Homeಮುಖಪುಟಪಾಕಿಸ್ತಾನ: ಶ್ರೀಲಂಕಾದ ವ್ಯಕ್ತಿ ಗುಂಪು ದಾಳಿಗೆ ಬಲಿ; ಸಾರ್ವಜನಿಕವಾಗಿ ಸುಟ್ಟು ವಿಕೃತಿ

ಪಾಕಿಸ್ತಾನ: ಶ್ರೀಲಂಕಾದ ವ್ಯಕ್ತಿ ಗುಂಪು ದಾಳಿಗೆ ಬಲಿ; ಸಾರ್ವಜನಿಕವಾಗಿ ಸುಟ್ಟು ವಿಕೃತಿ

- Advertisement -
- Advertisement -

ಧರ್ಮನಿಂದನೆಯ ಆರೋಪದ ಮೇಲೆ ಶ್ರೀಲಂಕಾದ ವ್ಯಕ್ತಿಯನ್ನು ಪಾಕಿಸ್ತಾನದಲ್ಲಿ ಗುಂಪು ಹತ್ಯೆ (ಮಾಬ್‌ ಲಿಂಚಿಂಗ್‌) ಮಾಡಲಾಗಿದ್ದು, ಸಾರ್ವಜನಿಕವಾಗಿ ಸುಟ್ಟು ವಿಕೃತಿ ಮೆರೆಯಲಾಗಿದೆ.

ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದ ಸಿಯಾಲ್‌ಕೋಟ್ ಜಿಲ್ಲೆಯಲ್ಲಿ ಶುಕ್ರವಾರ ಶ್ರೀಲಂಕಾದ ವ್ಯಕ್ತಿಯೊಬ್ಬರನ್ನು ಹತ್ಯೆಗೈದು ಅವರ ದೇಹವನ್ನು ದುಷ್ಕರ್ಮಿಗಳ ಗುಂಪು ಸಾರ್ವಜನಿಕವಾಗಿ ಸುಟ್ಟು ಹಾಕಿದೆ ಎಂದು ಎಪಿ ವರದಿ ಮಾಡಿದೆ. ಕೊಲೆಯಾದ ವ್ಯಕ್ತಿಯು ಪ್ರವಾದಿ ಮುಹಮ್ಮದ್ ಅವರ ಹೆಸರಿನ ಪೋಸ್ಟರ್‌ಗಳನ್ನು ಅಪವಿತ್ರಗೊಳಿಸಿದ್ದರು ಎಂದು ಆರೋಪಿಸಲಾಗಿದೆ. ಕೊಲೆಯಾದ ವ್ಯಕ್ತಿಯನ್ನು ಪ್ರಿಯಾಂತ ಕುಮಾರ ಎಂದು ಗುರುತಿಸಲಾಗಿದೆ.

ಧಾರ್ಮಿಕ ವ್ಯವಹಾರಗಳು ಮತ್ತು ಸರ್ವಧರ್ಮ ಸೌಹಾರ್ದತೆಯ ವಿಶೇಷ ಪ್ರತಿನಿಧಿ ಹಫೀಜ್ ತಾಹಿರ್ ಮೆಹಮೂದ್ ಅಶ್ರಫಿ ಮಾತನಾಡಿ, “ಇದುವರೆಗೆ 50 ಜನರನ್ನು ಬಂಧಿಸಲಾಗಿದೆ, ಹತ್ಯೆಯ ಸಿಸಿಟಿವಿ ದೃಶ್ಯಾವಳಿಗಳ ಆಧಾರದ ಮೇಲೆ ಹೆಚ್ಚಿನ ಮಾಹಿತಿಗಳನ್ನು ಪೊಲೀಸರು ಪತ್ತೆಹಚ್ಚುತ್ತಿದ್ದಾರೆ” ಎಂದು ಹೇಳಿರುವುದಾಗಿ ಪಾಕಿಸ್ತಾನದ ಮಾಧ್ಯಮ ‘ಡಾನ್’ ವರದಿ ಮಾಡಿದೆ.

