Homeಮುಖಪುಟಪಾಕಿಸ್ತಾನದ 'ಜೈಶ್ ಅಲ್-ಅದ್ಲ್‌' ನೆಲೆಯ ಮೇಲೆ ಇರಾನ್‌ನಿಂದ ಕ್ಷಿಪಣಿ ದಾಳಿ

ಪಾಕಿಸ್ತಾನದ ‘ಜೈಶ್ ಅಲ್-ಅದ್ಲ್‌’ ನೆಲೆಯ ಮೇಲೆ ಇರಾನ್‌ನಿಂದ ಕ್ಷಿಪಣಿ ದಾಳಿ

- Advertisement -
- Advertisement -

ಪಾಕಿಸ್ತಾನದ ಸುನ್ನಿ ತೀವ್ರಗಾಮಿ ಗುಂಪು ಜೈಶ್ ಅಲ್-ಅದ್ಲ್‌ಗೆ ಸೇರಿದ ನೆಲೆಗಳನ್ನು ಗುರಿಯಾಗಿಸಿಕೊಂಡು ಇರಾನ್‌ ಕ್ಷಿಪಣಿ ದಾಳಿ ನಡೆಸಿದ್ದು, ಇಬ್ಬರು ಮಕ್ಕಳು ಮೃತಪಟ್ಟಿದ್ದಾರೆ ಮತ್ತು ಮೂವರಿಗೆ ಗಾಯಗಳಾಗಿವೆ ಎಂದು ಪಾಕಿಸ್ತಾನ ತಿಳಿಸಿದೆ. ಇರಾನ್ ಕಳೆದ ಕೆಲ ದಿನಗಳಿಂದ ಸಿರಿಯಾ ಮತ್ತು ಇರಾಕ್ ಮೇಲೆ ಇದೇ ರೀತಿಯ ದಾಳಿಯನ್ನು ನಡೆಸಿತ್ತು.

ಪಾಕಿಸ್ತಾನದ ಸುನ್ನಿ ತೀವ್ರಗಾಮಿ ಗುಂಪು ಜೈಶ್ ಅಲ್-ಅದ್ಲ್‌ಗೆ ಸೇರಿದ ನೆಲೆಗಳ ಮೇಲೆ ಕಾರ್ಯಾಚರಣೆಗೆ ಡ್ರೋನ್‌ಗಳು ಮತ್ತು ಕ್ಷಿಪಣಿಗಳನ್ನು ಬಳಸಲಾಗಿದೆ ಎಂದು ಇರಾನ್‌ನ ಸರ್ಕಾರಿ ಮಾದ್ಯಮಗಳು ವರದಿ ಮಾಡಿದೆ.

ಪಾಕಿಸ್ತಾನದ ವಿದೇಶಾಂಗ ಸಚಿವಾಲಯವು ದಾಳಿಯನ್ನು ದೃಢಪಡಿಸಿದ್ದು, ಇದು ಪಾಕ್‌ನ ವಾಯುಪ್ರದೇಶದ ಮೇಲೆ ನಡೆದ ಅಪ್ರಚೋದಿತ ದಾಳಿ ಎಂದು ಹೇಳಿಕೊಂಡಿದೆ. ಘಟನೆಯಲ್ಲಿ ಇಬ್ಬರು ಮಕ್ಕಳು ಸಾವನ್ನಪ್ಪಿದ್ದಾರೆ. ಮೂವರು ಗಾಯಗೊಂಡಿದ್ದಾರೆ. ಈ ದಾಳಿಯು ಸಂಪೂರ್ಣವಾಗಿ ಸ್ವೀಕಾರಾರ್ಹವಲ್ಲ ಮತ್ತು ವಾಯುನೆಲೆಯ ನಿಯಮಗಳನ್ನು ಉಲ್ಲಂಘಿಸಿ ಇರಾನ್‌ ದಾಳಿ ನಡೆಸಿದೆ. ಇಂತಹ ಕ್ರಮಗಳು ಉಭಯ ದೇಶಗಳ ನಡುವೆವಿನ ಸಂಬಂಧದ ಮೇಲೆ ಗಂಭೀರ ಪರಿಣಾಮ ಉಂಟುಮಾಡಬಹುದು ಎಂದು ವಿದೇಶಾಂಗ ಸಚಿವಾಲಯದ ಹೇಳಿಕೆಯು ತಿಳಿಸಿದೆ. ಇರಾನ್ ರಾಯಭಾರಿಯನ್ನು ಕರೆಸಿಕೊಂಡಿರುವ ಪಾಕ್‌, ಕ್ಷಿಪಣಿ ದಾಳಿ ಉಭಯ ದೇಶಗಳ ನಡುವಿನ ರಾಜತಾಂತ್ರಿಕ ಸಂಬಂಧದ ಮೇಲೆ ಪರಿಣಾಮ ಬೀರುವ ಸಾಧ್ಯತೆಯಿದೆ ಎಂದು ಎಚ್ಚರಿಸಿದೆ.

