Homeಮುಖಪುಟಭಾರತದ 26 ಸ್ಥಳಗಳನ್ನು ಗುರಿಯಾಗಿಸಿಕೊಂಡು ದಾಳಿಗೆ ಯತ್ನಿಸಿದ ಪಾಕಿಸ್ತಾನ: ಮಾಹಿತಿ ನೀಡಿದ ಸೇನೆ

ಭಾರತದ 26 ಸ್ಥಳಗಳನ್ನು ಗುರಿಯಾಗಿಸಿಕೊಂಡು ದಾಳಿಗೆ ಯತ್ನಿಸಿದ ಪಾಕಿಸ್ತಾನ: ಮಾಹಿತಿ ನೀಡಿದ ಸೇನೆ

- Advertisement -
- Advertisement -

ಮೇ 9 ಮತ್ತು 10ರ ನಡುವೆ ರಾತ್ರಿ ಭಾರತದ ಜಮ್ಮು ಕಾಶ್ಮೀರದಿಂದ ಗುಜರಾತ್‌ವರೆಗಿನ ವಿಮಾನ ನಿಲ್ದಾಣ, ಸೇನಾ ನೆಲೆಗಳು ಸೇರಿದಂತೆ 26 ಪ್ರಮುಖ ಸ್ಥಳಗಳ ಮೇಲೆ ಡ್ರೋನ್ ಮತ್ತು ಕ್ಷಿಪಣಿಗಳ ಮೂಲಕ ದಾಳಿ ನಡೆಸಲು ಪಾಕಿಸ್ತಾನ ಯತ್ನಿಸಿದೆ. ಎಲ್ಲಾ ಪ್ರಯತ್ನಗಳನ್ನು ನಮ್ಮ ಸಶಸ್ತ್ರ ಪಡೆಗಳು ಪರಿಣಾಮಕಾರಿಯಾಗಿ ಹಿಮ್ಮೆಟ್ಟಿಸಿವೆ ಎಂದು ಭಾರತೀಯ ಸೇನೆ ತಿಳಿಸಿದೆ.

ಇಂದು (ಮೇ.10) ಮತ್ತೆ ಜಂಟಿ ಸುದ್ದಿಗೋಷ್ಠಿ ನಡೆಸಿದ ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಸ್ರಿ, ಕರ್ನಲ್ ಸೋಫಿಯಾ ಖುರೇಷಿ ಮತ್ತು ವಿಂಗ್ ಕಮಾಂಡರ್ ವ್ಯೋಮಿಕಾ ಸಿಂಗ್, ಪಾಕಿಸ್ತಾನ ಮೇ.9-10 ನಡುವೆ ರಾತ್ರಿ ಭಾರತದ ಮೇಲೆ ದಾಳಿ ಮಾಡಲು ವಿಫಲ ಯತ್ನ ನಡೆಸಿರುವ ಬಗ್ಗೆ ಮಾಹಿತಿ ಹಂಚಿಕೊಂಡರು.

ಜಮ್ಮು ಕಾಶ್ಮೀರದ ಶ್ರೀನಗರ, ಅವಂತಿಪೊರ ಮತ್ತು ಉಧಮ್‌ಪುರ ವಾಯುನೆಲೆಗಳಲ್ಲಿರುವ ಆಸ್ಪತ್ರೆಗಳು ಮತ್ತು ಶಾಲಾ ಆವರಣಗಳನ್ನು ಗುರಿಯಾಗಿಸಿಕೊಂಡು ಪಾಕಿಸ್ತಾನ ದಾಳಿ ನಡೆಸಿದೆ. ಇದು ನಾಗರಿಕ ಮೂಲಸೌಕರ್ಯಗಳ ಮೇಲೆ ದಾಳಿ ಮಾಡುವ ಅವರ ಬೇಜವಾಬ್ದಾರಿ ಪ್ರವೃತ್ತಿಯನ್ನು ಮತ್ತೊಮ್ಮೆ ಬಹಿರಂಗಪಡಿಸಿದೆ ಎಂದು ಕರ್ನಲ್ ಸೋಫಿಯಾ ಖುರೇಷಿ ಹೇಳಿದರು.

