Homeಮುಖಪುಟಪಾಕಿಸ್ತಾನದ 'ಜೈಶ್ ಅಲ್-ಅದ್ಲ್‌' ನೆಲೆಯ ಮೇಲೆ ಇರಾನ್‌ನಿಂದ ಕ್ಷಿಪಣಿ ದಾಳಿ

ಪಾಕಿಸ್ತಾನದ ‘ಜೈಶ್ ಅಲ್-ಅದ್ಲ್‌’ ನೆಲೆಯ ಮೇಲೆ ಇರಾನ್‌ನಿಂದ ಕ್ಷಿಪಣಿ ದಾಳಿ

- Advertisement -
- Advertisement -

ಪಾಕಿಸ್ತಾನದ ಸುನ್ನಿ ತೀವ್ರಗಾಮಿ ಗುಂಪು ಜೈಶ್ ಅಲ್-ಅದ್ಲ್‌ಗೆ ಸೇರಿದ ನೆಲೆಗಳನ್ನು ಗುರಿಯಾಗಿಸಿಕೊಂಡು ಇರಾನ್‌ ಕ್ಷಿಪಣಿ ದಾಳಿ ನಡೆಸಿದ್ದು, ಇಬ್ಬರು ಮಕ್ಕಳು ಮೃತಪಟ್ಟಿದ್ದಾರೆ ಮತ್ತು ಮೂವರಿಗೆ ಗಾಯಗಳಾಗಿವೆ ಎಂದು ಪಾಕಿಸ್ತಾನ ತಿಳಿಸಿದೆ. ಇರಾನ್ ಕಳೆದ ಕೆಲ ದಿನಗಳಿಂದ ಸಿರಿಯಾ ಮತ್ತು ಇರಾಕ್ ಮೇಲೆ ಇದೇ ರೀತಿಯ ದಾಳಿಯನ್ನು ನಡೆಸಿತ್ತು.

ಪಾಕಿಸ್ತಾನದ ಸುನ್ನಿ ತೀವ್ರಗಾಮಿ ಗುಂಪು ಜೈಶ್ ಅಲ್-ಅದ್ಲ್‌ಗೆ ಸೇರಿದ ನೆಲೆಗಳ ಮೇಲೆ ಕಾರ್ಯಾಚರಣೆಗೆ ಡ್ರೋನ್‌ಗಳು ಮತ್ತು ಕ್ಷಿಪಣಿಗಳನ್ನು ಬಳಸಲಾಗಿದೆ ಎಂದು ಇರಾನ್‌ನ ಸರ್ಕಾರಿ ಮಾದ್ಯಮಗಳು ವರದಿ ಮಾಡಿದೆ.

ಪಾಕಿಸ್ತಾನದ ವಿದೇಶಾಂಗ ಸಚಿವಾಲಯವು ದಾಳಿಯನ್ನು ದೃಢಪಡಿಸಿದ್ದು, ಇದು ಪಾಕ್‌ನ ವಾಯುಪ್ರದೇಶದ ಮೇಲೆ ನಡೆದ ಅಪ್ರಚೋದಿತ ದಾಳಿ ಎಂದು ಹೇಳಿಕೊಂಡಿದೆ. ಘಟನೆಯಲ್ಲಿ ಇಬ್ಬರು ಮಕ್ಕಳು ಸಾವನ್ನಪ್ಪಿದ್ದಾರೆ. ಮೂವರು ಗಾಯಗೊಂಡಿದ್ದಾರೆ. ಈ ದಾಳಿಯು ಸಂಪೂರ್ಣವಾಗಿ ಸ್ವೀಕಾರಾರ್ಹವಲ್ಲ ಮತ್ತು ವಾಯುನೆಲೆಯ ನಿಯಮಗಳನ್ನು ಉಲ್ಲಂಘಿಸಿ ಇರಾನ್‌ ದಾಳಿ ನಡೆಸಿದೆ. ಇಂತಹ ಕ್ರಮಗಳು ಉಭಯ ದೇಶಗಳ ನಡುವೆವಿನ ಸಂಬಂಧದ ಮೇಲೆ ಗಂಭೀರ ಪರಿಣಾಮ ಉಂಟುಮಾಡಬಹುದು ಎಂದು ವಿದೇಶಾಂಗ ಸಚಿವಾಲಯದ ಹೇಳಿಕೆಯು ತಿಳಿಸಿದೆ. ಇರಾನ್ ರಾಯಭಾರಿಯನ್ನು ಕರೆಸಿಕೊಂಡಿರುವ ಪಾಕ್‌, ಕ್ಷಿಪಣಿ ದಾಳಿ ಉಭಯ ದೇಶಗಳ ನಡುವಿನ ರಾಜತಾಂತ್ರಿಕ ಸಂಬಂಧದ ಮೇಲೆ ಪರಿಣಾಮ ಬೀರುವ ಸಾಧ್ಯತೆಯಿದೆ ಎಂದು ಎಚ್ಚರಿಸಿದೆ.

