Homeಮುಖಪುಟಪಾಕಿಸ್ತಾನದ 'ಜೈಶ್ ಅಲ್-ಅದ್ಲ್‌' ನೆಲೆಯ ಮೇಲೆ ಇರಾನ್‌ನಿಂದ ಕ್ಷಿಪಣಿ ದಾಳಿ

ಪಾಕಿಸ್ತಾನದ ‘ಜೈಶ್ ಅಲ್-ಅದ್ಲ್‌’ ನೆಲೆಯ ಮೇಲೆ ಇರಾನ್‌ನಿಂದ ಕ್ಷಿಪಣಿ ದಾಳಿ

- Advertisement -
- Advertisement -

ಪಾಕಿಸ್ತಾನದ ಸುನ್ನಿ ತೀವ್ರಗಾಮಿ ಗುಂಪು ಜೈಶ್ ಅಲ್-ಅದ್ಲ್‌ಗೆ ಸೇರಿದ ನೆಲೆಗಳನ್ನು ಗುರಿಯಾಗಿಸಿಕೊಂಡು ಇರಾನ್‌ ಕ್ಷಿಪಣಿ ದಾಳಿ ನಡೆಸಿದ್ದು, ಇಬ್ಬರು ಮಕ್ಕಳು ಮೃತಪಟ್ಟಿದ್ದಾರೆ ಮತ್ತು ಮೂವರಿಗೆ ಗಾಯಗಳಾಗಿವೆ ಎಂದು ಪಾಕಿಸ್ತಾನ ತಿಳಿಸಿದೆ. ಇರಾನ್ ಕಳೆದ ಕೆಲ ದಿನಗಳಿಂದ ಸಿರಿಯಾ ಮತ್ತು ಇರಾಕ್ ಮೇಲೆ ಇದೇ ರೀತಿಯ ದಾಳಿಯನ್ನು ನಡೆಸಿತ್ತು.

ಪಾಕಿಸ್ತಾನದ ಸುನ್ನಿ ತೀವ್ರಗಾಮಿ ಗುಂಪು ಜೈಶ್ ಅಲ್-ಅದ್ಲ್‌ಗೆ ಸೇರಿದ ನೆಲೆಗಳ ಮೇಲೆ ಕಾರ್ಯಾಚರಣೆಗೆ ಡ್ರೋನ್‌ಗಳು ಮತ್ತು ಕ್ಷಿಪಣಿಗಳನ್ನು ಬಳಸಲಾಗಿದೆ ಎಂದು ಇರಾನ್‌ನ ಸರ್ಕಾರಿ ಮಾದ್ಯಮಗಳು ವರದಿ ಮಾಡಿದೆ.

ಪಾಕಿಸ್ತಾನದ ವಿದೇಶಾಂಗ ಸಚಿವಾಲಯವು ದಾಳಿಯನ್ನು ದೃಢಪಡಿಸಿದ್ದು, ಇದು ಪಾಕ್‌ನ ವಾಯುಪ್ರದೇಶದ ಮೇಲೆ ನಡೆದ ಅಪ್ರಚೋದಿತ ದಾಳಿ ಎಂದು ಹೇಳಿಕೊಂಡಿದೆ. ಘಟನೆಯಲ್ಲಿ ಇಬ್ಬರು ಮಕ್ಕಳು ಸಾವನ್ನಪ್ಪಿದ್ದಾರೆ. ಮೂವರು ಗಾಯಗೊಂಡಿದ್ದಾರೆ. ಈ ದಾಳಿಯು ಸಂಪೂರ್ಣವಾಗಿ ಸ್ವೀಕಾರಾರ್ಹವಲ್ಲ ಮತ್ತು ವಾಯುನೆಲೆಯ ನಿಯಮಗಳನ್ನು ಉಲ್ಲಂಘಿಸಿ ಇರಾನ್‌ ದಾಳಿ ನಡೆಸಿದೆ. ಇಂತಹ ಕ್ರಮಗಳು ಉಭಯ ದೇಶಗಳ ನಡುವೆವಿನ ಸಂಬಂಧದ ಮೇಲೆ ಗಂಭೀರ ಪರಿಣಾಮ ಉಂಟುಮಾಡಬಹುದು ಎಂದು ವಿದೇಶಾಂಗ ಸಚಿವಾಲಯದ ಹೇಳಿಕೆಯು ತಿಳಿಸಿದೆ. ಇರಾನ್ ರಾಯಭಾರಿಯನ್ನು ಕರೆಸಿಕೊಂಡಿರುವ ಪಾಕ್‌, ಕ್ಷಿಪಣಿ ದಾಳಿ ಉಭಯ ದೇಶಗಳ ನಡುವಿನ ರಾಜತಾಂತ್ರಿಕ ಸಂಬಂಧದ ಮೇಲೆ ಪರಿಣಾಮ ಬೀರುವ ಸಾಧ್ಯತೆಯಿದೆ ಎಂದು ಎಚ್ಚರಿಸಿದೆ.