ಬಾರಾಮುಲ್ಲಾ, ಶ್ರೀನಗರ, ಅವಂತಿಪೊರ, ನಗ್ರೋಟಾ, ಜಮ್ಮು, ಫಿರೋಝ್‌ಪುರ, ಪಠಾಣ್‌ಕೋಟ್, ಫಾಝಿಲ್ಕಾ, ಲಾಲಗರ್ ಜಟ್ಟಾ, ಜೈಸಲ್ಮೇರ್, ಬಾರ್ಮರ್, ಭುಜ್, ಕುರ್ಬೆಟ್, ಲಖಿ ನಲಾ ಸೇರಿದಂತೆ ಪ್ರಮುಖ ಸ್ಥಳಗಳನ್ನು ಗುರಿಯಾಗಿಸಿ ಪಾಕಿಸ್ತಾನ ದಾಳಿ ಮಾಡಿದೆ ಎಂದು ಖುರೇಷಿ ತಿಳಿಸಿದರು.

ಶನಿವಾರ ಬೆಳಿಗ್ಗೆ 5 ಗಂಟೆಯ ಸುಮಾರಿಗೆ ಪಾಕಿಸ್ತಾನ ಹಾರಿಸಿದ ಹಲವು ಡ್ರೋನ್‌ಗಳನ್ನು ಪಂಜಾಬ್‌ನ ಅಮೃತಸರ ಬಳಿ ತಡೆ ಹಿಡಿಯಲಾಗಿದೆ. ಈ ಮೂಲಕ ದಾಳಿ ಯತ್ನವನ್ನು ವಿಫಲಗೊಳಿಸಲಾಗಿದೆ ಎಂದು ಹೇಳಿದರು.

ಪ್ರಮುಖವಾಗಿ ಭಾರತೀಯ ವಾಯುನೆಲೆಗಳನ್ನು ಪಾಕಿಸ್ತಾನ ಗುರಿಯಾಗಿಸಿಕೊಂಡಿತ್ತು. ಆದರೆ ಸೀಮಿತ ಹಾನಿ ಮಾತ್ರ ಸಂಭವಿಸಿದೆ. ಗಡಿ ನಿಯಂತ್ರಣ ರೇಖೆಯ (ಎಲ್‌ಒಸಿ) ಉದ್ದಕ್ಕೂ ಭಾರೀ ಗುಂಡಿನ ದಾಳಿ ನಡೆದ ಬಗ್ಗೆ ವರದಿಯಾಗಿದೆ. ಇದು ಈ ಪ್ರದೇಶದಲ್ಲಿ ಹೆಚ್ಚಿದ ಉದ್ವಿಗ್ನತೆಯನ್ನು ಸೂಚಿಸುತ್ತದೆ. ಜನವಸತಿ ಪ್ರದೇಶಗಳು ಮತ್ತು ಮಿಲಿಟರಿ ಮೂಲಸೌಕರ್ಯಗಳನ್ನು ಗುರಿಯಾಗಿಸಲು ಪಾಕಿಸ್ತಾನ ಡ್ರೋನ್‌ಗಳು, ದೀರ್ಘ-ಶ್ರೇಣಿಯ ಶಸ್ತ್ರಾಸ್ತ್ರಗಳು ಮತ್ತು ಯುದ್ಧ ವಿಮಾನಗಳನ್ನು ಬಳಸಿದೆ ಎಂದು ಖುರೇಷಿ ತಿಳಿಸಿದರು.