ಪಾಕಿಸ್ತಾನ ಹಾಗೂ ಇರಾನ್ ನಡುವೆ ಸಂವಹನಕ್ಕೆ ಹಲವು ಮಾರ್ಗಗಳಿದ್ದರೂ, ಈ ದಾಳಿಯನ್ನು ನಡೆಸಿರುವುದು  ಹೆಚ್ಚು ಕಳವಳಕಾರಿ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಹೇಳಿದೆ. ಭಯೋತ್ಪಾದಕತೆ ಈ ಭಾಗದ ಎಲ್ಲ ದೇಶಗಳಿಗೆ ಸಮಾನ ಅಪಾಯ ಎನ್ನುವುದನ್ನು ಪಾಕಿಸ್ತಾನ ಪ್ರತಿಪಾದಿಸುತ್ತ ಬಂದಿದೆ ಹಾಗೂ ಇದರ ತಡೆಗೆ ಪರಸ್ಪರ ಸಮನ್ವಯದ ಕ್ರಮ ಅಗತ್ಯವಾಗಿದೆ. ಇಂಥ ಏಕಪಕ್ಷೀಯ ಕೃತ್ಯಗಳು ನೆರೆಹೊರೆಯ ದೇಶಗಳ ನಡುವಿನ ಉತ್ತಮ ಬಾಂಧವ್ಯಕ್ಕೆ ಪೂರಕವಲ್ಲ ಹಾಗೂ ದ್ವಿಪಕ್ಷೀಯ ವಿಶ್ವಾಸಕ್ಕೆ ಗಂಭೀರವಾಗಿ ಧಕ್ಕೆ ತರುವಂಥದ್ದು ಎಂದು ಹೇಳಿದೆ.

ಜೈಶ್ ಅಲ್ ಅದ್ಲ್‌:

ಪಾಕಿಸ್ತಾನ ತೀವ್ರಗಾಮಿ ಸಂಘಟನೆಗಳನ್ನು ಪಾಕಿಸ್ತಾನ ಪೋಷಿಸುತ್ತಿದೆ ಎಂದು ಇರಾನ್‌ ಈ ಹಿಂದೆಯೇ ಅಸಮಾಧಾನ ವ್ಯಕ್ತಪಡಿಸಿತ್ತು.  ‘ಜೈಶ್ ಅಲ್ ಅದ್ಲ್‌‘ ಪಾಕಿಸ್ತಾನದ ಬಲೂಚಿಯಲ್ಲಿ ನೆಲೆಯೂರಿರುವ ಒಂದು ತೀವ್ರಗಾಮಿ ಸಂಘಟನೆಯಾಗಿದೆ. ಇದು 2012ರಲ್ಲಿ ಸ್ಠಾಪನೆಗೊಂಡಿತ್ತು. ಜೈಶ್ ಅಲ್ ಅದ್ಲ್‌  ತೀವ್ರಗಾಮಿ ಗುಂಪನ್ನು ಹೆಡೆಮುರಿ ಕಟ್ಟವುದಾಗಿ ಇರಾನ್ ಪ್ರಯತ್ನಿಸಿದ್ದು,  ಅದರ ವಿರುದ್ಧ ಗಡಿಯಲ್ಲಿ ಯುದ್ಧ ಸಾರಿತ್ತು. ತೀವ್ರಗಾಮಿ ಗುಂಪಿನ ನೆಲೆಗಳನ್ನು ನಾಶ ಮಾಡಲು ಕ್ಷಿಪಣಿ ದಾಳಿ ನಡೆಸುವುದು ಅನಿವಾರ್ಯವಾಗಿದೆ ಎಂದು ಇರಾನ್‌ ಹೇಳಿತ್ತು.

ಇರಾನ್‌ನಲ್ಲಿ ಈ ತಿಂಗಳ ಆರಂಭದಲ್ಲಿ ಎರಡು ಆತ್ಮಾಹುತಿ ದಾಳಿ ನಡೆದಿದ್ದು, ಈ ದಾಳಿಯಲ್ಲಿ ಕನಿಷ್ಠ 84 ಜನರು ಮೃತಪಟ್ಟಿದ್ದರು ಮತ್ತು 284 ಜನರು ಗಾಯಗೊಂಡಿದ್ದರು. ಇದಕ್ಕೆ ಪ್ರತೀಕಾರವಾಗಿ ಇರಾಕ್ ಮತ್ತು ಸಿರಿಯಾದಲ್ಲಿ ಇರಾನ್‌ ಕ್ಷಿಪಣಿ ದಾಳಿ ನಡೆಸಿತ್ತು.