ಪಾಕಿಸ್ತಾನ ಹಾಗೂ ಇರಾನ್ ನಡುವೆ ಸಂವಹನಕ್ಕೆ ಹಲವು ಮಾರ್ಗಗಳಿದ್ದರೂ, ಈ ದಾಳಿಯನ್ನು ನಡೆಸಿರುವುದು  ಹೆಚ್ಚು ಕಳವಳಕಾರಿ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಹೇಳಿದೆ. ಭಯೋತ್ಪಾದಕತೆ ಈ ಭಾಗದ ಎಲ್ಲ ದೇಶಗಳಿಗೆ ಸಮಾನ ಅಪಾಯ ಎನ್ನುವುದನ್ನು ಪಾಕಿಸ್ತಾನ ಪ್ರತಿಪಾದಿಸುತ್ತ ಬಂದಿದೆ ಹಾಗೂ ಇದರ ತಡೆಗೆ ಪರಸ್ಪರ ಸಮನ್ವಯದ ಕ್ರಮ ಅಗತ್ಯವಾಗಿದೆ. ಇಂಥ ಏಕಪಕ್ಷೀಯ ಕೃತ್ಯಗಳು ನೆರೆಹೊರೆಯ ದೇಶಗಳ ನಡುವಿನ ಉತ್ತಮ ಬಾಂಧವ್ಯಕ್ಕೆ ಪೂರಕವಲ್ಲ ಹಾಗೂ ದ್ವಿಪಕ್ಷೀಯ ವಿಶ್ವಾಸಕ್ಕೆ ಗಂಭೀರವಾಗಿ ಧಕ್ಕೆ ತರುವಂಥದ್ದು ಎಂದು ಹೇಳಿದೆ.

ಜೈಶ್ ಅಲ್ ಅದ್ಲ್‌:

ಪಾಕಿಸ್ತಾನ ತೀವ್ರಗಾಮಿ ಸಂಘಟನೆಗಳನ್ನು ಪಾಕಿಸ್ತಾನ ಪೋಷಿಸುತ್ತಿದೆ ಎಂದು ಇರಾನ್‌ ಈ ಹಿಂದೆಯೇ ಅಸಮಾಧಾನ ವ್ಯಕ್ತಪಡಿಸಿತ್ತು.  ‘ಜೈಶ್ ಅಲ್ ಅದ್ಲ್‌‘ ಪಾಕಿಸ್ತಾನದ ಬಲೂಚಿಯಲ್ಲಿ ನೆಲೆಯೂರಿರುವ ಒಂದು ತೀವ್ರಗಾಮಿ ಸಂಘಟನೆಯಾಗಿದೆ. ಇದು 2012ರಲ್ಲಿ ಸ್ಠಾಪನೆಗೊಂಡಿತ್ತು. ಜೈಶ್ ಅಲ್ ಅದ್ಲ್‌  ತೀವ್ರಗಾಮಿ ಗುಂಪನ್ನು ಹೆಡೆಮುರಿ ಕಟ್ಟವುದಾಗಿ ಇರಾನ್ ಪ್ರಯತ್ನಿಸಿದ್ದು,  ಅದರ ವಿರುದ್ಧ ಗಡಿಯಲ್ಲಿ ಯುದ್ಧ ಸಾರಿತ್ತು. ತೀವ್ರಗಾಮಿ ಗುಂಪಿನ ನೆಲೆಗಳನ್ನು ನಾಶ ಮಾಡಲು ಕ್ಷಿಪಣಿ ದಾಳಿ ನಡೆಸುವುದು ಅನಿವಾರ್ಯವಾಗಿದೆ ಎಂದು ಇರಾನ್‌ ಹೇಳಿತ್ತು.

