Homeಮುಖಪುಟಪಾಕಿಸ್ತಾನ: ಶ್ರೀಲಂಕಾದ ವ್ಯಕ್ತಿ ಗುಂಪು ದಾಳಿಗೆ ಬಲಿ; ಸಾರ್ವಜನಿಕವಾಗಿ ಸುಟ್ಟು ವಿಕೃತಿ

ಪಾಕಿಸ್ತಾನ: ಶ್ರೀಲಂಕಾದ ವ್ಯಕ್ತಿ ಗುಂಪು ದಾಳಿಗೆ ಬಲಿ; ಸಾರ್ವಜನಿಕವಾಗಿ ಸುಟ್ಟು ವಿಕೃತಿ

- Advertisement -
- Advertisement -

ಧರ್ಮನಿಂದನೆಯ ಆರೋಪದ ಮೇಲೆ ಶ್ರೀಲಂಕಾದ ವ್ಯಕ್ತಿಯನ್ನು ಪಾಕಿಸ್ತಾನದಲ್ಲಿ ಗುಂಪು ಹತ್ಯೆ (ಮಾಬ್‌ ಲಿಂಚಿಂಗ್‌) ಮಾಡಲಾಗಿದ್ದು, ಸಾರ್ವಜನಿಕವಾಗಿ ಸುಟ್ಟು ವಿಕೃತಿ ಮೆರೆಯಲಾಗಿದೆ.

ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದ ಸಿಯಾಲ್‌ಕೋಟ್ ಜಿಲ್ಲೆಯಲ್ಲಿ ಶುಕ್ರವಾರ ಶ್ರೀಲಂಕಾದ ವ್ಯಕ್ತಿಯೊಬ್ಬರನ್ನು ಹತ್ಯೆಗೈದು ಅವರ ದೇಹವನ್ನು ದುಷ್ಕರ್ಮಿಗಳ ಗುಂಪು ಸಾರ್ವಜನಿಕವಾಗಿ ಸುಟ್ಟು ಹಾಕಿದೆ ಎಂದು ಎಪಿ ವರದಿ ಮಾಡಿದೆ. ಕೊಲೆಯಾದ ವ್ಯಕ್ತಿಯು ಪ್ರವಾದಿ ಮುಹಮ್ಮದ್ ಅವರ ಹೆಸರಿನ ಪೋಸ್ಟರ್‌ಗಳನ್ನು ಅಪವಿತ್ರಗೊಳಿಸಿದ್ದರು ಎಂದು ಆರೋಪಿಸಲಾಗಿದೆ. ಕೊಲೆಯಾದ ವ್ಯಕ್ತಿಯನ್ನು ಪ್ರಿಯಾಂತ ಕುಮಾರ ಎಂದು ಗುರುತಿಸಲಾಗಿದೆ.

ಧಾರ್ಮಿಕ ವ್ಯವಹಾರಗಳು ಮತ್ತು ಸರ್ವಧರ್ಮ ಸೌಹಾರ್ದತೆಯ ವಿಶೇಷ ಪ್ರತಿನಿಧಿ ಹಫೀಜ್ ತಾಹಿರ್ ಮೆಹಮೂದ್ ಅಶ್ರಫಿ ಮಾತನಾಡಿ, “ಇದುವರೆಗೆ 50 ಜನರನ್ನು ಬಂಧಿಸಲಾಗಿದೆ, ಹತ್ಯೆಯ ಸಿಸಿಟಿವಿ ದೃಶ್ಯಾವಳಿಗಳ ಆಧಾರದ ಮೇಲೆ ಹೆಚ್ಚಿನ ಮಾಹಿತಿಗಳನ್ನು ಪೊಲೀಸರು ಪತ್ತೆಹಚ್ಚುತ್ತಿದ್ದಾರೆ” ಎಂದು ಹೇಳಿರುವುದಾಗಿ ಪಾಕಿಸ್ತಾನದ ಮಾಧ್ಯಮ ‘ಡಾನ್’ ವರದಿ ಮಾಡಿದೆ.