ಪಾಕಿಸ್ತಾನ ಹಾಗೂ ಇರಾನ್ ನಡುವೆ ಸಂವಹನಕ್ಕೆ ಹಲವು ಮಾರ್ಗಗಳಿದ್ದರೂ, ಈ ದಾಳಿಯನ್ನು ನಡೆಸಿರುವುದು  ಹೆಚ್ಚು ಕಳವಳಕಾರಿ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಹೇಳಿದೆ. ಭಯೋತ್ಪಾದಕತೆ ಈ ಭಾಗದ ಎಲ್ಲ ದೇಶಗಳಿಗೆ ಸಮಾನ ಅಪಾಯ ಎನ್ನುವುದನ್ನು ಪಾಕಿಸ್ತಾನ ಪ್ರತಿಪಾದಿಸುತ್ತ ಬಂದಿದೆ ಹಾಗೂ ಇದರ ತಡೆಗೆ ಪರಸ್ಪರ ಸಮನ್ವಯದ ಕ್ರಮ ಅಗತ್ಯವಾಗಿದೆ. ಇಂಥ ಏಕಪಕ್ಷೀಯ ಕೃತ್ಯಗಳು ನೆರೆಹೊರೆಯ ದೇಶಗಳ ನಡುವಿನ ಉತ್ತಮ ಬಾಂಧವ್ಯಕ್ಕೆ ಪೂರಕವಲ್ಲ ಹಾಗೂ ದ್ವಿಪಕ್ಷೀಯ ವಿಶ್ವಾಸಕ್ಕೆ ಗಂಭೀರವಾಗಿ ಧಕ್ಕೆ ತರುವಂಥದ್ದು ಎಂದು ಹೇಳಿದೆ.

ಜೈಶ್ ಅಲ್ ಅದ್ಲ್‌:

ಪಾಕಿಸ್ತಾನ ತೀವ್ರಗಾಮಿ ಸಂಘಟನೆಗಳನ್ನು ಪಾಕಿಸ್ತಾನ ಪೋಷಿಸುತ್ತಿದೆ ಎಂದು ಇರಾನ್‌ ಈ ಹಿಂದೆಯೇ ಅಸಮಾಧಾನ ವ್ಯಕ್ತಪಡಿಸಿತ್ತು.  ‘ಜೈಶ್ ಅಲ್ ಅದ್ಲ್‌‘ ಪಾಕಿಸ್ತಾನದ ಬಲೂಚಿಯಲ್ಲಿ ನೆಲೆಯೂರಿರುವ ಒಂದು ತೀವ್ರಗಾಮಿ ಸಂಘಟನೆಯಾಗಿದೆ. ಇದು 2012ರಲ್ಲಿ ಸ್ಠಾಪನೆಗೊಂಡಿತ್ತು. ಜೈಶ್ ಅಲ್ ಅದ್ಲ್‌  ತೀವ್ರಗಾಮಿ ಗುಂಪನ್ನು ಹೆಡೆಮುರಿ ಕಟ್ಟವುದಾಗಿ ಇರಾನ್ ಪ್ರಯತ್ನಿಸಿದ್ದು,  ಅದರ ವಿರುದ್ಧ ಗಡಿಯಲ್ಲಿ ಯುದ್ಧ ಸಾರಿತ್ತು. ತೀವ್ರಗಾಮಿ ಗುಂಪಿನ ನೆಲೆಗಳನ್ನು ನಾಶ ಮಾಡಲು ಕ್ಷಿಪಣಿ ದಾಳಿ ನಡೆಸುವುದು ಅನಿವಾರ್ಯವಾಗಿದೆ ಎಂದು ಇರಾನ್‌ ಹೇಳಿತ್ತು.

ಇರಾನ್‌ನಲ್ಲಿ ಈ ತಿಂಗಳ ಆರಂಭದಲ್ಲಿ ಎರಡು ಆತ್ಮಾಹುತಿ ದಾಳಿ ನಡೆದಿದ್ದು, ಈ ದಾಳಿಯಲ್ಲಿ ಕನಿಷ್ಠ 84 ಜನರು ಮೃತಪಟ್ಟಿದ್ದರು ಮತ್ತು 284 ಜನರು ಗಾಯಗೊಂಡಿದ್ದರು. ಇದಕ್ಕೆ ಪ್ರತೀಕಾರವಾಗಿ ಇರಾಕ್ ಮತ್ತು ಸಿರಿಯಾದಲ್ಲಿ ಇರಾನ್‌ ಕ್ಷಿಪಣಿ ದಾಳಿ ನಡೆಸಿತ್ತು.

ಗಾಝಾದಲ್ಲಿನ ಸಂಘರ್ಷದ ಮಧ್ಯೆ ಈ ಘಟನೆಯು ಇರಾಕ್‌ ಮತ್ತು ಇರಾನ್‌ ನಡುವಿನ ಸಂಬಂಧವನ್ನು ಹದಗೆಡುವಂತೆ ಮಾಡಿದೆ. ಎರಡೂ ದೇಶಗಳು ರಾಜತಾಂತ್ರಿಕ ಸಂಬಂಧಗಳನ್ನು ಉಳಿಸಿಕೊಳ್ಳಲು ಪ್ರಯತ್ನಿಸುತ್ತಿದ್ದವು. ಇರಾನ್ ಈ ಹಿಂದೆ ಜೈಶ್ ಅಲ್-ಅದ್ಲ್ ವಿರುದ್ಧ ಗಡಿಯಲ್ಲಿ ಕದನಗಳಲ್ಲಿ ತೊಡಗಿಸಿಕೊಂಡಿದ್ದರೂ, ಗಡಿಯಾಚೆಗಿನ ಕ್ಷಿಪಣಿ ದಾಳಿಯ ಎಂದಿಗೂ ನಡೆಸಿರಲಿಲ್ಲ.

ಇದನ್ನು ಓದಿ: ‘ಹಿಂದುತ್ವ ವಾಚ್’ ಎಕ್ಸ್‌ ಖಾತೆಗೆ ಭಾರತದಲ್ಲಿ ನಿರ್ಬಂಧ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ರೈತರ ವಿಚಾರದಲ್ಲಿ ಸರ್ಕಾರದ ನಿರ್ಧಾರ ಸ್ವಾಗತಾರ್ಹ ಆದರೆ.., ಸಂಯುಕ್ತ ಹೋರಾಟ ಸಮಿತಿಯ ಎಚ್ಚರಿಕೆಯ ಮಾತು

ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಬಲವಂತವಾಗಿ ಯಾವುದೇ ರೈತರ ಭೂಮಿ ಕಿತ್ತುಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳುತ್ತಿರುವುದು ಕೇವಲ ಮಾತಿನ ಜಾಣ್ಮೆಯಷ್ಟೇ. ಬಿಡದಿ ಭಾಗದ ಮೂರು ಗ್ರಾಮಗಳಿಗೆ ಹೊರಡಿಸಲಾಗಿರುವ ಭೂಸ್ವಾಧೀನದ ಅಂತಿಮ ಅಧಿಸೂಚನೆಯನ್ನು ಸಂಪೂರ್ಣವಾಗಿ...

“8.5 ಕೆಜಿ ತೂಕ ಇಳಿಸಿಕೊಂಡ ಸೋನಮ್ ವಾಂಗ್‌ಚುಕ್ ಜೀವಕ್ಕೆ ಅಪಾಯ: ಬಲವಂತ ಆಹಾರ ನೀಡುವಂತೆ ದೆಹಲಿ ಹೈಕೋರ್ಟ್‌ನಲ್ಲಿ ಪಿಐಎಲ್”

ದೇಶದ ಶೈಕ್ಷಣಿಕ ವ್ಯವಸ್ಥೆಯ ಭವಿಷ್ಯವನ್ನು ಗಾಳಿಗೆ ತೂರಿರುವ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಸಾಲು ಸಾಲು ಭ್ರಷ್ಟಾಚಾರದ ವಿರುದ್ಧ ಸಿಡಿದೆದ್ದು, ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪ್ರಖ್ಯಾತ ಹವಾಮಾನ ಮತ್ತು...

ಇನ್‌ಸ್ಟಾಮಾರ್ಟ್‌ನಲ್ಲಿ ಸಿಗಲಿದೆ ಎಲ್‌ಪಿಜಿ ಸಿಲಿಂಡರ್: ಬೆಂಗಳೂರಿನಲ್ಲಿ ಹೊಸ ಸೇವೆ ಆರಂಭ!

ಬೆಂಗಳೂರು: ದೇಶದಲ್ಲೇ ಮೊದಲ ಬಾರಿಗೆ ಬೆಂಗಳೂರಿನ ಗ್ರಾಹಕರು ಇನ್ನು ಮುಂದೆ ಪ್ರಮುಖ ಕ್ವಿಕ್ ಕಾಮರ್ಸ್ ಸಂಸ್ಥೆಯಾದ 'ಇನ್‌ಸ್ಟಾಮಾರ್ಟ್' (Instamart) ಆ್ಯಪ್ ಮೂಲಕವೇ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳನ್ನು ಬುಕ್ ಮಾಡಬಹುದು. ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್...

ಬಿಡದಿ ರೈತರ ಹೋರಾಟಕ್ಕೆ ಜಯ: ಬಲವಂತವಾಗಿ ಒಬ್ಬೇ ಒಬ್ಬ ರೈತರ ಜಮೀನನ್ನೂ ಪಡೆಯಲ್ಲ ಸಿಎಂ ಡಿ.ಕೆ.ಶಿವಕುಮಾರ್

"ಬಿಡದಿ ಸ್ಮಾರ್ಟ್ ಸಿಟಿ/ಟೌನ್ ಶಿಪ್ ಯೋಜನೆಯ ಹೆಸರಿನಲ್ಲಿ ಬಲವಂತವಾಗಿ ಒಬ್ಬೇ ಒಬ್ಬ ರೈತರ ಅಥವಾ ರೈತ ಮಹಿಳೆಯರ ಜಮೀನನ್ನು ನಮ್ಮ ಸರ್ಕಾರ ಭೂಸ್ವಾಧೀನ ಮಾಡಿಕೊಳ್ಳುವುದಿಲ್ಲ," ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಬಿಡದಿ ಟೌನ್‌ಶಿಪ್...