ಗಾಝಾದಲ್ಲಿನ ಸಂಘರ್ಷದ ಮಧ್ಯೆ ಈ ಘಟನೆಯು ಇರಾಕ್‌ ಮತ್ತು ಇರಾನ್‌ ನಡುವಿನ ಸಂಬಂಧವನ್ನು ಹದಗೆಡುವಂತೆ ಮಾಡಿದೆ. ಎರಡೂ ದೇಶಗಳು ರಾಜತಾಂತ್ರಿಕ ಸಂಬಂಧಗಳನ್ನು ಉಳಿಸಿಕೊಳ್ಳಲು ಪ್ರಯತ್ನಿಸುತ್ತಿದ್ದವು. ಇರಾನ್ ಈ ಹಿಂದೆ ಜೈಶ್ ಅಲ್-ಅದ್ಲ್ ವಿರುದ್ಧ ಗಡಿಯಲ್ಲಿ ಕದನಗಳಲ್ಲಿ ತೊಡಗಿಸಿಕೊಂಡಿದ್ದರೂ, ಗಡಿಯಾಚೆಗಿನ ಕ್ಷಿಪಣಿ ದಾಳಿಯ ಎಂದಿಗೂ ನಡೆಸಿರಲಿಲ್ಲ.

ಇದನ್ನು ಓದಿ: ‘ಹಿಂದುತ್ವ ವಾಚ್’ ಎಕ್ಸ್‌ ಖಾತೆಗೆ ಭಾರತದಲ್ಲಿ ನಿರ್ಬಂಧ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಸ್‌ಐಆರ್‌ಗೂ ಸರ್ಕಾರಿ ಸೌಲಭ್ಯಕ್ಕೂ ಲಿಂಕ್; ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ : ನಿಜವಾದ ಆತಂಕ

ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳದ ಹೊಸ ಸರ್ಕಾರ ನೀಡಿರುವ ಆದೇಶಗಳ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ 23 ಜೂನ್ 2026ರಂದು ನಿರಾಕರಿಸಿದೆ. ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ವಿಶೇಷ...

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...

‘ಆರ್‌ಎಸ್‌ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದೆ’: ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಹಾಗೂ ಆಡಳಿತಾರೂಢ ಬಿಜೆಪಿ ವಿರುದ್ಧ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ತೀವ್ರ ಸ್ವರೂಪದ ಸೈದ್ಧಾಂತಿಕ ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸರಣಿ ಪ್ರಶ್ನೆಗಳನ್ನು...

ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಜಾರಿಯ ಜೊತೆಯಲ್ಲೆ ಸುಪ್ರೀಂ ಕೋರ್ಟ್‌ಗೆ ಹೋಗಲು ಕರ್ನಾಟಕ ಸಜ್ಜು

ಕೇಂದ್ರ ಸರ್ಕಾರದ ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ‘ವಿಕಸಿತ ಭಾರತ-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ)’ (VB-G RAM G) ಕಾಯ್ದೆಯ ಹಲವು ನಿಯಮಗಳಿಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದರೂ...

ಉತ್ತರ ಪ್ರದೇಶ: ಮದುವೆ ರಿಸೆಪ್ಷನ್‌ನಲ್ಲಿ ಗೋಮಾಂಸ ಬಡಿಸಿದ ಆರೋಪ; ವರನ ತಂದೆ ಸೇರಿ ಏಳು ಮಂದಿ ಬಂಧನ, ಮಂಟಪ ಸೀಲ್

ಶಾಮ್ಲಿ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಶಾಮ್ಲಿ ಜಿಲ್ಲೆಯ ಕೈರಾನಾ ಪಟ್ಟಣದಲ್ಲಿ ನಡೆದ ಮದುವೆ ಆರತಕ್ಷತೆ (ವಲೀಮಾ) ಸಮಾರಂಭವೊಂದು ಈಗ ಭಾರೀ ವಿವಾದಕ್ಕೆ ಕಾರಣವಾಗಿದೆ. ಸಮಾರಂಭದಲ್ಲಿ ಅತಿಥಿಗಳಿಗೆ ಗೋಮಾಂಸವನ್ನು ಬೇಯಿಸಿ ಬಡಿಸಲಾಗಿದೆ ಎಂಬ...

