು ಶಿರಿನ್ ಮಜಾರಿ ಬೆಳಿಗ್ಗೆ ತಿಳಿಸಿದ್ದರು.

ಸಂಜೆ ಟ್ವೀಟ್ ಮಾಡಿ, “ಭಾರತದೊಂದಿಗೆ ಯಾವುದೇ ವ್ಯಾಪಾರವಿಲ್ಲ ಎಂದು ಇಂದು ಕ್ಯಾಬಿನೆಟ್ ಸ್ಪಷ್ಟವಾಗಿ ಹೇಳಿದೆ. 5 ಆಗಸ್ಟ್ 2019 ರಂದು ಜಮ್ಮುಕಾಶ್ಮೀರದಲ್ಲಿ ಹೇರಲ್ಪಟ್ಟ ಕಾನೂನುಬಾಹಿರ ಕ್ರಮಗಳನ್ನು ಹಿಂಪಡೆಯುವರೆಗೆ ಭಾರತದೊಂದಿಗೆ ಯಾವುದೇ ಸಂಬಂಧವನ್ನು ಸಾಮಾನ್ಯೀಕರಿಸಲಾಗುವುದಿಲ್ಲ ಎಂದು ಪ್ರಧಾನಿ ಸ್ಪಷ್ಟಪಡಿಸಿದ್ದಾರೆ” ಎಂದು ಕಾಶ್ಮೀರದ ಬಗ್ಗೆ ಬಿಗಿ ನಿಲುವಿಗೆ ಹೆಸರುವಾಸಿಯಾದ ಶಿರಿನ್ ಮಜಾರಿ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ನರಗುಂದ: ದಲಿತ ಬಾಲಕಿಯ ಸುಟ್ಟ ಮೃತದೇಹ ಪತ್ತೆ – ಅತ್ಯಾಚಾರ, ಕೊಲೆ ಆರೋಪ

ಭಾರತದಿಂದ ಹತ್ತಿ ಮತ್ತು ಸಕ್ಕರೆಯನ್ನು ಆಮದು ಮಾಡಿಕೊಳ್ಳುವುದಾಗಿ ಅಜರ್ ಬುಧವಾರ ಪ್ರಕಟಿಸಿದ್ದು, ದ್ವಿಪಕ್ಷೀಯ ವ್ಯಾಪಾರ ಸಂಬಂಧಗಳು ಭಾಗಶಃ ಪುನ ಪ್ರಾರಂಭವಾಗುತ್ತದೆ ಎಂಬ ಭರವಸೆಯನ್ನು ಹುಟ್ಟುಹಾಕಿತ್ತು. ಭಾರತವು 2019 ರ ಆಗಸ್ಟ್ 5 ರಂದು ಜಮ್ಮು ಕಾಶ್ಮೀರದ ವಿಶೇಷ ಸ್ಥಾನಮಾನವನ್ನು ಹಿಂತೆಗೆದುಕೊಳ್ಳುವುದರೊಂದಿಗೆ ಈ ವ್ಯಾಪಾರ ಸಂಬಂಧವು ಸ್ಥಗಿತಗೊಂಡಿತ್ತು.

ಭಾರತವು ವಿಶ್ವದ ಅತಿದೊಡ್ಡ ಹತ್ತಿ ಉತ್ಪಾದಕ ಮತ್ತು ಎರಡನೇ ಅತಿದೊಡ್ಡ ಸಕ್ಕರೆ ಉತ್ಪಾದಕ ದೇಶವಾಗಿದೆ.

ಕೊರೊನಾ ಸಾಂಕ್ರಾಮಿಕದ ಮಧ್ಯೆ ಭಾರತದಿಂದ ಔಷಧಗಳು ಮತ್ತು ಅಗತ್ಯ ಔಷಧಿಗಳ ಕಚ್ಚಾ ವಸ್ತುಗಳನ್ನು ಆಮದು ಮಾಡಿಕೊಳ್ಳುವ ನಿಷೇಧವನ್ನು 2020 ರ ಮೇ ತಿಂಗಳಲ್ಲಿ ಪಾಕಿಸ್ತಾನ ತೆಗೆದುಹಾಕಿತ್ತು.

2019 ರ ಆಗಸ್ಟ್‌ನಲ್ಲಿ ಜಮ್ಮು ಕಾಶ್ಮೀರದ ವಿಶೇಷ ಸ್ಥಾನಮಾನವನ್ನು ಹಿಂತೆಗೆದುಕೊಳ್ಳುವ ಭಾರತದ ಕ್ರಮವು ಪಾಕಿಸ್ತಾನಕ್ಕೆ ಕೋಪವನ್ನುಂಟುಮಾಡಿತ್ತು. ಇದರೊಂದಿಗೆ ಭಾರತದೊಂದಿಗೆ ರಾಜತಾಂತ್ರಿಕ ಸಂಬಂಧವು ಕುಸಿದಿದ್ದು, ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನರ್‌ನನ್ನು ವಾಪಾಸ್ ಕಳುಹಿಸಿತ್ತು. ಪಾಕಿಸ್ತಾನವು ಭಾರತದೊಂದಿಗಿನ ಎಲ್ಲಾ ವಾಯು ಮತ್ತು ಭೂ ಸಂಪರ್ಕಗಳನ್ನು ಕಿತ್ತುಹಾಕಿ, ವ್ಯಾಪಾರ ಮತ್ತು ರೈಲ್ವೆ ಸೇವೆಗಳನ್ನು ಸ್ಥಗಿತಗೊಳಿಸಿತ್ತು.

ಇದನ್ನೂ ಓದಿ: ಅವಹೇಳನಕಾರಿ ಹೇಳಿಕೆ: ಪ್ರಚಾರದಿಂದ ಎ ರಾಜಾಗೆ 48 ಗಂಟೆಗಳ ನಿಷೇಧ ಹೇರಿದ ಚುನಾವಣಾ ಆಯೋಗ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...