ಉಧಮ್‌ಪುರ, ಪಠಾಣ್‌ಕೋಟ್, ಆದಮ್‌ಪುರ, ಭುಜ್‌ನಲ್ಲಿ ಭಾರತೀಯ ವಾಯುನೆಲೆಗಳನ್ನು ಗುರಿಯಾಗಿಸಿ ಪಾಕಿಸ್ತಾನ ದಾಳಿ ನಡೆಸಿದೆ ಎಂದು ವಿವರಿಸಿದರು.

ಪಾಕಿಸ್ತಾನದ ದಾಳಿಗೆ ಭಾರತೀಯ ಪಡೆಗಳು ಪ್ರತಿದಾಳಿ ನಡೆಸಿವೆ. ಆದರೂ, ಉಧಮ್‌ಪುರ, ಪಠಾಣ್‌ಕೋಟ್, ಆದಮ್‌ಪುರ, ಭುಜ್ ಮತ್ತು ಬಟಿಂಡಾದಲ್ಲಿನ ವಾಯುನೆಲೆಗಳು ಹಾನಿಗೊಳಗಾಗಿವೆ ಮತ್ತು ಅಲ್ಲಿನ ಸಿಬ್ಬಂದಿ ಗಾಯಗೊಂಡಿದ್ದಾರೆ. ಪಂಜಾಬ್‌ನ ವಾಯುನೆಲೆಯನ್ನು ಗುರಿಯಾಗಿಸಿ ಪಾಕಿಸ್ತಾನ ಬೆಳಗಿನ ಜಾವ 1:40ಕ್ಕೆ ಅತಿ ವೇಗದ ಕ್ಷಿಪಣಿಯನ್ನು ಉಡಾಯಿಸಿತ್ತು. ಶ್ರೀನಗರ, ಅವಂತಿಪೊರ ಮತ್ತು ಉಧಮ್‌ಪುರದಲ್ಲಿನ ವಾಯುನೆಲೆಗಳಲ್ಲಿನ ಆಸ್ಪತ್ರೆಗಳು ಮತ್ತು ಶಾಲೆಗಳನ್ನು ಗುರಿಯಾಗಿಸಿ ದಾಳಿ ನಡೆಸಿದೆ. ಪಾಕಿಸ್ತಾನದ ಈ ಕ್ರಮವನ್ನು ಬಲವಾಗಿ ಖಂಡಿಸುತ್ತೇವೆ ಎಂದು ಸೋಫಿಯಾ ಖುರೇಷಿ ಹೇಳಿದರು.

ಪಾಕಿಸ್ತಾನದ ಕ್ರಮಗಳಿಗೆ ಸೂಕ್ತ ಪ್ರತ್ಯುತ್ತರವಾಗಿ ಭಾರತವು ಅಲ್ಲಿನ ಸುಮಾರು ಆರು ವಾಯುನೆಲೆಗಳ ಮೇಲೆ ದಾಳಿ ನಡೆಸಿದೆ. ಮುರಿಯದ್ ವಾಯುನೆಲೆ, ರಫೀಕಿ ವಾಯುನೆಲೆ, ನೂರ್ ಖಾನ್ (ಚಕ್ಲಾಲಾ) ವಾಯುನೆಲೆ, ರಹಿಮ್ಯಾರ್, ಸುಕ್ಕೂರ್ (ಭೋಲಾರಿ) ಮತ್ತು ಚುನಿಯನ್ ವಾಯುನೆಲೆಗಳನ್ನು ಭಾರತ ಗುರಿಯಾಗಿಸಿದೆ ಎಂದು ಖುರೇಷಿ ತಿಳಿಸಿದರು.

ಪತ್ರಿಕಾ ಸಂಪಾದಕರನ್ನು ಭೇಟಿಯಾದ ಸಚಿವ ಅಶ್ವಿನಿ ವೈಷ್ಣವ್: ಭಾರತ-ಪಾಕಿಸ್ತಾನ ಸಂಘರ್ಷ ಕುರಿತು ವಾಸ್ತವ ವರದಿ ಪ್ರಕಟಿಸಲು ಮನವಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...