ರಾಮ ಮಂದಿರ ದೇಣಿಗೆ ವಿವಾದ: ಎಫ್‌ಐಆರ್ ದಾಖಲಿಸಿ ತ್ವರಿತ ನ್ಯಾಯಾಲಯದ ವಿಚಾರಣೆಗೆ ವಿಶ್ವ ಹಿಂದೂ ಪರಿಷತ್ ಆಗ್ರಹ

ರಾಮ ದೇಣಿಗೆ ವಿವಾದ ದುರುಪಯೋಗ ಕುರಿತು ಎಸ್‌ಐಟಿ ತನ್ನ ಪ್ರಾಥಮಿಕ ವರದಿಯನ್ನು ಸಲ್ಲಿಸಿದ ಕೂಡಲೇ, ಬಲಪಂಥೀಯ ಹಿಂದುತ್ವ ಸಂಘಟನೆ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಪ್ರಕರಣದಲ್ಲಿ ಎಫ್‌ಐಆರ್ ದಾಖಲಿಸಬೇಕೆಂದು ಒತ್ತಾಯಿಸಿದೆ. ವಿಎಚ್‌ಪಿ ಅಂತರರಾಷ್ಟ್ರೀಯ...

ಪಾಸ್‌ಪೋರ್ಟ್ ಪೌರತ್ವದ ದಾಖಲೆಯಲ್ಲ: ವಿದೇಶಾಂಗ ಸಚಿವಾಲಯ

ಪಾಸ್‌ಪೋರ್ಟ್ ಒಂದು ಪ್ರಯಾಣದ ದಾಖಲೆಯಾಗಿದೆಯೇ ಹೊರತು, ಪೌರತ್ವದ ದಾಖಲೆಯಲ್ಲ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ (ಎಂಇಎ) ಅಧಿಕಾರಿಗಳು ಬುಧವಾರ (ಜೂನ್ 24) ತಿಳಿಸಿದ್ದಾರೆ. ಈ ಮೂಲಕ ಅವರು ಭಾರತೀಯ ಪೌರತ್ವವನ್ನು ಖಚಿತವಾಗಿ ಸಾಬೀತುಪಡಿಸುವ...

90 ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದೆ ಆದರೆ ಪ್ರಧಾನ್ ತಮ್ಮ ಕುರ್ಚಿಗೆ ಅಂಟಿಕೊಂಡಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ 'ನೀಟ್' (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ತಮ್ಮ ಆಕ್ರೋಶವನ್ನು ಮತ್ತಷ್ಟು ತೀವ್ರಗೊಳಿಸಿವೆ. ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ...

2023ರಿಂದ 20 ಸಾವಿರಕ್ಕೂ ಹೆಚ್ಚು ಪ್ಯಾಲೆಸ್ತೀನ್ ಮಕ್ಕಳನ್ನು ಹತ್ಯೆಗೈದ ಇಸ್ರೇಲ್; ಉದ್ದೇಶಪೂರ್ವಕ ‘ನರಮೇಧ’ ಎಂದ ವರದಿ

ಪ್ಯಾಲೆಸ್ತೀನ್ ಮಕ್ಕಳನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿಕೊಂಡು ಹತ್ಯೆ ಮಾಡುವ ಮೂಲಕ ಇಸ್ರೇಲ್‌ ಸೇನೆ ನರಮೇಧ ನಡೆಸಿದೆ ಎಂದು ವಿಶ್ವಸಂಸ್ಥೆಯ ಸ್ವತಂತ್ರ ಅಂತಾರಾಷ್ಟ್ರೀಯ ವಿಚಾರಣಾ ಆಯೋಗ ಮಂಗಳವಾರ (ಜೂ.23) ತಿಳಿಸಿದೆ. ಇಸ್ರೇಲ್ ಪಡೆಗಳು ಅಕ್ಟೋಬರ್ 2023ರಿಂದ ಈವರೆಗೆ...

ಮೀಸಲಾತಿ ರದ್ದುಗೊಳಿಸಲು ಬಿಜೆಪಿ ಮೂರನೇ ಎರಡರಷ್ಟು ಬಹುಮತ ಬಯಸುತ್ತಿದೆ: ಜೈರಾಮ್‌ ರಮೇಶ್‌

ಲೋಕಸಭೆಯಲ್ಲಿ ಬಿಜೆಪಿ ಮೂರನೇ ಎರಡರಷ್ಟು ಬಹುಮತಕ್ಕಾಗಿ ಶ್ರಮಿಸುತ್ತಿದೆ. ಏಕೆಂದರೆ, ಮೀಸಲಾತಿಯನ್ನು ಕೊನೆಗೊಳಿಸಲು ಸಂವಿಧಾನವನ್ನು ತಿದ್ದುಪಡಿ ಮಾಡುವುದು ಅದರ ನಿಜವಾದ ಮತ್ತು ಅಂತಿಮ ಗುರಿಯಾಗಿದೆ ಎಂದು ಕಾಂಗ್ರೆಸ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್...