ಪಶ್ಚಿಮ ಬಂಗಾಳ: TMC ಬಂಡಾಯ ನಾಯಕ ರಿತಬ್ರತ ಬ್ಯಾನರ್ಜಿಗೆ ವಿಪಕ್ಷ ಸ್ಥಾನ ನೀಡಿದ್ದಕ್ಕೆ ನ್ಯಾಯಾಧೀಶರ ತೀವ್ರ ಆಕ್ಷೇಪ

ತೃಣಮೂಲ ಕಾಂಗ್ರೆಸ್‌ನ ಬಂಡಾಯ ಬಣದ ಮುಖ್ಯಸ್ಥ ರಿತಬ್ರತ ಬ್ಯಾನರ್ಜಿ ಅವರನ್ನು ಪಶ್ಚಿಮ ಬಂಗಾಳದ ವಿಧಾನಸಭೆಯ ವಿರೋಧ ಪಕ್ಷದ ನಾಯಕರನ್ನಾಗಿ ನೇಮಕ ಮಾಡುವಲ್ಲಿ ಸ್ಪೀಕರ್ ರತೀಂದ್ರ ಬೋಸ್ ತೋರಿರುವ "ತರಾತುರಿ"ಯನ್ನು ಕಲ್ಕತ್ತಾ ಹೈಕೋರ್ಟ್‌ನ ನ್ಯಾಯಮೂರ್ತಿ...

ಎರಡು ವರ್ಷಗಳಲ್ಲಿ 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ; ಇವರಲ್ಲಿ 193 ಮಂದಿ ವಿದೇಶಿಯರೆಂದು ಘೋಷಿತರು: ಅಸ್ಸಾಂ ಸರ್ಕಾರ

ಗುವಾಹಟಿ: ಕಳೆದ ಎರಡು ವರ್ಷಗಳ ಅವಧಿಯಲ್ಲಿ ಗಡೀಪಾರು, ಗಡಿಯಿಂದ ಆಚೆಗೆ ತಳ್ಳುವಿಕೆ (ಪುಶ್‌ಬ್ಯಾಕ್) ಅಥವಾ ಉಚ್ಚಾಟನೆ ಪ್ರಕ್ರಿಯೆಯ ಮೂಲಕ ಒಟ್ಟು 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ ಎಂದು ಅಸ್ಸಾಂ ಸರ್ಕಾರ ರಾಜ್ಯ ವಿಧಾನಸಭೆಗೆ...

17 ದಿನ, 9 ಕೆಜಿ ತೂಕ ಇಳಿಕೆ, ಸೋನಮ್ ವಾಂಗ್‌ಚುಕ್ ಆರೋಗ್ಯ ಸ್ಥಿತಿ ಗಂಭೀರ: ಉಪವಾಸ ಕೈಬಿಡುವಂತೆ ಅಖಿಲೇಶ್-ಕೇಜ್ರಿವಾಲ್ ಮನವಿ

ದೇಶದ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಸರಣಿ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಭ್ರಷ್ಟಾಚಾರವನ್ನು ವಿರೋಧಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಖ್ಯಾತ ಪರಿಸರ ಕಾರ್ಯಕರ್ತ ಸೋನಮ್...

ಎನ್‌ಸಿಪಿಯ ಎರಡೂ ಬಣಗಳಲ್ಲೂ ಬಿರುಸಿನ ಬೆಳವಣಿಗೆ : ಬಿಜೆಪಿ ತೆಕ್ಕೆಗೆ ಮತ್ತೊಂದು ಪಕ್ಷ?

ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿಯ (ಎನ್‌ಸಿಪಿ) ಎರಡೂ ಬಣಗಳ ಮುಖ್ಯ ನಾಯಕರು ಮಂಗಳವಾರ (ಜು.14) ರಾತ್ರಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಈ ಸಭೆಯು ಶರದ್ ಪವಾರ್ ಅವರ...

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...