ಇರಾನ್‌ನಲ್ಲಿ ಈ ತಿಂಗಳ ಆರಂಭದಲ್ಲಿ ಎರಡು ಆತ್ಮಾಹುತಿ ದಾಳಿ ನಡೆದಿದ್ದು, ಈ ದಾಳಿಯಲ್ಲಿ ಕನಿಷ್ಠ 84 ಜನರು ಮೃತಪಟ್ಟಿದ್ದರು ಮತ್ತು 284 ಜನರು ಗಾಯಗೊಂಡಿದ್ದರು. ಇದಕ್ಕೆ ಪ್ರತೀಕಾರವಾಗಿ ಇರಾಕ್ ಮತ್ತು ಸಿರಿಯಾದಲ್ಲಿ ಇರಾನ್‌ ಕ್ಷಿಪಣಿ ದಾಳಿ ನಡೆಸಿತ್ತು.

ಗಾಝಾದಲ್ಲಿನ ಸಂಘರ್ಷದ ಮಧ್ಯೆ ಈ ಘಟನೆಯು ಇರಾಕ್‌ ಮತ್ತು ಇರಾನ್‌ ನಡುವಿನ ಸಂಬಂಧವನ್ನು ಹದಗೆಡುವಂತೆ ಮಾಡಿದೆ. ಎರಡೂ ದೇಶಗಳು ರಾಜತಾಂತ್ರಿಕ ಸಂಬಂಧಗಳನ್ನು ಉಳಿಸಿಕೊಳ್ಳಲು ಪ್ರಯತ್ನಿಸುತ್ತಿದ್ದವು. ಇರಾನ್ ಈ ಹಿಂದೆ ಜೈಶ್ ಅಲ್-ಅದ್ಲ್ ವಿರುದ್ಧ ಗಡಿಯಲ್ಲಿ ಕದನಗಳಲ್ಲಿ ತೊಡಗಿಸಿಕೊಂಡಿದ್ದರೂ, ಗಡಿಯಾಚೆಗಿನ ಕ್ಷಿಪಣಿ ದಾಳಿಯ ಎಂದಿಗೂ ನಡೆಸಿರಲಿಲ್ಲ.

ಇದನ್ನು ಓದಿ: ‘ಹಿಂದುತ್ವ ವಾಚ್’ ಎಕ್ಸ್‌ ಖಾತೆಗೆ ಭಾರತದಲ್ಲಿ ನಿರ್ಬಂಧ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐದು ರಾಜ್ಯಗಳ ವಿಧಾನಸಭೆ ಚುನಾವಣೆ ದಿನಾಂಕ ಪ್ರಕಟ; ಬಂಗಾಳದಲ್ಲಿ ಮಾತ್ರ ಎರಡು ಹಂತದ ಮತದಾನ

ಅಸ್ಸಾಂ, ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ ಮತ್ತು ಪುದುಚೇರಿ ವಿಧಾನಸಭಾ ಚುನಾವಣೆಗಳ ವೇಳಾಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗದ (ಇಸಿಐ) ಮುಖ್ಯಸ್ಥರಾದ ಜ್ಞಾನೇಶ್ ಕುಮಾರ್ ಪ್ರಕಟಿಸಿದರು. ದೆಹಲಿಯಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯ...