ದುಷ್ಕರ್ಮಿಗಳ ಗುಂಪು ಶ್ರೀಲಂಕಾದ ವ್ಯಕ್ತಿಯನ್ನು ಕ್ರೀಡಾ ಸಲಕರಣೆಗಳ ಕಾರ್ಖಾನೆಯಿಂದ ಬೀದಿಗೆ ಎಳೆದುಕೊಂಡು ಹೋಗುತ್ತಿರುವ ವಿಡಿಯೋ ವೈರಲ್‌ ಆಗಿದೆ. ಕೊಲೆಯಾದ ವ್ಯಕ್ತಿಯು ಕಾರ್ಖಾನೆಯಲ್ಲಿ ವ್ಯವಸ್ಥಾಪಕನಾಗಿ ಕೆಲಸ ಮಾಡುತ್ತಿದ್ದನು. ಅವರನ್ನು ಕಾರ್ಖಾನೆಯಿಂದ ಹೊರಗೆ ಎಳೆತಂದು ನೂರಾರು ಜನರ ಹರ್ಷೋದ್ಗಾರ ನಡುವೆ ಅವರಿಗೆ ಬೆಂಕಿಹಚ್ಚಲಾಯಿತು ಎಂದು ವರದಿಗಳಾಗಿವೆ.

ಪಾಕಿಸ್ತಾನದಲ್ಲಿ ಕೊಲೆಯಾದ ಶ್ರೀಲಂಕಾದ ವ್ಯಕ್ತಿ ಪ್ರಿಯಾಂತ ಕುಮಾರ (PC: Dawn)

ಇದನ್ನೂ ಓದಿರಿ: ಎನ್‌‌ಇಪಿ: ಅವೈಜ್ಞಾನಿವಾಗಿ ಪಠ್ಯಕ್ರಮ ದಿಢೀರ್ ಬದಲು, ಮಹಾರಾಜ ವಿದ್ಯಾರ್ಥಿಗಳಿಂದ ಭಾರೀ ಪ್ರತಿಭಟನೆ


“ನಾವು ಸತ್ಯಾಂಶಗಳನ್ನು ಪರಿಶೀಲಿಸುತ್ತಿದ್ದೇವೆ. ಪೊಲೀಸರಿಂದ ಯಾವುದೇ ರೀತಿಯ ವಿಳಂಬವಾಗಿದೆಯೇ ಎಂದು ಪ್ರತಿಕ್ರಿಯೆಯನ್ನು ಪಡೆಯುತ್ತಿದ್ದೇವೆ” ಎಂದು ಪಂಜಾಬ್ ಇನ್ಸ್‌ಪೆಕ್ಟರ್ ಜನರಲ್ ರಾವ್ ಸರ್ದಾರ್ ಅಲಿ ಖಾನ್ ಹೇಳಿದ್ದಾರೆ. “ಈ ಘಟನೆಯು ಸೂಕ್ಷ್ಮ ಮತ್ತು ದುರದೃಷ್ಟಕರವಾಗಿದೆ” ಎಂದು ಡಾನ್‌ಗೆ ಅವರು ಪ್ರತಿಕ್ರಿಯೆ ನೀಡಿದ್ದಾರೆ.

ಶ್ರೀಲಂಕಾದ ವ್ಯಕ್ತಿಯನ್ನು ಕೊಲ್ಲಲು ಈ ಗುಂಪನ್ನು ಏಕೆ ಪ್ರೇರೇಪಿಸಿತು ಎಂಬುದನ್ನು ನಿರ್ಧರಿಸಲು ಪ್ರಯತ್ನಿಸುತ್ತಿದ್ದೇವೆ ಎಂದು ಪೊಲೀಸರು ಹೇಳಿದ್ದಾರೆ ಎಂದು ಅಸೋಸಿಯೇಟೆಡ್‌‌ ಪ್ರೆಸ್‌‌ ವರದಿ ಮಾಡಿದೆ. ಮೃತ ವ್ಯಕ್ತಿಯ ದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ಕಳುಹಿಸಲಾಗಿದೆ.

ಘಟನೆಯ ಬಗ್ಗೆ ಕೂಲಂಕಷವಾಗಿ ತನಿಖೆ ನಡೆಸುವಂತೆ ಇನ್ಸ್ ಪೆಕ್ಟರ್ ಜನರಲ್‌ಗೆ ಸೂಚನೆ ನೀಡಿರುವುದಾಗಿ ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದ ಮುಖ್ಯಮಂತ್ರಿ ಉಸ್ಮಾನ್ ಬುಜ್ದಾರ್ ತಿಳಿಸಿದ್ದಾರೆ.

