Homeಮುಖಪುಟಪಾಕಿಸ್ತಾನದ 'ಜೈಶ್ ಅಲ್-ಅದ್ಲ್‌' ನೆಲೆಯ ಮೇಲೆ ಇರಾನ್‌ನಿಂದ ಕ್ಷಿಪಣಿ ದಾಳಿ

ಪಾಕಿಸ್ತಾನದ ‘ಜೈಶ್ ಅಲ್-ಅದ್ಲ್‌’ ನೆಲೆಯ ಮೇಲೆ ಇರಾನ್‌ನಿಂದ ಕ್ಷಿಪಣಿ ದಾಳಿ

- Advertisement -
- Advertisement -

ಪಾಕಿಸ್ತಾನದ ಸುನ್ನಿ ತೀವ್ರಗಾಮಿ ಗುಂಪು ಜೈಶ್ ಅಲ್-ಅದ್ಲ್‌ಗೆ ಸೇರಿದ ನೆಲೆಗಳನ್ನು ಗುರಿಯಾಗಿಸಿಕೊಂಡು ಇರಾನ್‌ ಕ್ಷಿಪಣಿ ದಾಳಿ ನಡೆಸಿದ್ದು, ಇಬ್ಬರು ಮಕ್ಕಳು ಮೃತಪಟ್ಟಿದ್ದಾರೆ ಮತ್ತು ಮೂವರಿಗೆ ಗಾಯಗಳಾಗಿವೆ ಎಂದು ಪಾಕಿಸ್ತಾನ ತಿಳಿಸಿದೆ. ಇರಾನ್ ಕಳೆದ ಕೆಲ ದಿನಗಳಿಂದ ಸಿರಿಯಾ ಮತ್ತು ಇರಾಕ್ ಮೇಲೆ ಇದೇ ರೀತಿಯ ದಾಳಿಯನ್ನು ನಡೆಸಿತ್ತು.

ಪಾಕಿಸ್ತಾನದ ಸುನ್ನಿ ತೀವ್ರಗಾಮಿ ಗುಂಪು ಜೈಶ್ ಅಲ್-ಅದ್ಲ್‌ಗೆ ಸೇರಿದ ನೆಲೆಗಳ ಮೇಲೆ ಕಾರ್ಯಾಚರಣೆಗೆ ಡ್ರೋನ್‌ಗಳು ಮತ್ತು ಕ್ಷಿಪಣಿಗಳನ್ನು ಬಳಸಲಾಗಿದೆ ಎಂದು ಇರಾನ್‌ನ ಸರ್ಕಾರಿ ಮಾದ್ಯಮಗಳು ವರದಿ ಮಾಡಿದೆ.

ಪಾಕಿಸ್ತಾನದ ವಿದೇಶಾಂಗ ಸಚಿವಾಲಯವು ದಾಳಿಯನ್ನು ದೃಢಪಡಿಸಿದ್ದು, ಇದು ಪಾಕ್‌ನ ವಾಯುಪ್ರದೇಶದ ಮೇಲೆ ನಡೆದ ಅಪ್ರಚೋದಿತ ದಾಳಿ ಎಂದು ಹೇಳಿಕೊಂಡಿದೆ. ಘಟನೆಯಲ್ಲಿ ಇಬ್ಬರು ಮಕ್ಕಳು ಸಾವನ್ನಪ್ಪಿದ್ದಾರೆ. ಮೂವರು ಗಾಯಗೊಂಡಿದ್ದಾರೆ. ಈ ದಾಳಿಯು ಸಂಪೂರ್ಣವಾಗಿ ಸ್ವೀಕಾರಾರ್ಹವಲ್ಲ ಮತ್ತು ವಾಯುನೆಲೆಯ ನಿಯಮಗಳನ್ನು ಉಲ್ಲಂಘಿಸಿ ಇರಾನ್‌ ದಾಳಿ ನಡೆಸಿದೆ. ಇಂತಹ ಕ್ರಮಗಳು ಉಭಯ ದೇಶಗಳ ನಡುವೆವಿನ ಸಂಬಂಧದ ಮೇಲೆ ಗಂಭೀರ ಪರಿಣಾಮ ಉಂಟುಮಾಡಬಹುದು ಎಂದು ವಿದೇಶಾಂಗ ಸಚಿವಾಲಯದ ಹೇಳಿಕೆಯು ತಿಳಿಸಿದೆ. ಇರಾನ್ ರಾಯಭಾರಿಯನ್ನು ಕರೆಸಿಕೊಂಡಿರುವ ಪಾಕ್‌, ಕ್ಷಿಪಣಿ ದಾಳಿ ಉಭಯ ದೇಶಗಳ ನಡುವಿನ ರಾಜತಾಂತ್ರಿಕ ಸಂಬಂಧದ ಮೇಲೆ ಪರಿಣಾಮ ಬೀರುವ ಸಾಧ್ಯತೆಯಿದೆ ಎಂದು ಎಚ್ಚರಿಸಿದೆ.