ಫ್ಲಿಪ್‌ಕಾರ್ಟ್‌ನಿಂದ 1 ರೂ.ಗೆ ಹಾಲು ಮಾರಾಟ; ಪ್ರಧಾನಿ ಮೋದಿ ಮಧ್ಯಸ್ಥಿಕೆಗೆ ಬಮುಲ್‌ ಆಗ್ರಹ

ಫ್ಲಿಪ್‌ಕಾರ್ಟ್‌ ಸಂಸ್ಥೆಯು ಆನ್‌ಲೈನ್‌ ಮೂಲಕ 1 ರೂ.ಗೆ ಲೀಟರ್‌ ಹಾಲನ್ನು ಮಾರಾಟ ಮಾಡಿರುವುದು ಭಾರಿ ಜನಾಕ್ರೋಶಕ್ಕೆ ಕಾರಣವಾಗಿದೆ. ಈ ಬಗ್ಗೆ, ಬೆಂಗಳೂರು ನಗರ, ಗ್ರಾಮೀಣ ಮತ್ತು ರಾಮನಗರ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ...

“ಮಕ್ಕಳ ಹಂತಕನನ್ನು ಹುಡುಕಿ ಹತ್ಯೆ ಮಾಡುತ್ತೇವೆ” : ನೆತನ್ಯಾಹು ಸುರಕ್ಷಿತವಾಗಿದ್ದಾರೆ ಎಂಬ ಇಸ್ರೇಲ್ ಸ್ಪಷ್ಟನೆ ಬೆನ್ನಲ್ಲೆ ಐಆರ್‌ಜಿಸಿ ಹೇಳಿಕೆ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರನ್ನು ಹುಡುಕಿ ಹತ್ಯೆ ಮಾಡುತ್ತೇವೆ ಎಂದು ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ಹೇಳಿರುವುದಾಗಿ ವರದಿಯಾಗಿದೆ. ನೆತನ್ಯಾಹು ಅವರ ಹತ್ಯೆಯ ವದಂತಿಗಳನ್ನು ಇಸ್ರೇಲ್ ನಿರಾಕರಿಸಿದ ಬೆನ್ನಲ್ಲೇ, ಐಆರ್‌ಜಿಸಿ ಈ...

ಮಹಾರಾಷ್ಟ್ರ| ಇಫ್ತಾರ್ ಕೂಟಕ್ಕೆ ಸೇರಿದ್ದ ಮುಸ್ಲಿಮರ ಮೇಲೆ ಹಿಂದುತ್ವವಾದಿ ಗುಂಪಿನಿಂದ ದಾಳಿ

ರಂಜಾನ್‌ ಮಾಸದ ಉಪವಾಸ ಮುರಿಯಲು ನೆರೆದಿದ್ದ ಜನರ ಮೇಲೆ ಅಪರಿಚಿತ ವ್ಯಕ್ತಿಗಳ ಗುಂಪೊಂದು ದಾಳಿ ನಡೆಸಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ. ಇಫ್ತಾರ್ ಕೂಟಕ್ಕೆ ಸಿದ್ಧತೆ ನಡೆಸುತ್ತಿದ್ದಾಗ, ಸುಮಾರು 100 ಕ್ಕೂ ಹೆಚ್ಚು...

ಆಸ್ಕರ್‌ ಅಂತಿಮ ಪಟ್ಟಿಗೆ ಆಯ್ಕೆಯಾದ ‘ದಿ ವಾಯ್ಸ್ ಆಫ್ ಹಿಂದ್ ರಜಬ್’

ಗಾಝಾದ ಆರು ವರ್ಷದ ಬಾಲಕಿ ಹಿಂದ್ ರಜಬ್‌ ಮತ್ತು ಆಕೆಯ ಸಂಬಂಧಿಕರನ್ನು ಇಸ್ರೇಲಿ ಸೈನಿಕರು ಭೀಕರವಾಗಿ ಹತ್ಯೆ ಮಾಡಿದ ಕಥೆಯನ್ನು ಹೇಳುವ 'ದಿ ವಾಯ್ಸ್ ಆಫ್ ಹಿಂದ್ ರಜಬ್' ಚಲನಚಿತ್ರವು 2026ರ ಆಸ್ಕರ್...