ಕಾನೂನನ್ನು ತಮ್ಮ ಕೈಗೆ ತೆಗೆದುಕೊಳ್ಳಲು ಯಾರಿಗೂ ಅವಕಾಶವಿಲ್ಲ ಎಂದು ಅವರು ಟ್ವೀಟ್‌ ಮಾಡಿದ್ದಾರೆ. “ಈ ಅಮಾನವೀಯ ಕೃತ್ಯದಲ್ಲಿ ಭಾಗಿಯಾಗಿರುವ ವ್ಯಕ್ತಿಗಳನ್ನು ಸುಮ್ಮನೆ ಬಿಡಲಾಗುವುದಿಲ್ಲ” ಎಂದು ಎಚ್ಚರಿಸಿದ್ದಾರೆ.

ಘಟನೆಯನ್ನು ಪಾಕಿಸ್ತಾನದ ಹಲವಾರು ನಾಯಕರು ಖಂಡಿಸಿದ್ದಾರೆ. ಧಾರ್ಮಿಕ ವ್ಯವಹಾರಗಳು ಮತ್ತು ಸರ್ವಧರ್ಮೀಯ ಸೌಹಾರ್ದತೆಯ ವಿಶೇಷ ಪ್ರತಿನಿಧಿ ಹಫೀಜ್ ತಾಹಿರ್ ಮೆಹಮೂದ್ ಅಶ್ರಫಿ ಅವರು, “ಸಾರ್ವಜನಿಕ ಹತ್ಯೆಯು ಇಸ್ಲಾಂ ಧರ್ಮವನ್ನು ಅಪವಿತ್ರಗೊಳಿಸಿದೆ” ಎಂದು ವಿಷಾದಿಸಿರುವುದಾಗಿ ಡಾನ್ ವರದಿ ಮಾಡಿದೆ.

“ಘಟನೆಯಲ್ಲಿ ಒಳಗೊಂಡಿರುವ ಅಂಶಗಳು ಇಸ್ಲಾಮಿಕ್ ಕಾನೂನುಗಳು ಮತ್ತು ಬೋಧನೆಗಳಿಗೆ ಹಾನಿ ಮಾಡಲು ಪ್ರಯತ್ನಿಸಿವೆ” ಎಂದು ಅಭಿಪ್ರಾಯಪಟ್ಟಿರುವ ಅವರು, “ಅನಾಗರಿಕತೆಗಾಗಿ ತಪ್ಪಿತಸ್ಥರಿಗೆ ಶಿಕ್ಷೆಯಾಗುತ್ತದೆ” ಎಂದು ಹೇಳಿದ್ದಾರೆ.

ಪಾಕಿಸ್ತಾನದ ಮಾನವ ಹಕ್ಕುಗಳ ಸಚಿವ ಶಿರೀನ್ ಮಜಾರಿಯವರು ಈ ಹತ್ಯೆಯನ್ನು “ಭಯಾನಕ ಮತ್ತು ಖಂಡನೀಯ” ಎಂದು ಕರೆದಿದ್ದಾರೆ. “ಎಲ್ಲಾ ಅಪರಾಧಗಳಿಗೆ ಕಾನೂನಿನಲ್ಲಿ ಶಿಕ್ಷೆ ಇದೆ. ಯಾವುದೇ ಸಂದರ್ಭದಲ್ಲೂ ಗುಂಪು ಹಿಂಸಾಚಾರವನ್ನು ಒಪ್ಪಿಕೊಳ್ಳಲಾಗುವುದಿಲ್ಲ” ಎಂದು ಅವರು ಟ್ವೀಟ್‌ ಮಾಡಿದ್ದಾರೆ. “ಪಾಕಿಸ್ತಾನದ ಪಂಜಾಬ್ ಸರ್ಕಾರದ ಕ್ರಮವು ದೃಢವಾಗಿರಬೇಕು ಮತ್ತು ನಿಸ್ಸಂದಿಗ್ಧವಾಗಿರಬೇಕು” ಎಂದು ಆಗ್ರಹಿಸಿದ್ದಾರೆ.


ಇದನ್ನೂ ಓದಿರಿ: ಅಂಬೇಡ್ಕರ್ ಝಿಂದಾಬಾದ್ ಘೋಷಣೆಯನ್ನು ಪಾಕಿಸ್ತಾನ ಪರ ಘೋಷಣೆ ಎಂದು ತಿರುಚಿದ ಪ್ರಕರಣ: ಪಿಎಫ್ಐ ಖಂಡನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...