ಪಾಕಿಸ್ತಾನ ಹಾಗೂ ಇರಾನ್ ನಡುವೆ ಸಂವಹನಕ್ಕೆ ಹಲವು ಮಾರ್ಗಗಳಿದ್ದರೂ, ಈ ದಾಳಿಯನ್ನು ನಡೆಸಿರುವುದು  ಹೆಚ್ಚು ಕಳವಳಕಾರಿ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಹೇಳಿದೆ. ಭಯೋತ್ಪಾದಕತೆ ಈ ಭಾಗದ ಎಲ್ಲ ದೇಶಗಳಿಗೆ ಸಮಾನ ಅಪಾಯ ಎನ್ನುವುದನ್ನು ಪಾಕಿಸ್ತಾನ ಪ್ರತಿಪಾದಿಸುತ್ತ ಬಂದಿದೆ ಹಾಗೂ ಇದರ ತಡೆಗೆ ಪರಸ್ಪರ ಸಮನ್ವಯದ ಕ್ರಮ ಅಗತ್ಯವಾಗಿದೆ. ಇಂಥ ಏಕಪಕ್ಷೀಯ ಕೃತ್ಯಗಳು ನೆರೆಹೊರೆಯ ದೇಶಗಳ ನಡುವಿನ ಉತ್ತಮ ಬಾಂಧವ್ಯಕ್ಕೆ ಪೂರಕವಲ್ಲ ಹಾಗೂ ದ್ವಿಪಕ್ಷೀಯ ವಿಶ್ವಾಸಕ್ಕೆ ಗಂಭೀರವಾಗಿ ಧಕ್ಕೆ ತರುವಂಥದ್ದು ಎಂದು ಹೇಳಿದೆ.

ಜೈಶ್ ಅಲ್ ಅದ್ಲ್‌:

ಪಾಕಿಸ್ತಾನ ತೀವ್ರಗಾಮಿ ಸಂಘಟನೆಗಳನ್ನು ಪಾಕಿಸ್ತಾನ ಪೋಷಿಸುತ್ತಿದೆ ಎಂದು ಇರಾನ್‌ ಈ ಹಿಂದೆಯೇ ಅಸಮಾಧಾನ ವ್ಯಕ್ತಪಡಿಸಿತ್ತು.  ‘ಜೈಶ್ ಅಲ್ ಅದ್ಲ್‌‘ ಪಾಕಿಸ್ತಾನದ ಬಲೂಚಿಯಲ್ಲಿ ನೆಲೆಯೂರಿರುವ ಒಂದು ತೀವ್ರಗಾಮಿ ಸಂಘಟನೆಯಾಗಿದೆ. ಇದು 2012ರಲ್ಲಿ ಸ್ಠಾಪನೆಗೊಂಡಿತ್ತು. ಜೈಶ್ ಅಲ್ ಅದ್ಲ್‌  ತೀವ್ರಗಾಮಿ ಗುಂಪನ್ನು ಹೆಡೆಮುರಿ ಕಟ್ಟವುದಾಗಿ ಇರಾನ್ ಪ್ರಯತ್ನಿಸಿದ್ದು,  ಅದರ ವಿರುದ್ಧ ಗಡಿಯಲ್ಲಿ ಯುದ್ಧ ಸಾರಿತ್ತು. ತೀವ್ರಗಾಮಿ ಗುಂಪಿನ ನೆಲೆಗಳನ್ನು ನಾಶ ಮಾಡಲು ಕ್ಷಿಪಣಿ ದಾಳಿ ನಡೆಸುವುದು ಅನಿವಾರ್ಯವಾಗಿದೆ ಎಂದು ಇರಾನ್‌ ಹೇಳಿತ್ತು.

ಇರಾನ್‌ನಲ್ಲಿ ಈ ತಿಂಗಳ ಆರಂಭದಲ್ಲಿ ಎರಡು ಆತ್ಮಾಹುತಿ ದಾಳಿ ನಡೆದಿದ್ದು, ಈ ದಾಳಿಯಲ್ಲಿ ಕನಿಷ್ಠ 84 ಜನರು ಮೃತಪಟ್ಟಿದ್ದರು ಮತ್ತು 284 ಜನರು ಗಾಯಗೊಂಡಿದ್ದರು. ಇದಕ್ಕೆ ಪ್ರತೀಕಾರವಾಗಿ ಇರಾಕ್ ಮತ್ತು ಸಿರಿಯಾದಲ್ಲಿ ಇರಾನ್‌ ಕ್ಷಿಪಣಿ ದಾಳಿ ನಡೆಸಿತ್ತು.

ಗಾಝಾದಲ್ಲಿನ ಸಂಘರ್ಷದ ಮಧ್ಯೆ ಈ ಘಟನೆಯು ಇರಾಕ್‌ ಮತ್ತು ಇರಾನ್‌ ನಡುವಿನ ಸಂಬಂಧವನ್ನು ಹದಗೆಡುವಂತೆ ಮಾಡಿದೆ. ಎರಡೂ ದೇಶಗಳು ರಾಜತಾಂತ್ರಿಕ ಸಂಬಂಧಗಳನ್ನು ಉಳಿಸಿಕೊಳ್ಳಲು ಪ್ರಯತ್ನಿಸುತ್ತಿದ್ದವು. ಇರಾನ್ ಈ ಹಿಂದೆ ಜೈಶ್ ಅಲ್-ಅದ್ಲ್ ವಿರುದ್ಧ ಗಡಿಯಲ್ಲಿ ಕದನಗಳಲ್ಲಿ ತೊಡಗಿಸಿಕೊಂಡಿದ್ದರೂ, ಗಡಿಯಾಚೆಗಿನ ಕ್ಷಿಪಣಿ ದಾಳಿಯ ಎಂದಿಗೂ ನಡೆಸಿರಲಿಲ್ಲ.

ಇದನ್ನು ಓದಿ: ‘ಹಿಂದುತ್ವ ವಾಚ್’ ಎಕ್ಸ್‌ ಖಾತೆಗೆ ಭಾರತದಲ್ಲಿ ನಿರ್ಬಂಧ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...