ದುಷ್ಕರ್ಮಿಗಳ ಗುಂಪು ಶ್ರೀಲಂಕಾದ ವ್ಯಕ್ತಿಯನ್ನು ಕ್ರೀಡಾ ಸಲಕರಣೆಗಳ ಕಾರ್ಖಾನೆಯಿಂದ ಬೀದಿಗೆ ಎಳೆದುಕೊಂಡು ಹೋಗುತ್ತಿರುವ ವಿಡಿಯೋ ವೈರಲ್‌ ಆಗಿದೆ. ಕೊಲೆಯಾದ ವ್ಯಕ್ತಿಯು ಕಾರ್ಖಾನೆಯಲ್ಲಿ ವ್ಯವಸ್ಥಾಪಕನಾಗಿ ಕೆಲಸ ಮಾಡುತ್ತಿದ್ದನು. ಅವರನ್ನು ಕಾರ್ಖಾನೆಯಿಂದ ಹೊರಗೆ ಎಳೆತಂದು ನೂರಾರು ಜನರ ಹರ್ಷೋದ್ಗಾರ ನಡುವೆ ಅವರಿಗೆ ಬೆಂಕಿಹಚ್ಚಲಾಯಿತು ಎಂದು ವರದಿಗಳಾಗಿವೆ.

ಪಾಕಿಸ್ತಾನದಲ್ಲಿ ಕೊಲೆಯಾದ ಶ್ರೀಲಂಕಾದ ವ್ಯಕ್ತಿ ಪ್ರಿಯಾಂತ ಕುಮಾರ (PC: Dawn)

ಇದನ್ನೂ ಓದಿರಿ: ಎನ್‌‌ಇಪಿ: ಅವೈಜ್ಞಾನಿವಾಗಿ ಪಠ್ಯಕ್ರಮ ದಿಢೀರ್ ಬದಲು, ಮಹಾರಾಜ ವಿದ್ಯಾರ್ಥಿಗಳಿಂದ ಭಾರೀ ಪ್ರತಿಭಟನೆ


“ನಾವು ಸತ್ಯಾಂಶಗಳನ್ನು ಪರಿಶೀಲಿಸುತ್ತಿದ್ದೇವೆ. ಪೊಲೀಸರಿಂದ ಯಾವುದೇ ರೀತಿಯ ವಿಳಂಬವಾಗಿದೆಯೇ ಎಂದು ಪ್ರತಿಕ್ರಿಯೆಯನ್ನು ಪಡೆಯುತ್ತಿದ್ದೇವೆ” ಎಂದು ಪಂಜಾಬ್ ಇನ್ಸ್‌ಪೆಕ್ಟರ್ ಜನರಲ್ ರಾವ್ ಸರ್ದಾರ್ ಅಲಿ ಖಾನ್ ಹೇಳಿದ್ದಾರೆ. “ಈ ಘಟನೆಯು ಸೂಕ್ಷ್ಮ ಮತ್ತು ದುರದೃಷ್ಟಕರವಾಗಿದೆ” ಎಂದು ಡಾನ್‌ಗೆ ಅವರು ಪ್ರತಿಕ್ರಿಯೆ ನೀಡಿದ್ದಾರೆ.

ಶ್ರೀಲಂಕಾದ ವ್ಯಕ್ತಿಯನ್ನು ಕೊಲ್ಲಲು ಈ ಗುಂಪನ್ನು ಏಕೆ ಪ್ರೇರೇಪಿಸಿತು ಎಂಬುದನ್ನು ನಿರ್ಧರಿಸಲು ಪ್ರಯತ್ನಿಸುತ್ತಿದ್ದೇವೆ ಎಂದು ಪೊಲೀಸರು ಹೇಳಿದ್ದಾರೆ ಎಂದು ಅಸೋಸಿಯೇಟೆಡ್‌‌ ಪ್ರೆಸ್‌‌ ವರದಿ ಮಾಡಿದೆ. ಮೃತ ವ್ಯಕ್ತಿಯ ದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ಕಳುಹಿಸಲಾಗಿದೆ.

ಘಟನೆಯ ಬಗ್ಗೆ ಕೂಲಂಕಷವಾಗಿ ತನಿಖೆ ನಡೆಸುವಂತೆ ಇನ್ಸ್ ಪೆಕ್ಟರ್ ಜನರಲ್‌ಗೆ ಸೂಚನೆ ನೀಡಿರುವುದಾಗಿ ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದ ಮುಖ್ಯಮಂತ್ರಿ ಉಸ್ಮಾನ್ ಬುಜ್ದಾರ್ ತಿಳಿಸಿದ್ದಾರೆ.