ಉತ್ತರ ಪ್ರದೇಶ| ದಲಿತ ಕುಟುಂಬದ ಮದುವೆ ಮನೆಯಲ್ಲಿ ಸವರ್ಣಿಯರಿಂದ ಹಲ್ಲೆ; ಬಂದೂಕಿನಿಂದ ಬೆದರಿಕೆ

ಮಾರ್ಚ್ 10 ರಂದು ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಟಿಕುನಿಯಾ ಪೊಲೀಸ್ ಠಾಣೆ ಪ್ರದೇಶದಲ್ಲಿ ಜಾತಿ ಆಧಾರಿತ ಹಿಂಸಾಚಾರದ ತೀವ್ರ ಆತಂಕಕಾರಿ ಘಟನೆ ಬೆಳಕಿಗೆ ಬಂದಿದೆ. 24 ಗಂಟೆಗಳ ಒಳಗೆ ಎಫ್‌ಐಆರ್...

’70 ಲಕ್ಷ ಬಂಗಾಳಿ ಮುಸ್ಲಿಮರನ್ನು ಹೊರದಬ್ಬಲು ಸಾಧ್ಯವಿಲ್ಲ..ಅವರೇ ದೇಶ ಬಿಡುವಂತಹ ಪರಿಸ್ಥಿತಿ ಸೃಷ್ಟಿಸುತ್ತೇವೆ’: ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಸುಮಾರು 70 ಲಕ್ಷ 'ಬಂಗಾಳಿ ಮುಸ್ಲಿಮರ'ನ್ನು ಭಾರತದಿಂದ ಹೊರಹಾಕುವುದು 'ಮಾನವೀಯವಾಗಿ ಸಾಧ್ಯವಿಲ್ಲ'. ಹಾಗಾಗಿ, ಅವರಾಗಿಯೇ ದೇಶ ತೊರೆಯುವಂತಹ ಪರಿಸ್ಥಿತಿಯನ್ನು ನಾವು ಸೃಷ್ಟಿಸುತ್ತೇವೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ. ಈ...

ಮೋದಿಯವರ ವಿದೇಶಾಂಗ ನೀತಿ ಸಂಪೂರ್ಣವಾಗಿ ದಿಕ್ಕು ತಪ್ಪಿದೆ, ನಗೆಪಾಟಲಿಗೆ ಈಡಾಗಿದೆ, ಅನೈತಿಕತೆಯಿಂದ ಕೂಡಿದೆ. ಇದು ಜಗಜ್ಜಾಹೀರಾಗಿದೆ – ಶ್ರೀಪಾದ್‌ ಭಟ್

ತಮ್ಮ ಸ್ಥಳೀಯ ಮತಬ್ಯಾಂಕ್ ರಾಜಕಾರಣದ ಜೊತೆಗೆ ವಿದೇಶಿ ನೀತಿಯನ್ನು ತಳುಕು ಹಾಕುವುದು. ಉದಾಹರಣೆಗೆ ಅಮೆರಿಕ-ಇಸ್ರೇಲ್ ಜಂಟಿಯಾಗಿ ನಡೆಸುತ್ತಿರುವ ಇರಾನ್ ಮೇಲಿನ ಯುದ್ಧದ ಸಮಯದಲ್ಲಿ ಮೋದಿ ನೇತೃತ್ವದ ಸರ್ಕಾರವು ತಾನು ಇರಾನ್ ಪರ ನಿಲುವು ತಾಳಿದರೆ...

ದೆಹಲಿ ಪೊಲೀಸರಿಂದ 10 ಮಂದಿ ಹೋರಾಟಗಾರರ ಅಪಹರಣ ಆರೋಪ : ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ

ಸಿವಿಲ್ ಸೊಸೈಟಿಯ ಹತ್ತು ಮಂದಿ ಹೋರಾಟಗಾರರನ್ನು ದೆಹಲಿ ಪೊಲೀಸರು ಅಪಹರಿಸಿದ್ದಾರೆ ಅಥವಾ ಅಕ್ರಮವಾಗಿ ಬಂಧಿಸಿದ್ದಾರೆ ಎಂದು ಮಾನವ ಹಕ್ಕುಗಳ ಗುಂಪುಗಳು ಆರೋಪಿಸಿವೆ. ಹತ್ತು ಮಂದಿಯನ್ನು ದೆಹಲಿ ಪೊಲೀಸರು ಮತ್ತು ಇತರ ರಾಜ್ಯಗಳ ಏಜೆನ್ಸಿಗಳು ಅಪಹರಿಸಿವೆ...

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...