ಕಾನೂನನ್ನು ತಮ್ಮ ಕೈಗೆ ತೆಗೆದುಕೊಳ್ಳಲು ಯಾರಿಗೂ ಅವಕಾಶವಿಲ್ಲ ಎಂದು ಅವರು ಟ್ವೀಟ್‌ ಮಾಡಿದ್ದಾರೆ. “ಈ ಅಮಾನವೀಯ ಕೃತ್ಯದಲ್ಲಿ ಭಾಗಿಯಾಗಿರುವ ವ್ಯಕ್ತಿಗಳನ್ನು ಸುಮ್ಮನೆ ಬಿಡಲಾಗುವುದಿಲ್ಲ” ಎಂದು ಎಚ್ಚರಿಸಿದ್ದಾರೆ.

ಘಟನೆಯನ್ನು ಪಾಕಿಸ್ತಾನದ ಹಲವಾರು ನಾಯಕರು ಖಂಡಿಸಿದ್ದಾರೆ. ಧಾರ್ಮಿಕ ವ್ಯವಹಾರಗಳು ಮತ್ತು ಸರ್ವಧರ್ಮೀಯ ಸೌಹಾರ್ದತೆಯ ವಿಶೇಷ ಪ್ರತಿನಿಧಿ ಹಫೀಜ್ ತಾಹಿರ್ ಮೆಹಮೂದ್ ಅಶ್ರಫಿ ಅವರು, “ಸಾರ್ವಜನಿಕ ಹತ್ಯೆಯು ಇಸ್ಲಾಂ ಧರ್ಮವನ್ನು ಅಪವಿತ್ರಗೊಳಿಸಿದೆ” ಎಂದು ವಿಷಾದಿಸಿರುವುದಾಗಿ ಡಾನ್ ವರದಿ ಮಾಡಿದೆ.

“ಘಟನೆಯಲ್ಲಿ ಒಳಗೊಂಡಿರುವ ಅಂಶಗಳು ಇಸ್ಲಾಮಿಕ್ ಕಾನೂನುಗಳು ಮತ್ತು ಬೋಧನೆಗಳಿಗೆ ಹಾನಿ ಮಾಡಲು ಪ್ರಯತ್ನಿಸಿವೆ” ಎಂದು ಅಭಿಪ್ರಾಯಪಟ್ಟಿರುವ ಅವರು, “ಅನಾಗರಿಕತೆಗಾಗಿ ತಪ್ಪಿತಸ್ಥರಿಗೆ ಶಿಕ್ಷೆಯಾಗುತ್ತದೆ” ಎಂದು ಹೇಳಿದ್ದಾರೆ.

ಪಾಕಿಸ್ತಾನದ ಮಾನವ ಹಕ್ಕುಗಳ ಸಚಿವ ಶಿರೀನ್ ಮಜಾರಿಯವರು ಈ ಹತ್ಯೆಯನ್ನು “ಭಯಾನಕ ಮತ್ತು ಖಂಡನೀಯ” ಎಂದು ಕರೆದಿದ್ದಾರೆ. “ಎಲ್ಲಾ ಅಪರಾಧಗಳಿಗೆ ಕಾನೂನಿನಲ್ಲಿ ಶಿಕ್ಷೆ ಇದೆ. ಯಾವುದೇ ಸಂದರ್ಭದಲ್ಲೂ ಗುಂಪು ಹಿಂಸಾಚಾರವನ್ನು ಒಪ್ಪಿಕೊಳ್ಳಲಾಗುವುದಿಲ್ಲ” ಎಂದು ಅವರು ಟ್ವೀಟ್‌ ಮಾಡಿದ್ದಾರೆ. “ಪಾಕಿಸ್ತಾನದ ಪಂಜಾಬ್ ಸರ್ಕಾರದ ಕ್ರಮವು ದೃಢವಾಗಿರಬೇಕು ಮತ್ತು ನಿಸ್ಸಂದಿಗ್ಧವಾಗಿರಬೇಕು” ಎಂದು ಆಗ್ರಹಿಸಿದ್ದಾರೆ.


ಇದನ್ನೂ ಓದಿರಿ: ಅಂಬೇಡ್ಕರ್ ಝಿಂದಾಬಾದ್ ಘೋಷಣೆಯನ್ನು ಪಾಕಿಸ್ತಾನ ಪರ ಘೋಷಣೆ ಎಂದು ತಿರುಚಿದ ಪ್ರಕರಣ: ಪಿಎಫ್ಐ ಖಂಡನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...